Homeಮುಖಪುಟರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯ ಪಶ್ಚಿಮ ಬಂಗಾಳ: ಅಮಿತ್‌ ಶಾ

ರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯ ಪಶ್ಚಿಮ ಬಂಗಾಳ: ಅಮಿತ್‌ ಶಾ

- Advertisement -
- Advertisement -

ಪ್ರಜಾಪ್ರಭುತ್ವವು ತನ್ನ ಬೇರುಗಳನ್ನು ಇಡೀ ದೇಶಾದ್ಯಂತ ಬಲಪಡಿಸಿಕೊಳ್ಳುತ್ತಿದ್ದರೆ, ರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯವಾಗಿ ಪಶ್ಚಿಮ ಬಂಗಾಳ ಉಳಿದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

‘ಪಶ್ಚಿಮ ಬಂಗಾಳ ಜನ ಸಂವಾದ’ ವರ್ಚುವಲ್ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, 2014 ರಿಂದ ರಾಜ್ಯದಲ್ಲಿ ನಡೆದ ರಾಜಕೀಯ ಯುದ್ಧದ ನಡುವೆ ಪ್ರಾಣ ಕಳೆದುಕೊಂಡ ಅನೇಕ ಪಕ್ಷದ ಕಾರ್ಯಕರ್ತರನ್ನು ನೆನೆಸಿಕೊಳ್ಳುತ್ತೇನೆ. “ಸೋನಾರ್ ಬಾಂಗ್ಲಾ (ಸುವರ್ಣ ಬಂಗಾಳ) ಅಭಿವೃದ್ಧಿಗೆ ಅವರು ಕೊಡುಗೆ ನೀಡಿದ್ದರಿಂದ ಅವರ ಕುಟುಂಬಗಳಿಗೆ ನನ್ನ ಗೌರವವನ್ನು ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಳಿ ನಡೆಸಿದ ಅವರು, ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನಕ್ಕೆ ತಾವು ಅವಕಾಶ ನೀಡುತ್ತಿಲ್ಲ, ಇದು ದೇಶಾದ್ಯಂತ ಅನೇಕ ಜನರಿಗೆ ಪ್ರಯೋಜನವನ್ನು ನೀಡಿದೆ. ಬಂಗಾಳದ ಜನರು ಕೇಳುತ್ತಿದ್ದಾರೆ. ಇದನ್ನು ಕಾರ್ಯಗತಗೊಳಿಸಲು ನೀವು ಯಾಕೆ ಬಿಡುತ್ತಿಲ್ಲ?” ಎಂದು ಶಾ ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರೀ ಬೆಲೆ ತೆರಬೇಕಾಗುತ್ತದೆ. ಬಂಗಾಳದ ಜನ ಅವರನ್ನು ರಾಜಕೀಯ ನಿರಾಶ್ರಿತರನ್ನಾಗಿಸಲಿದ್ದಾರೆ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ.

ಮಮತಾ ಅವರೇ ಬಂಗಾಳದ ಮಾಟುವಾ ಮತ್ತು ನಮಾಶುದ್ರ ಸಮುದಾಯದ ಜನರು ಪೌರತ್ವ ಪಡೆಯುವುದು ನಿಮಗೆ ಇಷ್ಟವಿಲ್ಲವೇ? ಮತ್ತೆ ಈ ಕಾಯ್ದೆಯ ವಿರುದ್ಧ ನೀವು ಏಕೆ ಕೋಪಗೊಂಡಿರಿ? ಎಂದು ಪ್ರಶ್ನಿಸಿದ್ದಾರೆ.

“ಭಾರತದಲ್ಲಿ ಓಲೈಕೆ ರಾಜಕಾರಣವನ್ನು ನಿಲ್ಲಿಸುವ ಸಲುವಾಗಿ ಸಿಎಎ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಬಂಗಾಳದ ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು. ನಿರಾಶ್ರಿತರಿಗೆ ದಶಕಗಳಿಂದ ಮಾಡಲಾಗಿರುವ ಅನ್ಯಾಯವನ್ನು ತಪ್ಪುಗಳನ್ನು ಕೊನೆಗೊಳಿಸಬೇಕು. ಆ ನಿಟ್ಟಿನಲ್ಲಿ ಸಿಎಎ ಕಾಯ್ದೆ ಒಂದು ಉತ್ತಮ ಹೆಜ್ಜೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಾಕ್‌ಡೌನ್‌ ಸಂದರ್ಭದಲ್ಲಿ ವಲಸೆ ಕಾರ್ಮಿಕರನ್ನು ಸಾಗಿಸುವ ವಿಚಾರದಲ್ಲೂ ಪಶ್ಚಿಮ ಬಂಗಾಳದ ಸರ್ಕಾರದ ವಿರುದ್ಧ ರಾಜಕೀಯ ದಾಳಿ ನಡೆಸಿರುವ ಅಮಿತ್ ಶಾ, “ವಲಸೆ ಕಾರ್ಮಿಕರನ್ನು ಸಾಗಿಸಲು ಬಂಗಾಳ ಸರ್ಕಾರ ಅತಿ ಕಡಿಮೆ ರೈಲುಗಳನ್ನು ಕೇಳಿತ್ತು. ಕೇವಲ 236 ರೈಲುಗಳಲ್ಲಿ 3 ಲಕ್ಷ ವಲಸಿಗರನ್ನು ಅವರ ಸ್ವಂತ ನೆಲೆಗಳಿಗೆ ತಲುಪಿಸಲಾಗಿದೆ” ಎಂದಿದ್ದಾರೆ.

“ನರೇಂದ್ರ ಮೋದಿಯವರಿಗೆ ಪಶ್ಚಿಮ ಬಂಗಾಳದಲ್ಲಿ ಹೆಚ್ಚುತ್ತಿರುವ ಜನಪ್ರಿಯತೆಯ ಕಾರಣದಿಂದಲೇ ಮಮತಾ ಬ್ಯಾನರ್ಜಿ ಆಯುಷ್ಮಾನ್ ಭಾರತ್ ಮತ್ತು ಇತರ ಕೇಂದ್ರ ಸರಕಾರದ ಯೋಜನೆಗಳನ್ನು ಬಂಗಾಳದಲ್ಲಿ ಸ್ಥಗಿತಗೊಳಿಸುತ್ತಿದ್ದಾರೆ” ಎಂದು ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಂಗಾಳದ ಜನರಿಗೆ ಕೇಂದ್ರ ಸರ್ಕಾರದ ಆರೋಗ್ಯದ ಪ್ರಯೋಜನಗಳನ್ನು ತಲುಪಿಸಲು ಮಮತಾ ಬ್ಯಾನರ್ಜಿ ಏಕೆ ಅವಕಾಶ ನೀಡುತ್ತಿಲ್ಲ? ನಿಮ್ಮ ರಾಜಕೀಯಕ್ಕೆ ಜನರ ಯೋಗಕ್ಷೇಮವನ್ನು ಏಕೆ ಪಣವಿಡುತ್ತಿದ್ದೀರಿ? ಕೇಜ್ರಿವಾಲ್ ಸೇರಿದಂತೆ ಎಲ್ಲಾ ರಾಜ್ಯ ನಾಯಕರು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ. ಆದರೆ, ನಿಮ್ಮ ಸಮಸ್ಯೆ ಏನು? ಎಂದು ಪ್ರಶ್ನೆ ಮಾಡಿರುವ ಅಮಿತ್ ಶಾ. ಬಂಗಾಳದಲ್ಲಿ ಬಿಜೆಪಿ ಗೆದ್ದು ಸ್ವತಂತ್ಯ್ರ ಸರ್ಕಾರ ರಚನೆ ಮಾಡಿದ ನಂತರ ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಾಗುವುದು” ಎಂದು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...