Homeಮುಖಪುಟಒಡಿಶಾದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಒಡಿಶಾದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಜೂನ್ ಹತ್ತರಿಂದ ಮುಂದಿನ ಸೂಚನೆಯವರೆಗೂ ಮೀನುಗಾರಿಕೆಗೆ ತೆರಳದಂತೆ ಸೂಚನೆ.

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುತ್ತಿರುವುದರಿಂದ ಒಡಿಶಾದಲ್ಲಿ ಸುದೀರ್ಘ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮುಂದಿನ ಮೂರು ದಿನಗಳಲ್ಲಿ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ.

ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿರುವ ಚಂಡಮಾರುತದ ಪ್ರಭಾವದಿಂದ, ಮುಂದಿನ 48 ಗಂಟೆಗಳಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆಯಿದೆ. ಇದು ಪಶ್ಚಿಮ ವಾಯುವ್ಯ ದಿಕ್ಕಿಗೆ ಚಲಿಸುತ್ತಿದೆ ಆದ್ದರಿಂದ ನಂತರದ 24 ಗಂಟೆಗಳಲ್ಲಿ ಹೆಚ್ಚು ಗಮನಾರ್ಹವಾಗಿದೆ ಎಂದು ಅಲ್ಲಿನ ಹವಾಮಾನ ಕೇಂದ್ರ ತಿಳಿಸಿದೆ.

ಇಂತಹ ಹವಾಮಾನ ಪರಿಸ್ಥಿತಿಯು ಒಡಿಶಾದಲ್ಲಿ ಮಳೆ ಹೆಚ್ಚಿಸುವ ಸಾಧ್ಯತೆಯಿದೆ, ಜೂನ್ 9 ರಿಂದ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯ ತೀವ್ರತೆಯು ಕ್ರಮೇಣ ಹೆಚ್ಚಾಗುವ ನಿರೀಕ್ಷೆಯಿದೆ.


ಓದಿ: ಒಡಿಶಾದ ಶಿಕ್ಷಣ ಇಲಾಖೆ ಪುಸ್ತಕಗಳಲ್ಲಿ “ಮಹಾತ್ಮಾ ಗಾಂಧಿ ಸಾವು ಆಕಸ್ಮಿಕ” ಎಂದು ಉಲ್ಲೇಖ.


ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಹವಮಾನ ಇಲಾಖೆ ಕೇಂದ್ರವು ಸೋಮವಾರದಿಂದ ಜೂನ್ 10 ರವರೆಗೆ ಅನೇಕ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಮತ್ತು ಜೂನ್ 11 ರಂದು ಉಳಿದ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ನೀಡಿದೆ.

ಇಂದು ಗುಡುಗು-ಮಿಂಚು ಸಹಿತ, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತದೆ ಎಂದು ಹಲವಾರು ಸ್ಥಳಗಳನ್ನು ಗುರುತಿಸಿದೆ.

ಅಂತೆಯೇ, ಜೂನ್ 9 ರಂದು ಕರಾವಳಿ ಒಡಿಶಾ, ಕಿಯೋಜಾರ್, ಮಯೂರ್ಭಂಜ್, ಧೆಂಕನಲ್, ದಿಯೋಗರ್‌, ರಾಯಗಡ, ಕೊರಪುತ್ ಮತ್ತು ಮಲ್ಕಂಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗಲಿದೆ. ಗಂಜಾಂ ಮತ್ತು ಗಜಪತಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಜೂನ್ 10 ರಂದು ನಬರಂಗ್‌ಪುರ, ಕೊರಪುತ್, ಮಲ್ಕಂಗಿರಿ, ಗಂಜಾಂ, ಗಜಪತಿ, ಪುರಿ, ಖುರ್ದಾ ಮತ್ತು ಜಗತ್ಸಿಂಗ್‌ಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಕೋರಪುತ್, ಮಲ್ಕಂಗಿರಿ, ನಬರಂಗ್‌ಪುರ, ಕಲಹಂಡಿ, ನುವಾಪಾಡಾ, ಬೋಲಂಗೀರ್, ಕಂಧಮಾಲ್, ಗಂಜಾಂ, ಪುರಿ ಮತ್ತು ಬೌಧ್ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗಬಹುದು ಎಂದು ಜೂನ್ 11 ಕ್ಕೆ ಆರೆಂಜ್ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯೂ ಜೂನ್ 10 ಮತ್ತು 11 ರಂದು ಉತ್ತರ ಹಾಗೂ ಪಶ್ಚಿಮ ಮಧ್ಯದ ಬಂಗಾಳ ಕೊಲ್ಲಿ ಹಾಗೂ ಒಡಿಶಾ ಕರಾವಳಿಯಿಂದ  40-50 ಕಿ.ಮೀ ವೇಗದ ಮಾರುತವನ್ನು ಸೂಚಿಸಿದೆ. ಇದರಿಂದಾಗಿ ಒಡಿಶಾ ಕರಾವಳಿ, ಉತ್ತರ ಮತ್ತು ಮಧ್ಯ ಬಂಗಾಳ ಕೊಲ್ಲಿಯ  ಮೀನುಗಾರರಿಗೆ ಜೂನ್ 10 ರಿಂದ ಮುಂದಿನ ಸೂಚನೆ ಬರುವವರೆಗೆ ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...