Homeಮುಖಪುಟಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

ಸ್ವದೇಶಿ ಬಳಸುವಂತೆ ಘೋಷಿಸಿ ತಾನೇ ಟಿಕ್‌ಟಾಕ್‌‌ ಖಾತೆ ತೆರೆದ ಮೋದಿ ಸರ್ಕಾರ

- Advertisement -
- Advertisement -

ಭಾರತದಲ್ಲಿ ಬಿಜೆಪಿಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಚೀನಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡುವಂತೆ ಕರೆಕೊಡುತ್ತಲೇ ಇದ್ದಾರೆ. ಭಾರತ-ಚೀನಾ ಗಡಿಯಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದೆ. ಆ ಕಾರಣಕ್ಕಾಗಿ ಈಗ ಮತ್ತೆ ಟಿಕ್‌ಟಾಕ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಚೀನೀ ಆಪ್ಗಳನ್ನು ಬಹಿಷ್ಕರಿಸುವಂತೆ ಅಭಿಯಾನವನ್ನೆ ನಡೆಸಲಾಗಿದೆ.

ಆದರೆ ಈಗ ಸ್ವತಃ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವೇ @mygovindia ಯೂಸರ್‌‌ ಐಡಿ ಇರುವ ಅಧಿಕೃತ ಟಿಕ್‌ಟಾಕ್‌ ಖಾತೆಯನ್ನು ತೆರೆದಿದ್ದು, ಬಹಿಷ್ಕಾರಕ್ಕೆ ಕರೆ ಕೊಟ್ಟಿದ್ದ ಬಿಜಿಪಿ ಅಭಿಮಾನಿಗಳು ಆಘಾತಕ್ಕಳಗಾಗಿದ್ದಾರೆ.

ಹೆಚ್ಚು ಸಾಮಾಜಿಕ ಜಾಲತಾಣ ಬಳಕೆದಾರರು ಟಿಕ್‌ಟಾಕ್‌ ಬಳಸುತ್ತಿರುವುದರಿಂದಾಗಿ, ಅದರ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ವೈರಸ್‌ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಟಿಕ್‌ಟಾಕ್‌ ಖಾತೆ ರಚಿಸಿದೆ ಎಂದು ಹೇಳಲಾಗಿದೆ.


ಓದಿ: ಕೇರಳ ಗರ್ಭಿಣಿ ಆನೆಯ ಸಾವಿನ ಹೆಸರಲ್ಲಿ ಬಲಪಂಥೀಯರು ಹರಡಿದ್ದ ಎರಡು ದೊಡ್ಡ ಸುಳ್ಳುಗಳು


ಟಿಕ್‌ಟಾಕ್‌ನ ಪ್ರೊಫೈಲ್‌ “Citizen engagement platform of Government of India” (ನಾಗರಿಕರನ್ನು ಸಂಪರ್ಕಿಸುವ ಭಾರತ ಸರ್ಕಾರ ಸಾಮಾಜಿಕ ವೇದಿಕೆ) ಎಂದು ಅದು ಹೇಳಿಕೊಂಡಿದೆ.

ಟಿಕ್‌ಟಾಕ್‌ನಲ್ಲಿನ @mygovindia ಖಾತೆಯು ಸುಮಾರು 909.1 ಸಾವಿರ ಅನುಯಾಯಿಗಳನ್ನು ಹೊಂದಿದ್ದು, 6.5 ಮಿಲಿಯನ್ ಲೈಕ್‌ಗಳನ್ನು ಪಡೆದಿದೆ. ಅಲ್ಲದೆ ಅದು ಬೇರೆ ಯಾವುದೇ ಇತರ ಖಾತೆಗಳನ್ನು ಫಾಲೋ ಮಾಡುತ್ತಿಲ್ಲ. ಇಲ್ಲಿಯವರೆಗೂ ಆ ಖಾತೆಯಲ್ಲಿ ಯೋಗ, ಕೊರೊನಾ ಸೋಂಕು ಕುರಿತ ಜಾಗೃತಿ ಹಾಗೂ ಸರ್ಕಾರದ ಸಾಧನೆಗಳನ್ನು ಒಳಗೊಂಡ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

@mygovindia ಟಿಕ್‌ಟಾಕ್‌ ಖಾತೆಯನ್ನು ಪರಿಶೀಲಿಸಿ, ಬಳಕೆದಾರರ ಹೆಸರಿನೊಂದಿಗೆ ನೀಲಿ ಟಿಕ್‌ ಅನ್ನು ಟಿಕ್‌ಟಾಕ್‌ ನೀಡಿದೆ.

ಸರ್ಕಾರವು ಭಾರತೀಯರಿಗೆ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಪ್ರಾರಂಭಿಸಿ ಎಂದು ‘ಆತ್ಮಾ ನಿರ್ಭರ್’ ಆಗಲು ಕರೆಕೊಟ್ಟಿರುವ ಸಂದರ್ಭದಲ್ಲಿ ಈ ಸುದ್ದಿ ವಿಶೇಷವಾಗಿ ಜನರನ್ನು ಆಘಾತಕ್ಕೀಡು ಮಾಡಿದೆ.

ಅಲ್ಲದೆ, ಚೀನಾದ ಟಿಕ್‌ಟಾಕ್‌ ಬದಲಾಗಿ, ಭಾರತದ ಮಿತ್ರೋನ್‌ ಆಪ್‌ ಬಳಸುವಂತೆ ಕರೆಕೊಡಲಾಗಿತ್ತು. ಮಿತ್ರೋನ್‌ ಅಪ್ಲಿಕೇಷನ್‌ ಕೂಡ ಹೆಚ್ಚು ಡೌನ್‌ಲೋಡ್‌ ಆಗಿತ್ತು. ಆದರೆ, ಮಿತ್ರೋನ್‌ ಅಪ್ಲಿಕೇಷನ್ ಅನ್ನು ಪಾಕಿಸ್ಥಾನದ ಟಿಕ್‌ಟಿಕ್‌ ಆಪ್‌ನ ರೂಪಾಂತರವಾಗಿದ್ದು, ಅದೂ ಕೂಡ ಸ್ವದೇಶಿ ಅಲ್ಲ ಎಂದು ಫ್ಯಾಕ್‌ಚೆಕ್‌ ಹಾಗೂ ವಿವಿಧ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಅನೇಕ ಬಳಕೆದಾರರು ಸರ್ಕಾರದ ಬೂಟಾಟಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಟಿಕ್‌ಟಾಕ್ ಖಾತೆಯನ್ನು ಅಳಿಸಲು ಟ್ವಿಟರ್‌ನಲ್ಲಿ ಒತ್ತಾಯಿಸಿದ್ದಾರೆ. ಜೊತೆಗೆ ಟ್ವಿಟ್ಟರಿನಲ್ಲಿ ಹಲವಾರು ನೆಟ್ಟಿಗರು ಕೇಂದ್ರ ಸರ್ಕಾರವನ್ನು ವ್ಯಂಗ್ಯವಾಡಿದ್ದಾರೆ.


ಓದಿ: ಮೋದಿ ಆತ್ಮನಿರ್ಭರತೆ V/S ಸ್ವದೇಶಿ, ಸ್ವಾವಲಂಬನೆ, ಸ್ವಾಭಿಮಾನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...