Homeಮುಖಪುಟಗೌತಮ್ ನವಲಖ ಪ್ರಕರಣ: ಹೈಕೋರ್ಟ್ ಎದುರು ಸುಪ್ರೀಂಕೋರ್ಟ್ ಎತ್ತಿಕಟ್ಟುತ್ತಿರುವ ಸರ್ಕಾರ!

ಗೌತಮ್ ನವಲಖ ಪ್ರಕರಣ: ಹೈಕೋರ್ಟ್ ಎದುರು ಸುಪ್ರೀಂಕೋರ್ಟ್ ಎತ್ತಿಕಟ್ಟುತ್ತಿರುವ ಸರ್ಕಾರ!

- Advertisement -
- Advertisement -

60 ವರ್ಷ ಮೀರಿದವರಿಗೆ ಕೋವಿಡ್ ಅಪಾಯಕಾರಿಯಾಗಿದ್ದರೂ, 68 ವರ್ಷದ ನವಲಖ ಅವರನ್ನು ಅವರ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸದೆಯೇ ತರಾತುರಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಂಬಯಿಗೆ ರೈಲಿನಲ್ಲಿ ಸಾಗಿಸಿದುದು ಮತ್ತು ಸುಪ್ರೀಂಕೋರ್ಟ್ ಹೈಕೋರ್ಟಿನ ಆದೇಶವನ್ನು ಪರಿಗಣಿಸದೇ ಇರುವುದು ಆಕ್ಷೇಪಾರ್ಹ ಎಂಬುದು ನವಲಖ ಅವರ ವಕೀಲರುಗಳ ವಾದ.

ಕೃಪೆ: ದಿ ವೈರ್‌

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಗೌತಮ್ ನವಲಖರ “ಅವಸರದ ವರ್ಗಾವಣೆ”ಯ ವಿವರಗಳನ್ನು ದಿಲ್ಲಿ ಹೈಕೋರ್ಟಿಗೆ ನೀಡಲು ವಿಫಲವಾದ ಎಎನ್‌ಐಗೆ ಸುಪ್ರೀಂಕೋರ್ಟ್‌ನಲ್ಲಿ ತಡೆಯಾಜ್ಞೆ!. ಹಿಂದೆಯೇ ಈ ವಿಷಯದ ಕಾರ್ಯವ್ಯಾಪ್ತಿಯ ಪ್ರಶ್ನೆಯನ್ನು ಎತ್ತಲು ವಿಫಲವಾಗಿ, ನಂತರ ತಾನು ಈ ವಿಷಯವನ್ನು ನಿಭಾಯಿಸಿದ ಕುರಿತು ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದ ಸರಕಾರವೀಗ ದಿಲ್ಲಿ ಹೈಕೋರ್ಟಿನ ಏಕ ಸದಸ್ಯ ಪೀಠಕ್ಕೆ ಎನ್ಐಎ ಕಾಯಿದೆಯನ್ವಯ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಲು ಕಾರ್ಯವ್ಯಾಪ್ತಿಯಿಲ್ಲವೆಂದು ವಾದಿಸುತ್ತಿದೆ.

ಒಂದು ಸಾಂವಿಧಾನಿಕ ನ್ಯಾಯಾಲಯವನ್ನು ಇನ್ನೊಂದು ಸಾಂವಿಧಾನಿಕ ನ್ಯಾಯಾಲಯದ ಎದುರು ಎತ್ತಿಕಟ್ಟುವ ಕ್ರಮವೊಂದರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಿಲ್ಲಿ ಹೈಕೋರ್ಟಿನ ನ್ಯಾಯಮೂರ್ತಿ ಅನೂಪ್ ಭಂಭಾನಿ ಅವರ ಏಕಸದಸ್ಯ ಪೀಠದ ನಿರ್ದೇಶನವನ್ನು ಪಾಲಿಸುವುದಕ್ಕೆ ಬದಲಾಗಿ ಅವಸರವಸರದಲ್ಲಿ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟಿನ ಮೊರೆಹೋಗಲು ನಿರ್ಧರಿಸಿತು. ಗೌತಮ್ ನವಲಖ ಅವರನ್ನು ತರಾತುರಿಯಲ್ಲಿ ಮುಂಬಯಿಗೆ ವರ್ಗಾಯಿಸಿದ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ನೀಡುವಂತೆ ಈ ಪೀಠ ಎನ್‌ಐಎಗೆ ನಿರ್ದೇಶನ ನೀಡಿತ್ತು.

ಪ್ರಸಿದ್ಧ ನಾಗರಿಕ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖ ಅವರನ್ನು ಅವರ ಮಧ್ಯಂತರ ಜಾಮೀನು ಅರ್ಜಿ ಇನ್ನೂ ದಿಲ್ಲಿ ಹೈಕೋರ್ಟಿನಲ್ಲಿ ವಿಚಾರಣೆಗೆ ಬಾಕಿ ಇರುವಾಗಲೇ ಮೇ 25ರಂದು ಕೇವಲ ಐದು ನಿಮಿಷಗಳ ಅವಧಿಯಲ್ಲಿ ಮುಂಬಯಿಗೆ ಹೋಗುವ ರೈಲಿನಲ್ಲಿ ಕುಳ್ಳಿರಿಸಲಾಗಿತ್ತು.

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠವು ಜೂನ್ 2ರಂದು ಆರೋಪಿಯ ಅನುಪಸ್ಥಿತಿಯಲ್ಲಿ ನಡೆಸಿದ ವಿಚಾರಣೆಯಲ್ಲಿ- ದಿಲ್ಲಿ ಹೈಕೋರ್ಟಿಗೆ ಈ ವಿಷಯದಲ್ಲಿ ಕಾರ್ಯವ್ಯಾಪ್ತಿಯಿಲ್ಲವೆಂಬ ಎನ್ಐಎಯ ವಾದವನ್ನು ಜೂನ್ ಮಧ್ಯ ಭಾಗದಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿದೆ.

ವಿಶೇಷವೆಂದರೆ ಸುಪ್ರೀಂಕೋರ್ಟ್ ದಾಖಲೆ ಪುಸ್ತಕದಲ್ಲಿ ದಾಖಲೆ ಅವಧಿಯಲ್ಲಿ ನಮೂದಾಗಿದ್ದರೂ ಎನ್‌ಐಎಯ ವಿಶೇಷ ತೆರವು ಅರ್ಜಿಯ ಪ್ರತಿಯನ್ನು ನವಲಖ ಅವರ ವಕೀಲರಿಗೆ ನೀಡಲಾಗಿಲ್ಲ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ನವಲಖ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಎಪ್ರಿಲ್ 14ರಂದು ಎನ್‌ಐಎಯು ಕರಾಳ ಕಾನೂನುಬಾಹಿರ ಕೃತ್ಯ (ತಡೆ) ಕಾಯಿದೆಯನ್ವಯ ದಿಲ್ಲಿಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು.

ಎನ್‌ಐಎಯ ಮುಂಬಯಿ ಕಚೇರಿಯು ಈ ಪ್ರಕರಣದ ತನಿಖೆ ನಡೆಸುತ್ತಿರುವುದರಿಂದ ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ಅವರನ್ನು ಅಲ್ಲಿಗೆ ಸಾಗಿಸುವ ಬದಲು ದಿಲ್ಲಿಯ ತಿಹಾರ್ ಜೈಲಿನಲ್ಲಿ ತಾತ್ಕಾಲಿಕವಾಗಿ, ಆದರೆ ಅನಿರ್ದಿಷ್ಟಾವಧಿಗೆ ಇರಿಸಲಾಗಿತ್ತು.

ಮುಂಬಯಿಯಲ್ಲಿ ಕೊರೋನ ಪ್ರಕರಣಗಳು ವ್ಯಾಪಕವಾಗಿ ಹಬ್ಬಿರುವ ಮತ್ತು ಅಲ್ಲಿನ ಜೈಲುಗಳಲ್ಲಿಯೂ ಸೋಂಕಿತರು ಇರುವ ಕಾರಣದಿಂದ 68 ವರ್ಷ ಪ್ರಾಯದ ನವಲಖ ಅವರ ವೈದ್ಯಕೀಯ ಪರಿಸ್ಥಿತಿ ಮತ್ತು ಅವರು ಎದುರಿಸಬೇಕಾಗಿ ಬರಬಹುದಾದ ಸಂಕೀರ್ಣತೆಗಳ ಹಿನ್ನೆಲೆಯಲ್ಲಿ ಅವರ ವಕೀಲರು ಮಧ್ಯಂತರ ಜಾಮೀನು ಕೋರಿ ದಿಲ್ಲಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

ಯುಎಪಿಎ ಮತ್ತು ಎನ್‌ಐಎ ಕಾಯಿದೆ ಪ್ರಕಾರ ಸಾಮಾನ್ಯವಾಗಿ ಜಾಮೀನು ಅರ್ಜಿಯ ವಿಚಾರಣೆಯನ್ನು ನಿಯೋಜಿತ ವಿಶೇಷ ನ್ಯಾಯಾಲಯ ನಡೆಸಬೇಕಾಗಿದ್ದರೂ, ದಿಲ್ಲಿಯಲ್ಲಿ ಯಾವುದೇ ಎನ್ಐಎ ವಿಶೇಷ ನ್ಯಾಯಾಲಯ ಕಾರ್ಯಾಚರಿಸದೇ ಇರುವುದರಿಂದ ಮತ್ತು ನವಲಖ ಅವರ ರಿಮಾಂಡ್ ವಿಷಯವನ್ನು ಕೂಡಾ ಸಾಮಾನ್ಯ ನ್ಯಾಯಾಲಯವೇ ನಡೆಸಿರುವುದರಿಂದ ಹೈಕೋರ್ಟ್ ಮಾತ್ರ ಅವರಿಗೆ ಉಳಿದಿರುವ ಏಕೈಕ ದಾರಿಯಾಗಿತ್ತು.

ಹೈಕೋರ್ಟ್ ವ್ಯಾಪ್ತಿಯನ್ನು ಎನ್‌ಐಎ ಒಪ್ಪಿತ್ತು

ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ಮೇ 22ರಂದು ನಡೆದಾಗ ಎನ್‌ಐಎಯು ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲ್ಲ ಮತ್ತು ಉತ್ತರ ನೀಡಲು ಸಮಯಾವಕಾಶ ಕೇಳಿತ್ತು. ಅದರಂತೆ ಮುಂದಿನ ವಿಚಾರಣೆ ನಡೆಯುವ ಮೇ 27ರ ತನಕ ಸಮಯಾವಕಾಶ ನೀಡಲಾಗಿತ್ತು. ವಿಮಾನಯಾನ ಆರಂಭವಾಗುವ ಹಿನ್ನೆಲೆಯಲ್ಲಿ ಎನ್‌ಐಎಯು ನವಲಖ ಅವರನ್ನು ಮುಂಬಯಿಗೆ ವರ್ಗಾಯಿಸುವ ಉದ್ದೇಶ ಹೊಂದಿದೆ ಎಂದು ಮನಗಂಡ ಹೈಕೋರ್ಟ್, ಸೂಕ್ತ ನ್ಯಾಯಾಲಯದಿಂದ ಆದೇಶ ಪಡೆದ ಮೇಲೆಯೇ ಹಾಗೆ ಮಾಡಬೇಕೆಂದು ನಿರ್ದೇಶಿಸಿತ್ತು.

ಆದರೂ ಮೇ 25ರಂದು ಎನ್‌ಐಎಯು ಅವರನ್ನು ರೈಲಿನಲ್ಲಿ ಮುಂಬಯಿಗೆ ಕೊಂಡೊಯ್ದು, ಮರುದಿನ ಅಲ್ಲಿನ ಎನ್‌ಐಎ ನ್ಯಾಯಾಲಯದಿಂದ ನ್ಯಾಯಾಂಗ ವಶದ ಆದೇಶ ಪಡೆಯಿತು. ಅಂದಿನಿಂದ ಅವರು ಮುಂಬಯಿಯ ಪೂರ್ವ ಭಾಗದಲ್ಲಿರುವ ತಲೋಜ ಜೈಲಿನಲ್ಲಿ ಇದ್ದಾರೆ.

ನವಲಖ ಅವರನ್ನು ಮುಂಬಯಿಗೆ ಕೊಂಡೊಯ್ದ ತರಾತುರಿಯ ಕ್ರಮದಿಂದ ಕಿರಿಕಿರಿಗೆ ಒಳಗಾದ ದಿಲ್ಲಿ ಹೈಕೋರ್ಟ್, ವರ್ಗಾವಣೆಯ ಸಂಪೂರ್ಣ ದಾಖಲೆ ಮತ್ತು ಮುಂಬಯಿಯ ಎನ್‌ಐಎ ನ್ಯಾಯಾಲಯ ನೀಡಿದ ವಾರಂಟ್ ಮಾತ್ರವಲ್ಲ, ದಿಲ್ಲಿಯ ಎನ್ಐಎ ನ್ಯಾಯಾಲಯ ನೀಡಿದ ವರ್ಗಾವಣೆ ಆದೇಶ ಮತ್ತು ಈ ನ್ಯಾಯಾಲಯಗಳಿಗೆ ಅವರ ವೈದ್ಯಕೀಯ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಾಗಿದೆಯೇ ಎಂಬ ಮಾಹಿತಿ ಸಲ್ಲಿಸುವಂತೆ ಆದೇಶಿಸಿತ್ತು.

ಇದಕ್ಕೆ ಜೂನ್ 3ರ ದಿನವನ್ನು ಹೈಕೋರ್ಟ್ ನಿಗದಿಪಡಿಸಿತ್ತು. ಆದರೆ, ಎನ್‌ಐಎಯು ಜೂನ್ 2ರಂದೇ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮೂಲಕ ದಿಲ್ಲಿ ಹೈಕೋರ್ಟಿನ ಪೀಠದ ವಿಚಾರಣೆಗೆ ತಡೆಯಾಜ್ಞೆ ಪಡೆಯಿತು. ಸುಪ್ರೀಂಕೋರ್ಟಿನ ಈ ತಡೆಯಾಜ್ಞೆಯು ದಿಲ್ಲಿ ಹೈಕೋರ್ಟ್ ತನ್ನ ಕಾರ್ಯವ್ಯಾಪ್ತಿಯ ಅಧೀನ ನ್ಯಾಯಾಲಯಗಳ ಮೇಲೆ ಹೊಂದಿರುವ ಅಧಿಕಾರವನ್ನೇ ಪ್ರಶ್ನಿಸಿರುವುದರಿಂದ ಕಾನೂನು ವಲಯದಲ್ಲಿ ಅನೇಕರ ಹುಬ್ಬುಗಳನ್ನು ಮೇಲೇರಿಸಿದೆ!

“ಭಾರತೀಯ ಸಂವಿಧಾನದ ಪ್ರಕಾರ ಹೈಕೋರ್ಟ್‌ಗಳೂ ಸಾಂವಿಧಾನಿಕ ನ್ಯಾಯಾಲಯಗಳಾಗಿದ್ದು, ಅವುಗಳ ಆಜ್ಞೆಗಳನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುವಾಗ ಎರಡೂ ಕೋರ್ಟ್‌ಗಳು ಒಂದು ಸ್ಥಾನಮಾನ ಹೊಂದಿರುತ್ತವೆ ಮತ್ತು ಯಾವುದೇ ರೀತಿಯಲ್ಲಿ ಹೈಕೋರ್ಟ್‌ಗಳು ಸುಪ್ರೀಂಕೋರ್ಟ್‌ಗಿಂತ ಕೆಳಗೆ ಇಲ್ಲ. ತನ್ನ ಅಧೀನ ನ್ಯಾಯಾಲಯವು ಕಾನೂನು ನಿಯಮಗಳನ್ನು ಪಾಲಿಸಿದೆಯೇ, ಇಲ್ಲವೇ ಎಂದು ವಿಚಾರಿಸುವುದರಿಂದ ಹೈಕೋರ್ಟನ್ನು ತಡೆಯುವಂತಿಲ್ಲ” ಎಂದು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಹಿರಿಯ ವಕೀಲರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

60 ವರ್ಷ ಮೀರಿದವರಿಗೆ ಕೋವಿಡ್ ಅಪಾಯಕಾರಿಯಾಗಿದ್ದರೂ, 68 ವರ್ಷದ ನವಲಖ ಅವರನ್ನು ಅವರ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸದೆಯೇ ತರಾತುರಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಂಬಯಿಗೆ ರೈಲಿನಲ್ಲಿ ಸಾಗಿಸಿದುದು ಮತ್ತು ಸುಪ್ರೀಂಕೋರ್ಟ್ ಹೈಕೋರ್ಟಿನ ಆದೇಶವನ್ನು ಪರಿಗಣಿಸದೇ ಇರುವುದು ಆಕ್ಷೇಪಾರ್ಹ ಎಂಬುದು ನವಲಖ ಅವರ ವಕೀಲರುಗಳ ವಾದ.


ಓದಿ: ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಂದೆ ಶರಣಾದ ಹೋರಾಟಗಾರರಾದ ತೇಲ್ತುಂಬ್ಡೆ ಹಾಗೂ ನವಲಖ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...