Homeಮುಖಪುಟಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

ಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

- Advertisement -
- Advertisement -

ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಮೂಲಕ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತೆ ಕಾಂಗ್ರೆಸ್‌ಗೆ ಮರಳುವ ಸುದ್ಧಿ ಈಗ ಓಪನ್ ಸೀಕ್ರೆಟ್.

ಆದರೆ ಕಾಂಗ್ರೆಸ್ ಯಾವ ಕಾರಣಕ್ಕೂ ಸಿಂಧಿಯಾರನ್ನು ಮರಳಿ ಮನೆ ಸೇರಿಸದಿರುವುದು ಕಾಂಗ್ರೆಸ್ ಪಾಲಿಗೆ ಒಳಿತು.

ಕಮಲ್ ನಾಥ್ ಬಹಳ ಸಜ್ಜನ ರಾಜಕಾರಣಿಯೆಂದೇನೂ ನಾನು ಹೇಳಲಾರೆ. ಆದರೆ ಕಳೆದ ಅಸೆಂಬ್ಲಿ ಚುನಾವಣೆಯ ಬಳಿಕ ಕಮಲ್‌ನಾಥ್‌ಗೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಹುದ್ದೆ ನೀಡಿದ್ದು ಅವರ ಸೀನಿಯಾರಿಟಿಯ ದೃಷ್ಟಿಯಿಂದ ಮತ್ತು ಪಕ್ಷಕ್ಕೆ ಅವರು ನೀಡಿದ ಸೇವೆಯ ದೃಷ್ಟಿಯಿಂದ ಅತ್ಯಂತ ಸೂಕ್ತ ಆಯ್ಕೆಯಾಗಿತ್ತು. ಸಿಂಧಿಯಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಅತೀ ಮುಖ್ಯ ಕಾರಣವೇ ತನಗೆ ಮುಖ್ಯಮಂತ್ರಿ ಪಟ್ಟ ನೀಡದಿದ್ದುದು.

ಕಮಲ್‌ನಾಥ್ ಜ್ಯೋತಿರಾಧಿತ್ಯರ ಅಪ್ಪ ಮಾಧವ್ ರಾವ್ ಅವರ ಸಮಕಾಲೀನ ನಾಯಕ. ಅವರು ರಾಜಕೀಯ ಬದುಕಿನ ಅರ್ಧದಷ್ಟು ರಾಜಕೀಯ ಅನುಭವವೂ ಜ್ಯೋತಿರಾಧಿತ್ಯರಿಗಿಲ್ಲ. ಕಾಂಗ್ರೆಸ್ ದೇಶದೆಲ್ಲೆಡೆ ಸೋತು ನಿರಾಶೆಯ ಛಾಯೆಯಲ್ಲಿದ್ದಾಗ ಮಧ್ಯಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಅಧಿಕಾರ ಹಿಡಿದುದು ಕಾಂಗ್ರೆಸ್ ಪಾಲಿಗೆ ಕತ್ತಲ ಕಾಲದ ಕೋಲ್ಮಿಂಚಾಗಿತ್ತೆಂದರೂ ಸರಿಯೇ. ಅಷ್ಟು ಕಷ್ಟಪಟ್ಟು ಬಿಜೆಪಿಯನ್ನು ಉರುಳಿಸಿ ಅಧಿಕಾರ ಹಿಡಿದಿರುವಾಗ ತನ್ನ ಅಧಿಕಾರ ದಾಹಕ್ಕಾಗಿ ಸರಕಾರವನ್ನು ಉರುಳಿಸಿದ್ದು ಅಕ್ಷಮ್ಯ. ಬಿಜೆಪಿ ಅನೈತಿಕ ಮಾರ್ಗದಲ್ಲಿ  ಅಧಿಕಾರಕ್ಕೇರಲು ಬಾಗಿಲು ತೆರೆದುಕೊಟ್ಟದ್ದೇ ಜ್ಯೋತಿರಾಧಿತ್ಯ.

ಇದೊಂದು ಅವಧಿಗೆ ಕಮಲ್‌ನಾಥ್‌ರಿಗೆ ಒಳ್ಳೆಯ ಆಡಳಿತ ನೀಡಲು ಅವಕಾಶ ಮಾಡಿಕೊಟ್ಟಿದ್ದರೆ ಜ್ಯೋತಿರಾಧಿತ್ಯ ಕಳೆದುಕೊಳ್ಳುವುದೇನೂ‌ ಇರಲಿಲ್ಲ.  ನಾಳೆ ಇನ್ನೊಮ್ಮೆ  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ನ ಸಹಜ ಆಯ್ಕೆ ಜ್ಯೋತಿರಾಧಿತ್ಯ ಎಂಬ ಬಗ್ಗೆ ಖುದ್ದು ಜ್ಯೋತಿರಾಧಿತ್ಯರಿಗೂ ಗೊತ್ತಿತ್ತು. ಅದಾಗ್ಯೂ ದಿಡೀರ್ ಮುಖ್ಯಮಂತ್ರಿಯಾಗಬೇಕೆಂಬ ದುರಾಶೆಗೆ ಪಕ್ಷದ ಬಿಡಿ ಸ್ವತಃ ತನ್ನ ಭವಿಷ್ಯದ ಬಗ್ಗೆಯೂ ಯೋಚಿಸದ ಜ್ಯೋತಿರಾಧಿತ್ಯರನ್ನು ಕಾಂಗ್ರೆಸ್ ಮತ್ತೆ ಯಾವ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳದಿರುವುದು ಕಾಂಗ್ರೆಸ್ ಪಾಲಿಗೆ ಅತ್ಯಂತ ಕ್ಷೇಮಕರ.

ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿರಬಹುದು, ಆದರೆ ಜ್ಯೋತಿರಾಧಿತ್ಯ ಮತ್ತೆ ಮಾತೃಪಕ್ಷಕ್ಕೆ ಮರಳುವ ಬಗ್ಗೆ ಯೋಚಿಸಲು ಅದೊಂದೇ ಕಾರಣ ಖಂಡಿತಾ ಅಲ್ಲ. ಬಿಜೆಪಿ ಕೊರೋನಾದ ವಿಷಮಕಾಲದಲ್ಲಿ ಮಾಡಿದ ಚೀಪ್  ಪಾಲಿಟಿಕ್ಸ್‌‌ನಿಂದಾಗಿ ಮತ್ತು ಈಗಿನದು ಜನತೆಯ ಆಯ್ಕೆಯ ಸರಕಾರವಲ್ಲದಿರುವುದರಿಂದ ಅದು ಮುಂದಿನ ಅವಧಿಗೆ ಈಗ ಪಡೆದ ಅಧಿಕಾರ ಉಳಿಸಿಕೊಳ್ಳುವುದು ಬಹಳ ಕಷ್ಟ.

ಈಗಿಂದೀಗಲೇ ಕಾಂಗ್ರೆಸ್ ಸೇರಿದರೆ ಮುಂದೆ ತನ್ನ ಸ್ಥಾನವನ್ನು ಭದ್ರಗೊಳಿಸಬಹುದೆಂಬ ದೂರಾಲೋಚನೆಯೇ ಜ್ಯೋತಿರಾಧಿತ್ಯರನ್ನು ಇಂತಹ ನಿರ್ಧಾರಕ್ಕಿಳಿಸಿದೆ. ಅವರನ್ನು ಮತ್ತೆ ಸೇರಿಸಿಕೊಳ್ಳುವುದರಿಂದ ನಿಷ್ಟಾವಂತ ಕಾಂಗ್ರೆಸಿಗರಿಗೆ ಅನ್ಯಾಯ ಮಾಡಿದಂತಾಗಬಹುದು. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿದರೂ ಅನ್ಯಾಯವಾಗಿ ಅವರು ಕೈ ತಪ್ಪಿಸಿದ ಅಧಿಕಾರ ಮತ್ತೆ ದಕ್ಕದು. ಅವರು ತನ್ನೊಂದಿಗೆ ಬಿಜೆಪಿಗೆ ಕೊಂಡೊಯ್ದ ಎಲ್ಲಾ ಶಾಸಕರೂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ ತೀರಾ ಕಡಿಮೆ. ಜ್ಯೋತಿರಾಧಿತ್ಯ ಕಾಂಗ್ರೆಸ್ ತೊರೆದಿದ್ದೂ ಅಧಿಕಾರ ಮೋಹದಿಂದ, ಮತ್ತೆ ಮರಳುತ್ತಿರುವುದೂ ಭವಿಷ್ಯದ ಅಧಿಕಾರ ಮೋಹಕ್ಕಾಗಿಯಷ್ಟೆ.

ನಾಳೆ ಅವರು ಮತ್ತೆ ಇನ್ನೇನಾದರೂ ಕಾರಣ ಮುಂದಿಟ್ಟು ಪಕ್ಷವನ್ನು ಬ್ಲ್ಯಾಕ್ ಮೇಲ್ ಮಾಡಲಾರರು ಎನ್ನಲು ಯಾವ ಖಚಿತತೆಯೂ ಇಲ್ಲ.

ಕಳೆದ ಪಾರ್ಲಿಮೆಂಟ್ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಜ್ಯೋತಿರಾಧಿತ್ಯ ಸೋತಿರುವುದು ಅವರು ತನ್ನ ಕ್ಷೇತ್ರದಲ್ಲೇ ಹಿಂದಿನಷ್ಟು ಪ್ರಭಾವಿಯಾಗುಳಿದಿಲ್ಲ ಎನ್ನುವುದನ್ನು ತೋರಿಸುತ್ತದೆ. ರಾಜ ಕುಟುಂಬ ಎನ್ನುವ ಕಾರಣಕ್ಕೆ ಅವರಿಗೆ ಮಣೆ ಹಾಕುವುದು ಪ್ರಜಾಪ್ರಭುತ್ವ ಕಾಲದ ಅತ್ಯಂತ ಅಸಹ್ಯ ನಡೆಯಾಗಬಹುದು.

ಜ್ಯೋತಿರಾಧಿತ್ಯ  ಮಾಧವ ರಾವ್ ಸಿಂಧಿಯಾ ಅವರ ಮಗನಲ್ಲದಿರುತ್ತಿದ್ದರೆ ಅವರು ರಾಜಕೀಯದಲ್ಲಿ ಏನೂ‌ ಆಗಿರುತ್ತಿರಲಿಲ್ಲ. ಅಷ್ಟಕ್ಕೂ ಅವರು ಇತರ ನಾಯಕರಂತೆ ಪಕ್ಷಕ್ಕಾಗಿ ದುಡಿದು ಮೇಲೇರಿದವರಲ್ಲ. ಅವರಪ್ಪನ ದಿಡೀರ್ ಸಾವು ಅವರನ್ನು ಉತ್ತರಾಧಿಕಾರಿಯಾಗಿಸಿತ್ತು. ರಾಹುಲ್ ಗಾಂಧಿಯವರು ಜ್ಯೋತಿರಾಧಿತ್ಯರನ್ನು ತನ್ನ ಆಪ್ತ ಬಳಗದಲ್ಲಿಟ್ಟುಕೊಂಡಿದ್ದರೂ ಅವರು ಪಕ್ಷದ ನಾಯಕತ್ವಕ್ಕೆ ನಿಷ್ಟೆ ತೋರಿಸದೇ ಬಿಜೆಪಿಗೆ ಹಾರಿ ಇತರ್ಯಾವುದೇ ನಾಯಕರು ಪಕ್ಷ ತೊರೆದು ಮಾಡಿರುವುದಕ್ಕಿಂತ ಅತೀ ಹೆಚ್ಚು ಹಾನಿಯನ್ನೂ ಪಕ್ಷಕ್ಕೆ ಮಾಡಿದರು.

ಜ್ಯೋತಿರಾಧಿತ್ಯ ಮರುಸೇರ್ಪಡೆಯಿಂದ ಸದ್ಯಕ್ಕೆ ಬಿಜೆಪಿಗೆ ಟಾಂಗ್ ಕೊಡಲು ಕಾಂಗ್ರೆಸ್‌ಗೆ ಅಸ್ತ್ರ‌ ಸಿಗಬಹುದೇ ಹೊರತು ಹೆಚ್ಚಿನ ಲಾಭವೇನೂ ಆಗದು. ಮತ್ತು ಅದೊಂದು ಕಾಂಗ್ರೆಸ್‌ನೊಳಗೆ ಕೆಟ್ಟ ಬೆಳವಣಿಗೆಗೆ ನಾಂದಿಯಾಗಬಹುದು..


ಇದನ್ನೂ ಓದಿ: ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....