Homeಮುಖಪುಟಬಿಹಾರಕ್ಕೆ 100 ವೆಂಟಿಲೇಟರ್‌ ಕೊಡಲು 70 ದಿನ ತೆಗೆದುಕೊಂಡ ಕೇಂದ್ರ ಸರ್ಕಾರ

ಬಿಹಾರಕ್ಕೆ 100 ವೆಂಟಿಲೇಟರ್‌ ಕೊಡಲು 70 ದಿನ ತೆಗೆದುಕೊಂಡ ಕೇಂದ್ರ ಸರ್ಕಾರ

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಕೇಂದ್ರವು ಬಿಹಾರಕ್ಕೆ 100 ವೆಂಟಿಲೇಟರ್‌ ಗಳನ್ನು ಒದಗಿಸಲು 70 ದಿನಗಳಿಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ. ಬಿಹಾರದಲ್ಲಿ ಕೇವಲ ಮೂರು ಕೊರೊನಾ ಪ್ರಕರಣಗಳು ಮತ್ತು ಒಂದು ಸಾವು ವರದಿಯಾದಾಗ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಪ್ರಿಲ್ 2 ರಂದು ರಾಜ್ಯಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪ್ರಧಾನ ಮಂತ್ರಿಯಿಂದ ಕನಿಷ್ಠ 100 ವೆಂಟಿಲೇಟರ್‌ಗಳನ್ನು ಕೋರಿದ್ದರು.

ಅಂತಿಮವಾಗಿ, 100 ವೆಂಟಿಲೇಟರ್‌ ಭಾನುವಾರ (ಜೂನ್ 7) ಬಿಹಾರಕ್ಕೆ ತಲುಪಿದವು. ಸೋಮವಾರ ರಾಜ್ಯ ಆರೋಗ್ಯ ಸಚಿವ ಮಂಗಲ್ ಪಾಂಡೆ ಹೇಳಿಕೊಂಡಂತೆ, COVID-19 ಪ್ರಕರಣಗಳ ಸಂಖ್ಯೆ 5,000 ದಾಟಿದೆ. ಸೋಮವಾರದ ವೇಳೆಗೆ, ಬಿಹಾರದಲ್ಲಿ 5,175 ಪ್ರಕರಣಗಳು ದಾಖಲಾಗಿದ್ದು, 31 ಸಾವುಗಳು ವರದಿಯಾಗಿವೆ.

ಈ 100 ವೆಂಟಿಲೇಟರ್‌ಗಳಲ್ಲಿ ಕೇವಲ 40 ಮಾತ್ರ COVID-19 ಮೀಸಲಾದ ಸರ್ಕಾರಿ ಆಸ್ಪತ್ರೆಗಳಿಗೆ ಸಿಗಲಿವೆ. ಉಳಿದವು ಇತರ ಆಸ್ಪತ್ರೆಗಳಿಗೆ ಸೇರಲಿವೆ. ಕೇಂದ್ರವು ಒದಗಿಸಿದ 100 ವೆಂಟಿಲೇಟರ್‌ಗಳೊಂದಿಗೆ, ಈಗ ನಿರ್ಣಾಯಕವಾಗಿ COVID-19 ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡುವುದು ಸುಲಭವಾಗಲಿದೆ ಎಂದು ಪಾಂಡೆ ಹೇಳಿದ್ದಾರೆ.

ಕಳೆದ ತಿಂಗಳವರೆಗೆ, ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ಮೂರು COVID-19 ಮೀಸಲಾದ ಆಸ್ಪತ್ರೆಗಳು COVID-19 ಪ್ರಕರಣಗಳ ಚಿಕಿತ್ಸೆಯ ಕೇಂದ್ರಗಳಾಗಿ ಮಾರ್ಪಟ್ಟಿವೆ. ಅಲ್ಲಿ ಕೇವಲ 50 ವೆಂಟಿಲೇಟರ್‌ಗಳು ಇವೆ. “ಪ್ರಕರಣಗಳಲ್ಲಿನ ಹೆಚ್ಚಳವನ್ನು ಎದುರಿಸಲು ರಾಜ್ಯಕ್ಕೆ ಹೆಚ್ಚಿನ ವೆಂಟಿಲೇಟರ್‌ ಬೇಕಾಗುತ್ತವೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಏಪ್ರಿಲ್ ಆರಂಭದಲ್ಲಿ, ನಿತೀಶ್ ಕುಮಾರ್ ಅವರು ವೈದ್ಯರು, ದಾದಿಯರು ಮತ್ತು ಇತರ ಆರೋಗ್ಯ ಸಿಬ್ಬಂದಿಗಳ ರಕ್ಷಣೆಗಾಗಿ ಕೇಂದ್ರದಿಂದ 10 ಲಕ್ಷ ಎನ್ 95 ಮಾಸ್ಕ್‌ಗಳು ಮತ್ತು ಐದು ಲಕ್ಷ ವೈಯಕ್ತಿಕ ರಕ್ಷಣಾ ಸಾಧನಗಳ ( ಪಿಪಿಇ) ಕಿಟ್‌ಗಳನ್ನು ಕೋರಿದ್ದರು. ರಾಜ್ಯಕ್ಕೆ ಇದುವರೆಗೆ ಕೇವಲ 50,000 ಮಾಸ್ಕ್‌ಗಳು ಮತ್ತು 4,000 ಪಿಪಿಇ ಕಿಟ್‌ಗಳು ಬಂದಿವೆ ಎಂದು ಅವರು ಈಗ ಸ್ಪಷ್ಟಪಡಿಸಿದ್ದಾರೆ.

ಕನಿಷ್ಠ 100 ವೆಂಟಿಲೇಟರ್‌ಗಳು ಮತ್ತು 10,000 ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಕೋರಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದರು. ಆದರೆ, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಿಹಾರಕ್ಕೆ ಒಂದೇ ಒಂದು ವೆಂಟಿಲೇಟರ್ ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ.


ಇದನ್ನೂ ಓದಿ: ಅನೋಷ್ಕಾ ಚೋಪ್ರಾ ಫೇಸ್‌ಬುಕ್‌ ಖಾತೆ ಮೂಲಕ ಪಾಕ್‌ ಪರ ಗೂಢಾಚರ್ಯೆ: ಇಬ್ಬರ ಬಂಧನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...