Homeಮುಖಪುಟಗೌತಮ್ ನವಲಖ ಪ್ರಕರಣ: ಹೈಕೋರ್ಟ್ ಎದುರು ಸುಪ್ರೀಂಕೋರ್ಟ್ ಎತ್ತಿಕಟ್ಟುತ್ತಿರುವ ಸರ್ಕಾರ!

ಗೌತಮ್ ನವಲಖ ಪ್ರಕರಣ: ಹೈಕೋರ್ಟ್ ಎದುರು ಸುಪ್ರೀಂಕೋರ್ಟ್ ಎತ್ತಿಕಟ್ಟುತ್ತಿರುವ ಸರ್ಕಾರ!

- Advertisement -
- Advertisement -

60 ವರ್ಷ ಮೀರಿದವರಿಗೆ ಕೋವಿಡ್ ಅಪಾಯಕಾರಿಯಾಗಿದ್ದರೂ, 68 ವರ್ಷದ ನವಲಖ ಅವರನ್ನು ಅವರ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸದೆಯೇ ತರಾತುರಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಂಬಯಿಗೆ ರೈಲಿನಲ್ಲಿ ಸಾಗಿಸಿದುದು ಮತ್ತು ಸುಪ್ರೀಂಕೋರ್ಟ್ ಹೈಕೋರ್ಟಿನ ಆದೇಶವನ್ನು ಪರಿಗಣಿಸದೇ ಇರುವುದು ಆಕ್ಷೇಪಾರ್ಹ ಎಂಬುದು ನವಲಖ ಅವರ ವಕೀಲರುಗಳ ವಾದ.

ಕೃಪೆ: ದಿ ವೈರ್‌

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಗೌತಮ್ ನವಲಖರ “ಅವಸರದ ವರ್ಗಾವಣೆ”ಯ ವಿವರಗಳನ್ನು ದಿಲ್ಲಿ ಹೈಕೋರ್ಟಿಗೆ ನೀಡಲು ವಿಫಲವಾದ ಎಎನ್‌ಐಗೆ ಸುಪ್ರೀಂಕೋರ್ಟ್‌ನಲ್ಲಿ ತಡೆಯಾಜ್ಞೆ!. ಹಿಂದೆಯೇ ಈ ವಿಷಯದ ಕಾರ್ಯವ್ಯಾಪ್ತಿಯ ಪ್ರಶ್ನೆಯನ್ನು ಎತ್ತಲು ವಿಫಲವಾಗಿ, ನಂತರ ತಾನು ಈ ವಿಷಯವನ್ನು ನಿಭಾಯಿಸಿದ ಕುರಿತು ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದ ಸರಕಾರವೀಗ ದಿಲ್ಲಿ ಹೈಕೋರ್ಟಿನ ಏಕ ಸದಸ್ಯ ಪೀಠಕ್ಕೆ ಎನ್ಐಎ ಕಾಯಿದೆಯನ್ವಯ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಲು ಕಾರ್ಯವ್ಯಾಪ್ತಿಯಿಲ್ಲವೆಂದು ವಾದಿಸುತ್ತಿದೆ.

ಒಂದು ಸಾಂವಿಧಾನಿಕ ನ್ಯಾಯಾಲಯವನ್ನು ಇನ್ನೊಂದು ಸಾಂವಿಧಾನಿಕ ನ್ಯಾಯಾಲಯದ ಎದುರು ಎತ್ತಿಕಟ್ಟುವ ಕ್ರಮವೊಂದರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಿಲ್ಲಿ ಹೈಕೋರ್ಟಿನ ನ್ಯಾಯಮೂರ್ತಿ ಅನೂಪ್ ಭಂಭಾನಿ ಅವರ ಏಕಸದಸ್ಯ ಪೀಠದ ನಿರ್ದೇಶನವನ್ನು ಪಾಲಿಸುವುದಕ್ಕೆ ಬದಲಾಗಿ ಅವಸರವಸರದಲ್ಲಿ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟಿನ ಮೊರೆಹೋಗಲು ನಿರ್ಧರಿಸಿತು. ಗೌತಮ್ ನವಲಖ ಅವರನ್ನು ತರಾತುರಿಯಲ್ಲಿ ಮುಂಬಯಿಗೆ ವರ್ಗಾಯಿಸಿದ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ನೀಡುವಂತೆ ಈ ಪೀಠ ಎನ್‌ಐಎಗೆ ನಿರ್ದೇಶನ ನೀಡಿತ್ತು.

ಪ್ರಸಿದ್ಧ ನಾಗರಿಕ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖ ಅವರನ್ನು ಅವರ ಮಧ್ಯಂತರ ಜಾಮೀನು ಅರ್ಜಿ ಇನ್ನೂ ದಿಲ್ಲಿ ಹೈಕೋರ್ಟಿನಲ್ಲಿ ವಿಚಾರಣೆಗೆ ಬಾಕಿ ಇರುವಾಗಲೇ ಮೇ 25ರಂದು ಕೇವಲ ಐದು ನಿಮಿಷಗಳ ಅವಧಿಯಲ್ಲಿ ಮುಂಬಯಿಗೆ ಹೋಗುವ ರೈಲಿನಲ್ಲಿ ಕುಳ್ಳಿರಿಸಲಾಗಿತ್ತು.

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠವು ಜೂನ್ 2ರಂದು ಆರೋಪಿಯ ಅನುಪಸ್ಥಿತಿಯಲ್ಲಿ ನಡೆಸಿದ ವಿಚಾರಣೆಯಲ್ಲಿ- ದಿಲ್ಲಿ ಹೈಕೋರ್ಟಿಗೆ ಈ ವಿಷಯದಲ್ಲಿ ಕಾರ್ಯವ್ಯಾಪ್ತಿಯಿಲ್ಲವೆಂಬ ಎನ್ಐಎಯ ವಾದವನ್ನು ಜೂನ್ ಮಧ್ಯ ಭಾಗದಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿದೆ.

ವಿಶೇಷವೆಂದರೆ ಸುಪ್ರೀಂಕೋರ್ಟ್ ದಾಖಲೆ ಪುಸ್ತಕದಲ್ಲಿ ದಾಖಲೆ ಅವಧಿಯಲ್ಲಿ ನಮೂದಾಗಿದ್ದರೂ ಎನ್‌ಐಎಯ ವಿಶೇಷ ತೆರವು ಅರ್ಜಿಯ ಪ್ರತಿಯನ್ನು ನವಲಖ ಅವರ ವಕೀಲರಿಗೆ ನೀಡಲಾಗಿಲ್ಲ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ನವಲಖ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಎಪ್ರಿಲ್ 14ರಂದು ಎನ್‌ಐಎಯು ಕರಾಳ ಕಾನೂನುಬಾಹಿರ ಕೃತ್ಯ (ತಡೆ) ಕಾಯಿದೆಯನ್ವಯ ದಿಲ್ಲಿಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು.

ಎನ್‌ಐಎಯ ಮುಂಬಯಿ ಕಚೇರಿಯು ಈ ಪ್ರಕರಣದ ತನಿಖೆ ನಡೆಸುತ್ತಿರುವುದರಿಂದ ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ಅವರನ್ನು ಅಲ್ಲಿಗೆ ಸಾಗಿಸುವ ಬದಲು ದಿಲ್ಲಿಯ ತಿಹಾರ್ ಜೈಲಿನಲ್ಲಿ ತಾತ್ಕಾಲಿಕವಾಗಿ, ಆದರೆ ಅನಿರ್ದಿಷ್ಟಾವಧಿಗೆ ಇರಿಸಲಾಗಿತ್ತು.

ಮುಂಬಯಿಯಲ್ಲಿ ಕೊರೋನ ಪ್ರಕರಣಗಳು ವ್ಯಾಪಕವಾಗಿ ಹಬ್ಬಿರುವ ಮತ್ತು ಅಲ್ಲಿನ ಜೈಲುಗಳಲ್ಲಿಯೂ ಸೋಂಕಿತರು ಇರುವ ಕಾರಣದಿಂದ 68 ವರ್ಷ ಪ್ರಾಯದ ನವಲಖ ಅವರ ವೈದ್ಯಕೀಯ ಪರಿಸ್ಥಿತಿ ಮತ್ತು ಅವರು ಎದುರಿಸಬೇಕಾಗಿ ಬರಬಹುದಾದ ಸಂಕೀರ್ಣತೆಗಳ ಹಿನ್ನೆಲೆಯಲ್ಲಿ ಅವರ ವಕೀಲರು ಮಧ್ಯಂತರ ಜಾಮೀನು ಕೋರಿ ದಿಲ್ಲಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

ಯುಎಪಿಎ ಮತ್ತು ಎನ್‌ಐಎ ಕಾಯಿದೆ ಪ್ರಕಾರ ಸಾಮಾನ್ಯವಾಗಿ ಜಾಮೀನು ಅರ್ಜಿಯ ವಿಚಾರಣೆಯನ್ನು ನಿಯೋಜಿತ ವಿಶೇಷ ನ್ಯಾಯಾಲಯ ನಡೆಸಬೇಕಾಗಿದ್ದರೂ, ದಿಲ್ಲಿಯಲ್ಲಿ ಯಾವುದೇ ಎನ್ಐಎ ವಿಶೇಷ ನ್ಯಾಯಾಲಯ ಕಾರ್ಯಾಚರಿಸದೇ ಇರುವುದರಿಂದ ಮತ್ತು ನವಲಖ ಅವರ ರಿಮಾಂಡ್ ವಿಷಯವನ್ನು ಕೂಡಾ ಸಾಮಾನ್ಯ ನ್ಯಾಯಾಲಯವೇ ನಡೆಸಿರುವುದರಿಂದ ಹೈಕೋರ್ಟ್ ಮಾತ್ರ ಅವರಿಗೆ ಉಳಿದಿರುವ ಏಕೈಕ ದಾರಿಯಾಗಿತ್ತು.

ಹೈಕೋರ್ಟ್ ವ್ಯಾಪ್ತಿಯನ್ನು ಎನ್‌ಐಎ ಒಪ್ಪಿತ್ತು

ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ಮೇ 22ರಂದು ನಡೆದಾಗ ಎನ್‌ಐಎಯು ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲ್ಲ ಮತ್ತು ಉತ್ತರ ನೀಡಲು ಸಮಯಾವಕಾಶ ಕೇಳಿತ್ತು. ಅದರಂತೆ ಮುಂದಿನ ವಿಚಾರಣೆ ನಡೆಯುವ ಮೇ 27ರ ತನಕ ಸಮಯಾವಕಾಶ ನೀಡಲಾಗಿತ್ತು. ವಿಮಾನಯಾನ ಆರಂಭವಾಗುವ ಹಿನ್ನೆಲೆಯಲ್ಲಿ ಎನ್‌ಐಎಯು ನವಲಖ ಅವರನ್ನು ಮುಂಬಯಿಗೆ ವರ್ಗಾಯಿಸುವ ಉದ್ದೇಶ ಹೊಂದಿದೆ ಎಂದು ಮನಗಂಡ ಹೈಕೋರ್ಟ್, ಸೂಕ್ತ ನ್ಯಾಯಾಲಯದಿಂದ ಆದೇಶ ಪಡೆದ ಮೇಲೆಯೇ ಹಾಗೆ ಮಾಡಬೇಕೆಂದು ನಿರ್ದೇಶಿಸಿತ್ತು.

ಆದರೂ ಮೇ 25ರಂದು ಎನ್‌ಐಎಯು ಅವರನ್ನು ರೈಲಿನಲ್ಲಿ ಮುಂಬಯಿಗೆ ಕೊಂಡೊಯ್ದು, ಮರುದಿನ ಅಲ್ಲಿನ ಎನ್‌ಐಎ ನ್ಯಾಯಾಲಯದಿಂದ ನ್ಯಾಯಾಂಗ ವಶದ ಆದೇಶ ಪಡೆಯಿತು. ಅಂದಿನಿಂದ ಅವರು ಮುಂಬಯಿಯ ಪೂರ್ವ ಭಾಗದಲ್ಲಿರುವ ತಲೋಜ ಜೈಲಿನಲ್ಲಿ ಇದ್ದಾರೆ.

ನವಲಖ ಅವರನ್ನು ಮುಂಬಯಿಗೆ ಕೊಂಡೊಯ್ದ ತರಾತುರಿಯ ಕ್ರಮದಿಂದ ಕಿರಿಕಿರಿಗೆ ಒಳಗಾದ ದಿಲ್ಲಿ ಹೈಕೋರ್ಟ್, ವರ್ಗಾವಣೆಯ ಸಂಪೂರ್ಣ ದಾಖಲೆ ಮತ್ತು ಮುಂಬಯಿಯ ಎನ್‌ಐಎ ನ್ಯಾಯಾಲಯ ನೀಡಿದ ವಾರಂಟ್ ಮಾತ್ರವಲ್ಲ, ದಿಲ್ಲಿಯ ಎನ್ಐಎ ನ್ಯಾಯಾಲಯ ನೀಡಿದ ವರ್ಗಾವಣೆ ಆದೇಶ ಮತ್ತು ಈ ನ್ಯಾಯಾಲಯಗಳಿಗೆ ಅವರ ವೈದ್ಯಕೀಯ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಾಗಿದೆಯೇ ಎಂಬ ಮಾಹಿತಿ ಸಲ್ಲಿಸುವಂತೆ ಆದೇಶಿಸಿತ್ತು.

ಇದಕ್ಕೆ ಜೂನ್ 3ರ ದಿನವನ್ನು ಹೈಕೋರ್ಟ್ ನಿಗದಿಪಡಿಸಿತ್ತು. ಆದರೆ, ಎನ್‌ಐಎಯು ಜೂನ್ 2ರಂದೇ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮೂಲಕ ದಿಲ್ಲಿ ಹೈಕೋರ್ಟಿನ ಪೀಠದ ವಿಚಾರಣೆಗೆ ತಡೆಯಾಜ್ಞೆ ಪಡೆಯಿತು. ಸುಪ್ರೀಂಕೋರ್ಟಿನ ಈ ತಡೆಯಾಜ್ಞೆಯು ದಿಲ್ಲಿ ಹೈಕೋರ್ಟ್ ತನ್ನ ಕಾರ್ಯವ್ಯಾಪ್ತಿಯ ಅಧೀನ ನ್ಯಾಯಾಲಯಗಳ ಮೇಲೆ ಹೊಂದಿರುವ ಅಧಿಕಾರವನ್ನೇ ಪ್ರಶ್ನಿಸಿರುವುದರಿಂದ ಕಾನೂನು ವಲಯದಲ್ಲಿ ಅನೇಕರ ಹುಬ್ಬುಗಳನ್ನು ಮೇಲೇರಿಸಿದೆ!

“ಭಾರತೀಯ ಸಂವಿಧಾನದ ಪ್ರಕಾರ ಹೈಕೋರ್ಟ್‌ಗಳೂ ಸಾಂವಿಧಾನಿಕ ನ್ಯಾಯಾಲಯಗಳಾಗಿದ್ದು, ಅವುಗಳ ಆಜ್ಞೆಗಳನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುವಾಗ ಎರಡೂ ಕೋರ್ಟ್‌ಗಳು ಒಂದು ಸ್ಥಾನಮಾನ ಹೊಂದಿರುತ್ತವೆ ಮತ್ತು ಯಾವುದೇ ರೀತಿಯಲ್ಲಿ ಹೈಕೋರ್ಟ್‌ಗಳು ಸುಪ್ರೀಂಕೋರ್ಟ್‌ಗಿಂತ ಕೆಳಗೆ ಇಲ್ಲ. ತನ್ನ ಅಧೀನ ನ್ಯಾಯಾಲಯವು ಕಾನೂನು ನಿಯಮಗಳನ್ನು ಪಾಲಿಸಿದೆಯೇ, ಇಲ್ಲವೇ ಎಂದು ವಿಚಾರಿಸುವುದರಿಂದ ಹೈಕೋರ್ಟನ್ನು ತಡೆಯುವಂತಿಲ್ಲ” ಎಂದು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಹಿರಿಯ ವಕೀಲರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

60 ವರ್ಷ ಮೀರಿದವರಿಗೆ ಕೋವಿಡ್ ಅಪಾಯಕಾರಿಯಾಗಿದ್ದರೂ, 68 ವರ್ಷದ ನವಲಖ ಅವರನ್ನು ಅವರ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸದೆಯೇ ತರಾತುರಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಂಬಯಿಗೆ ರೈಲಿನಲ್ಲಿ ಸಾಗಿಸಿದುದು ಮತ್ತು ಸುಪ್ರೀಂಕೋರ್ಟ್ ಹೈಕೋರ್ಟಿನ ಆದೇಶವನ್ನು ಪರಿಗಣಿಸದೇ ಇರುವುದು ಆಕ್ಷೇಪಾರ್ಹ ಎಂಬುದು ನವಲಖ ಅವರ ವಕೀಲರುಗಳ ವಾದ.


ಓದಿ: ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಂದೆ ಶರಣಾದ ಹೋರಾಟಗಾರರಾದ ತೇಲ್ತುಂಬ್ಡೆ ಹಾಗೂ ನವಲಖ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...