Homeಮುಖಪುಟಸಣ್ಣ ಕೈಗಾರಿಕೆಗೆ ಘೋಷಿಸಿದ ಸಾಲ ಯೋಜನೆಯ ಅನುಷ್ಠಾನ ವಿಳಂಬ: ಆರೆಸ್ಸೆಸ್ ಅಂಗಸಂಸ್ಥೆ ಆರೋಪ

ಸಣ್ಣ ಕೈಗಾರಿಕೆಗೆ ಘೋಷಿಸಿದ ಸಾಲ ಯೋಜನೆಯ ಅನುಷ್ಠಾನ ವಿಳಂಬ: ಆರೆಸ್ಸೆಸ್ ಅಂಗಸಂಸ್ಥೆ ಆರೋಪ

- Advertisement -
- Advertisement -

ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆ (ಎಂಎಸ್ಎಂಇ) ಗಳಿಗೆ ಕೇಂದ್ರ ಘೋಷಿಸಿರುವ 3 ಲಕ್ಷ ಕೋಟಿ ಸಾಲ ಯೋಜನೆಯ ಕೊರೊನಾ ಪ್ಯಾಕೇಜ್‌ ನೆರವಿನ ಅನುಷ್ಠಾನ ವಿಳಂಬವಾಗುತ್ತಿದೆ ಎಂದು ಆರ್‌ಎಸ್‌ಎಸ್‌ ಅಂಗಸಂಸ್ಥೆಯಾದ ಕೈಗಾರಿಕಾ ಸಂಸ್ಥೆ ಲಘು ಉದ್ಯೋಗ್ ಭಾರತಿ (ಎಲ್ಯುಬಿ) ಆರೋಪಿಸಿದೆ.

ಕೊರೋನಾ ಲಾಕ್ಡೌನ್ನಿಂದಾಗಿ ಭಾರತದ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳು ಸಾಕಷ್ಟು ನಷ್ಟ ಅನುಭವಿಸಿದ್ದವು. ಹೀಗಾಗಿ ಈ ಉದ್ಯಮಗಳ ಅಭಿವೃದ್ಧಿ ಸಲುವಾಗಿ ಕೇಂದ್ರ ಸರ್ಕಾರ ಎಂಎಸ್ಎಂಇ ಗೆ ಕೇಂದ್ರ ಸರ್ಕಾರ 3 ಲಕ್ಷ ಕೋಟಿಯ ಬೃಹತ್ ಪ್ಯಾಕೇಜ್ ಘೋಷಣೆ ಮಾಡಿತ್ತು. ಈ ಹಣದಲ್ಲಿ ಉದ್ಯಮಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಹಣವನ್ನು ಸಾಲವಾಗಿ ನೀಡುವ ಭರವಸೆ ನೀಡಿತ್ತು.

ಎಂಎಸ್ಎಂಇ ವಲಯಕ್ಕೆ 3 ಲಕ್ಷ ಕೋಟಿ ರೂ.ಗಳ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ಇಸಿಎಲ್ಜಿಎಸ್) ಅನುಷ್ಠಾನಗೊಳಿಸುವ ಬಗ್ಗೆ ಪ್ರತಿಕ್ರಿಯೆ ಪಡೆಯಲು ಸಚಿವೆ ಸೀತಾರಾಮನ್ ಲಘು ಉದ್ಯೋಗ್ ಭಾರತಿ ಪ್ರಧಾನ ಕಾರ್ಯದರ್ಶಿ ಗೋವಿಂದ್ ಲೆಲೆ ಅವರನ್ನು ಕರೆಸಿದ್ದರು.

ಈ ಭೇಟಿಯ ಬಳಿಕ ಮಾತನಾಡಿರುವ ಗೋವಿಂದ್ ಲೆಲೆ, “ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕುಗಳಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಬ್ಯಾಂಕ್ ಆಫ್ ಇಂಡಿಯಾ ಈ ಯೋಜನೆಯ ಪ್ರಕಾರ ಸಾಲವನ್ನು ನೀಡಲು ಪ್ರಾರಂಭಿಸಿವೆ. ಆದರೆ, ಶಾಖೆಯ ಮಟ್ಟದಲ್ಲಿ ಯಾವುದೇ ಮೊತ್ತವನ್ನು ಮಂಜೂರು ಮಾಡುವ ಮೊದಲು ಕಳೆದ ಮೂರು ವರ್ಷದ ಉದ್ಯಮದ ಆದಾಯ ಮತ್ತು ಲಾಭದಾಯಕತೆಯ ಕುರಿತ ಪ್ರಕ್ಷೇಪಗಳನ್ನು ಕೋರಲಾಗುತ್ತಿದೆ.

ಇನ್ನೂ ಖಾಸಗಿ ಬ್ಯಾಂಕುಗಳು ಈ ಯೋಜನೆಯನ್ನು ಈವರೆಗೆ ಅನುಷ್ಠಾನಗೊಳಿಸಲು ಪ್ರಯತ್ನಿಸಿಲ್ಲ. ಆದ್ದರಿಂದ, ಯೋಜನೆಯನ್ನು ಕಾರ್ಯಗತಗೊಳಿಸಲು ಅವರಿಗೆ ತಕ್ಷಣವೇ ಸೂಚನೆ ನೀಡಬೇಕಾಗಿದೆ” ಎಂದು ಹಣಕಾಸು ಸಚಿವರಿಗೆ ತಾವು ತಿಳಿಸಿದ್ದಾಗಿ ಹೇಳಿದ್ದಾರೆ.

ಅಲ್ಲದೆ, “ಆರ್‌ಎಸ್‌ಎಸ್‌ ಅಂಗಸಂಸ್ಥೆ ಈ ಯೋಜನೆಯ ಅನುಷ್ಠಾನದ ಕುರಿತು ಸಮೀಕ್ಷೆ ಈಗಾಗಲೇ ಆರಂಭಿಸಿದ್ದು, ಇದನ್ನು ಪೂರ್ಣಗೊಳಿಸಿ ಅಧ್ಯಯನದ ಫಲಿತಾಂಶವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಹಂಚಿಕೊಳ್ಳಲಾಗುವುದು” ಎಂದು ಗೋವಿಂದ್ ಲೆಲೆ ಹೇಳಿದ್ದಾರೆ.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...