Homeಮುಖಪುಟಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌

ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌

ಇನ್ನು ಜೂನ್‌ 06 ರಂದು ಅರ್ನಾಬ್‌ ವಿರುದ್ಧ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995 ರ ಅಡಿಯಲ್ಲಿ ಪುಣೆ ಮೂಲದ ಕಾರ್ಯಕರ್ತ ನಿಲೇಶ್ ನವಲಖಾ ಎಂಬುವವರು ಮತ್ತೊಂದು ಕ್ರಿಮಿನಲ್ ದೂರು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

- Advertisement -
- Advertisement -

ಕೋಮು ದ್ವೇಷ ಪ್ರಚೋದನಾಕಾರಿ ಸುದ್ದಿ ಪ್ರಕಟಿಸಿದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್‌ ಟಿ.ವಿ ಮ್ಯಾನೇಜಿಂಗ್‌ ಡೈರೆಕ್ಟರ್‌ ಅರ್ನಾಬ್‌ ಗೋಸ್ವಾಮಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಮುಂಬೈನ ಬಾಂದ್ರಾದ ರೈಲು ನಿಲ್ದಾಣದ ಎದುರು ಏಪ್ರಿಲ್ 14 ರಂದು ವಲಸೆ ಕಾರ್ಮಿಕರು ದೊಡ್ಡ ಪ್ರಮಾಣದಲ್ಲಿ ಒಟ್ಟುಗೂಡಿದ್ದನ್ನು, ಮಸೀದಿ ಎದುರು ಗುಂಪುಗೂಡಿದ್ದಾರೆ ಎಂದು ತನ್ನ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸಿದ ದೂರಿನ ಆಧಾರದ ಮೇಲೆ ಗೋಸ್ವಾಮಿ ವಿರುದ್ಧ ಮುಂಬೈ ಪೊಲೀಸರು ಮೇ 2ರ ಶನಿವಾರ ಹೊಸ ಎಫ್ಐಆರ್ ದಾಖಲಿಸಿದ್ದಾರೆ.

ಅರ್ನಾಬ್‌ ವಿರುದ್ಧ ಪ್ಯಾಡೋನಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಐಪಿಸಿ 153, 153ಎ, 295ಎ, 500, 505(2), 501(1)(ಬಿ)(ಸಿ), 511, 120(ಬಿ) ಸೆಕ್ಷನ್‌ಗಳ ಕುರಿತು ಹೆಚ್ಚಿನ ವಿಚಾರಣೆಗಾಗಿ ತನಿಖಾಧಿಕಾರಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಸುರೇಶ್‌ ಗಾಯಕ್‌ವಾಡ್‌ರವರ ಎದುರು ಜೂನ್‌ 10ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಹಾಜರಾಗಬೇಕೆಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಮೊದಲು ಪಾಲ್ಘಾರ್‌ ಲಿಂಚಿಂಗ್‌ ಪ್ರಕರಣದಲ್ಲಿ ಪ್ರಚೋದನಾಕಾರಿ ಸುದ್ದಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟಿಸಿದ ಕಾರಣಕ್ಕಾಗಿ ಅರ್ನಾಬ್‌ ವಿರುದ್ಧ ದೇಶಾದ್ಯಂತ ದೂರುಗಳು ದಾಖಲಾಗಿದ್ದವು.

ಏಪ್ರಿಲ್ 24 ರಂದು, ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಮೂರು ವಾರಗಳ ಕಾಲ ಬಂಧನದಿಂದ ರಕ್ಷಣೆ ನೀಡಿತು ಮತ್ತು ಇತರ ರಾಜ್ಯಗಳಲ್ಲಿ ಎಫ್‌ಐಆರ್‌ಗಳು ದಾಖಲಾಗದಂತೆ ತಡೆಹಿಡಿದಿತ್ತು.

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ತನ್ನ ಚಾನೆಲ್‌ ಕಾರ್ಯಕ್ರಮಗಳಲ್ಲಿ ಪೊಲೀಸರನ್ನು ದಬಾಯಿಸುವ ಮೂಲಕ ‘ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಆರೋಪಿಸಿ ಮಹಾರಾಷ್ಟ್ರ ಸರ್ಕಾರ ಮುಂಬೈ ಪೊಲೀಸ್ ಉಪ ಆಯುಕ್ತರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಸುಪ್ರೀಂ ಕೋರ್ಟ್‌ಗೆ ಮುಂಬೈ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಗೋಸ್ವಾಮಿ ಅವರು ತಮ್ಮ ವಿರುದ್ಧ ಪೊಲೀಸರು ಪಕ್ಷಪಾತ ನಡೆಸುತ್ತಿದ್ದಾರೆಂದು ಹೇಳಲು ರಿಪಬ್ಲಿಕ್‌ನ ಟ್ವಿಟ್ಟರ್‌ ಹ್ಯಾಂಡಲ್‌ಗಳನ್ನು ಬಳಸಿದ್ದಾರೆ.  ಅವರ ‘ಪುಚ್ತಾ ಹೈ ಭಾರತ್’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಅವರು ಇಂಡಿಯಾಬುಲ್ಸ್‌ಗೆ ಸಂಬಂಧಿಸಿದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಗೋಸ್ವಾಮಿ ಅವರು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ದಿನ, ಅವರು ತಮ್ಮ ಮಾಧ್ಯಮ ತಂಡವನ್ನು ತೊಂದರೆ ಸೃಷ್ಟಿಸಲು ಬಳಸಿದರು. ತಮ್ಮ ಪ್ರಭಾವವನ್ನು ಪೊಲೀಸ್ ಠಾಣೆಯಲ್ಲಿ ಬಳಸಲು ಪ್ರಯತ್ನಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

“ಅರ್ನಾಬ್‌ ವರದಿಗಾರರು, ಕ್ಯಾಮೆರಾಮನ್ ಮುಂತಾದವರನ್ನು ಪೊಲೀಸ್ ಠಾಣೆಯೊಳಗೆ ಕರೆದೊಯ್ದು ತನ್ನ ಕಥೆಯನ್ನು ವಿವರಿಸುತ್ತಾ ಪ್ರಸಾರ ಮಾಡುತ್ತಿದ್ದರು. ಅಲ್ಲಿ ಅವರು ಕೆಲವು ನಿರ್ದಿಷ್ಟ ಕೆಲಸಗಳನ್ನು ಮಾಡಲು ಮತ್ತು ನಿರ್ದಿಷ್ಟ ರೀತಿಯಲ್ಲಿ ವರ್ತಿಸುವಂತೆ ಪೊಲೀಸರಿಗೆ ಆಜ್ಞಾಪಿಸಿದನು. ಪ್ರಕರಣ ಸಂಭವಿಸಿದ ಮತ್ತು ನೋಂದಾಯಿಸಿದಾಗಿನಿಂದ, ಅರ್ಜಿದಾರನು ಪ್ರತಿ ಹಂತದಲ್ಲೂ ಇಡೀ ಘಟನೆಯನ್ನು ತನ್ನ ಮಾಧ್ಯಮದಲ್ಲಿ  ಪ್ರದರ್ಶಿಸಿದ್ದಾನೆ” ಎಂದು ಮಹಾರಾಷ್ಟ್ರ ಸರ್ಕಾರ ಆರೋಪಿಸಿದೆ.

ಗೋಸ್ವಾಮಿ ಅವರು ಪತ್ರಕರ್ತ ಮತ್ತು ರಿಪಬ್ಲಿಕ್ ಟಿವಿಯ ಸಂಪಾದಕರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಈ ಆಧಾರದ ಮೇಲೆ, ಅರ್ನಾಬ್ ಅವರಿಗೆ ನ್ಯಾಯಾಲಯವು ನೀಡಿದ ಮಧ್ಯಂತರ ರಕ್ಷಣೆಯನ್ನು ದುರುಪಯೋಗಪಡಿಸಿಕೊಳ್ಳದಂತೆ ತಡೆಯಲು ಮತ್ತು ಅವರಿಂದ “ಯಾವುದೇ ಒತ್ತಡ, ಬೆದರಿಕೆ ಅಥವಾ ಬಲಾತ್ಕಾರದಿಂದ ತನಿಖೆಯನ್ನು ಕುಂಠಿತಗೊಳಿಸದಂತೆ” ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಇದರಿಂದ ತನಿಖೆಯನ್ನು ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬಹುದು ಎಂದು ತಿಳಿಸಿದೆ.

ಇನ್ನು ಜೂನ್‌ 06 ರಂದು ಅರ್ನಾಬ್‌ ವಿರುದ್ಧ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995 ರ ಅಡಿಯಲ್ಲಿ ಪುಣೆ ಮೂಲದ ಕಾರ್ಯಕರ್ತ ನಿಲೇಶ್ ನವಲಖಾ ಎಂಬುವವರು ಮತ್ತೊಂದು ಕ್ರಿಮಿನಲ್ ದೂರು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

14 ಪುಟಗಳ ದೂರಿನಲ್ಲಿ ಪಾಲ್ಗರ್ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೈಮ್‌ಟೈಮ್ ಶೋನಲ್ಲಿ ಗೋಸ್ವಾಮಿ ಸೋನಿಯಾ ಗಾಂಧಿ ಮೇಲೆ ಆಧಾರ ರಹಿತ ಆರೋಪ ಹೊರಿಸಿದ್ದಾರೆ ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...