Homeನಿಜವೋ ಸುಳ್ಳೋಇದು ಭಾರತ-ಚೀನಾ ’ನಾಥು-ಲಾ’ ಸಂಘರ್ಷದ ಚಿತ್ರವಲ್ಲ: ಫ್ಯಾಕ್ಟ್ ಚೆಕ್‌

ಇದು ಭಾರತ-ಚೀನಾ ’ನಾಥು-ಲಾ’ ಸಂಘರ್ಷದ ಚಿತ್ರವಲ್ಲ: ಫ್ಯಾಕ್ಟ್ ಚೆಕ್‌

- Advertisement -
- Advertisement -

ಲಡಾಖ್‌ನಲ್ಲಿ ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ಈ ವಿಷಯದ ಬಗ್ಗೆ ಭಾರಿ ಸುಳ್ಳುಗಳನ್ನು ಹರಡಲಾಗುತ್ತಿದೆ.

ಅಂತಹದೆ ಒಂದು ಸುಳ್ಳುಗಳಲ್ಲಿ, ಚಿತ್ರವೊಂದನ್ನು 1967 ರ ’ನಾಥು ಲಾ’ ದಲ್ಲಿನ ಭಾರತ-ಚೀನಾ ನಡುವಿನ ಘರ್ಷಣೆಯಲ್ಲಿನ ಚೀನಾದ ಯುದ್ಧ ಕೈದಿಯೊಬ್ಬನ ಚಿತ್ರವೆಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ. ಸಂಘರ್ಷದಲ್ಲಿ ಸೋತದ್ದರಿಂದ ಚೀನಾ ಸೇನೆಯಿಂದ ಶಿಕ್ಷೆಯಾಗಬಹುದೆಂದು ಹೆದರಿ ಈ ಖೈದಿ ಹಿಂತಿರುಗಲು ಬಯಸದೆ ಅಳುತ್ತದ್ದಾನೆ ಎಂದು ಬರೆದು ಹಂಚಲಾಗುತ್ತಿದೆ.

ಚಿತ್ರದಲ್ಲಿ ಇಬ್ಬರು ಭಾರತೀಯ ಸೈನಿಕರು ಒಬ್ಬ ವ್ಯಕ್ತಿಯನ್ನು ಹಿಡಿದಿರುವುದು ಕಾಣಬಹುದಾಗಿದೆ. ಆ ವ್ಯಕ್ತಿ ರೋದಿಸುವ ಚಿತ್ರಣವು ಇದರಲ್ಲಿದೆ.

ಈ ಚಿತ್ರವೂ ಐತಿಹಾಸಿಕ ಚಿತ್ರವಾಗಿದೆಯಾದರೂ ಇದು ’ನಾಥು ಲಾ’ ದ ಸಂಧರ್ಭದ ಚಿತ್ರವಲ್ಲ. 1950-1954ರ ಕೊರಿಯನ್ ಯುದ್ಧದಲ್ಲಿ ಭಾರತವು ತನ್ನ ಮೊದಲ ವಿಶ್ವ ಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಭಾಗವಾಗಿ ಕಳುಹಿಸಿದ ಭಾರತೀಯ ಸೈನಿಕರ ಚಿತ್ರವಾಗಿದೆ.

ಈ ಚಿತ್ರಗಳನ್ನು ಹಿಸ್ಟರಿ ಡಾಟ್ ಕಾಮ್ ವೆಬ್‌ಸೈಟ್‌ನ ಲೇಖನವೊಂದರಲ್ಲಿ ಕಾಣಬಹುದಾಗಿದೆ. ವೆಬ್ಸೈಟ್ ಚಿತ್ರವನ್ನು ಗೆಟ್ಟಿ ಇಮೇಜ್ ನಿಂದ ವೆಬ್ಸೈಟ್ ಪಡೆದುಕೊಂಡಿದೆ ಎಂದು ಹೇಳಿದೆ. ಲೇಖನವೂ ಚಿತ್ರವನ್ನು ಕೊರಿಯನ್ ಯುದ್ದದ ಚಿತ್ರ ಎಂದು ಉಲ್ಲೇಖಿಸಿದೆ.

ಗೆಟ್ಟಿ ವಿವರಣೆಯಲ್ಲಿ ಈ ಚಿತ್ರವನ್ನು ಭಾರತೀಯ ಸೈನಿಕರು ಉತ್ತರ ಕೊರಿಯಾದಲ್ಲಿ ಚೀನಾದ ಯುದ್ಧ ಕೈದಿಯನ್ನು ಹೊತ್ತೊಯ್ಯುತ್ತಿದ್ದಾರೆ ಎಂದು ಹೇಳುತ್ತದೆ. “ಅಕ್ಟೋಬರ್ 5, 1953 ರ ಕೊರಿಯನ್ ಯುದ್ಧದ ನಂತರ ಕಮ್ಯುನಿಸ್ಟರ ಬಳಿಗೆ ಮರಳಲು ಉತ್ತರ ಕೊರಿಯಾದ ಪನ್ಮುಂಜೋಮ್ನಲ್ಲಿರುವ ವಿನಿಮಯ ಕೇಂದ್ರಕ್ಕೆ ಅಳುತ್ತಿದ್ದ ಚೀನಾದ ಯುದ್ಧ ಕೈದಿಯನ್ನು ಕರೆದೊಯ್ಯುವ ಇಬ್ಬರು ಭಾರತೀಯ ಸೈನಿಕರು. ಅವರು ಚೀನಾದ 65 ಸೈನಿಕರಲ್ಲಿ ಒಬ್ಬರಾಗಿದ್ದರು.” ಎಂದು ವಿವರಿಸಲಾಗಿದೆ.

1950-1954ರ ಕೊರಿಯನ್ ಯುದ್ಧದಲ್ಲಿ ಭಾರತದ ಸೈನ್ಯವೂ  ತನ್ನ ಮೊದಲ ವಿಶ್ವಸಂಸ್ಥೆ ಶಾಂತಿಪಾಲನಾ ಕಾರ್ಯಾಚರಣೆಯ ಭಾಗವಾಗಿ ಭಾಗವಹಿಸಿತ್ತು.

1967 ರಲ್ಲಿ ಭಾರತ-ಚೀನಾ ನಡುವೆ ಸಿಕ್ಕಿಂ ಗಡಿಯಲ್ಲಿ ನಾಥು ಲಾ ಮತ್ತು ಚೋ ಲಾ ಘರ್ಷಣೆ ಸರಣಿಯಾಗಿ ನಡೆದಿದ್ದವು. ಇದರಲ್ಲಿ ಕನಿಷ್ಠ 88 ಭಾರತೀಯ ಸೈನಿಕರು ಮತ್ತು 340 ಕ್ಕೂ ಹೆಚ್ಚು ಚೀನಾದ ಸೈನಿಕರು ಪ್ರಾಣ ಕಳೆದುಕೊಂಡು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕೃಪೆ: ದಿ ಕ್ವಿಂಟ್


ಓದಿ: ಅಮೆರಿಕಾದ ಕೊರೊನಾ ರಾಜಕೀಯವನ್ನು ಭಾರತ ವಿರೋಧಿಸಲಿದೆ: ಚೀನಾ ಬಯಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...