Homeಕರ್ನಾಟಕಎಸ್ಸೆಸ್ಸೆಲ್ಸಿ ಪರೀಕ್ಷೆ: ಹೆಚ್ಚಿನ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ಇನ್ನೂ ತಯಾರಾಗಿಲ್ಲ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಹೆಚ್ಚಿನ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ಇನ್ನೂ ತಯಾರಾಗಿಲ್ಲ

- Advertisement -
- Advertisement -

ಲಾಕ್‌ಡೌನ್‌‌ನಿಂದಾಗಿ ಮುಂದೂಲ್ಪಟ್ಟಿದ್ದ 10 ನೇ ತರಗತಿಯ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳು ಮುಂದಾಗುತ್ತಿದೆ. ಆದರೆ ಈ ವರ್ಷ ಕಲಿತ ಶೇಕಡಾ 60 ರಷ್ಟು ವಿಷಯಗಳನ್ನು ವಿದ್ಯಾರ್ಥಿಗಳು ಮರೆತಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಡುತ್ತಾರೆ. ಅದರಲ್ಲೂ ಎಸ್ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳು ಈ ಲಾಕ್‌ಡೌನ್ ಸಮಯದಲ್ಲಿ ಶಿಕ್ಷಣ ಸಂಸ್ಥಗಳು ಅಥವಾ ಸರ್ಕಾರ ನಡೆಸಿದ ಆನ್‌ಲೈನ್‌ ಕ್ಲಾಸುಗಳಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ 10 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಿದ್ದ ದಕ್ಷಿಣದ ಕೆಲ ರಾಜ್ಯಗಳು ಅವುಗಳನ್ನು ಶೀಘ್ರವಾಗಿ ನಡೆಸಲು ಉತ್ಸುಕವಾಗಿವೆ. ಕೇರಳ ಈಗಾಗಲೇ ಮೇ 26 ಮತ್ತು 29 ರ ನಡುವೆ ಉಳಿದ ಮೂರು ಪರೀಕ್ಷೆಗಳನ್ನು ನಡೆಸಿದೆ. ಜೂನ್ 8 ಕ್ಕೆ ನಿಗದಿಯಾಗಿದ್ದ ’ಟಿಎಸ್ ಎಸ್‌ಎಸ್‌ಸಿ’ ಪರೀಕ್ಷೆಗಳನ್ನು ತೆಲಂಗಾಣ ರದ್ದುಗೊಳಿಸಿದ್ದರೆ, ತಮಿಳುನಾಡು ಸಹ ಪರೀಕ್ಷೆ ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡಲು ಮುಂದಾಗಿದೆ. ಆದರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಕ್ರಮವಾಗಿ ಜೂನ್ 25 ಮತ್ತು ಜುಲೈ 10 ಅಂತಿಮ ಪರೀಕ್ಷೆಗಳನ್ನು ನಡೆಸಲಿದೆ.


ಇದನ್ನೂ ಓದಿ: ತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದು: ವಿದ್ಯಾರ್ಥಿಗಳಿಗೆ ಮುಂಬಡ್ತಿ


ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಖಾಸಗಿ ಶಾಲೆಗಳು ಹಾಗೂ ಕೆಲವು ಸರ್ಕಾರಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ತರಗತಿ ಪ್ರಾರಂಭಿಸಿದ್ದಾರೆ. ರಾಜ್ಯ ಸರ್ಕಾರಗಳು ಸ್ಥಳೀಯ ಕೇಬಲ್ ನೆಟ್‌ವರ್ಕ್‌ಗಳ ಮೂಲಕ ತರಗತಿಗಳನ್ನು ನಡೆಸುತ್ತಿವೆ. ಆದರೆ ಈ ಎಲ್ಲದರ ಹೊರತಾಗಿಯೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಜೂನ್ 15 ರಂದು ತಮಿಳುನಾಡಿನಲ್ಲಿ ರಾಜ್ಯದ 9.45 ಲಕ್ಷ ವಿದ್ಯಾರ್ಥಿಗಳು 10 ನೇ ತರಗತಿ ಪರೀಕ್ಷೆಗೆ ಹಾಜರಾಗಲು ಸಿದ್ದರಾಗಿದ್ದರು. ಇದೇ ಸಮಯದಲ್ಲಿ ತಮಿಳುನಾಡಿನ ಪರಿಶಿಷ್ಟ ಪಂಗಡ ಸಮುದಾಯದ 14 ವರ್ಷದ ಬಾಲಕಿ ಹೇಮ ಪ್ರಿಯಾ ಗಣಿತ ಪರಿಕ್ಷೆಯಲ್ಲಿ ಉತ್ತೀರ್ಣ ಗಳಿಸಲು ನೆರವಾಗುವ ಗ್ರಾಫ್ ಅನ್ನು ಹೇಗೆ ಬರೆಯುವುದು ಎಂದು ತಿಳಿದಿಲ್ಲ ಎನ್ನುತ್ತಾರೆ.

ಹೇಮಾ ಪ್ರಿಯಾ ತಮ್ಮ ಪರೀಕ್ಷೆಯನ್ನು ಹೇಗೆ ನಿಭಾಯಿಸುತ್ತಾರೆಂದು ವಿವರಿಸಲು ಪ್ರಾರಂಭಿಸಿದಾಗ, ಅವರ ಧ್ವನಿ ನಡುಗುತ್ತದೆ. ತಿರುವಳ್ಳೂರು ಜಿಲ್ಲೆಯ ಪೊನ್ನೆರಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿರುವ ಇವರು ತನ್ನ ಸ್ನೇಹಿತರು ಹೋಗುವಂತೆ ಖಾಸಗಿ ಕೋಚಿಂಗ್ ಕೇಂದ್ರಗಳಿಗೆ ಹೋಗಲು ಮನಸ್ಸಿದ್ದರೂ, ಪ್ರವೇಶ ಶುಲ್ಕವಾಗಿ 1000 ರೂ. ಹಾಗೂ ಮಾಸಿಕ ಶುಲ್ಕವಾಗಿ 500 ರೂ. ಗಳನ್ನು ಪಾವತಿಸಬೇಕಾದ್ದರಿಂದ ಅವರು ಅಲ್ಲಿಗೆ ಹೋಗಲು ಸಾಧ್ಯವಾಗದೇ, ಖಾಸಗಿ ಕೋಚಿಂಗ್ ಹೋಗುವ ತನ್ನ ಸ್ನೇಹಿತರಿಂದ ತಿಳಿಯಲು ಒಂದು ಗಂಟೆ ಮುಂಚಿತವಾಗಿ ಶಾಲೆಗೆ ಹೋಗುತ್ತಿದ್ದರು ಆದರೆ ಈಗ ಲಾಕ್‌ಡೌನ್ ಆದ್ದರಿಂದ ಅದೂ ಅಸಾಧ್ಯವಾಗಿದೆ.

ಇವರ ತರಗತಿಗೆ ಅರ್ಧ ವರ್ಷದವರೆಗೂ ಗಣಿತ ಶಿಕ್ಷಕರೇ ಇರಲಿಲ್ಲ, ನಂತರ ಶಿಕ್ಷಕರು ಬಂದರೂ ಎಲ್ಲಾ ವಿಷಯಗಳಲ್ಲಿ ಸುಮಾರು 60 ಅಂಕಗಳನ್ನು ಪಡೆಯುತ್ತಿದ್ದ ಹೇಮಾ ಮಧ್ಯಾವಧಿ ಗಣಿತ ಪರೀಕ್ಷೆಯಲ್ಲಿ ವಿಫಲವಾಗಿದ್ದಾರೆ. ಬೋರ್ಡ್ ಪರೀಕ್ಷೆಗೆ ತಯಾರಾಗುವ ಹೊತ್ತಿಗೆ ಲಾಕ್‌ಡೌನ್‌ ವಿಧಿಸಲಾಯಿತು ಆದರೆ ಇಂಟರ್ನೆಟ್ ಇಲ್ಲದ ಅವರ ತಂದೆಯ ಮೊಬೈಲ್ ಫೋನಿನಿಂದ ಆನ್‌ಲೈನ್ ಕ್ಲಾಸುಗಳನ್ನುಸೇರಲು ಅವರಿಗೆ ಸಾಧ್ಯವಾಗಿಲ್ಲ. ಹಾಗೆ ನೋಡಿದರೆ ಆ ಬಟನ್‌ ಫೋನಿನಲ್ಲಿ ರೀಚಾರ್ಜ್‌ಮಾಡಲೂ ಅವರ ತಂದೆಯಲ್ಲಿ ದುಡ್ಡು ಇರಲಿಲ್ಲ. ಈಗ ಪರೀಕ್ಷೆಗಳು ನಡೆಯಲಿವೆ ಎನ್ನುತ್ತಿದ್ದಂತೆ ಏನು ಮಾಡಬೇಕು ಎಂದು ತೋಚದ ಸ್ಥಿತಿಯಲ್ಲಿ ಅವರಿದ್ದಾರೆ.

ತಮಿಳು ನಾಡಿನಿಂದ 450 ಕಿ.ಮೀ. ದೂರದ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಯೆಮಿಗನೂರ್ ಪಟ್ಟಣದ ರಸ್ತೆಬದಿಯ ಗುಡಿಸಲಿನಲ್ಲಿ 15 ವರ್ಷದ ಕಿರಣ್ ವಾಸಿಸುತ್ತಿದ್ದಾರೆ. ಇಂಗ್ಲಿಷ್ ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ಅವರು ಎಸ್‌ಟಿ ಸಮುದಾಯಕ್ಕೆ ಸೇರಿದವರಾಗಿದ್ದು, ಕುಟುಂಬವೂ ಬುಟ್ಟಿ ಹೆಣೆದು ಜೀವನ ಸಾಗಿಸುತ್ತದೆ.

ಹೇಮಾ ಪ್ರಿಯಾ ಅವರಂತೆ ಕಿರಣ್ ಕೂಡ ಸ್ಮಾರ್ಟ್‌ಫೋನ್ ಹೊಂದಿಲ್ಲ. ಇದರಿಂದಾಗಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ನಡೆಸಿದ ವಾಟ್ಸಾಪ್ ಪರೀಕ್ಷೆಗಳಿಂದ ವಂಚಿತವಾಗಿದ್ದಾರೆ. ಆದರೆ ಅವರು ಸ್ನೇಹಿತರ ಮನೆಯ ಟೀವಿಯಲ್ಲಿ ಸರ್ಕಾರ ನಡೆಸುವ ಕೆಲವು ತರಗತಿಗಳನ್ನು ವೀಕ್ಷಿಸುತ್ತಾರೆ, ಆದರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಅದು ಸಾಕಾಗುವುದಿಲ್ಲ ಎಂಬ ಭಯ ಅವರಿಗಿದೆ.

ಲಾಕ್ ಡೌನ್ ಆಗುವವರೆಗೂ, 15 ವರ್ಷದ ಕಿರಣ್ ಸಂಜೆಯ ವೇಳೆ ಖಾಸಗಿ ವಾಟರ್ ಟ್ಯಾಂಕರ್‌ನಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದರಿಂದ ದಿನಕ್ಕೆ ₹ 100 ಪಡೆಯುತ್ತಿದ್ದರು. ಆಗ ಅವರಿಗೆ ಓದಲು ಸಮಯ ಸಾಲುತ್ತಿರಲಿಲ್ಲ. ಆದರೆ ಈಗ ಅವರಿಗೆ ಲಾಕ್‌ಡೌನ್‌ನಿಂದಾಗಿ ಸಾಕಷ್ಟು ಸಮಯವಿದ್ದರೂ ಓದಿಸಲು ಸರಿಯಾದ ಮಾರ್ಗದರ್ಶನ ಇಲ್ಲ.

ಅದೃಷ್ಟವಶಾತ್, ಕಿರಣ್ ಇಂಗ್ಲಿಷ್‌ನಲ್ಲಿ ’ಮನ ಟಿವಿ’ಯಲ್ಲಿ ನಡೆಯುವ ಕ್ಲಾಸುಗಳನ್ನು ನೋಡುತ್ತಾರೆ ಆದರೆ ತೆಲುಗು ಭಾಷಿಕ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಇದು ಸಾಧ್ಯವಾಗುವುದಿಲ್ಲ.

ಯೆಮ್ಮಿಗನೂರ್‌ನಿಂದ ಸುಮಾರು 50 ಕಿ.ಮೀ ದೂರದಲ್ಲಿನ ಕರ್ನಾಟಕದ ಗಡಿಯಲ್ಲಿರುವ ಜಂಪಾಪುರಂ ಗ್ರಾಮದ 1 ನೇ ತರಗತಿಯಿಂದ ತೆಲುಗು ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದ ಎಸ್ಸಿ ಸಮುದಾಯದ 14 ವರ್ಷದ ’ಐಶ್ವರ್ಯ’, ಆನ್‌ಲೈನ್‌ ತರಗತಿಗಳನ್ನು ವಿಶೇಷವಾಗಿ ವಿಜ್ಞಾನ ಮತ್ತು ಸಾಮಾಜಿಕ ಅಧ್ಯಯನ ವಿಷಯಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟಕರವಾಗಿದೆ. ಆದರೆ ಇವರಿಗೆ ತನ್ನ ಸೋದರಸಂಬಂಧಿಯ ಸ್ಮಾರ್ಟ್‌ಫೋನ್‌ನಲ್ಲಿ ವಾಟ್ಸಾಪ್ ಕ್ಲಾಸುಗಳಲ್ಲಿ ಭಾಗವಹಿಸಿದ್ದಾರೆ.

ಪ್ರತಿ ವಿಷಯದಲ್ಲಿ ಸುಮಾರು 50 ಅಂಕಗಳನ್ನು ಗಳಿಸುವ ಐಶ್ವರ್ಯಾ, ಈ ಆನ್‌ಲೈನ್ ಮತ್ತು ಟಿವಿಯ ತರಗತಿಗಳು ಶಾಲೆಯಲ್ಲಿ ತನ್ನ ಶಿಕ್ಷಕರು ಬೋಧಿಸುವಷ್ಟು ಆಗುವುದಿಲ್ಲ ಎನ್ನುತ್ತಾರೆ.

ವಾಟ್ಸಾಪ್ ಪರೀಕ್ಷೆಗಳು ಶಾಲೆಯ ಪರೀಕ್ಷಗಳಿಗಿಂತ ಭಿನ್ನವಾಗಿರುತ್ತದೆ ಎಂದು ಕರ್ನೂಲ್‌ನ ಸರ್ಕಾರಿ ಶಿಕ್ಷಕ ದೇವೇಂದ್ರ ಬಾಬು ಹೇಳುತ್ತಾರೆ. ಕಡಿಮೆ ವಿಧ್ಯಾರ್ಥಿಗಳಿದ್ದರೆ ಶಿಕ್ಷಕರಿಗೆ ಎಲ್ಲಾ ವಿದ್ಯಾರ್ಥಿಗಳನ್ನು ವಾಟ್ಸಾಪ್ ಗುಂಪಿನಲ್ಲಿ ನಿರ್ವಹಿಸಲು ಮತ್ತು ಸಂಘಟಿಸಲು ಸುಲಭವಾಗಿರುತ್ತದೆ. ಆದರೆ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆಗಳ ಶಿಕ್ಷಕರಿಗೆ ಎಲ್ಲಾ ವಿದ್ಯಾರ್ಥಿಗಳನ್ನು ಒಟ್ಟಿಗೆ ಸೇರಿಸುವಲ್ಲಿ ತೊಂದರೆಯಾಗುತ್ತದೆ. ಅಲ್ಲದೆ ಇಂಟರ್ನೆಟ್ ಇಲ್ಲದೆ ಇರುವ ಸಮುದಾಯಗಳ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ದೇವೇಂದ್ರ ಬಾಬು ಹೇಳುತ್ತಾರೆ.

ಬೆಂಗಳೂರಿನ ಕೋರಮಂಗಲದ ಕೊಳೆಗೇರಿಗಳಲ್ಲಿರುವ ವಿದ್ಯಾರ್ಥಿಗಳ ವಿಷಯವೂ ಇದೇ ಆಗಿದೆ. ಆನ್‌ಲೈನ್ ತರಗತಿಗಳು ಏಕರೂಪವಾಗಿಲ್ಲ. ಕೆಲವು ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರು ಆನ್‌ಲೈನ್ ಪಾಠಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ ಅನೇಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಇವುಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಈ ಪ್ರದೇಶದ ಕೊಳೆಗೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆಧಾರಿತ ಸಂಘಟನೆಯಾದ ’ಮಾರ್ಗಾ’ದ ಗಣಿತ ಶಿಕ್ಷಕಿ ಮತ್ತು ಕಾರ್ಯಕ್ರಮ ಸಂಯೋಜಕರಾದ ಮೋನಿಷಾ ಹೇಳುತ್ತಾರೆ.

ಈ ವರ್ಷ ವಿದ್ಯಾರ್ಥಿಗಳು ಕಲಿತದ್ದರಲ್ಲಿ ಶೇಕಡಾ 60 ರಷ್ಟು ಮರೆತಿದ್ದಾರೆ ಎಂದು ಅವರು ಹೇಳುತ್ತಾರೆ. ಈ ವಿದ್ಯಾರ್ಥಿಗಳಿಗೆ ಸಂಜೆಯ ಸಮಯದಲ್ಲಿ ತರಬೇತಿ ನೀಡಲು ಸರ್ಕಾರವು ಮುಂದಾಗುತ್ತಿದ್ದರೂ, ತರಗತಿಗಳನ್ನು ತೆಗೆದುಕೊಳ್ಳುವುದನ್ನು ಮುಂದುವರೆಸುತ್ತಿದ್ದರೂ, ಈ ಪ್ರದೇಶದ ಏಳು ಕೊಳೆಗೇರಿಗಳಲ್ಲಿ ಎರಡನ್ನು ಮಾತ್ರ ಒಳಗೊಳ್ಳುತ್ತದೆ. ಆದ್ದರಿಂದ, ಇತರ ಕೊಳೆಗೇರಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಯಾವುದೇ ತರಬೇತಿ ಸಿಗುವುದಿಲ್ಲ ಎಂದು ಅವರು ಹೇಳುತ್ತಾರೆ.

ಈ ಪರಿಸ್ಥಿತಿಯಲ್ಲಿ ಈ ವಿದ್ಯಾರ್ಥಿಗಳು ಪರೀಕ್ಷಗೆ ಕುಳಿತರೆ ಪದವಿ ಪೂರ್ವ ಕಾಲೇಜಿಗೆ ಅವರು ಪ್ರವೇಶವನ್ನು ಪಡೆದುಕೊಳ್ಳಲು ಸಾಧ್ಯವಿದೆಯೇ?

ಇಷ್ಟೇ ಅಲ್ಲದೆ ಈ ಸಮಯದಲ್ಲಿ ಇರುವ ಮತ್ತೊಂದು ಸಮಸ್ಯೆಯೆಂದರೆ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸುವುದು. ದೂರದ ಹಳ್ಳಿಗಳು ಹಾಗೂ ಗುಡ್ಡಗಾಡು ಪ್ರದೇಶದ ಎಲ್ಲಾ ವಿದ್ಯಾರ್ಥಿಗಳು ಈ ಸಮಸ್ಯೆಯನ್ನು ಎದುರಿಸುತ್ತಾರೆ. ಉದಾಹರಣೆಗೆ ಐಶ್ವರ್ಯಾ ಅವರ ಪರೀಕ್ಷಾ ಕೇಂದ್ರವು ತನ್ನ ಹಳ್ಳಿಯಿಂದ ಸುಮಾರು 8 ಕಿ.ಮೀ ದೂರದಲ್ಲಿದಲ್ಲಿದೆ. ಕೇಂದ್ರಕ್ಕೆ ಬಸ್ಸಿನಲ್ಲಿ ಹೋದರೂ ಕನಿಷ್ಠ 2 ಕಿ.ಮೀ ನಡೆದು ಕೊಂಡೆ ಹೋಗಬೇಕು.

ತಮಿಳುನಾಡಿನ ಗುಡ್ಡಗಾಡು ಪ್ರದೇಶಗಳಲ್ಲಿನ ಅನೇಕ ವಿದ್ಯಾರ್ಥಿಗಳು ಇದೇ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕೆಲವೊಂದು ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ 35 ಕಿ.ಮಿ. ದೂರದಲ್ಲಿದೆ. ಆದರೆ, ರಾಜ್ಯ ಸರ್ಕಾರವು ಎಲ್ಲಾ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯಗಳನ್ನು ಏರ್ಪಡಿಸಿದೆ. ಆದರೆ ಲಕ್ಷಾಂತರ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತದೆಯೇ ಎಂಬುದು ಪ್ರಶ್ನೆಯಾಗಿದೆ.

ಇದಲ್ಲದೆ, ಜೂನ್ 11 ರೊಳಗೆ ತಮಿಳುನಾಡಿನ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನಾಂಗವಾದ ಆದಿ ದ್ರಾವಿಡಾರ್‌ ವಿದ್ಯಾರ್ಥಿಗಳನ್ನು ಮತ್ತೆ ಹಾಸ್ಟೆಲ್‌ಗಳಿಗೆ ಕರೆತರಲು ರಾಜ್ಯ ನಿರ್ಧರಿಸಿದೆ. ಈ ಹಾಸ್ಟೆಲ್‌ಗಳಲ್ಲಿ ಉಳಿದುಕೊಂಡಿದ್ದ ಅನೇಕ ವಿದ್ಯಾರ್ಥಿಗಳು ಲಾಕ್‌ಡೌನ್‌ ಘೋಷಿಸಿದಾಗ ತಮ್ಮೆ ಮನೆಗೆ ತೆರಳುವ ಹೊತ್ತಿಗೆ ಪಠ್ಯಪುಸ್ತಕಗಳು ಸೇರಿದಂತೆ ತಮ್ಮ ವಸ್ತುಗಳನ್ನು ಸಹ ತೆಗೆದುಕೊಂಡು ಹೋಗಿರಲಿಲ್ಲ.

ಇದರಿಂದಾಗಿ ತಜ್ಞೆ ಡಾ. ವಿ.ವಸಂತಿ ಪರೀಕ್ಷೆಗಳ ರದ್ದತಿ ಹಾಗೂ ಎಲ್ಲಾ ವಿದ್ಯಾರ್ಥಿಗಳನ್ನು 11 ನೇ ತರಗತಿಗೆ ಬಡ್ತಿ ನೀಡುವಂತೆ ಕೋರಿದ್ದಾರೆ.

ಆದಾಗ್ಯೂ, ಪ್ರತಿ ವಿದ್ಯಾರ್ಥಿಯ ಜೀವನದಲ್ಲಿ ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್‌ಎಸ್‌ಎಲ್‌ಸಿ) ಮುಖ್ಯವಾಗಿದೆ ಎಂದು ವಸಂತಿ ಹೇಳುತ್ತಾರೆ. ಪರೀಕ್ಷೆಗಳನ್ನು ನಡೆಸಲು ತೆಗೆದುಕೊಳ್ಳುತ್ತಿರುವ ಪ್ರಯತ್ನಗಳಿಗಿಂತ ಮಕ್ಕಳ ಭವಿಷ್ಯವು ಬಹಳ ಮುಖ್ಯ ಎಂದು ಸರ್ಕಾರ ಭಾವಿಸುತ್ತದೆ ಎಂದು ಅವರು ಹೇಳುತ್ತಾರೆ.

ರಾಜ್ಯವು ಅಚಲವಾಗಿದ್ದರೆ, ಎಲ್ಲಾ ತರಗತಿಗಳಿಗೆ ಶಾಲೆಗಳು ಮತ್ತೆ ತೆರೆದ ಒಂದು ತಿಂಗಳ ನಂತರ ಪರೀಕ್ಷೆಗಳನ್ನು ನಡೆಸಬೇಕು ಎಂಬುವುದು ವಸಂತಿ ಅವರ ಅಭಿಪ್ರಾಯ.

ಈ ಒಂದು ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ತಮ್ಮ ಹಳೆಯ ಪಾಠಗಳನ್ನು ಪುನಃ ಮನನ ಹಾಗೂ ತಂತ್ರಜ್ಞಾನಗಳಿಂದ ವಂಚಿತರಾಗಿರುವ ಹೇಮ ಪ್ರಿಯ, ಕಿರಣ್ ಹಾಗೂ ಭಾಷಾ ಅಡೆತಡೆಗಳನ್ನು ಎದುರಿಸುತ್ತಿರುವ ಐಶ್ವರ್ಯಾರಂತಹವರೂ ತಮ್ಮ ಕಲಿಕೆಯನ್ನು ಮುಂದುವರೆಸಲು ಅನುವು ಮಾಡಿಕೊಡುತ್ತದೆ.

ಮೂಲ: ವಿಗ್ನೇಶ್‌ ಕೆ.ಜೆ ದಿ ಫೆಡರಲ್‌


ಓದಿ:  ಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...