Homeಮುಖಪುಟಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

ಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

- Advertisement -
- Advertisement -

ಗುಜರಾತ್‌ನ ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ (SSNNL) ನಡೆಸುತ್ತಿರುವ ಭೂ ಸ್ವಾಧೀನಕ್ಕೆ ವಿರುದ್ಧವಾಗಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಭಟನಾಕಾರನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಜರುಗಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆವಾಡಿಯಾ ಗ್ರಾಮದ 55 ವರ್ಷದ ಗ್ರಾಮಸ್ಥ ನತ್ವಾರ್ ತಡ್ವಿ, ಕೈಯಲ್ಲಿ ಸೀಮೆಎಣ್ಣೆ ಡಬ್ಬಿ ಇಟ್ಟುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನರ್ಮದಾ ಜಿಲ್ಲೆಯ ಕೆವಾಡಿಯಾ ಕಾಲೋನಿಯಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಹಳ್ಳಿಗಳಲ್ಲಿ ವಾಸಿಸುವ ಅನೇಕ ಬುಡಕಟ್ಟು ಜನರಲ್ಲಿ ತಡ್ವಿ ಒಬ್ಬರು. ಪ್ರತಿಮೆ ಮತ್ತು ಅದರ ಸುತ್ತಮುತ್ತಲಿನ ಇತರ ಯೋಜನೆಗಳಿಗಾಗಿ ಬುಡಕಟ್ಟು ಜನರು ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುತ್ತಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಈ ಗ್ರಾಮಗಳ ಜನರು ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ ತಮ್ಮ ಭೂಮಿಗೆ ಬೇಲಿ ಹಾಕುವುದನ್ನು ವಿರೋಧಿಸುತ್ತಿದ್ದಾರೆ. “ನಾವು ಕೃಷಿ ಮಾಡುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೆ, ನಮಗೆ ಯಾವುದೇ ಜೀವನೋಪಾಯವಿಲ್ಲ” ಎಂದು ತಡ್ವಿ ಹೇಳುತ್ತಾರೆ.

ಪ್ರತಿಭಟನಾ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಅವರನ್ನು ತಡೆದು ಸೀಮೆಎಣ್ಣೆಯ ಡಬ್ಬಿಯನ್ನು ವಶಕ್ಕೆ ಪಡೆದ ನಂತರ ತಡ್ವಿಯನ್ನು ಬಂಧಿಸಲಾಗಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ಅಪರಾಧ ತಡೆಗಟ್ಟುವ ಕ್ರಮಗಳ ಭಾಗವಾಗಿ ನಾವು ಅವರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ ಹಾಗೂ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ  ಎಂದು ಕೆವಾಡಿಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ವಾನಿ ದೂಧತ್ ಹೇಳಿದ್ದಾರೆ.

ಮೇ ತಿಂಗಳ ಆರಂಭದಲ್ಲಿ, SSNNL ಕೆವಾಡಿಯಾ ಕಾಲೋನಿಯ ಸಾಧು ಬೆಟ್‌ನಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಜಮೀನನ್ನು ಬೇಲಿ ಹಾಕುವ ಕೆಲಸವನ್ನು ಪ್ರಾರಂಭಿಸಿದಾಗ ಈ ಹೊಸ ಪ್ರತಿಭಟನೆಗಳು ಪ್ರಾರಂಭವಾದವು. ಪ್ರತಿಮೆಯ ಸುತ್ತಮುತ್ತಲಿನ ನವಗಂ, ಲಿಂಬಿ, ಕೆವಾಡಿಯಾ, ಕೋತಿ, ಗೋರಾ ಮತ್ತು ವಾಗಹಡಿಯಾ ಒಟ್ಟು ಆರು ಗ್ರಾಮಗಳನ್ನು ಒಳಗೊಂಡ ಬುಡಕಟ್ಟು ಜನರು ಪ್ರತಿಭಟನೆಯಲ್ಲಿದ್ದರು. ಕಳೆದ ವಾರ SSNNL ಅಧಿಕಾರಿಗಳು ಭೂಮಿಗೆ ಬೇಲಿ ಹಾಕಲು ಪ್ರಾರಂಭಿಸಿದದಾಗ ಪ್ರತಿಭಟನಾಕಾರರು ಸ್ಥಳೀಯ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಸುಮಾರು 20 ಜನರನ್ನು ಬಂಧಿಸಲಾಗಿದೆ.

ಸುಮಾರು ಒಂದು ತಿಂಗಳ ಪ್ರತಿಭಟನೆಯ ನಂತರ ಜೂನ್ 5 ರಂದು, ಸ್ಥಳೀಯರೊಂದಿಗೆ ಮಾತುಕತೆಗೆ ಅನುಕೂಲವಾಗುವಂತೆ ಬೇಲಿ ಹಾಕುವ ಕೆಲಸವನ್ನು ನಿಲ್ಲಿಸಲಾಗಿದೆ.

ಗುಜರಾತ್ ಸರ್ಕಾರವು “ಏಕತಾ ಪ್ರತಿಮೆ”ಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡರೆ, ಸ್ಥಳೀಯರು ಪ್ರತಿಮೆಯ ಸುತ್ತಲಿನ ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗಾಗಿ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬೇಲಿ ಹಾಕುವುದು ಮತ್ತೊಂದು ತಂತ್ರವಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ.

“ನಾವು SSNNL ‌ನ ತೆರೆದ ಜಮೀನಿಗೆ ಮಾತ್ರ ಬೇಲಿಗಳನ್ನು ಹಾಕಿದ್ದೇವೆ. ಕೆಲವರು ಈ ಬೇಲಿಯ ಒಳಗೆ ವಾಸಿಸುತ್ತಿದ್ದರೂ ಸಹ ಯಾರನ್ನೂ ಖಾಲಿ ಮಾಡುವಂತೆ ಕೇಳಲಾಗಿಲ್ಲ. ಇದುವರೆಗೂ ಇದೆ ರೀತಿ ಹಲವಾರು ಪ್ಲಾಟ್‌ಗಳಿಗೆ ಮಾಡಿದ್ದೇವೆ. ಆದರೂ ಕೆಲಸವನ್ನು ನಿಲ್ಲಿಸಿ ಸರ್ಕಾರದ ಪ್ಯಾಕೇಜ್‌ಗಳ ಬಗ್ಗೆ ಬುಡಕಟ್ಟು ಜನರಿಗೆ ಅರಿವು ಮೂಡಿಸುವ ಹಾಗೂ ಅವರೊಂದಿಗೆ ಸಂವಾದವನ್ನು ಪ್ರಾರಂಭಿಸಿದ್ದೇವೆ” ಎಂದು ಕೆವಾಡಿಯ ಉಪ ಕಲೆಕ್ಟರ್ ನಿಕುಂಜ್ ಪರಿಖ್ ಹೇಳಿದ್ದಾರೆ.

SSNNL ಸ್ಥಳಾಂತರಗೊಂಡ ಕುಟುಂಬಗಳಿಗೆ ಸ್ಥಳಾಂತರ ಯೋಜನೆಯನ್ನು ಘೋಷಿಸಿದೆ. ಅವರಿಗೆ ವಾಣಿಜ್ಯ ಅಂಗಡಿಗಳನ್ನು ನೀಡಲು ಕೂಡಾ ಒಪ್ಪಿಕೊಂಡಿದೆ.

ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯ ನಿರ್ಮಾಣದೊಂದಿಗೆ ಪ್ರಾರಂಭವಾದ ಈ ಯೋಜನೆಯು ಪ್ರತಿಮೆಯ ಹತ್ತಿರ ವಾಸಿಸುವ ಕನಿಷ್ಠ 5,000 ಬುಡಕಟ್ಟು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

SSNNL ಬೇಲಿಯ ನಿರ್ಮಾಣ ಮತ್ತು ವಿವಾದಿತ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಗುಜರಾತ್ ಹೈಕೋರ್ಟ್ ಅನುಮತಿ ನೀಡಿದ ನಂತರ ಮೇ ತಿಂಗಳಲ್ಲಿ ಪ್ರಾರಂಭಿಸಿತು. ಈ ಹಿಂದೆ, ಭೂಮಿಯ ಮೇಲೆ ಸರ್ಕಾರದ ಹಕ್ಕನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಸಿದ್ದರಿಂದ ಹೈಕೋರ್ಟ್ ಈ ಪ್ರಕ್ರಿಯೆಯನ್ನು ತಡೆಹಿಡಿದಿತ್ತು.

ಏಕತಾ ಪ್ರತಿಮೆಯ ಸುತ್ತಲಿನ ಪ್ರತೀ ಆರು ಹಳ್ಳಿಗಳಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿ ಅಹಮದಾಬಾದ್ ಮೂಲದ ಪರಿಸರವಾದಿ ಮಹೇಶ್ ಪಾಂಡ್ಯ ಅವರು 2019 ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಭೂಸ್ವಾಧೀನ ಕಾಯ್ದೆಯಡಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಗುಜರಾತ್ ಸರ್ಕಾರ ಮತ್ತು SSNNL ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಸೋಗಿನಲ್ಲಿ 5,000 ಕ್ಕೂ ಹೆಚ್ಚು ಬುಡಕಟ್ಟು ಜನರನ್ನು ಹೊರಹಾಕಲು ಸಜ್ಜಾಗಿದೆ. 1960 ರ ದಶಕದಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಹೇಳುವ ಮೂಲಕ ಅಧಿಕಾರಿಗಳು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ. ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳು ಅಗತ್ಯವಿಲ್ಲದ ಕಾರಣ ಜನರಿಗೆ ಅಲ್ಲಿ ನೆಲೆಸಲು ಅವಕಾಶವಿತ್ತು ಎಂದು ಅವರು ಹೇಳುತ್ತಾರೆ, ”ಎಂದು ಪಾಂಡ್ಯರ ಪಿಐಎಲ್ ಹೇಳಿದೆ.

“ಇಂದು, ಅದೇ ಭೂಮಿಯನ್ನು ಶ್ರೇಷ್ಠ ಭಾರತ್ ಭವನ ಮತ್ತು ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗೆ ಬಳಸಲಾಗುತ್ತಿದೆ, ನ್ಯಾಯಸಮ್ಮತ ಭೂಸ್ವಾಧೀನ, ಪರಿಹಾರ ಮತ್ತು ಪುನರ್ವಸತಿ ಹಾಗೂ ಪುನರ್ವಸತಿ ಕಾಯ್ದೆಯಲ್ಲಿ ಪಾರದರ್ಶಕತೆಯ ಹಕ್ಕಿನ ಪ್ರಕ್ರಿಯೆಯ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಬುಡಕಟ್ಟು-ಹಕ್ಕುಗಳ ಕಾರ್ಯಕರ್ತ ಪ್ರಫುಲ್ ವಾಸವ ಹೇಳುತ್ತಾರೆ.


ಓದಿ: ಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...