Homeಮುಖಪುಟಆಪರೇಷನ್ ಕಮಲಕ್ಕೆ ಮುಖಭಂಗ: ಮಣಿಪುರದ ಏಳು ಶಾಸಕರನ್ನು ವಿಧಾನ ಸಭೆ ಪ್ರವೇಶಿಸದಂತೆ ಹೈಕೋರ್ಟ್ ತೀರ್ಪು

ಆಪರೇಷನ್ ಕಮಲಕ್ಕೆ ಮುಖಭಂಗ: ಮಣಿಪುರದ ಏಳು ಶಾಸಕರನ್ನು ವಿಧಾನ ಸಭೆ ಪ್ರವೇಶಿಸದಂತೆ ಹೈಕೋರ್ಟ್ ತೀರ್ಪು

- Advertisement -
- Advertisement -

ಮಣಿಪುರದಲ್ಲಿ ನಡೆದಿದ್ದ ಆಪರೇಷನ್ ಕಮಲದಿಂದಾಗಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದ ಏಳು ಶಾಸಕರನ್ನು ಇಂಫಾಲ್ ಶಾಸಕಾಂಗ ಸಭೆಗೆ ಪ್ರವೇಶಿಸುವುದನ್ನು ಮಣಿಪುರ ಹೈಕೋರ್ಟ್ ನಿರ್ಬಂಧಿಸಿದೆ.

ಮುಂದಿನ ಆದೇಶದವರೆಗೆ ಶಾಸಕರ ಪ್ರವೇಶವನ್ನು ತಡೆಯುವಂತೆ ನ್ಯಾಯಾಲಯವು ರಾಜ್ಯ ವಿಧಾನಸಭಾ ಸ್ಪೀಕರ್ ಯುನ್ನಮ್ ಖೇಮ್‌ಚಂದ್ ಅವರಿಗೆ ನಿರ್ದೇಶನ ನೀಡಿದೆ. ತೀರ್ಪು ಹಾಗೂ ಆದೇಶವನ್ನು ತನಗೆ ತಿಳಿಸಿದ ದಿನದಿಂದ ಮೂರು ತಿಂಗಳೊಳಗೆ ಸ್ಪೀಕರ್ ಅರ್ಜಿಗಳನ್ನು ನಿರ್ಧರಿಸಬೇಕಾಗಿತ್ತು ಎಂದು ನ್ಯಾಯಾಲಯ ಹೇಳಿದೆ.

ಅರ್ಜಿದಾರರು ತಮ್ಮ ಮುಂದೆ ಸಲ್ಲಿಸಿದ್ದ ಅರ್ಜಿಗಳನ್ನು ಸಮಂಜಸವಾದ ಸಮಯದೊಳಗೆ ನಿರ್ಧರಿಸಲು ಸ್ಪೀಕರ್ ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

2017 ರಲ್ಲಿ ನಡೆದ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ 60 ಸದಸ್ಯ ಬಲವಿರುವ ವಿಧಾನ ಸಭೆಯಲ್ಲಿ ಕಾಂಗ್ರೆಸ್‌ 28 ಶಾಸಕರನ್ನು ಹೊಂದಿರುವ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಸುಮಾರು ಎಂಟು ಕಾಂಗ್ರೆಸ್ ಶಾಸಕರು ನಂತರ ಪಕ್ಷವನ್ನು ತೊರೆದರು ಬಿಜೆಪಿ ಸೇರಿದ್ದರು. ಅಲ್ಲಿ ಬಿಜೆಪಿ 21 ಸ್ಥಾನಗಳನ್ನು ಗೆದ್ದಿತ್ತು.

ಬಿಜೆಪಿಯು ನ್ಯಾಷನಲ್ ಪೀಪಲ್ಸ್ ಪಾರ್ಟಿ ಹಾಗೂ ನಾಗಾ ಪೀಪಲ್ಸ್ ಫ್ರಂಟ್ ನಿಂದ ತಲಾ ನಾಲ್ಕು ಸ್ಥಾನಗಳು, ತೃಣಮೂಲ ಕಾಂಗ್ರೆಸ್‌ನಿಂದ ಒಂದು, ಲೋಕ ಜನ ಶಕ್ತಿ ಪಕ್ಷದಿಂದ ಒಂದು ಹಾಗೂ ಒಬ್ಬ ಪಕ್ಷೇತರ ಶಾಸಕನ ಬೆಂಬಲ ಪಡೆದು ಸರ್ಕಾರವನ್ನು ರಚಿಸಿತ್ತು.

ಮಣಿಪುರದ ಕಾಂಗ್ರೆಸ್ ವಕ್ತಾರ ನಿಂಗೊಂಬಮ್ ಬುಪೆಂಡಾ ಮೀಟೈ “ಸ್ಪೀಕರ್ ನ್ಯಾಯಮಂಡಳಿಯಲ್ಲಿ ಅವರ ವಿರುದ್ಧ ಬಾಕಿ ಇರುವ ಅನರ್ಹತೆ ಪ್ರಕರಣಗಳ ಅಂತಿಮ ವಿಲೇವಾರಿ ತನಕ ಮಣಿಪುರದ ವಿಧಾನಸಭೆಗೆ ಪ್ರವೇಶಿಸದಂತೆ ತಡೆದ ಮಣಿಪುರದ ಹೈಕೋರ್ಟ್ ನೀಡಿದ ತೀರ್ಪನ್ನು ನಾನು ಸ್ವಾಗತಿಸುತ್ತೇನೆ.” ಎಂದು ಹೇಳಿದ್ದಾರೆ.

“ಜೂನ್ 19 ರಂದು ಮಣಿಪುರದಿಂದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ನನಗೆ ಖಾತ್ರಿಯಿದೆ. ಮಣಿಪುರದಲ್ಲಿ ಶೀಘ್ರದಲ್ಲೇ ಕಾಂಗ್ರೆಸ್ ನೇತೃತ್ವದ ಹೊಸ ಸಮ್ಮಿಶ್ರ ಸರ್ಕಾರವನ್ನು ನೋಡಲು ನಾನು ಎದುರು ನೋಡುತ್ತಿದ್ದೇನೆ.” ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಮಣಿಪುರದ ಬಿಜೆಪಿ ನೇತೃತ್ವದ ಸರ್ಕಾರವು ಮಣಿಪುರ ನಾಗ ಪೀಪಲ್ ಫ್ರಂಟ್ ಇದರ ಅಧ್ಯಕ್ಷ ಅವಂಗ್ಬೋ ನಿವ್‌‌ಮೈ ಅವರನ್ನು ತನ್ನ ಮಂತ್ರಿ ಮಂಡಲಕ್ಕೆ ಸೇರಿಸುವ ಮೂಲಕ ಮಂತ್ರಿ ಪರಿಷತ್ತನ್ನು ವಿಸ್ತರಿಸಿತ್ತು.


ಓದಿ: ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...