Homeಮುಖಪುಟಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

ಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

- Advertisement -
- Advertisement -

ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಮೂಲಕ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತೆ ಕಾಂಗ್ರೆಸ್‌ಗೆ ಮರಳುವ ಸುದ್ಧಿ ಈಗ ಓಪನ್ ಸೀಕ್ರೆಟ್.

ಆದರೆ ಕಾಂಗ್ರೆಸ್ ಯಾವ ಕಾರಣಕ್ಕೂ ಸಿಂಧಿಯಾರನ್ನು ಮರಳಿ ಮನೆ ಸೇರಿಸದಿರುವುದು ಕಾಂಗ್ರೆಸ್ ಪಾಲಿಗೆ ಒಳಿತು.

ಕಮಲ್ ನಾಥ್ ಬಹಳ ಸಜ್ಜನ ರಾಜಕಾರಣಿಯೆಂದೇನೂ ನಾನು ಹೇಳಲಾರೆ. ಆದರೆ ಕಳೆದ ಅಸೆಂಬ್ಲಿ ಚುನಾವಣೆಯ ಬಳಿಕ ಕಮಲ್‌ನಾಥ್‌ಗೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಹುದ್ದೆ ನೀಡಿದ್ದು ಅವರ ಸೀನಿಯಾರಿಟಿಯ ದೃಷ್ಟಿಯಿಂದ ಮತ್ತು ಪಕ್ಷಕ್ಕೆ ಅವರು ನೀಡಿದ ಸೇವೆಯ ದೃಷ್ಟಿಯಿಂದ ಅತ್ಯಂತ ಸೂಕ್ತ ಆಯ್ಕೆಯಾಗಿತ್ತು. ಸಿಂಧಿಯಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಅತೀ ಮುಖ್ಯ ಕಾರಣವೇ ತನಗೆ ಮುಖ್ಯಮಂತ್ರಿ ಪಟ್ಟ ನೀಡದಿದ್ದುದು.

ಕಮಲ್‌ನಾಥ್ ಜ್ಯೋತಿರಾಧಿತ್ಯರ ಅಪ್ಪ ಮಾಧವ್ ರಾವ್ ಅವರ ಸಮಕಾಲೀನ ನಾಯಕ. ಅವರು ರಾಜಕೀಯ ಬದುಕಿನ ಅರ್ಧದಷ್ಟು ರಾಜಕೀಯ ಅನುಭವವೂ ಜ್ಯೋತಿರಾಧಿತ್ಯರಿಗಿಲ್ಲ. ಕಾಂಗ್ರೆಸ್ ದೇಶದೆಲ್ಲೆಡೆ ಸೋತು ನಿರಾಶೆಯ ಛಾಯೆಯಲ್ಲಿದ್ದಾಗ ಮಧ್ಯಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಅಧಿಕಾರ ಹಿಡಿದುದು ಕಾಂಗ್ರೆಸ್ ಪಾಲಿಗೆ ಕತ್ತಲ ಕಾಲದ ಕೋಲ್ಮಿಂಚಾಗಿತ್ತೆಂದರೂ ಸರಿಯೇ. ಅಷ್ಟು ಕಷ್ಟಪಟ್ಟು ಬಿಜೆಪಿಯನ್ನು ಉರುಳಿಸಿ ಅಧಿಕಾರ ಹಿಡಿದಿರುವಾಗ ತನ್ನ ಅಧಿಕಾರ ದಾಹಕ್ಕಾಗಿ ಸರಕಾರವನ್ನು ಉರುಳಿಸಿದ್ದು ಅಕ್ಷಮ್ಯ. ಬಿಜೆಪಿ ಅನೈತಿಕ ಮಾರ್ಗದಲ್ಲಿ  ಅಧಿಕಾರಕ್ಕೇರಲು ಬಾಗಿಲು ತೆರೆದುಕೊಟ್ಟದ್ದೇ ಜ್ಯೋತಿರಾಧಿತ್ಯ.

ಇದೊಂದು ಅವಧಿಗೆ ಕಮಲ್‌ನಾಥ್‌ರಿಗೆ ಒಳ್ಳೆಯ ಆಡಳಿತ ನೀಡಲು ಅವಕಾಶ ಮಾಡಿಕೊಟ್ಟಿದ್ದರೆ ಜ್ಯೋತಿರಾಧಿತ್ಯ ಕಳೆದುಕೊಳ್ಳುವುದೇನೂ‌ ಇರಲಿಲ್ಲ.  ನಾಳೆ ಇನ್ನೊಮ್ಮೆ  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ನ ಸಹಜ ಆಯ್ಕೆ ಜ್ಯೋತಿರಾಧಿತ್ಯ ಎಂಬ ಬಗ್ಗೆ ಖುದ್ದು ಜ್ಯೋತಿರಾಧಿತ್ಯರಿಗೂ ಗೊತ್ತಿತ್ತು. ಅದಾಗ್ಯೂ ದಿಡೀರ್ ಮುಖ್ಯಮಂತ್ರಿಯಾಗಬೇಕೆಂಬ ದುರಾಶೆಗೆ ಪಕ್ಷದ ಬಿಡಿ ಸ್ವತಃ ತನ್ನ ಭವಿಷ್ಯದ ಬಗ್ಗೆಯೂ ಯೋಚಿಸದ ಜ್ಯೋತಿರಾಧಿತ್ಯರನ್ನು ಕಾಂಗ್ರೆಸ್ ಮತ್ತೆ ಯಾವ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳದಿರುವುದು ಕಾಂಗ್ರೆಸ್ ಪಾಲಿಗೆ ಅತ್ಯಂತ ಕ್ಷೇಮಕರ.

ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿರಬಹುದು, ಆದರೆ ಜ್ಯೋತಿರಾಧಿತ್ಯ ಮತ್ತೆ ಮಾತೃಪಕ್ಷಕ್ಕೆ ಮರಳುವ ಬಗ್ಗೆ ಯೋಚಿಸಲು ಅದೊಂದೇ ಕಾರಣ ಖಂಡಿತಾ ಅಲ್ಲ. ಬಿಜೆಪಿ ಕೊರೋನಾದ ವಿಷಮಕಾಲದಲ್ಲಿ ಮಾಡಿದ ಚೀಪ್  ಪಾಲಿಟಿಕ್ಸ್‌‌ನಿಂದಾಗಿ ಮತ್ತು ಈಗಿನದು ಜನತೆಯ ಆಯ್ಕೆಯ ಸರಕಾರವಲ್ಲದಿರುವುದರಿಂದ ಅದು ಮುಂದಿನ ಅವಧಿಗೆ ಈಗ ಪಡೆದ ಅಧಿಕಾರ ಉಳಿಸಿಕೊಳ್ಳುವುದು ಬಹಳ ಕಷ್ಟ.

ಈಗಿಂದೀಗಲೇ ಕಾಂಗ್ರೆಸ್ ಸೇರಿದರೆ ಮುಂದೆ ತನ್ನ ಸ್ಥಾನವನ್ನು ಭದ್ರಗೊಳಿಸಬಹುದೆಂಬ ದೂರಾಲೋಚನೆಯೇ ಜ್ಯೋತಿರಾಧಿತ್ಯರನ್ನು ಇಂತಹ ನಿರ್ಧಾರಕ್ಕಿಳಿಸಿದೆ. ಅವರನ್ನು ಮತ್ತೆ ಸೇರಿಸಿಕೊಳ್ಳುವುದರಿಂದ ನಿಷ್ಟಾವಂತ ಕಾಂಗ್ರೆಸಿಗರಿಗೆ ಅನ್ಯಾಯ ಮಾಡಿದಂತಾಗಬಹುದು. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿದರೂ ಅನ್ಯಾಯವಾಗಿ ಅವರು ಕೈ ತಪ್ಪಿಸಿದ ಅಧಿಕಾರ ಮತ್ತೆ ದಕ್ಕದು. ಅವರು ತನ್ನೊಂದಿಗೆ ಬಿಜೆಪಿಗೆ ಕೊಂಡೊಯ್ದ ಎಲ್ಲಾ ಶಾಸಕರೂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ ತೀರಾ ಕಡಿಮೆ. ಜ್ಯೋತಿರಾಧಿತ್ಯ ಕಾಂಗ್ರೆಸ್ ತೊರೆದಿದ್ದೂ ಅಧಿಕಾರ ಮೋಹದಿಂದ, ಮತ್ತೆ ಮರಳುತ್ತಿರುವುದೂ ಭವಿಷ್ಯದ ಅಧಿಕಾರ ಮೋಹಕ್ಕಾಗಿಯಷ್ಟೆ.

ನಾಳೆ ಅವರು ಮತ್ತೆ ಇನ್ನೇನಾದರೂ ಕಾರಣ ಮುಂದಿಟ್ಟು ಪಕ್ಷವನ್ನು ಬ್ಲ್ಯಾಕ್ ಮೇಲ್ ಮಾಡಲಾರರು ಎನ್ನಲು ಯಾವ ಖಚಿತತೆಯೂ ಇಲ್ಲ.

ಕಳೆದ ಪಾರ್ಲಿಮೆಂಟ್ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಜ್ಯೋತಿರಾಧಿತ್ಯ ಸೋತಿರುವುದು ಅವರು ತನ್ನ ಕ್ಷೇತ್ರದಲ್ಲೇ ಹಿಂದಿನಷ್ಟು ಪ್ರಭಾವಿಯಾಗುಳಿದಿಲ್ಲ ಎನ್ನುವುದನ್ನು ತೋರಿಸುತ್ತದೆ. ರಾಜ ಕುಟುಂಬ ಎನ್ನುವ ಕಾರಣಕ್ಕೆ ಅವರಿಗೆ ಮಣೆ ಹಾಕುವುದು ಪ್ರಜಾಪ್ರಭುತ್ವ ಕಾಲದ ಅತ್ಯಂತ ಅಸಹ್ಯ ನಡೆಯಾಗಬಹುದು.

ಜ್ಯೋತಿರಾಧಿತ್ಯ  ಮಾಧವ ರಾವ್ ಸಿಂಧಿಯಾ ಅವರ ಮಗನಲ್ಲದಿರುತ್ತಿದ್ದರೆ ಅವರು ರಾಜಕೀಯದಲ್ಲಿ ಏನೂ‌ ಆಗಿರುತ್ತಿರಲಿಲ್ಲ. ಅಷ್ಟಕ್ಕೂ ಅವರು ಇತರ ನಾಯಕರಂತೆ ಪಕ್ಷಕ್ಕಾಗಿ ದುಡಿದು ಮೇಲೇರಿದವರಲ್ಲ. ಅವರಪ್ಪನ ದಿಡೀರ್ ಸಾವು ಅವರನ್ನು ಉತ್ತರಾಧಿಕಾರಿಯಾಗಿಸಿತ್ತು. ರಾಹುಲ್ ಗಾಂಧಿಯವರು ಜ್ಯೋತಿರಾಧಿತ್ಯರನ್ನು ತನ್ನ ಆಪ್ತ ಬಳಗದಲ್ಲಿಟ್ಟುಕೊಂಡಿದ್ದರೂ ಅವರು ಪಕ್ಷದ ನಾಯಕತ್ವಕ್ಕೆ ನಿಷ್ಟೆ ತೋರಿಸದೇ ಬಿಜೆಪಿಗೆ ಹಾರಿ ಇತರ್ಯಾವುದೇ ನಾಯಕರು ಪಕ್ಷ ತೊರೆದು ಮಾಡಿರುವುದಕ್ಕಿಂತ ಅತೀ ಹೆಚ್ಚು ಹಾನಿಯನ್ನೂ ಪಕ್ಷಕ್ಕೆ ಮಾಡಿದರು.

ಜ್ಯೋತಿರಾಧಿತ್ಯ ಮರುಸೇರ್ಪಡೆಯಿಂದ ಸದ್ಯಕ್ಕೆ ಬಿಜೆಪಿಗೆ ಟಾಂಗ್ ಕೊಡಲು ಕಾಂಗ್ರೆಸ್‌ಗೆ ಅಸ್ತ್ರ‌ ಸಿಗಬಹುದೇ ಹೊರತು ಹೆಚ್ಚಿನ ಲಾಭವೇನೂ ಆಗದು. ಮತ್ತು ಅದೊಂದು ಕಾಂಗ್ರೆಸ್‌ನೊಳಗೆ ಕೆಟ್ಟ ಬೆಳವಣಿಗೆಗೆ ನಾಂದಿಯಾಗಬಹುದು..


ಇದನ್ನೂ ಓದಿ: ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...