Homeಮುಖಪುಟಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

ಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

- Advertisement -
- Advertisement -

ಗುಜರಾತ್‌ನ ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ (SSNNL) ನಡೆಸುತ್ತಿರುವ ಭೂ ಸ್ವಾಧೀನಕ್ಕೆ ವಿರುದ್ಧವಾಗಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಭಟನಾಕಾರನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಜರುಗಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆವಾಡಿಯಾ ಗ್ರಾಮದ 55 ವರ್ಷದ ಗ್ರಾಮಸ್ಥ ನತ್ವಾರ್ ತಡ್ವಿ, ಕೈಯಲ್ಲಿ ಸೀಮೆಎಣ್ಣೆ ಡಬ್ಬಿ ಇಟ್ಟುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನರ್ಮದಾ ಜಿಲ್ಲೆಯ ಕೆವಾಡಿಯಾ ಕಾಲೋನಿಯಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಹಳ್ಳಿಗಳಲ್ಲಿ ವಾಸಿಸುವ ಅನೇಕ ಬುಡಕಟ್ಟು ಜನರಲ್ಲಿ ತಡ್ವಿ ಒಬ್ಬರು. ಪ್ರತಿಮೆ ಮತ್ತು ಅದರ ಸುತ್ತಮುತ್ತಲಿನ ಇತರ ಯೋಜನೆಗಳಿಗಾಗಿ ಬುಡಕಟ್ಟು ಜನರು ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುತ್ತಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಈ ಗ್ರಾಮಗಳ ಜನರು ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ ತಮ್ಮ ಭೂಮಿಗೆ ಬೇಲಿ ಹಾಕುವುದನ್ನು ವಿರೋಧಿಸುತ್ತಿದ್ದಾರೆ. “ನಾವು ಕೃಷಿ ಮಾಡುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೆ, ನಮಗೆ ಯಾವುದೇ ಜೀವನೋಪಾಯವಿಲ್ಲ” ಎಂದು ತಡ್ವಿ ಹೇಳುತ್ತಾರೆ.

ಪ್ರತಿಭಟನಾ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಅವರನ್ನು ತಡೆದು ಸೀಮೆಎಣ್ಣೆಯ ಡಬ್ಬಿಯನ್ನು ವಶಕ್ಕೆ ಪಡೆದ ನಂತರ ತಡ್ವಿಯನ್ನು ಬಂಧಿಸಲಾಗಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ಅಪರಾಧ ತಡೆಗಟ್ಟುವ ಕ್ರಮಗಳ ಭಾಗವಾಗಿ ನಾವು ಅವರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ ಹಾಗೂ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ  ಎಂದು ಕೆವಾಡಿಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ವಾನಿ ದೂಧತ್ ಹೇಳಿದ್ದಾರೆ.

ಮೇ ತಿಂಗಳ ಆರಂಭದಲ್ಲಿ, SSNNL ಕೆವಾಡಿಯಾ ಕಾಲೋನಿಯ ಸಾಧು ಬೆಟ್‌ನಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಜಮೀನನ್ನು ಬೇಲಿ ಹಾಕುವ ಕೆಲಸವನ್ನು ಪ್ರಾರಂಭಿಸಿದಾಗ ಈ ಹೊಸ ಪ್ರತಿಭಟನೆಗಳು ಪ್ರಾರಂಭವಾದವು. ಪ್ರತಿಮೆಯ ಸುತ್ತಮುತ್ತಲಿನ ನವಗಂ, ಲಿಂಬಿ, ಕೆವಾಡಿಯಾ, ಕೋತಿ, ಗೋರಾ ಮತ್ತು ವಾಗಹಡಿಯಾ ಒಟ್ಟು ಆರು ಗ್ರಾಮಗಳನ್ನು ಒಳಗೊಂಡ ಬುಡಕಟ್ಟು ಜನರು ಪ್ರತಿಭಟನೆಯಲ್ಲಿದ್ದರು. ಕಳೆದ ವಾರ SSNNL ಅಧಿಕಾರಿಗಳು ಭೂಮಿಗೆ ಬೇಲಿ ಹಾಕಲು ಪ್ರಾರಂಭಿಸಿದದಾಗ ಪ್ರತಿಭಟನಾಕಾರರು ಸ್ಥಳೀಯ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಸುಮಾರು 20 ಜನರನ್ನು ಬಂಧಿಸಲಾಗಿದೆ.

ಸುಮಾರು ಒಂದು ತಿಂಗಳ ಪ್ರತಿಭಟನೆಯ ನಂತರ ಜೂನ್ 5 ರಂದು, ಸ್ಥಳೀಯರೊಂದಿಗೆ ಮಾತುಕತೆಗೆ ಅನುಕೂಲವಾಗುವಂತೆ ಬೇಲಿ ಹಾಕುವ ಕೆಲಸವನ್ನು ನಿಲ್ಲಿಸಲಾಗಿದೆ.

ಗುಜರಾತ್ ಸರ್ಕಾರವು “ಏಕತಾ ಪ್ರತಿಮೆ”ಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡರೆ, ಸ್ಥಳೀಯರು ಪ್ರತಿಮೆಯ ಸುತ್ತಲಿನ ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗಾಗಿ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬೇಲಿ ಹಾಕುವುದು ಮತ್ತೊಂದು ತಂತ್ರವಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ.

“ನಾವು SSNNL ‌ನ ತೆರೆದ ಜಮೀನಿಗೆ ಮಾತ್ರ ಬೇಲಿಗಳನ್ನು ಹಾಕಿದ್ದೇವೆ. ಕೆಲವರು ಈ ಬೇಲಿಯ ಒಳಗೆ ವಾಸಿಸುತ್ತಿದ್ದರೂ ಸಹ ಯಾರನ್ನೂ ಖಾಲಿ ಮಾಡುವಂತೆ ಕೇಳಲಾಗಿಲ್ಲ. ಇದುವರೆಗೂ ಇದೆ ರೀತಿ ಹಲವಾರು ಪ್ಲಾಟ್‌ಗಳಿಗೆ ಮಾಡಿದ್ದೇವೆ. ಆದರೂ ಕೆಲಸವನ್ನು ನಿಲ್ಲಿಸಿ ಸರ್ಕಾರದ ಪ್ಯಾಕೇಜ್‌ಗಳ ಬಗ್ಗೆ ಬುಡಕಟ್ಟು ಜನರಿಗೆ ಅರಿವು ಮೂಡಿಸುವ ಹಾಗೂ ಅವರೊಂದಿಗೆ ಸಂವಾದವನ್ನು ಪ್ರಾರಂಭಿಸಿದ್ದೇವೆ” ಎಂದು ಕೆವಾಡಿಯ ಉಪ ಕಲೆಕ್ಟರ್ ನಿಕುಂಜ್ ಪರಿಖ್ ಹೇಳಿದ್ದಾರೆ.

SSNNL ಸ್ಥಳಾಂತರಗೊಂಡ ಕುಟುಂಬಗಳಿಗೆ ಸ್ಥಳಾಂತರ ಯೋಜನೆಯನ್ನು ಘೋಷಿಸಿದೆ. ಅವರಿಗೆ ವಾಣಿಜ್ಯ ಅಂಗಡಿಗಳನ್ನು ನೀಡಲು ಕೂಡಾ ಒಪ್ಪಿಕೊಂಡಿದೆ.

ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯ ನಿರ್ಮಾಣದೊಂದಿಗೆ ಪ್ರಾರಂಭವಾದ ಈ ಯೋಜನೆಯು ಪ್ರತಿಮೆಯ ಹತ್ತಿರ ವಾಸಿಸುವ ಕನಿಷ್ಠ 5,000 ಬುಡಕಟ್ಟು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

SSNNL ಬೇಲಿಯ ನಿರ್ಮಾಣ ಮತ್ತು ವಿವಾದಿತ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಗುಜರಾತ್ ಹೈಕೋರ್ಟ್ ಅನುಮತಿ ನೀಡಿದ ನಂತರ ಮೇ ತಿಂಗಳಲ್ಲಿ ಪ್ರಾರಂಭಿಸಿತು. ಈ ಹಿಂದೆ, ಭೂಮಿಯ ಮೇಲೆ ಸರ್ಕಾರದ ಹಕ್ಕನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಸಿದ್ದರಿಂದ ಹೈಕೋರ್ಟ್ ಈ ಪ್ರಕ್ರಿಯೆಯನ್ನು ತಡೆಹಿಡಿದಿತ್ತು.

ಏಕತಾ ಪ್ರತಿಮೆಯ ಸುತ್ತಲಿನ ಪ್ರತೀ ಆರು ಹಳ್ಳಿಗಳಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿ ಅಹಮದಾಬಾದ್ ಮೂಲದ ಪರಿಸರವಾದಿ ಮಹೇಶ್ ಪಾಂಡ್ಯ ಅವರು 2019 ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಭೂಸ್ವಾಧೀನ ಕಾಯ್ದೆಯಡಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಗುಜರಾತ್ ಸರ್ಕಾರ ಮತ್ತು SSNNL ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಸೋಗಿನಲ್ಲಿ 5,000 ಕ್ಕೂ ಹೆಚ್ಚು ಬುಡಕಟ್ಟು ಜನರನ್ನು ಹೊರಹಾಕಲು ಸಜ್ಜಾಗಿದೆ. 1960 ರ ದಶಕದಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಹೇಳುವ ಮೂಲಕ ಅಧಿಕಾರಿಗಳು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ. ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳು ಅಗತ್ಯವಿಲ್ಲದ ಕಾರಣ ಜನರಿಗೆ ಅಲ್ಲಿ ನೆಲೆಸಲು ಅವಕಾಶವಿತ್ತು ಎಂದು ಅವರು ಹೇಳುತ್ತಾರೆ, ”ಎಂದು ಪಾಂಡ್ಯರ ಪಿಐಎಲ್ ಹೇಳಿದೆ.

“ಇಂದು, ಅದೇ ಭೂಮಿಯನ್ನು ಶ್ರೇಷ್ಠ ಭಾರತ್ ಭವನ ಮತ್ತು ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗೆ ಬಳಸಲಾಗುತ್ತಿದೆ, ನ್ಯಾಯಸಮ್ಮತ ಭೂಸ್ವಾಧೀನ, ಪರಿಹಾರ ಮತ್ತು ಪುನರ್ವಸತಿ ಹಾಗೂ ಪುನರ್ವಸತಿ ಕಾಯ್ದೆಯಲ್ಲಿ ಪಾರದರ್ಶಕತೆಯ ಹಕ್ಕಿನ ಪ್ರಕ್ರಿಯೆಯ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಬುಡಕಟ್ಟು-ಹಕ್ಕುಗಳ ಕಾರ್ಯಕರ್ತ ಪ್ರಫುಲ್ ವಾಸವ ಹೇಳುತ್ತಾರೆ.


ಓದಿ: ಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...