Homeರಾಜಕೀಯಬ್ರೆಜಿಲ್ ಚುನಾವಣೆ ಮತ್ತು ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ

ಬ್ರೆಜಿಲ್ ಚುನಾವಣೆ ಮತ್ತು ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ

- Advertisement -
- Advertisement -

ಬ್ರೆಜಿಲ್ ದೇಶವೆಂದರೆ ನಮ್ಮ ಜನಪ್ರಿಯ ಕಲ್ಪನೆಯಲ್ಲಿ ಫುಟ್‌ಬಾಲ್, ಪೆಲೆ, ಅಮೆಜಾನ್, ಸುಂದರ ಕಡಲತೀರದ ದೃಶ್ಯಗಳು ಹಾದುಹೋಗುತ್ತವೆ. ವಾಸ್ತವದಲ್ಲಿ ಬ್ರೆಜಿಲ್ ಒಂದು ಬಹುಜನಾಂಗೀಯ ಬಹುತ್ವವುಳ್ಳ ದಕ್ಷಿಣ ಅಮೆರಿಕಾದಲ್ಲೇ ಅತ್ಯಂತ ದೊಡ್ಡ ಆರ್ಥಿಕ ವ್ಯವಸ್ಥೆಯುಳ್ಳ ದೇಶ. ಇದರ ಇತಿಹಾಸ ಮತ್ತು ವರ್ತಮಾನ ಎಲ್ಲಾ ಜಾಗತಿಕ ದಕ್ಷಿಣದ ದೇಶಗಳಂತೆ ವಸಾಹತುಶಾಹಿ ಆಳ್ವಿಕೆ, ಗುಲಾಮರ ವ್ಯಾಪಾರ, ಪ್ರಜಾಪ್ರಭುತ್ವದ ಸಂಕ್ರಮಣ, ಉಳ್ಳವರ ಕೊಳ್ಳೆ, ನಿಲ್ಲದೆ ಮುಂದುವರೆಯುತ್ತಿರುವ ನೈಸರ್ಗಿಕ ಸಂಪನ್ಮೂಲಗಳ ಲೂಟಿ, ಆರ್ಥಿಕ ಅಸಮಾನತೆ ಮತ್ತು ಮುಂದುವರೆಯುತ್ತಿರುವ ನಿರಂತರ ವರ್ಗ ಸಂಘರ್ಷದಿಂದ ಕೂಡಿದೆ. ಇವೆಲ್ಲಕ್ಕಿಂತ ಮುಖ್ಯವಾಗಿ ನಮ್ಮ ಪರಿಸರದ ದೃಷ್ಟಿಯಿಂದ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಉಷ್ಣವಲಯದ ಅಮಜಾನ್ ಮಳೆಗಾಡಿನ ಬಹುತೇಕ ಭಾಗ ಬ್ರೆಜಿಲ್‌ನಲ್ಲಿದೆ. ಅನೇಕಾನೇಕ ಪ್ರಾಣಿಪಕ್ಷಿಗಳು ಜೊತೆಗೆ 400 ರಿಂದ 500 ಬುಡಕಟ್ಟು ಜನಾಂಗಗಳು ಈ ಕಾಡುಗಳಲ್ಲಿ ವಾಸಿಸುತ್ತಾರೆ. ಕೆಲವು ಬುಡಕಟ್ಟು ಜನಾಂಗಗಳು ಇನ್ನೂ ಆಧುನಿಕ ಮನುಷ್ಯನ ಸಂಪರ್ಕದಿಂದ ದೂರ ಉಳಿದಿದ್ದಾರೆ. ಪ್ರಪಂಚದ ಬಹುತೇಕ ಜೀವಿಗಳು ಮತ್ತು ನಾವು ಉಸಿರಾಡುವ 20% ಆಮ್ಲಜನಕ ಅಮೆಜಾನ್ ದಟ್ಟಕಾಡುಗಳಿಂದ ಉತ್ಪಾದನೆಯಾಗುತ್ತದೆ. ಇದರಿಂದ ಕೆಲವು ಪರಿಸವಾದಿಗಳು ಅಮೆಜಾನನ್ನು ನಮ್ಮ ಗ್ರಹದ ಶ್ವಾಸಕೋಶಗಳು ಅಥವಾ ಕ್ಲೋರೋಫಿಲ್ ಎಂದು ಕರೆಯುತ್ತಾರೆ. ಅತ್ಯಂತ ಧ್ರುವೀಕರಣಗೊಂಡ ಆಕ್ಟೋಬರ್ 28ರಂದು ನಡೆದ ಬ್ರೆಜಿಲ್ ಚುನಾವಣೆಯ ಫಲಿತಾಂಶ ಪ್ರಪಂಚದ ಉಸಿರಾಟದ ಕ್ರಿಯೆಗೆ ಕೊಡಲಿ ಪೆಟ್ಟು ಕೊಟ್ಟಿದೆ. ಸುಮಾರು 21 ಕೋಟಿ ಜನಸಂಖ್ಯೆಯುಳ್ಳ ಬ್ರೆಜಿಲ್‌ನಲ್ಲಿ ಅಮೆರಿಕ ಮತ್ತು ಇಸ್ರೇಲ್ ಭಜನೆ ಮಾಡುವ ಮಾಜಿ ಮಿಲಿಟರೀ ಅಧಿಕಾರಿ ಜೈರ್ ಬೊಲ್ಸೊನಾರೊ 55.6% ವೋಟುಗಳನ್ನು ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುವುದೇ ಅಲ್ಲದೆ, ಬ್ರೆಜಿಲ್ ಸೇರಿ ಒಂದೆರಡು ದಶಕಗಳಿಂದ ದಕ್ಷಿಣ ಅಮೆರಿಕ ದೇಶಗಳಲ್ಲಿ ಅಧಿಕಾರದಲ್ಲಿದ್ದ ಎಡಪಂಥೀಯ ಸರ್ಕಾರಗಳಿಗೆ ನೇರ ಬೆದರಿಕೆಯನ್ನು ಒಡ್ಡಿದ್ದಾನೆ. ಅದಲ್ಲದೆ ಬ್ರೆಜಿಲ್‌ನ ಕರಾಳ ಇತಿಹಾಸದ ಮಿಲಿಟರೀ ಆಡಳಿತವನ್ನು ಮತ್ತೆ ಮತ್ತೆ ವೈಭವೀಕರಿಸುತ್ತಾ ತನ್ನ ಧರ್ಮಾಂಧ, ಮಹಿಳಾವಿರೋಧಿ, ಸಾಮಾಜಿಕ ನ್ಯಾಯ ವಿರೋಧಿ, ಪರಿಸರ ವಿರೋಧಿ ಮತ್ತು ಮಾನವ ವಿರೋಧಿ ಹೇಳಿಕೆಗಳನ್ನು ಹರಿಬಿಡುತ್ತಾ ಜನವರಿ 1 ರಂದು ಅಧಿಕಾರಕ್ಕೇರುತ್ತಿದ್ದಾನೆ. ಇದು ಬ್ರೆಜಿಲ್‌ನ ರಾಜಕೀಯ ಪ್ರಜಾತಂತ್ರವು ಸೈನ್ಯೀಕರಣಗೊಳ್ಳುತ್ತಿರುವ ಮುನ್ಸೂಚನೆ ಎಂದು ಸ್ವಾತಂತ್ರ‍್ಯ ಮತ್ತು ಸಮಾನತೆ ಬಯಸುವ ಎಲ್ಲಾ ಪ್ರಜ್ಞಾವಂತ ಜನತೆ ತಿಳಿದುಕೊಳ್ಳಬೇಕಿದೆ.
ಚುನಾವಣೆಗೂ ಮುಂಚೆಯೇ ಇದನ್ನು ‘ಪಾಶ್ಚಾತ್ಯ ಮತ್ತು ಜಾಗತಿಕ ದಕ್ಷಿಣದ ಭವಿಷ್ಯವನ್ನು ನಿರ್ಧರಿಸುವ ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ’ ಹಾಗೂ ‘21ನೇ ಶತಮಾನದ ಪ್ರಜಾತಂತ್ರ ಮತ್ತು ನಾಗರಿಕತೆಯ ವಿರುದ್ದ ನವಸರ್ವಾಧಿಕಾರ/ ಅನಾಗರಿಕತೆಯ ಸಂಘರ್ಷ’ ಎಂದು ವಿಶ್ಲೇಷಿಸಲಾಗಿತ್ತು. ಪ್ರಪಂಚದಾದ್ಯಂತ ಬಲಪಂಥೀಯ ರಾಜಕೀಯ ಬುಗ್ಗೆಗಳೇಳುತ್ತಿರುವ ಸಮಯದಲ್ಲಿ ಈ ಸರ್ವಾಧಿಕಾರದ ಗೆಲುವನ್ನು ವಿಶ್ಲೇಷಿಸಲು ಹೋದರೆ ಅದರಲ್ಲಿ ಅಮೆರಿಕಾದ ಸರ್ವಾಧಿಕಾರದ ಅತ್ಯಾಧುನಿಕ, ಮನೋವೈಜ್ಞಾನಿಕ ಯುದ್ದತಂತ್ರಗಳು ನೋಡ ಸಿಗುತ್ತವೆ. ಅಮೆರಿಕಾದ ಬೇಹುಗಾರಿಕೆ ಸಂಸ್ಥೆ ಎನ್.ಎಸ್.ಎ ನ ಮಾಜಿ ಉದ್ಯೋಗಿ ಎಡ್ವರ್ಡ್ ಸ್ನೋಡನ್ 2013ರಲ್ಲೇ 2000 ದಿಂದ ಬ್ರೆಜಿಲ್ ದೇಶ ಅತ್ಯಂತ ಬೇಹುಗಾರಿಕೆಗೆ ಒಳಪಟ್ಟಿರುವ ದೇಶ ಎಂದು ಬಹಿರಂಗಪಡಿಸಿದ್ದರು. ಅದಕ್ಕೆ ಕೆಲವು ಕಾರಣಗಳು ಇವೆ. ತನ್ನ ಸಾಮ್ರಾಜ್ಯಶಾಹಿ ಧೋರಣೆಯಿಂದ ದಕ್ಷಿಣ ಅಮೆರಿಕಾದ ದೇಶಗಳ ಸರ್ಕಾರಗಳನ್ನು ಕ್ಷಿಪ್ರ ಕ್ರಾಂತಿ, ರಾಜಕೀಯ ಹತ್ಯೆ, ನಾಯಕತ್ವ ಬದಲಾವಣೆ, ರಾಜಕೀಯ ಹಸ್ತಕ್ಷೇಪಗಳಿಂದ ತನ್ನಿಚ್ಛೆಗೆ ತಕ್ಕಂತೆ ಬದಲಿಸುತ್ತಾ ಕೆಲವೊಮ್ಮೆ ನೇರ ಮಿಲಿಟರೀ ಆಡಳಿತವನ್ನು ಅಮೆರಿಕವು ಹೇರುತ್ತಾ ಬಂದಿತ್ತು. 1964ರಲ್ಲಿ ಮಧ್ಯ ಎಡಕ್ಕೆ ಸೇರುವ ಸುಧಾರಣಾವಾದಿ ಬ್ರೆಜಿಲ್ ಲೇಬರ್ ಪಕ್ಷದ ಮಾರ್ಕುಎಸ್ ಗೌಲಾರ್ಟ್.ರನ್ನು ಕ್ಷಿಪ್ರ ಕ್ರಾಂತಿ ಮೂಲಕ ಕಿತ್ತು ಹಾಕಿ 1985ರ ವರೆಗೂ ಮಿಲಿಟರಿ ಸರ್ವಾಧಿಕಾರವನ್ನು ಸ್ಥಾಪಿಸಿದ್ದರು. ಇದರ ಹಿಂದೆ ಅಮೆರಿಕಾದ ಬೆಂಬಲಿತ ಸ್ಥಳೀಯ ಕೃಷಿ ವ್ಯವಹಾರದ ಭೂಮಾಲೀಕರು, ಬಹುರಾಷ್ಟಿçÃಯ ಕಂಪನಿಗಳು, ಇವ್ಯಾಂಜೆಲಿಕಲ್ ಕ್ರೈಸ್ತ ಲಾಬೀ ಇದ್ದದ್ಡೇ ಅಲ್ಲದೆ, ಅದರ ಪ್ರಭಾವ ಸಮಾಜದಲ್ಲಿ ಬೆಳೆಯುತ್ತಾ ಹೋಯಿತು. ಈ ನಡೆ ದಕ್ಷಿಣ ಅಮೆರಿಕ ರಾಷ್ಟ್ರಗಳಲ್ಲಿ ಮುಂದೆ ಆದ ರಾಜಕೀಯ ಹತ್ಯೆಗಳು, ಎಡಪಂಥೀಯ ಸರ್ಕಾರಗಳ ವಿರುದ್ದ ಮಿಲಿಟರೀ ಕ್ಷಿಪ್ರ ಕ್ರಾಂತಿ, ನಾಯಕತ್ವ ಬದಲಾವಣೆಗಳಿಗೆ ಆಳುವ ವರ್ಗದ ನೀಲಿನಕ್ಷೆಯಾಯಿತು. ತಮ್ಮ ವಿರುದ್ದವಿದ್ದ ಪರಿಸರವಾದಿಗಳು, ಮಾನವ ಹಕ್ಕುಗಳ ಹೋರಾಟಗಾರರು, ಕಾರ್ಮಿಕ ಸಂಘಟನೆಗಳ ಮುಖಂಡರ ಅಪಹರಣಗಳು, ಚಿತ್ರಹಿಂಸೆ, ಜೈಲುವಾಸ ಮತ್ತು ಕೊಲೆಗಳು ನಡೆದವು. ತೊಂಬತ್ತರ ದಶಕದ ಮಧ್ಯಭಾಗದಲ್ಲಿ ಇದರ ವಿರುದ್ಧ ಪ್ರತಿರೋಧದ ಅಲೆಯೆದ್ದು(ಗುಲಾಬಿ ಅಲೆ) ಬದಲಾವಣೆಯ ಗಾಳಿ ಬೀಸತೊಡಗಿತು. ದಕ್ಷಿಣ ಅಮೆರಿಕಾದಲ್ಲಿ ಒಂದರ ಮೇಲೆ ಒಂದು ದೇಶ ಪ್ರಗತಿಪರ, ಎಡಪಂಥೀಯ ಸರ್ಕಾರಗಳ ರಚನೆಯತ್ತ ಮುಖ ಮಾಡಿತ್ತು. ಜನರನ್ನು ಸಂಘಟಿಸಿ, ಸರ್ವಾಧಿಕಾರದ ಅನ್ಯಾಯಗಳ ವಿರುದ್ಧ ದ್ವನಿಯೆತ್ತಿ ಚಿತ್ರಹಿಂಸೆಗೆ ಒಳಪಟ್ಟಿದ್ದ ಕಾರ್ಮಿಕ ಪಕ್ಷದ ಸಹ ಸಂಸ್ಥಾಪಕ ಲೂಇಸ್ ಇನಾಸಿಯೋ ಲೂಲಾ ದ ಸಿಲ್ವ 2003ರಲ್ಲಿ ಅಧಿಕಾರ ಹಿಡಿದಿದ್ದರು. ಬ್ರೆಜಿಲ್‌ನಲ್ಲಿ ಜನಪ್ರಿಯವಾಗಿ “ಲೂಲಾ” ಎಂದು ಪ್ರಸಿದ್ದಿಯಾಗಿದ್ದ ಅವರು ತಮ್ಮ 10 ವರ್ಷದ ಅವಧಿಯಲ್ಲಿ ನಾನಾರೀತಿಯ ಜನ ಕಲ್ಯಾಣ ಯೋಜನೆಗಳನ್ನು ರೂಪಿಸಿದ್ದರು. 3 ಕೋಟಿಗೂ ಹೆಚ್ಚು ಬ್ರೆಜಿಲ್ ಜನತೆಯನ್ನು ಬಡತನದಿಂದ ಮೇಲೆತ್ತಿದರು. ತಮ್ಮ ವಿಶೇಷ ಯೋಜನೆಗಳಾದ “ಬೊಳ್ಸಾ ಕುಟುಂಬ” ಪಿಂಚಣಿ ವ್ಯವಸ್ಥೆ ಮತ್ತು `ಫೊಮೆ ಝೀರೊ’ (ಶೂನ್ಯ ಹಸಿವು) ಕಾರ್ಯಕ್ರಮಗಳು ಪ್ರಪಂಚದಾದ್ಯಂತ ಮೆಚ್ಚುಗೆ ಗಳಿಸಿತ್ತು.
ಇದು ಬ್ರೆಜಿಲ್‌ನಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಸರಣಿ ಬರಹಗಳ ಎರಡನೇ ಭಾಗ.. ಮುಂದುವರೆಯುವುದು..

– ಭರತ್ ಹೆಬ್ಬಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...