Homeಸಾಹಿತ್ಯ-ಸಂಸ್ಕೃತಿಕವನನಿನ್ನ ಕೊನೆ ಹತ್ತು ಸೆಕೆಂಡುಗಳು

ನಿನ್ನ ಕೊನೆ ಹತ್ತು ಸೆಕೆಂಡುಗಳು

- Advertisement -
- Advertisement -

ಕೆಲವೊಮ್ಮೆ ಅನಿಸುತ್ತೆ
ನೀನು ಇಲ್ಲೇ ಇದ್ದೀ
ಎಂದಿನಂತೆ ನಿನ್ನ ಬಿಡುವಿಲ್ಲದ
ಕೆಲಸದಲ್ಲಿ ಮುಳುಗಿಹೋಗಿದ್ದೀ..
ಅದಕೆಂದೇ ಈ ವಾರ
ಮನೆಗೆ ಬರದೇ ಹೋದೀ..

ಆದರೆ ಮಿಕ್ಕ ಸಮಯದಲ್ಲೆ
ನಿಜ ಮುಖಕ್ಕೆ ರಾಚುತ್ತೆ
ನೀನಿನ್ನು ಬರಲ್ಲ
ಎಂದೆಂದೆಂದಿಗೂ ಬರಲ್ಲ
ಅನ್ನೋ ಕಹಿಸತ್ಯ ಅರಿವಾಗುತ್ತೆ
ಹೃದಯ ಕಂಪಿಸುತ್ತೆ
ಕಾಲುಗಳು ನಡುಗುತ್ತೆ
ಹೊಟ್ಟೆಯೊಳಗೆ ಸಂಕಟವಾಗಿ
ಒಳಗಿರೋದೆಲ್ಲಾ ಕಕ್ಕುವಂತಾಗುತ್ತೆ..
ಆದರೆ ನನ್ನಂತೆ ಅದೂ ಖಾಲಿಖಾಲಿಯಾಗಿದೆ..

ಎಚ್ಚರವಾದಾಗ ಕೊರಗುತ್ತಾ
ಮಲಗಿದ್ದಾಗ ಬೆಚ್ಚಿಬೀಳುತ್ತಾ..
ಪ್ರತಿಗಳಿಗೆಯೂ ಕಳೆದುಕೊಂಡಿದ್ದರ
ಲೆಕ್ಕ ನೀಡುತ್ತಿದೆ..
ನಿನ್ನ ಆ ಕೊನೆ ಹತ್ತು ಸೆಕೆಂಡುಗಳನ್ನು
ಊಹಿಸಿಕೊಳ್ಳುತ್ತೀನಿ
ಪೊಲೀಸರ ಪ್ರಕಾರ
ಹತ್ತೇ ಸೆಕೆಂಡುಗಳಲ್ಲಿ
ಆ ಕೊಲೆಗಡುಕರು
ನಿನ್ನ ಧ್ವನಿಯಡಗಿಸಿರಬಹುದಂತೆ..

ಹೇಗಿದ್ದಿರಬಹುದು ಆ ಹತ್ತು ಸೆಕೆಂಡುಗಳು
ಹೆಲ್ಮೆಟ್ಟಿನ ಹಿಂದೆ ಅಡಗಿದ್ದ ಆ ಕೊಲೆಗಡುಕ
ಆ ಹೇಡಿ
ನಿನ್ನ ಕಡೆ ನುಗ್ಗುತ್ತಾನೆ
ಯಾರೋ ನೀನು? ಎನ್ಮಾಡ್ತಿದೀಯೋ..ಮಗನೇ?
ಕೂಡಲೇ ಹಾರಿರಬಹುದೇ ಮೊದಲಗುಂಡು!
ಹೇ..ಯಾಕೋ? ಯಾವ ಬೇವರ್ಸಿ ಕಳಿಸಿದ್ದು ನಿನ್ನ..
ಚಡ್ಡಿ ಕಳಚಿ ಪ್ಯಾಂಟು ಹಾಕ್ಕೊಂಡ ತಕ್ಷಣ
ದೊಡ್ಡವನೆಂದು ತಿಳ್ಕೊಂಡ್ಯಾ..
ಎಷ್ಟು ಧೈರ್ಯ..ನನ್ನ ಕೊಲ್ತೀಯ
ಹತ್ತು ಸೆಕೆಂಡುಗಳು. ಮತ್ತೆ ಮೂರು ಬುಲ್ಲೆಟ್ಟುಗಳು.
ಕೊಂದೇ ಬಿಟ್ಟರಲ್ಲೇ ನಿನ್ನ..

ಆ ಕೊನೆಗಳಿಗೆಯಲ್ಲಿ ನಿನ್ನ ಕಣ್ಮುಂದೆ ಬಂದವರು ಯಾರು?
ಇಷಾ? ಅಮ್ಮ? ಅಥವಾ ನಾನೇ?
ನಿನ್ನ ಪ್ರೀತಿ, ಕಾಳಜಿ, ಕಳವಳಗಳೇ?
ಅಥವಾ ಪುಟ್ಟ ಗುಬ್ಬಿಯಂತಿದ್ದ ನಿನ್ನನ್ನು
ಮೊರೆಯುವ ಹೆಣ್ಣುಹುಲಿಯನ್ನಾಗಿಸಿದ ನಿನ್ನ ಕಾಮ್ರೇಡುಗಳೇ?

ನೀನು ತಣ್ಣಗೆ ಮಲಗಿದ್ದಿ ಅಲ್ಲಿ
ರಕ್ತದ ಮಡುವಿನಲ್ಲಿ..
ಆದರೆ ಸಾವೂ ಸುಮ್ಮನಾಗಿಸಲಿಲ್ಲ್ಲ ನಿನ್ನ
ಈಗ ಎಲ್ಲಿ ನೋಡಿದರು ಅಲ್ಲಿ ಗೌರಿಯರು
ಬೀದಿಯಲ್ಲಿ, ಗಲ್ಲಿಯಲ್ಲಿ, ದೂರದ ಡೆಲ್ಲಿಯಲ್ಲಿ..
ನಿನ್ನ ರಕ್ತದ ಕಣಕಣವೂ ಹೋರಾಟದ ಕಣ

ನನಗೀಗ ಮತ್ತಷ್ಟು ಗೊಂದಲ..
ನಿನ್ನಂತೆ
ಧ್ವನಿ ಇಲ್ಲದವರಿಗೆ ಧ್ವನಿಯಾದರೆ
ನಾನೂ ನೀನಾಗಬಲ್ಲೆನೇ?
ಸುಮ್ಮನುಳಿದರೆ
ಬದುಕಿಯೂ ಸತ್ತಂತಾಗುವೆನೇ?

ಇಂಗ್ಲೀಷ್ ಮೂಲ: ಕವಿತಾ ಲಂಕೇಶ್
ಅನು: ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...