Homeಮುಖಪುಟಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌

ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌

ಇನ್ನು ಜೂನ್‌ 06 ರಂದು ಅರ್ನಾಬ್‌ ವಿರುದ್ಧ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995 ರ ಅಡಿಯಲ್ಲಿ ಪುಣೆ ಮೂಲದ ಕಾರ್ಯಕರ್ತ ನಿಲೇಶ್ ನವಲಖಾ ಎಂಬುವವರು ಮತ್ತೊಂದು ಕ್ರಿಮಿನಲ್ ದೂರು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

- Advertisement -
- Advertisement -

ಕೋಮು ದ್ವೇಷ ಪ್ರಚೋದನಾಕಾರಿ ಸುದ್ದಿ ಪ್ರಕಟಿಸಿದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್‌ ಟಿ.ವಿ ಮ್ಯಾನೇಜಿಂಗ್‌ ಡೈರೆಕ್ಟರ್‌ ಅರ್ನಾಬ್‌ ಗೋಸ್ವಾಮಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಮುಂಬೈನ ಬಾಂದ್ರಾದ ರೈಲು ನಿಲ್ದಾಣದ ಎದುರು ಏಪ್ರಿಲ್ 14 ರಂದು ವಲಸೆ ಕಾರ್ಮಿಕರು ದೊಡ್ಡ ಪ್ರಮಾಣದಲ್ಲಿ ಒಟ್ಟುಗೂಡಿದ್ದನ್ನು, ಮಸೀದಿ ಎದುರು ಗುಂಪುಗೂಡಿದ್ದಾರೆ ಎಂದು ತನ್ನ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸಿದ ದೂರಿನ ಆಧಾರದ ಮೇಲೆ ಗೋಸ್ವಾಮಿ ವಿರುದ್ಧ ಮುಂಬೈ ಪೊಲೀಸರು ಮೇ 2ರ ಶನಿವಾರ ಹೊಸ ಎಫ್ಐಆರ್ ದಾಖಲಿಸಿದ್ದಾರೆ.

ಅರ್ನಾಬ್‌ ವಿರುದ್ಧ ಪ್ಯಾಡೋನಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಐಪಿಸಿ 153, 153ಎ, 295ಎ, 500, 505(2), 501(1)(ಬಿ)(ಸಿ), 511, 120(ಬಿ) ಸೆಕ್ಷನ್‌ಗಳ ಕುರಿತು ಹೆಚ್ಚಿನ ವಿಚಾರಣೆಗಾಗಿ ತನಿಖಾಧಿಕಾರಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಸುರೇಶ್‌ ಗಾಯಕ್‌ವಾಡ್‌ರವರ ಎದುರು ಜೂನ್‌ 10ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಹಾಜರಾಗಬೇಕೆಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಮೊದಲು ಪಾಲ್ಘಾರ್‌ ಲಿಂಚಿಂಗ್‌ ಪ್ರಕರಣದಲ್ಲಿ ಪ್ರಚೋದನಾಕಾರಿ ಸುದ್ದಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟಿಸಿದ ಕಾರಣಕ್ಕಾಗಿ ಅರ್ನಾಬ್‌ ವಿರುದ್ಧ ದೇಶಾದ್ಯಂತ ದೂರುಗಳು ದಾಖಲಾಗಿದ್ದವು.

ಏಪ್ರಿಲ್ 24 ರಂದು, ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಮೂರು ವಾರಗಳ ಕಾಲ ಬಂಧನದಿಂದ ರಕ್ಷಣೆ ನೀಡಿತು ಮತ್ತು ಇತರ ರಾಜ್ಯಗಳಲ್ಲಿ ಎಫ್‌ಐಆರ್‌ಗಳು ದಾಖಲಾಗದಂತೆ ತಡೆಹಿಡಿದಿತ್ತು.

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ತನ್ನ ಚಾನೆಲ್‌ ಕಾರ್ಯಕ್ರಮಗಳಲ್ಲಿ ಪೊಲೀಸರನ್ನು ದಬಾಯಿಸುವ ಮೂಲಕ ‘ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಆರೋಪಿಸಿ ಮಹಾರಾಷ್ಟ್ರ ಸರ್ಕಾರ ಮುಂಬೈ ಪೊಲೀಸ್ ಉಪ ಆಯುಕ್ತರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಸುಪ್ರೀಂ ಕೋರ್ಟ್‌ಗೆ ಮುಂಬೈ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಗೋಸ್ವಾಮಿ ಅವರು ತಮ್ಮ ವಿರುದ್ಧ ಪೊಲೀಸರು ಪಕ್ಷಪಾತ ನಡೆಸುತ್ತಿದ್ದಾರೆಂದು ಹೇಳಲು ರಿಪಬ್ಲಿಕ್‌ನ ಟ್ವಿಟ್ಟರ್‌ ಹ್ಯಾಂಡಲ್‌ಗಳನ್ನು ಬಳಸಿದ್ದಾರೆ.  ಅವರ ‘ಪುಚ್ತಾ ಹೈ ಭಾರತ್’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಅವರು ಇಂಡಿಯಾಬುಲ್ಸ್‌ಗೆ ಸಂಬಂಧಿಸಿದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಗೋಸ್ವಾಮಿ ಅವರು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ದಿನ, ಅವರು ತಮ್ಮ ಮಾಧ್ಯಮ ತಂಡವನ್ನು ತೊಂದರೆ ಸೃಷ್ಟಿಸಲು ಬಳಸಿದರು. ತಮ್ಮ ಪ್ರಭಾವವನ್ನು ಪೊಲೀಸ್ ಠಾಣೆಯಲ್ಲಿ ಬಳಸಲು ಪ್ರಯತ್ನಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

“ಅರ್ನಾಬ್‌ ವರದಿಗಾರರು, ಕ್ಯಾಮೆರಾಮನ್ ಮುಂತಾದವರನ್ನು ಪೊಲೀಸ್ ಠಾಣೆಯೊಳಗೆ ಕರೆದೊಯ್ದು ತನ್ನ ಕಥೆಯನ್ನು ವಿವರಿಸುತ್ತಾ ಪ್ರಸಾರ ಮಾಡುತ್ತಿದ್ದರು. ಅಲ್ಲಿ ಅವರು ಕೆಲವು ನಿರ್ದಿಷ್ಟ ಕೆಲಸಗಳನ್ನು ಮಾಡಲು ಮತ್ತು ನಿರ್ದಿಷ್ಟ ರೀತಿಯಲ್ಲಿ ವರ್ತಿಸುವಂತೆ ಪೊಲೀಸರಿಗೆ ಆಜ್ಞಾಪಿಸಿದನು. ಪ್ರಕರಣ ಸಂಭವಿಸಿದ ಮತ್ತು ನೋಂದಾಯಿಸಿದಾಗಿನಿಂದ, ಅರ್ಜಿದಾರನು ಪ್ರತಿ ಹಂತದಲ್ಲೂ ಇಡೀ ಘಟನೆಯನ್ನು ತನ್ನ ಮಾಧ್ಯಮದಲ್ಲಿ  ಪ್ರದರ್ಶಿಸಿದ್ದಾನೆ” ಎಂದು ಮಹಾರಾಷ್ಟ್ರ ಸರ್ಕಾರ ಆರೋಪಿಸಿದೆ.

ಗೋಸ್ವಾಮಿ ಅವರು ಪತ್ರಕರ್ತ ಮತ್ತು ರಿಪಬ್ಲಿಕ್ ಟಿವಿಯ ಸಂಪಾದಕರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಈ ಆಧಾರದ ಮೇಲೆ, ಅರ್ನಾಬ್ ಅವರಿಗೆ ನ್ಯಾಯಾಲಯವು ನೀಡಿದ ಮಧ್ಯಂತರ ರಕ್ಷಣೆಯನ್ನು ದುರುಪಯೋಗಪಡಿಸಿಕೊಳ್ಳದಂತೆ ತಡೆಯಲು ಮತ್ತು ಅವರಿಂದ “ಯಾವುದೇ ಒತ್ತಡ, ಬೆದರಿಕೆ ಅಥವಾ ಬಲಾತ್ಕಾರದಿಂದ ತನಿಖೆಯನ್ನು ಕುಂಠಿತಗೊಳಿಸದಂತೆ” ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಇದರಿಂದ ತನಿಖೆಯನ್ನು ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬಹುದು ಎಂದು ತಿಳಿಸಿದೆ.

ಇನ್ನು ಜೂನ್‌ 06 ರಂದು ಅರ್ನಾಬ್‌ ವಿರುದ್ಧ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995 ರ ಅಡಿಯಲ್ಲಿ ಪುಣೆ ಮೂಲದ ಕಾರ್ಯಕರ್ತ ನಿಲೇಶ್ ನವಲಖಾ ಎಂಬುವವರು ಮತ್ತೊಂದು ಕ್ರಿಮಿನಲ್ ದೂರು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

14 ಪುಟಗಳ ದೂರಿನಲ್ಲಿ ಪಾಲ್ಗರ್ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೈಮ್‌ಟೈಮ್ ಶೋನಲ್ಲಿ ಗೋಸ್ವಾಮಿ ಸೋನಿಯಾ ಗಾಂಧಿ ಮೇಲೆ ಆಧಾರ ರಹಿತ ಆರೋಪ ಹೊರಿಸಿದ್ದಾರೆ ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...