Homeಮುಖಪುಟಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

ಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

- Advertisement -
- Advertisement -

ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಮೂಲಕ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತೆ ಕಾಂಗ್ರೆಸ್‌ಗೆ ಮರಳುವ ಸುದ್ಧಿ ಈಗ ಓಪನ್ ಸೀಕ್ರೆಟ್.

ಆದರೆ ಕಾಂಗ್ರೆಸ್ ಯಾವ ಕಾರಣಕ್ಕೂ ಸಿಂಧಿಯಾರನ್ನು ಮರಳಿ ಮನೆ ಸೇರಿಸದಿರುವುದು ಕಾಂಗ್ರೆಸ್ ಪಾಲಿಗೆ ಒಳಿತು.

ಕಮಲ್ ನಾಥ್ ಬಹಳ ಸಜ್ಜನ ರಾಜಕಾರಣಿಯೆಂದೇನೂ ನಾನು ಹೇಳಲಾರೆ. ಆದರೆ ಕಳೆದ ಅಸೆಂಬ್ಲಿ ಚುನಾವಣೆಯ ಬಳಿಕ ಕಮಲ್‌ನಾಥ್‌ಗೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಹುದ್ದೆ ನೀಡಿದ್ದು ಅವರ ಸೀನಿಯಾರಿಟಿಯ ದೃಷ್ಟಿಯಿಂದ ಮತ್ತು ಪಕ್ಷಕ್ಕೆ ಅವರು ನೀಡಿದ ಸೇವೆಯ ದೃಷ್ಟಿಯಿಂದ ಅತ್ಯಂತ ಸೂಕ್ತ ಆಯ್ಕೆಯಾಗಿತ್ತು. ಸಿಂಧಿಯಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಅತೀ ಮುಖ್ಯ ಕಾರಣವೇ ತನಗೆ ಮುಖ್ಯಮಂತ್ರಿ ಪಟ್ಟ ನೀಡದಿದ್ದುದು.

ಕಮಲ್‌ನಾಥ್ ಜ್ಯೋತಿರಾಧಿತ್ಯರ ಅಪ್ಪ ಮಾಧವ್ ರಾವ್ ಅವರ ಸಮಕಾಲೀನ ನಾಯಕ. ಅವರು ರಾಜಕೀಯ ಬದುಕಿನ ಅರ್ಧದಷ್ಟು ರಾಜಕೀಯ ಅನುಭವವೂ ಜ್ಯೋತಿರಾಧಿತ್ಯರಿಗಿಲ್ಲ. ಕಾಂಗ್ರೆಸ್ ದೇಶದೆಲ್ಲೆಡೆ ಸೋತು ನಿರಾಶೆಯ ಛಾಯೆಯಲ್ಲಿದ್ದಾಗ ಮಧ್ಯಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಅಧಿಕಾರ ಹಿಡಿದುದು ಕಾಂಗ್ರೆಸ್ ಪಾಲಿಗೆ ಕತ್ತಲ ಕಾಲದ ಕೋಲ್ಮಿಂಚಾಗಿತ್ತೆಂದರೂ ಸರಿಯೇ. ಅಷ್ಟು ಕಷ್ಟಪಟ್ಟು ಬಿಜೆಪಿಯನ್ನು ಉರುಳಿಸಿ ಅಧಿಕಾರ ಹಿಡಿದಿರುವಾಗ ತನ್ನ ಅಧಿಕಾರ ದಾಹಕ್ಕಾಗಿ ಸರಕಾರವನ್ನು ಉರುಳಿಸಿದ್ದು ಅಕ್ಷಮ್ಯ. ಬಿಜೆಪಿ ಅನೈತಿಕ ಮಾರ್ಗದಲ್ಲಿ  ಅಧಿಕಾರಕ್ಕೇರಲು ಬಾಗಿಲು ತೆರೆದುಕೊಟ್ಟದ್ದೇ ಜ್ಯೋತಿರಾಧಿತ್ಯ.

ಇದೊಂದು ಅವಧಿಗೆ ಕಮಲ್‌ನಾಥ್‌ರಿಗೆ ಒಳ್ಳೆಯ ಆಡಳಿತ ನೀಡಲು ಅವಕಾಶ ಮಾಡಿಕೊಟ್ಟಿದ್ದರೆ ಜ್ಯೋತಿರಾಧಿತ್ಯ ಕಳೆದುಕೊಳ್ಳುವುದೇನೂ‌ ಇರಲಿಲ್ಲ.  ನಾಳೆ ಇನ್ನೊಮ್ಮೆ  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ನ ಸಹಜ ಆಯ್ಕೆ ಜ್ಯೋತಿರಾಧಿತ್ಯ ಎಂಬ ಬಗ್ಗೆ ಖುದ್ದು ಜ್ಯೋತಿರಾಧಿತ್ಯರಿಗೂ ಗೊತ್ತಿತ್ತು. ಅದಾಗ್ಯೂ ದಿಡೀರ್ ಮುಖ್ಯಮಂತ್ರಿಯಾಗಬೇಕೆಂಬ ದುರಾಶೆಗೆ ಪಕ್ಷದ ಬಿಡಿ ಸ್ವತಃ ತನ್ನ ಭವಿಷ್ಯದ ಬಗ್ಗೆಯೂ ಯೋಚಿಸದ ಜ್ಯೋತಿರಾಧಿತ್ಯರನ್ನು ಕಾಂಗ್ರೆಸ್ ಮತ್ತೆ ಯಾವ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳದಿರುವುದು ಕಾಂಗ್ರೆಸ್ ಪಾಲಿಗೆ ಅತ್ಯಂತ ಕ್ಷೇಮಕರ.

ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿರಬಹುದು, ಆದರೆ ಜ್ಯೋತಿರಾಧಿತ್ಯ ಮತ್ತೆ ಮಾತೃಪಕ್ಷಕ್ಕೆ ಮರಳುವ ಬಗ್ಗೆ ಯೋಚಿಸಲು ಅದೊಂದೇ ಕಾರಣ ಖಂಡಿತಾ ಅಲ್ಲ. ಬಿಜೆಪಿ ಕೊರೋನಾದ ವಿಷಮಕಾಲದಲ್ಲಿ ಮಾಡಿದ ಚೀಪ್  ಪಾಲಿಟಿಕ್ಸ್‌‌ನಿಂದಾಗಿ ಮತ್ತು ಈಗಿನದು ಜನತೆಯ ಆಯ್ಕೆಯ ಸರಕಾರವಲ್ಲದಿರುವುದರಿಂದ ಅದು ಮುಂದಿನ ಅವಧಿಗೆ ಈಗ ಪಡೆದ ಅಧಿಕಾರ ಉಳಿಸಿಕೊಳ್ಳುವುದು ಬಹಳ ಕಷ್ಟ.

ಈಗಿಂದೀಗಲೇ ಕಾಂಗ್ರೆಸ್ ಸೇರಿದರೆ ಮುಂದೆ ತನ್ನ ಸ್ಥಾನವನ್ನು ಭದ್ರಗೊಳಿಸಬಹುದೆಂಬ ದೂರಾಲೋಚನೆಯೇ ಜ್ಯೋತಿರಾಧಿತ್ಯರನ್ನು ಇಂತಹ ನಿರ್ಧಾರಕ್ಕಿಳಿಸಿದೆ. ಅವರನ್ನು ಮತ್ತೆ ಸೇರಿಸಿಕೊಳ್ಳುವುದರಿಂದ ನಿಷ್ಟಾವಂತ ಕಾಂಗ್ರೆಸಿಗರಿಗೆ ಅನ್ಯಾಯ ಮಾಡಿದಂತಾಗಬಹುದು. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿದರೂ ಅನ್ಯಾಯವಾಗಿ ಅವರು ಕೈ ತಪ್ಪಿಸಿದ ಅಧಿಕಾರ ಮತ್ತೆ ದಕ್ಕದು. ಅವರು ತನ್ನೊಂದಿಗೆ ಬಿಜೆಪಿಗೆ ಕೊಂಡೊಯ್ದ ಎಲ್ಲಾ ಶಾಸಕರೂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ ತೀರಾ ಕಡಿಮೆ. ಜ್ಯೋತಿರಾಧಿತ್ಯ ಕಾಂಗ್ರೆಸ್ ತೊರೆದಿದ್ದೂ ಅಧಿಕಾರ ಮೋಹದಿಂದ, ಮತ್ತೆ ಮರಳುತ್ತಿರುವುದೂ ಭವಿಷ್ಯದ ಅಧಿಕಾರ ಮೋಹಕ್ಕಾಗಿಯಷ್ಟೆ.

ನಾಳೆ ಅವರು ಮತ್ತೆ ಇನ್ನೇನಾದರೂ ಕಾರಣ ಮುಂದಿಟ್ಟು ಪಕ್ಷವನ್ನು ಬ್ಲ್ಯಾಕ್ ಮೇಲ್ ಮಾಡಲಾರರು ಎನ್ನಲು ಯಾವ ಖಚಿತತೆಯೂ ಇಲ್ಲ.

ಕಳೆದ ಪಾರ್ಲಿಮೆಂಟ್ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಜ್ಯೋತಿರಾಧಿತ್ಯ ಸೋತಿರುವುದು ಅವರು ತನ್ನ ಕ್ಷೇತ್ರದಲ್ಲೇ ಹಿಂದಿನಷ್ಟು ಪ್ರಭಾವಿಯಾಗುಳಿದಿಲ್ಲ ಎನ್ನುವುದನ್ನು ತೋರಿಸುತ್ತದೆ. ರಾಜ ಕುಟುಂಬ ಎನ್ನುವ ಕಾರಣಕ್ಕೆ ಅವರಿಗೆ ಮಣೆ ಹಾಕುವುದು ಪ್ರಜಾಪ್ರಭುತ್ವ ಕಾಲದ ಅತ್ಯಂತ ಅಸಹ್ಯ ನಡೆಯಾಗಬಹುದು.

ಜ್ಯೋತಿರಾಧಿತ್ಯ  ಮಾಧವ ರಾವ್ ಸಿಂಧಿಯಾ ಅವರ ಮಗನಲ್ಲದಿರುತ್ತಿದ್ದರೆ ಅವರು ರಾಜಕೀಯದಲ್ಲಿ ಏನೂ‌ ಆಗಿರುತ್ತಿರಲಿಲ್ಲ. ಅಷ್ಟಕ್ಕೂ ಅವರು ಇತರ ನಾಯಕರಂತೆ ಪಕ್ಷಕ್ಕಾಗಿ ದುಡಿದು ಮೇಲೇರಿದವರಲ್ಲ. ಅವರಪ್ಪನ ದಿಡೀರ್ ಸಾವು ಅವರನ್ನು ಉತ್ತರಾಧಿಕಾರಿಯಾಗಿಸಿತ್ತು. ರಾಹುಲ್ ಗಾಂಧಿಯವರು ಜ್ಯೋತಿರಾಧಿತ್ಯರನ್ನು ತನ್ನ ಆಪ್ತ ಬಳಗದಲ್ಲಿಟ್ಟುಕೊಂಡಿದ್ದರೂ ಅವರು ಪಕ್ಷದ ನಾಯಕತ್ವಕ್ಕೆ ನಿಷ್ಟೆ ತೋರಿಸದೇ ಬಿಜೆಪಿಗೆ ಹಾರಿ ಇತರ್ಯಾವುದೇ ನಾಯಕರು ಪಕ್ಷ ತೊರೆದು ಮಾಡಿರುವುದಕ್ಕಿಂತ ಅತೀ ಹೆಚ್ಚು ಹಾನಿಯನ್ನೂ ಪಕ್ಷಕ್ಕೆ ಮಾಡಿದರು.

ಜ್ಯೋತಿರಾಧಿತ್ಯ ಮರುಸೇರ್ಪಡೆಯಿಂದ ಸದ್ಯಕ್ಕೆ ಬಿಜೆಪಿಗೆ ಟಾಂಗ್ ಕೊಡಲು ಕಾಂಗ್ರೆಸ್‌ಗೆ ಅಸ್ತ್ರ‌ ಸಿಗಬಹುದೇ ಹೊರತು ಹೆಚ್ಚಿನ ಲಾಭವೇನೂ ಆಗದು. ಮತ್ತು ಅದೊಂದು ಕಾಂಗ್ರೆಸ್‌ನೊಳಗೆ ಕೆಟ್ಟ ಬೆಳವಣಿಗೆಗೆ ನಾಂದಿಯಾಗಬಹುದು..


ಇದನ್ನೂ ಓದಿ: ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...