Homeಕರ್ನಾಟಕರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸದಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸದಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದರೂ, ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಬೆಳಗಾವಿಯ ರಾಜಶ್ರೀ ನಾಗರಾಜ ಎಂಬವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜಶ್ರೀ ನಾಗರಾಜ ಅವರು ಬೆಳಗಾವಿ ನಿವಾಸಿಯಾಗಿದ್ದು ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ಕೊರೊನಾ ಹೆಚ್ಚುತ್ತಿರುವ ಈ ಸಮಯದಲ್ಲಿ ರಾಜ್ಯ ಸರ್ಕಾರ ಪರೀಕ್ಷೆ ನಡೆಸಲು ನಿರ್ಧರಿಸಿ ಅಪ್ರಾಪ್ತ ಮಕ್ಕಳು, ಪೋಷಕರು ಹಾಗೂ ಶಿಕ್ಷಣಾಧಿಕಾರಿಗಳ ಜೀವವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟಿಗೆ ವಿಶೇಷ ಅರ್ಜಿಯನ್ನು ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಜೂನ್ 25 ರಿಂದ ಜುಲೈ  4 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಘೋಷಿಸಲಾಗಿದೆ. ಸುಮಾರು 8.48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರೊಂದಿಗೆ ಇವರ ಪೋಷಕರು ಕೂಡ ಪ್ರಯಾಣ ಮಾಡುವ ಸಾಧ್ಯತೆಯಿದೆ. ರಾಜ್ಯಾದ್ಯಂತ 3 ಸಾವಿರಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪ್ರತಿ ಕೇಂದ್ರದಲ್ಲೂ 500 ಕ್ಕೂ ವಿದ್ಯಾರ್ಥಿಗಳಿರಲಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಮಾರ್ಗಸೂಚಿಗಳನ್ನು ಪಾಲಿಸಿ, ಎಚ್ಚರಿಕೆ ವಹಿಸಿದರೂ ಅಪಾಯದ ಭೀತಿ ಇರುತ್ತದೆ. ಇದು ಅಪ್ರಾಪ್ತರ ಬದುಕುವ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಅವರು ಆರೋಪಿಸಿದ್ದಾರೆ.


ಓದಿ:  ಎಸ್ಸೆಸ್ಸೆಲ್ಸಿ ಪರೀಕ್ಷೆ: ಹೆಚ್ಚಿನ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ಇನ್ನೂ ತಯಾರಾಗಿಲ್ಲ


ಈ ಅಂಶಗಳನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಪರಿಗಣಿಸಲು ನಿರಾಕರಿಸಿದೆ, ಅದ್ದರಿಂದ ಪರೀಕ್ಷಾ ವೇಳಾಪಟ್ಟಿಗೆ ತಡೆ ನೀಡಲು ನಿರಾಕರಿಸಿ ಹೈಕೋರ್ಟ್ ಮೇ 27ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಿ, ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜೂ. 25ಕ್ಕೆ ನಿಗದಿಯಾಗಿರುವ ಪರೀಕ್ಷೆಗಳನ್ನು ನಡೆಸದಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು.ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಮತ್ತು ಪೂರ್ವಭಾವಿ ಪರೀಕ್ಷಾ ಫಲಿತಾಂಶವನ್ನು ಪರಿಗಣಿಸಿ ಅಂತಿಮ ಫಲಿತಾಂಶ ನೀಡುವಂತೆ ನಿರ್ದೇಶನ ನೀಡಿ ಎಂದು ಅರ್ಜಿದಾರರು ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದಾರೆ.

ಇಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ರದ್ದುಗೊಳಿಸುವ ಪ್ರಶ್ನೆಯೇ ಇಲ್ಲ. ಕೇಂದ್ರದ ಗೃಹ ಇಲಾಖೆ ಮತ್ತು ರಾಜ್ಯ ಹೈಕೋರ್ಟ್ ಕೂಡಾ ಪರೀಕ್ಷೆ ನಡೆಸಲು ಹಸಿರು ನಿಶಾನೆ ನೀಡಿದೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನಿರಾಕರಿಸಿರುವುದರಿಂದ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಸರ್ಕಾರ SSLC ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವ ತೀರ್ಮಾನ ಕೈಗೊಂಡಿದ್ದಾರೆ.

ನರೆಯ ತೆಲಂಗಾಣ ರಾಜ್ಯ ಕೂಡಾ ಇದೇ ತೀರ್ಮಾನ ತೆಗೆದುಕೊಂಡಿದೆ.


ಓದಿ: ತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದು: ವಿದ್ಯಾರ್ಥಿಗಳಿಗೆ ಮುಂಬಡ್ತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...