Homeಮುಖಪುಟಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

ಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

- Advertisement -
- Advertisement -

ಗುಜರಾತ್‌ನ ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ (SSNNL) ನಡೆಸುತ್ತಿರುವ ಭೂ ಸ್ವಾಧೀನಕ್ಕೆ ವಿರುದ್ಧವಾಗಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಭಟನಾಕಾರನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಜರುಗಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆವಾಡಿಯಾ ಗ್ರಾಮದ 55 ವರ್ಷದ ಗ್ರಾಮಸ್ಥ ನತ್ವಾರ್ ತಡ್ವಿ, ಕೈಯಲ್ಲಿ ಸೀಮೆಎಣ್ಣೆ ಡಬ್ಬಿ ಇಟ್ಟುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನರ್ಮದಾ ಜಿಲ್ಲೆಯ ಕೆವಾಡಿಯಾ ಕಾಲೋನಿಯಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಹಳ್ಳಿಗಳಲ್ಲಿ ವಾಸಿಸುವ ಅನೇಕ ಬುಡಕಟ್ಟು ಜನರಲ್ಲಿ ತಡ್ವಿ ಒಬ್ಬರು. ಪ್ರತಿಮೆ ಮತ್ತು ಅದರ ಸುತ್ತಮುತ್ತಲಿನ ಇತರ ಯೋಜನೆಗಳಿಗಾಗಿ ಬುಡಕಟ್ಟು ಜನರು ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುತ್ತಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಈ ಗ್ರಾಮಗಳ ಜನರು ಸರ್ದಾರ್ ಸರೋವರ್ ನರ್ಮದಾ ನಿಗಮ್ ಲಿಮಿಟೆಡ್ ತಮ್ಮ ಭೂಮಿಗೆ ಬೇಲಿ ಹಾಕುವುದನ್ನು ವಿರೋಧಿಸುತ್ತಿದ್ದಾರೆ. “ನಾವು ಕೃಷಿ ಮಾಡುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೆ, ನಮಗೆ ಯಾವುದೇ ಜೀವನೋಪಾಯವಿಲ್ಲ” ಎಂದು ತಡ್ವಿ ಹೇಳುತ್ತಾರೆ.

ಪ್ರತಿಭಟನಾ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಅವರನ್ನು ತಡೆದು ಸೀಮೆಎಣ್ಣೆಯ ಡಬ್ಬಿಯನ್ನು ವಶಕ್ಕೆ ಪಡೆದ ನಂತರ ತಡ್ವಿಯನ್ನು ಬಂಧಿಸಲಾಗಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ಅಪರಾಧ ತಡೆಗಟ್ಟುವ ಕ್ರಮಗಳ ಭಾಗವಾಗಿ ನಾವು ಅವರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ ಹಾಗೂ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ  ಎಂದು ಕೆವಾಡಿಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ವಾನಿ ದೂಧತ್ ಹೇಳಿದ್ದಾರೆ.

ಮೇ ತಿಂಗಳ ಆರಂಭದಲ್ಲಿ, SSNNL ಕೆವಾಡಿಯಾ ಕಾಲೋನಿಯ ಸಾಧು ಬೆಟ್‌ನಲ್ಲಿರುವ ”ಏಕತಾ ಪ್ರತಿಮೆ”ಯ ಸುತ್ತಲಿನ ಜಮೀನನ್ನು ಬೇಲಿ ಹಾಕುವ ಕೆಲಸವನ್ನು ಪ್ರಾರಂಭಿಸಿದಾಗ ಈ ಹೊಸ ಪ್ರತಿಭಟನೆಗಳು ಪ್ರಾರಂಭವಾದವು. ಪ್ರತಿಮೆಯ ಸುತ್ತಮುತ್ತಲಿನ ನವಗಂ, ಲಿಂಬಿ, ಕೆವಾಡಿಯಾ, ಕೋತಿ, ಗೋರಾ ಮತ್ತು ವಾಗಹಡಿಯಾ ಒಟ್ಟು ಆರು ಗ್ರಾಮಗಳನ್ನು ಒಳಗೊಂಡ ಬುಡಕಟ್ಟು ಜನರು ಪ್ರತಿಭಟನೆಯಲ್ಲಿದ್ದರು. ಕಳೆದ ವಾರ SSNNL ಅಧಿಕಾರಿಗಳು ಭೂಮಿಗೆ ಬೇಲಿ ಹಾಕಲು ಪ್ರಾರಂಭಿಸಿದದಾಗ ಪ್ರತಿಭಟನಾಕಾರರು ಸ್ಥಳೀಯ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಸುಮಾರು 20 ಜನರನ್ನು ಬಂಧಿಸಲಾಗಿದೆ.

ಸುಮಾರು ಒಂದು ತಿಂಗಳ ಪ್ರತಿಭಟನೆಯ ನಂತರ ಜೂನ್ 5 ರಂದು, ಸ್ಥಳೀಯರೊಂದಿಗೆ ಮಾತುಕತೆಗೆ ಅನುಕೂಲವಾಗುವಂತೆ ಬೇಲಿ ಹಾಕುವ ಕೆಲಸವನ್ನು ನಿಲ್ಲಿಸಲಾಗಿದೆ.

ಗುಜರಾತ್ ಸರ್ಕಾರವು “ಏಕತಾ ಪ್ರತಿಮೆ”ಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡರೆ, ಸ್ಥಳೀಯರು ಪ್ರತಿಮೆಯ ಸುತ್ತಲಿನ ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗಾಗಿ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬೇಲಿ ಹಾಕುವುದು ಮತ್ತೊಂದು ತಂತ್ರವಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ.

“ನಾವು SSNNL ‌ನ ತೆರೆದ ಜಮೀನಿಗೆ ಮಾತ್ರ ಬೇಲಿಗಳನ್ನು ಹಾಕಿದ್ದೇವೆ. ಕೆಲವರು ಈ ಬೇಲಿಯ ಒಳಗೆ ವಾಸಿಸುತ್ತಿದ್ದರೂ ಸಹ ಯಾರನ್ನೂ ಖಾಲಿ ಮಾಡುವಂತೆ ಕೇಳಲಾಗಿಲ್ಲ. ಇದುವರೆಗೂ ಇದೆ ರೀತಿ ಹಲವಾರು ಪ್ಲಾಟ್‌ಗಳಿಗೆ ಮಾಡಿದ್ದೇವೆ. ಆದರೂ ಕೆಲಸವನ್ನು ನಿಲ್ಲಿಸಿ ಸರ್ಕಾರದ ಪ್ಯಾಕೇಜ್‌ಗಳ ಬಗ್ಗೆ ಬುಡಕಟ್ಟು ಜನರಿಗೆ ಅರಿವು ಮೂಡಿಸುವ ಹಾಗೂ ಅವರೊಂದಿಗೆ ಸಂವಾದವನ್ನು ಪ್ರಾರಂಭಿಸಿದ್ದೇವೆ” ಎಂದು ಕೆವಾಡಿಯ ಉಪ ಕಲೆಕ್ಟರ್ ನಿಕುಂಜ್ ಪರಿಖ್ ಹೇಳಿದ್ದಾರೆ.

SSNNL ಸ್ಥಳಾಂತರಗೊಂಡ ಕುಟುಂಬಗಳಿಗೆ ಸ್ಥಳಾಂತರ ಯೋಜನೆಯನ್ನು ಘೋಷಿಸಿದೆ. ಅವರಿಗೆ ವಾಣಿಜ್ಯ ಅಂಗಡಿಗಳನ್ನು ನೀಡಲು ಕೂಡಾ ಒಪ್ಪಿಕೊಂಡಿದೆ.

ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯ ನಿರ್ಮಾಣದೊಂದಿಗೆ ಪ್ರಾರಂಭವಾದ ಈ ಯೋಜನೆಯು ಪ್ರತಿಮೆಯ ಹತ್ತಿರ ವಾಸಿಸುವ ಕನಿಷ್ಠ 5,000 ಬುಡಕಟ್ಟು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

SSNNL ಬೇಲಿಯ ನಿರ್ಮಾಣ ಮತ್ತು ವಿವಾದಿತ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಗುಜರಾತ್ ಹೈಕೋರ್ಟ್ ಅನುಮತಿ ನೀಡಿದ ನಂತರ ಮೇ ತಿಂಗಳಲ್ಲಿ ಪ್ರಾರಂಭಿಸಿತು. ಈ ಹಿಂದೆ, ಭೂಮಿಯ ಮೇಲೆ ಸರ್ಕಾರದ ಹಕ್ಕನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಸಿದ್ದರಿಂದ ಹೈಕೋರ್ಟ್ ಈ ಪ್ರಕ್ರಿಯೆಯನ್ನು ತಡೆಹಿಡಿದಿತ್ತು.

ಏಕತಾ ಪ್ರತಿಮೆಯ ಸುತ್ತಲಿನ ಪ್ರತೀ ಆರು ಹಳ್ಳಿಗಳಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿ ಅಹಮದಾಬಾದ್ ಮೂಲದ ಪರಿಸರವಾದಿ ಮಹೇಶ್ ಪಾಂಡ್ಯ ಅವರು 2019 ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಭೂಸ್ವಾಧೀನ ಕಾಯ್ದೆಯಡಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಗುಜರಾತ್ ಸರ್ಕಾರ ಮತ್ತು SSNNL ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಸೋಗಿನಲ್ಲಿ 5,000 ಕ್ಕೂ ಹೆಚ್ಚು ಬುಡಕಟ್ಟು ಜನರನ್ನು ಹೊರಹಾಕಲು ಸಜ್ಜಾಗಿದೆ. 1960 ರ ದಶಕದಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಹೇಳುವ ಮೂಲಕ ಅಧಿಕಾರಿಗಳು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ. ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳು ಅಗತ್ಯವಿಲ್ಲದ ಕಾರಣ ಜನರಿಗೆ ಅಲ್ಲಿ ನೆಲೆಸಲು ಅವಕಾಶವಿತ್ತು ಎಂದು ಅವರು ಹೇಳುತ್ತಾರೆ, ”ಎಂದು ಪಾಂಡ್ಯರ ಪಿಐಎಲ್ ಹೇಳಿದೆ.

“ಇಂದು, ಅದೇ ಭೂಮಿಯನ್ನು ಶ್ರೇಷ್ಠ ಭಾರತ್ ಭವನ ಮತ್ತು ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳಿಗೆ ಬಳಸಲಾಗುತ್ತಿದೆ, ನ್ಯಾಯಸಮ್ಮತ ಭೂಸ್ವಾಧೀನ, ಪರಿಹಾರ ಮತ್ತು ಪುನರ್ವಸತಿ ಹಾಗೂ ಪುನರ್ವಸತಿ ಕಾಯ್ದೆಯಲ್ಲಿ ಪಾರದರ್ಶಕತೆಯ ಹಕ್ಕಿನ ಪ್ರಕ್ರಿಯೆಯ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಬುಡಕಟ್ಟು-ಹಕ್ಕುಗಳ ಕಾರ್ಯಕರ್ತ ಪ್ರಫುಲ್ ವಾಸವ ಹೇಳುತ್ತಾರೆ.


ಓದಿ: ಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...