Homeಮುಖಪುಟಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್... ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು?

- Advertisement -
- Advertisement -

ಕೊರೊನಾ ಸೋಂಕಿನಿಂದ ಗುಣಮುಖರಾದ ಪಾದರಾಯನಪುರ ವಾರ್ಡ್‌ ಕಾರ್ಪೋರೇಟರ್‌ ಇಮ್ರಾನ್ ಪಾಷ ಮೆರವಣಿಗೆ ನಡೆಸಿದ್ದಕ್ಕೆ ಅವರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಾಪ್ರಹಾರ ನಡೆಸಿದ್ದಾರೆ.

ಭಾನುವಾರ ವಿಕ್ಟೋರಿಯಾ ಆಸ್ಪತ್ರೆಯಿಂದ ಇಮ್ರಾನ್ ಪಾಷ ಬಿಡುಗಡೆಯಾದ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಜೈಕಾರ ಕೂಗಿದ್ದರು. ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಯ ಕಾರಾಗೃಹ ಸೆಲ್‌ನಲ್ಲಿರಿಸಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಮ್ರಾನ್ ಪಾಷರನ್ನು ಬಂಧಿಸಿದ್ದು ಸರಿ. ಆದರೆ ಚಿತ್ರದುರ್ಗದಲ್ಲಿ ನೂರಾರು ಜನರನ್ನು ಸೇರಿಸಿ ಮೆರವಣಿಗೆ ಮಾಡಿದ, ಸೇಬಿನ ಹಾರವನ್ನು ಹಾಕಿಸಿಕೊಂಡ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿದ ಆರೋಗ್ಯ ಸಚಿವ ಬಿ.ಶ್ರೀರಾಮುಲುರವರನ್ನು ಯಾವಾಗ ಬಂಧಿಸುತ್ತೀರಿ ಎಂದು ಪ್ರಶ್ನಿಸಿದ್ದರೆ.

ಆರೋಗ್ಯ ಸಚಿವರಾದ ಶ್ರೀರಾಮುಲು ಅವರಿಗೆ ಸೇಬಿನ ಹಾರ ಹಾಕಿ ಕನಿಷ್ಠ ಅಂತರವನ್ನು ಕಾಪಾಡದೆ ವಿಜೃಂಭಣೆಯ ಮೆರವಣಿಗೆ ಮಾಡುತ್ತಿರುವ ದೃಶ್ಯಗಳು. ಕೊರೊನಾ ಸಮಯದಲ್ಲಿ ಸಾಮಾನ್ಯಜನರು ಓಡಾಡಿದರೆ ಲಾಠಿಯಲ್ಲಿ ಗೊಡೆಯುವ ಪೋಲಿಸರು ಈ ರೀತಿಯ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣ ವಾಗಿವೆ.#NaanuGauri #coronaliveupdates #shreeRamulu

Posted by Naanu Gauri on Tuesday, June 2, 2020

ಕೊರೋನ ರೋಗದಿಂದ ಗುಣಮುಖರಾಗಿ ಪಾದರಾಯಣ ಪುರಕ್ಕೆ ಮೆರವಣಿಗೆ ಮೂಲಕ ಬಂದ ಕಾರ್ಪೋರೇಟರ್ ಇಮ್ರಾನ್ ಪಾಷ ಬಂಧನ.. ಕಾನೂನು ಉಲ್ಲಂಘಿಸಿದರೆ ಬಂಧಿಸಿ… ಸರಿಯಾದ ಕ್ರಮ. ಬಂಧಿಸಲೇಬೇಕು.
ಇದಕ್ಕಿಂತ ಮೊದಲು ಅದ್ದೂರಿ ‌ಮೆರವಣಿಗೆ ಮಾಡಿ ಕಾನೂನು ಉಲ್ಲಂಘಿಸಿದ ಆರೋಗ್ಯ ಸಚಿವ ರಾಮುಲು ಬಂಧನ ಇದಕ್ಕಿಂತ ಮೊದಲೇ ಮಾಡಬೇಕಿತ್ತು. ಯಾಕೆ ಬಂಧನವಿಲ್ಲ?
ರಾಮನಿಗೊಂದು ನ್ಯಾಯ ರಹೀಮನಿಗೊಂದು ನ್ಯಾಯನಾ? ಎಂದು ಸಿದ್ದಿಕ್ ಪುತ್ತುರ್‌ರವರು ಪ್ರಶ್ನಿಸಿದ್ದಾರೆ.

ಪಾದರಾಯನಪುರದ ಕಾರ್ಪೋರೇಟರ್ ಇಮ್ರಾನ್ ಪಾಷ ಮೆರವಣಿಗೆ ಮಾಡಿದ್ದಕ್ಕೆ ಅರೆಸ್ಟ್ ಮಾಡಿದ್ದೀರಾ, ಸಂತೋಷ. ಎಲ್ಲಾರಿಗೂ ಒಂದೇ ಕಾನೂನು. ಮೆರವಣಿಗೆ ಮಾಡ್ಕೊಂಡ ಶ್ರೀರಾಮುಲು, ಜಮೀರ್, ರೇಣುಕಾಚಾರ್ಯರನ್ನ ಅರೆಸ್ಟ್ ಮಾಡೋ ತಾಕತ್ತು ಪೋಲಿಸ್ ಇಲಾಖೆಗೆ ಇಲ್ವಾ? ಎಂದು ಜಯರಾಜ್‌ ನಾಯ್ಡು ಎಂಬುವವರ ಪ್ರಶ್ನಿಸಿದ್ದಾರೆ.

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್… ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು? ಎಂದು ಸತೀಶ್‌ ಪಾಳೇಗಾರ್‌ರವರು ಕಿಡಿಕಾರಿದ್ದಾರೆ.

ಜನರು ಸೇರಿದ್ದಕ್ಕೆ ಇಮ್ರಾನ್ ಪಾಷ್ ಬಂಧನ ಆಯ್ತು… ಹಾಗಾದರೆ ಆರೋಗ್ಯ ಸಚಿವ ಶ್ರೀರಾಮುಲು ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ… ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ ಎಂದು ರಾಜಶೇಖರ್‌ ಎಸ್‌ ಅಂಗಡಿಯವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ. (ಗಜೇಂದ್ರ ಗಡದಲ್ಲಿ ಸಿದ್ದರಾಮಯ್ಯ ನವರು ಭೇಟಿ ನೀಡಿದಾಗ ನೂರಾರು ಜನ ಒಂದೆಡೆ ಸೇರಿ ಘೋಷಣೆ ಕೂಗಿದ್ದರು)

ಒಟ್ಟಿನಲ್ಲಿ ಈ ಎಲ್ಲಾ ಜನಪ್ರತಿನಿಧಿಗಳು ಸಹ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಹೀಗಿರುವಾಗ ಎಲ್ಲರಿಗೂ ಕಾನೂನುಗಳು ಅನ್ವಯವಾಗಬೇಕು. ಕೆಲವರಿಗೆ ಅದರಿಂದ ವಿನಾಯಿತಿ ನೀಡುವುದರಿಂದ ಮತ್ತಷ್ಟು ಉಲ್ಲಂಘನೆಗಳಿಗೆ ಕಾರಣವಾಗುತ್ತದೆ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು.


ಇದನ್ನೂ ಓದಿ: ಜನಾಂಗೀಯತೆಯ ಬಗ್ಗೆ ಬಾಲಿವುಡ್ ತಾರೆಗಳ ಇಬ್ಬಂದಿತನವನ್ನು ಬಯಲಿಗೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...