- Advertisement -
- Advertisement -
ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಜೂನ್ 14 ರಂದು ಕರ್ನಾಟಕ ಕಾಂಗ್ರೆಸಿನ ಅಧ್ಯಕ್ಷರಾಗಿ ಪದಗ್ರಹಣ ಮಾಡುವ ಕಾರ್ಯಕ್ರಮಕ್ಕೆ ಕೋರಿದ್ದ ಅನುಮತಿಯನ್ನು ರಾಜ್ಯ ಸರಕಾರ ಇಂದು ನಿರಾಕರಿಸಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಭಾರಿ ಸಂಖ್ಯೆಯಲ್ಲಿ ಸಭೆ ಸೇರುವುದು ಹಾಗೂ ಅಭಿನಂಧನಾ ಸಭಗಳನ್ನು ಮಾಡುವುದು ನಿಷೇಧಿಸಿರುವುದರಿಂದ ಕಾಂಗ್ರೆಸ್ ಪದಗ್ರಹಣದ ಕಾರ್ಯಕ್ರಮ ನಡೆಸಲು ಅನುತಿಯಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ.
ಜೂನ್ 14 ರಂದು 150 ಜನರನ್ನು ಸೇರಿಸಿ ಪದಗ್ರಹಣ ಕಾರ್ಯಕ್ರಮ ನಡೆಸಲು ಕೋರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಭಾನುವಾರ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅಲ್ಲದೆ, ಆನ್ಲೈನ್ ಮೂಲಕ ಪ್ರತಿಜ್ಞಾ ಕಾರ್ಯಕ್ರಮವನ್ನು ಪ್ರಸಾರ ಮಾಡುವುದರಿಂದ ಯಾರು ಕೂಡ ಈ ಕಾರ್ಯಕ್ರಮಕ್ಕೆ ಬೇರೆ ಜಿಲ್ಲೆಗಳಿಂದ ಬರುವುದು ಬೇಡ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಅವರು ಮನವಿ ಮಾಡಿದ್ದರು.
ಓದಿ: ರೈತರಿಂದ ಬಿಪಿಎಲ್ ಕಾರ್ಡ್ಗಳನ್ನು ವಾಪಾಸು ಪಡೆಯಲು ಬಿಡುವುದಿಲ್ಲ: ಡಿಕೆಶಿ