Homeಮುಖಪುಟಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್... ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು?

- Advertisement -
- Advertisement -

ಕೊರೊನಾ ಸೋಂಕಿನಿಂದ ಗುಣಮುಖರಾದ ಪಾದರಾಯನಪುರ ವಾರ್ಡ್‌ ಕಾರ್ಪೋರೇಟರ್‌ ಇಮ್ರಾನ್ ಪಾಷ ಮೆರವಣಿಗೆ ನಡೆಸಿದ್ದಕ್ಕೆ ಅವರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಾಪ್ರಹಾರ ನಡೆಸಿದ್ದಾರೆ.

ಭಾನುವಾರ ವಿಕ್ಟೋರಿಯಾ ಆಸ್ಪತ್ರೆಯಿಂದ ಇಮ್ರಾನ್ ಪಾಷ ಬಿಡುಗಡೆಯಾದ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಜೈಕಾರ ಕೂಗಿದ್ದರು. ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಯ ಕಾರಾಗೃಹ ಸೆಲ್‌ನಲ್ಲಿರಿಸಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಮ್ರಾನ್ ಪಾಷರನ್ನು ಬಂಧಿಸಿದ್ದು ಸರಿ. ಆದರೆ ಚಿತ್ರದುರ್ಗದಲ್ಲಿ ನೂರಾರು ಜನರನ್ನು ಸೇರಿಸಿ ಮೆರವಣಿಗೆ ಮಾಡಿದ, ಸೇಬಿನ ಹಾರವನ್ನು ಹಾಕಿಸಿಕೊಂಡ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿದ ಆರೋಗ್ಯ ಸಚಿವ ಬಿ.ಶ್ರೀರಾಮುಲುರವರನ್ನು ಯಾವಾಗ ಬಂಧಿಸುತ್ತೀರಿ ಎಂದು ಪ್ರಶ್ನಿಸಿದ್ದರೆ.

ಆರೋಗ್ಯ ಸಚಿವರಾದ ಶ್ರೀರಾಮುಲು ಅವರಿಗೆ ಸೇಬಿನ ಹಾರ ಹಾಕಿ ಕನಿಷ್ಠ ಅಂತರವನ್ನು ಕಾಪಾಡದೆ ವಿಜೃಂಭಣೆಯ ಮೆರವಣಿಗೆ ಮಾಡುತ್ತಿರುವ ದೃಶ್ಯಗಳು. ಕೊರೊನಾ ಸಮಯದಲ್ಲಿ ಸಾಮಾನ್ಯಜನರು ಓಡಾಡಿದರೆ ಲಾಠಿಯಲ್ಲಿ ಗೊಡೆಯುವ ಪೋಲಿಸರು ಈ ರೀತಿಯ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣ ವಾಗಿವೆ.#NaanuGauri #coronaliveupdates #shreeRamulu

Posted by Naanu Gauri on Tuesday, June 2, 2020

ಕೊರೋನ ರೋಗದಿಂದ ಗುಣಮುಖರಾಗಿ ಪಾದರಾಯಣ ಪುರಕ್ಕೆ ಮೆರವಣಿಗೆ ಮೂಲಕ ಬಂದ ಕಾರ್ಪೋರೇಟರ್ ಇಮ್ರಾನ್ ಪಾಷ ಬಂಧನ.. ಕಾನೂನು ಉಲ್ಲಂಘಿಸಿದರೆ ಬಂಧಿಸಿ… ಸರಿಯಾದ ಕ್ರಮ. ಬಂಧಿಸಲೇಬೇಕು.
ಇದಕ್ಕಿಂತ ಮೊದಲು ಅದ್ದೂರಿ ‌ಮೆರವಣಿಗೆ ಮಾಡಿ ಕಾನೂನು ಉಲ್ಲಂಘಿಸಿದ ಆರೋಗ್ಯ ಸಚಿವ ರಾಮುಲು ಬಂಧನ ಇದಕ್ಕಿಂತ ಮೊದಲೇ ಮಾಡಬೇಕಿತ್ತು. ಯಾಕೆ ಬಂಧನವಿಲ್ಲ?
ರಾಮನಿಗೊಂದು ನ್ಯಾಯ ರಹೀಮನಿಗೊಂದು ನ್ಯಾಯನಾ? ಎಂದು ಸಿದ್ದಿಕ್ ಪುತ್ತುರ್‌ರವರು ಪ್ರಶ್ನಿಸಿದ್ದಾರೆ.

ಪಾದರಾಯನಪುರದ ಕಾರ್ಪೋರೇಟರ್ ಇಮ್ರಾನ್ ಪಾಷ ಮೆರವಣಿಗೆ ಮಾಡಿದ್ದಕ್ಕೆ ಅರೆಸ್ಟ್ ಮಾಡಿದ್ದೀರಾ, ಸಂತೋಷ. ಎಲ್ಲಾರಿಗೂ ಒಂದೇ ಕಾನೂನು. ಮೆರವಣಿಗೆ ಮಾಡ್ಕೊಂಡ ಶ್ರೀರಾಮುಲು, ಜಮೀರ್, ರೇಣುಕಾಚಾರ್ಯರನ್ನ ಅರೆಸ್ಟ್ ಮಾಡೋ ತಾಕತ್ತು ಪೋಲಿಸ್ ಇಲಾಖೆಗೆ ಇಲ್ವಾ? ಎಂದು ಜಯರಾಜ್‌ ನಾಯ್ಡು ಎಂಬುವವರ ಪ್ರಶ್ನಿಸಿದ್ದಾರೆ.

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್… ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು? ಎಂದು ಸತೀಶ್‌ ಪಾಳೇಗಾರ್‌ರವರು ಕಿಡಿಕಾರಿದ್ದಾರೆ.

ಜನರು ಸೇರಿದ್ದಕ್ಕೆ ಇಮ್ರಾನ್ ಪಾಷ್ ಬಂಧನ ಆಯ್ತು… ಹಾಗಾದರೆ ಆರೋಗ್ಯ ಸಚಿವ ಶ್ರೀರಾಮುಲು ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ… ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ ಎಂದು ರಾಜಶೇಖರ್‌ ಎಸ್‌ ಅಂಗಡಿಯವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ. (ಗಜೇಂದ್ರ ಗಡದಲ್ಲಿ ಸಿದ್ದರಾಮಯ್ಯ ನವರು ಭೇಟಿ ನೀಡಿದಾಗ ನೂರಾರು ಜನ ಒಂದೆಡೆ ಸೇರಿ ಘೋಷಣೆ ಕೂಗಿದ್ದರು)

ಒಟ್ಟಿನಲ್ಲಿ ಈ ಎಲ್ಲಾ ಜನಪ್ರತಿನಿಧಿಗಳು ಸಹ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಹೀಗಿರುವಾಗ ಎಲ್ಲರಿಗೂ ಕಾನೂನುಗಳು ಅನ್ವಯವಾಗಬೇಕು. ಕೆಲವರಿಗೆ ಅದರಿಂದ ವಿನಾಯಿತಿ ನೀಡುವುದರಿಂದ ಮತ್ತಷ್ಟು ಉಲ್ಲಂಘನೆಗಳಿಗೆ ಕಾರಣವಾಗುತ್ತದೆ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು.


ಇದನ್ನೂ ಓದಿ: ಜನಾಂಗೀಯತೆಯ ಬಗ್ಗೆ ಬಾಲಿವುಡ್ ತಾರೆಗಳ ಇಬ್ಬಂದಿತನವನ್ನು ಬಯಲಿಗೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...