Homeಮುಖಪುಟನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

ನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

- Advertisement -
- Advertisement -

ಕೇರಳ ಗರ್ಭಿಣಿ ಆನೆ ಹತ್ಯೆ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಟ್ವೀಟ್‌ ಮಾಡಿದ್ದಕ್ಕಾಗಿ ’ನ್ಯೂಸ್ ನೇಷನ್‌’ನ ಸಲಹಾ ಸಂಪಾದಕ ದೀಪಕ್ ಚೌರಸಿಯಾ ಅವರಿಗೆ ಲೀಗಲ್‌ ನೋಟಿಸ್ ನೀಡಲಾಗಿದೆ.

ಡಾ.ಫರುಖ್ ಖಾನ್ ಎಂಬುವವರು ಲೀಗಲ್ ನೋಟಿಸ್ ನೀಡಿದ್ದು, ಚೌರಾಸಿಯ ಅವರ ಈ ಕೃತ್ಯವು ಉದ್ದೇಶಪೂರ್ವಕವಾಗಿದ್ದು ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಭಾವನೆ ಮೂಡಿಸುವ ಪಿತೂರಿಯಾಗಿದೆ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

“ಕೇರಳದ ಗರ್ಭಿಣಿ ಆನೆಯ ಕೊಲೆ ಪ್ರಕರಣದಲ್ಲಿ ಅಮ್ಜತ್‌ ಅಲಿ ಮತ್ತು ತಮೀಮ್ ಸೈಖ್ ಎಂಬುವವರನ್ನು ಬಂಧಿಸಲಾಗಿದೆ. ಈ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.” ಎಂದು ದೀಪಕ್‌ ಚೌರಾಸಿಯ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದರು. ಟ್ವಿಟ್ಟರ್‌ನಲ್ಲಿ 50 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಅವರ ಈ ಟ್ವೀಟ್‌ ಅನ್ನು ಸಾವಿರಾರು ಸಂಖ್ಯೆಯಲ್ಲಿ ಜನ ಹಂಚಿಕೊಂಡಿದ್ದರು. ಕೆಲವು ಗಂಟೆಗಳ ಬಳಿಕ ಅವರು ಆ ಟ್ವೀಟ್‌ ಅನ್ನು ಅಳಿಸಿದ್ದಾರೆ.

ಈಗಾಗಲೇ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟ ಅಭಿಯಾನ ನಡೆಯುತ್ತಿರುವ ಸಂದರ್ಭದಲ್ಲಿ ಚೌರಾಸಿಯ ಅವರ ಈ ಟ್ವೀಟ್‌ ಹೇಗೆ ಕೋಮುಬಣ್ಣವನ್ನು ಪಡೆದುಕೊಂಡಿದೆ ಎಂದು ಡಾ.ಖಾನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ “ಗರ್ಭಿಣಿ ಆನೆಯನ್ನು ಮುಸ್ಲಿಂಮರು ಹತ್ಯೆ ಮಾಡಿದ್ದಾರೆಂದು ಹಲವು ಜನ ನಂಬಿದ್ದಾರೆ. ಇದು ಇಡೀ ಮುಸ್ಲಿಂ ಸಮುದಾಯವನ್ನು ದ್ವೇಷಿಸಲು ಕಾರಣವಾಗುತ್ತದೆ ಎಂದು ಡಾ.ಖಾನ್‌ ತಮ್ಮ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದೀಪಕ್ ಚೌರಾಸಿಯಾ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯ ಮೂಲಕ ನಕಲಿ ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಡಾ.ಖಾನ್ ಆರೋಪಿಸಿದ್ದಾರೆ. ಅವರು ಮುಸ್ಲಿಂ ಸಮುದಾಯವನ್ನು ಕೆಣಕಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಅವರ ಹಲವಾರು ಟ್ವೀಟ್‌ಗಳು ಈ ದೇಶದ ಎಲ್ಲಾ ಸಮಸ್ಯೆಗಳಿಗೂ ಮುಸ್ಲಿಂಮರೆ ಕಾರಣ ಎಂದು ಬಿಂಬಿಸುತ್ತವೆ ಎಂದು ಆರೋಪಿಸಿದ್ದಾರೆ.

 

ಕೇರಳದಲ್ಲಿ ಗರ್ಭಿಣಿ ಆನೆಯ ಸಾವಿಗೆ ಸಂಬಂಧಿಸಿದಂತೆ ವಿಲ್ಸನ್ ಎಂದು ಗುರುತಿಸಲ್ಪಟ್ಟ ಒಬ್ಬ ವ್ಯಕ್ತಿಯನ್ನು ಜೂನ್ 5 ಶುಕ್ರವಾರದಂದು ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್ ಹೊರತುಪಡಿಸಿ, ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ ಅಥವಾ ಬಂಧಿಸಲಾಗಿಲ್ಲ ಎಂದು ಪಾಲಕ್ಕಾಡ್ ಎಸ್ಪಿ ಜಿ ಶಿವ ವಿಕ್ರಮ್ ಹೇಳಿದ್ದಾರೆ. ಮೊಹಮ್ಮದ್ ಅಮ್ಜತ್ ಅಲಿ ಮತ್ತು ತಮೀಮ್ ಶೇಖ್ ಎಂಬ ಇಬ್ಬರು ವ್ಯಕ್ತಿಗಳ ಬಂಧನದ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸಿದ ವಿಕ್ರಮ್ ಇದನ್ನು “ನಕಲಿ ಸುದ್ದಿ” ಎಂದು ಕರೆದಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇರಳದಲ್ಲಿ ಗರ್ಭಿಣಿ ಆನೆ ಸಾವು – ಎಲ್ಲೆಡೆ ಹರಡಿದ ಎರಡು ದೊಡ್ಡ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...