Homeಮುಖಪುಟಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

ಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

- Advertisement -
- Advertisement -

ಭಾರತದಲ್ಲಿ ಬಿಜೆಪಿಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಚೀನಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡುವಂತೆ ಕರೆಕೊಡುತ್ತಲೇ ಇದ್ದಾರೆ. ಭಾರತ-ಚೀನಾ ಗಡಿಯಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದೆ. ಆ ಕಾರಣಕ್ಕಾಗಿ ಈಗ ಮತ್ತೆ ಟಿಕ್‌ಟಾಕ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಚೀನೀ ಆಪ್ಗಳನ್ನು ಬಹಿಷ್ಕರಿಸುವಂತೆ ಅಭಿಯಾನವನ್ನೆ ನಡೆಸಲಾಗಿದೆ.

ಆದರೆ ಈಗ ಸ್ವತಃ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವೇ @mygovindia ಯೂಸರ್‌‌ ಐಡಿ ಇರುವ ಅಧಿಕೃತ ಟಿಕ್‌ಟಾಕ್‌ ಖಾತೆಯನ್ನು ತೆರೆದಿದ್ದು, ಬಹಿಷ್ಕಾರಕ್ಕೆ ಕರೆ ಕೊಟ್ಟಿದ್ದ ಬಿಜಿಪಿ ಅಭಿಮಾನಿಗಳು ಆಘಾತಕ್ಕಳಗಾಗಿದ್ದಾರೆ.

ಹೆಚ್ಚು ಸಾಮಾಜಿಕ ಜಾಲತಾಣ ಬಳಕೆದಾರರು ಟಿಕ್‌ಟಾಕ್‌ ಬಳಸುತ್ತಿರುವುದರಿಂದಾಗಿ, ಅದರ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ವೈರಸ್‌ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಟಿಕ್‌ಟಾಕ್‌ ಖಾತೆ ರಚಿಸಿದೆ ಎಂದು ಹೇಳಲಾಗಿದೆ.


ಓದಿ: ಕೇರಳ ಗರ್ಭಿಣಿ ಆನೆಯ ಸಾವಿನ ಹೆಸರಲ್ಲಿ ಬಲಪಂಥೀಯರು ಹರಡಿದ್ದ ಎರಡು ದೊಡ್ಡ ಸುಳ್ಳುಗಳು


ಟಿಕ್‌ಟಾಕ್‌ನ ಪ್ರೊಫೈಲ್‌ “Citizen engagement platform of Government of India” (ನಾಗರಿಕರನ್ನು ಸಂಪರ್ಕಿಸುವ ಭಾರತ ಸರ್ಕಾರ ಸಾಮಾಜಿಕ ವೇದಿಕೆ) ಎಂದು ಅದು ಹೇಳಿಕೊಂಡಿದೆ.

ಟಿಕ್‌ಟಾಕ್‌ನಲ್ಲಿನ @mygovindia ಖಾತೆಯು ಸುಮಾರು 909.1 ಸಾವಿರ ಅನುಯಾಯಿಗಳನ್ನು ಹೊಂದಿದ್ದು, 6.5 ಮಿಲಿಯನ್ ಲೈಕ್‌ಗಳನ್ನು ಪಡೆದಿದೆ. ಅಲ್ಲದೆ ಅದು ಬೇರೆ ಯಾವುದೇ ಇತರ ಖಾತೆಗಳನ್ನು ಫಾಲೋ ಮಾಡುತ್ತಿಲ್ಲ. ಇಲ್ಲಿಯವರೆಗೂ ಆ ಖಾತೆಯಲ್ಲಿ ಯೋಗ, ಕೊರೊನಾ ಸೋಂಕು ಕುರಿತ ಜಾಗೃತಿ ಹಾಗೂ ಸರ್ಕಾರದ ಸಾಧನೆಗಳನ್ನು ಒಳಗೊಂಡ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

@mygovindia ಟಿಕ್‌ಟಾಕ್‌ ಖಾತೆಯನ್ನು ಪರಿಶೀಲಿಸಿ, ಬಳಕೆದಾರರ ಹೆಸರಿನೊಂದಿಗೆ ನೀಲಿ ಟಿಕ್‌ ಅನ್ನು ಟಿಕ್‌ಟಾಕ್‌ ನೀಡಿದೆ.

ಸರ್ಕಾರವು ಭಾರತೀಯರಿಗೆ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಪ್ರಾರಂಭಿಸಿ ಎಂದು ‘ಆತ್ಮಾ ನಿರ್ಭರ್’ ಆಗಲು ಕರೆಕೊಟ್ಟಿರುವ ಸಂದರ್ಭದಲ್ಲಿ ಈ ಸುದ್ದಿ ವಿಶೇಷವಾಗಿ ಜನರನ್ನು ಆಘಾತಕ್ಕೀಡು ಮಾಡಿದೆ.

ಅಲ್ಲದೆ, ಚೀನಾದ ಟಿಕ್‌ಟಾಕ್‌ ಬದಲಾಗಿ, ಭಾರತದ ಮಿತ್ರೋನ್‌ ಆಪ್‌ ಬಳಸುವಂತೆ ಕರೆಕೊಡಲಾಗಿತ್ತು. ಮಿತ್ರೋನ್‌ ಅಪ್ಲಿಕೇಷನ್‌ ಕೂಡ ಹೆಚ್ಚು ಡೌನ್‌ಲೋಡ್‌ ಆಗಿತ್ತು. ಆದರೆ, ಮಿತ್ರೋನ್‌ ಅಪ್ಲಿಕೇಷನ್ ಅನ್ನು ಪಾಕಿಸ್ಥಾನದ ಟಿಕ್‌ಟಿಕ್‌ ಆಪ್‌ನ ರೂಪಾಂತರವಾಗಿದ್ದು, ಅದೂ ಕೂಡ ಸ್ವದೇಶಿ ಅಲ್ಲ ಎಂದು ಫ್ಯಾಕ್‌ಚೆಕ್‌ ಹಾಗೂ ವಿವಿಧ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಅನೇಕ ಬಳಕೆದಾರರು ಸರ್ಕಾರದ ಬೂಟಾಟಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಟಿಕ್‌ಟಾಕ್ ಖಾತೆಯನ್ನು ಅಳಿಸಲು ಟ್ವಿಟರ್‌ನಲ್ಲಿ ಒತ್ತಾಯಿಸಿದ್ದಾರೆ. ಜೊತೆಗೆ ಟ್ವಿಟ್ಟರಿನಲ್ಲಿ ಹಲವಾರು ನೆಟ್ಟಿಗರು ಕೇಂದ್ರ ಸರ್ಕಾರವನ್ನು ವ್ಯಂಗ್ಯವಾಡಿದ್ದಾರೆ.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....