Homeನಿಜವೋ ಸುಳ್ಳೋಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

- Advertisement -
- Advertisement -

ಪ್ರೆಸ್ ಇನ್ಫರ್ಮೇಶನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್‌ಚೆಕ್ ವಿಂಗ್ ವಲಸೆ ಕಾರ್ಮಿಕರ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ಮಾಧ್ಯಮ ವರದಿಗಳನ್ನು ತಪ್ಪು ಎಂದು ಘೋಷಿಸಿದೆ. ಆದರೆ ವಾಸ್ತವ ಬೇರೆಯೇ ಇದೆ. ಅವುಗಳೆಂದರೆ

1 ತಾಯಿಯ ಸಾವು…

ಮಗುವೊಂದು ಸತ್ತ ತಾಯಿಯನ್ನು ಎಬ್ಬಿಸಲು ಪ್ರಯತ್ನಿಸುತ್ತಿದ್ದ ಹೃದಯ ವಿದ್ರಾವಕ ಘಟನೆ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದ್ದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗಿತ್ತು. ಆ ತಾಯಿ 23 ವರ್ಷದ ಅರ್ವಿನಾ ಕಾಥೂನ್ ಎಂಬುವವರು ಹಸಿವು, ಬಾಯಾರಿಕೆ ಮತ್ತು ಬಿಸಿಲಿನ ಝಳ ತಾಳಲಾರದೆ ಸಾವನಪ್ಪಿದ್ದಾರೆ. ಆಕೆ ರೈಲಿನಲ್ಲಿ ಅಹಮದ್‌ಬಾದ್‌ನಿಂದ ಹೊರಟಾಗಿನಿಂದಲೂ ಆಹಾರ ನೀರು ಸಿಕ್ಕಿರಲಿಲ್ಲ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಪಿಐಬಿ ಮಾಧ್ಯಮಗಳ ವರದಿ ತಪ್ಪು ಮತ್ತು ಕಲ್ಪನೆಯಿಂದ ಕೂಡಿವೆ. ಅರ್ವಿನಾ ಮೊದಲೇ ಹಲವು ರೋಗಗಳಿಂದ ಬಳಲುತ್ತಿದ್ದಳು ಹಾಗಾಗಿ ಸಾವನಪ್ಪಿದ್ದಾಳೆ ಎಂದು ಷರಾ ಬರೆದಿದೆ.

ಫ್ಯಾಕ್ಟ್‌ಚೆಕ್:

ಅರ್ವಿನಾ ಜೊತೆಗೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆಕೆಯ ತಂಗಿ ಕೊಹಿನೂರ್ ಮತ್ತು ಮೊಹಮ್ಮದ್ ವಾಜಿರ್ ಇಬ್ಬರೂ ಸಹ ಆಕೆಗೆ ಯಾವುದೇ ರೋಗವಿರಲಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ರೈಲು ಹತ್ತುವ ಮುನ್ನ ಡಾಕ್ಟರ್ ಬಳಿ ತಪಾಸಣೆ ನಡೆಸಿದ್ದು, ಅದರಲ್ಲಿ ಅರ್ವಿನಾ ಚೆನ್ನಾಗಿದ್ದಾಳೆ ಎಂಬ ವರದಿ ಬಂದಿದೆ ಎಂದು ಅವರು ಹೇಳಿದ್ದಾರೆ.

ಆಕೆಯ ತಂದೆ ತಾಯಿ ಇಬ್ಬರೂ ಸಹ ಆಕೆ ಚೆನ್ನಾಗಿದ್ದಳು, ಲಾಕ್‌ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರಿಂದ ಊರಿಗೆ ಬರಲು ಬಯಸಿದ್ದಳು ಎಂದು ಹೇಳಿದ್ದಾರೆ.

ಇನ್ನು ಮುಖ್ಯವಾಗಿ ಪಿಐಬಿ ಆಕೆ ಸಾವನಪ್ಪಲು ಯಾವ ರೋಗದಿಂದ ಬಳಲುತ್ತಿದ್ದಳು ಎಂಬದನ್ನು ಸ್ಪಷ್ಟವಾಗಿ ನಮೂದಿಸಿಲ್ಲ. ಅಲ್ಲದೇ ಆಕೆ ರೋಗದಿಂದ ಬಳಲುತ್ತಿದ್ದಳು ಎಂಬುದಕ್ಕೆ ಯಾವುದೇ ವೈದ್ಯಕೀಯ ದಾಖಲೆಗಳು ಸಹ ಇಲ್ಲ. ಇನ್ನು ಸರ್ಕಾರ ಆಕೆಯ ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಿಲ್ಲ. ಇಷ್ಟೆಲ್ಲ ತೊಡಕುಗಳಿದ್ದರೂ ಪಿಐಬಿ ಆಕೆ ಮುಂಚೆಯೇ ರೋಗದಿಂದ ಬಳಲುತ್ತಿದ್ದಳು ಎಂದು ಹೇಗೆ ಹೇಳಿತು?

ಪಿಐಬಿ ಒಂದನ್ನು ಮಾತ್ರ ಹೇಳುತ್ತಿದೆ. ಅದೆಂದರೆ ಆಕೆ ಮೊದಲೇ ರೋಗದಿಂದ ಬಳಲುತ್ತಿದ್ದಳು ಎಂದು ಆಕೆಯ ಸಂಬಂಧಿ ಮೊಹಮ್ಮದ್ ವಾಜಿರ್ ಹೇಳಿಕೆಯೊಂದಕ್ಕೆ ಹೆಬ್ಬೆಟ್ಟಿನ ಗುರುತು ಒತ್ತಿ ಸಹಿ ಮಾಡಿದ್ದಾರೆ ಎಂದು ವಾದಿಸಿದೆ. ಆದರೆ ಈ ಬಗ್ಗೆ ಮೊಹಮ್ಮದ್ “ನನಗೆ ಓದಲು ಮತ್ತು ಬರೆಯಲು ಬರುವುದಿಲ್ಲ. ಆ ಹೇಳಿಕೆಯನ್ನು ನಾನು ಬರೆದಿಲ್ಲ ಮತ್ತು ನನಗೆ ಅದರಲ್ಲಿ ಏನಿದೆ ಎಂದು ಯಾರೂ ಓದಿ ಹೇಳಿಲ್ಲ, ಸಹಿ ಮಾಡಿ ಎಂದಾಗ ನಾನು ಹೆಬ್ಬೆಟ್ಟು ಒತ್ತಿದೆ” ಎನ್ನುತ್ತಾರೆ.

2 ನಾಲ್ಕು ವರ್ಷದ ಮಗುವಿನ ಸಾವು

ಮೇ 28ರಂದು ಪತ್ರಕರ್ತೆ ರಾಣ ಅಯ್ಯೂಬ್‌ರವರು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದ ಮುಜಾಫರ್‌ಪುರದ ನಾಲ್ಕು ವರ್ಷದ ಮಗುವಿನ ಸಾವಿನ ಸುದ್ದಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ರೈಲ್ವೇ ಸಚಿವಾಲಯದ ವಕ್ತಾರರ ಹೇಳಿಕೆಯನ್ನು ಪಿಐಬಿ ರೀಟ್ವೀಟ್ ಮಾಡಿದೆ. ಅದರಲ್ಲಿ “ಆ ಮಗು ಮೊದಲೇ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದು ದೆಹಲಿಯಿಂದ ಹಿಂದಿರುವಾಗ ರೈಲಿನಲ್ಲಿ ಮೃತಪಟ್ಟಿದೆ. ಹಾಗಾಗಿ ಪರಿಶೀಲಿಸದ ಸುದ್ದಿಗಳನ್ನು ಪ್ರಕಟಿಸಬೇಡಿ” ಎಂದು ತಾಕೀತು ಮಾಡಿದೆ.

ಫ್ಯಾಕ್ಟ್‌ಚೆಕ್

ಈ ಕುರಿತು ಆಲ್ಟ್‌ನ್ಯೂಸ್ ಫ್ಯಾಕ್ಟ್‌ಚೆಕ್ ನಡೆಸಿದ್ದು ಆ ಮಗು ಇರ್ಷದ್ ನ ತಂದೆ ಮೊಹ್ಮಮ್ಮದ್ ಪಿಂಟುರವರನ್ನು ಮಾತನಾಡಿಸಿದೆ. ಅವರು “ಇರ್ಷದ್‌ಗೆ ಯಾವುದೇ ಸಮಸ್ಯೆಯಿರಲಿಲ್ಲ ಮತ್ತು ಯಾವುದೇ ಚಿಕಿತ್ಸೆ ಸಹ ಕೊಡಿಸಿಲ್ಲ. ನಾವು ಮೇ 23ರಂದು ಮುಂಬೈನಿಂದ ಪಾಟ್ನಾಗೆ ಪ್ರಯಾಣಿಸುತ್ತಿದ್ದೆವು. ದೆಹಲಿ ಸರ್ಕಾರ ನಮಗೆ ಊಟ ನೀರು ನೀಡಿತ್ತು. ರೈಲಿಗೆ ದರ ಸಹ ವಿಧಿಸಿರಲಿಲ್ಲ. ಅಂದು ರಾತ್ರಿ ಲಕ್ನೋ ಸ್ಟೇಷನ್‌ನಲ್ಲಿ ನಮಗೆ ಚಿಕ್ಕ ಊಟದ ಪ್ಯಾಕೆಟ್ ಮತ್ತು ನೀರು ಕೊಟ್ಟರು. ಅಲ್ಲಿಂದ ಮುಂದಕ್ಕೆ ನಾಲ್ಕು ದಿನ ನಮಗೆ ಏನೇನು ಸಿಗಲಿಲ್ಲ. ಟ್ರೈನ್‌ ನಿಲ್ಲಿಸಿದ ಸ್ಥಳಗಳಲ್ಲಿ ತಿನ್ನಲು ಏನೂ ಸಿಗಲಿಲ್ಲ. ನಮ್ಮ ಕುಟುಂಬದ ಹದಿನಾರು ಜನ ಒಟ್ಟಿಗೆ ಹಸಿದುಕೊಂಡೇ ಪ್ರಯಾಣಿಸುತ್ತಿದ್ದೆವು. ಮಕ್ಕಳು ಬಿಸಿಲು ಬಾಯಾರಿಕೆಯಿಂದ ಬಳಲುತ್ತಿದ್ದರು. ನಾವು ಪಾಟ್ನ ತಲುಪಿ ಅಲ್ಲಿಂದ ದಾನಾಪುರಕ್ಕೆ ಬಂದು ರಾತ್ರಿ ಹತ್ತರ ವೇಳೆಗೆ ಮುಜಾಫರ್‌ಪುರಕ್ಕೆ ಬಂದಿಳಿದೆವು. ರಾತ್ರಿಯಿಂದ ಬೆಳಿಗ್ಗೆವರೆಗೆ ಕಾಯ್ದರೂ ಯಾವುದೇ ಸಾರಿಗೆ ವ್ಯವಸ್ಥೆ ಸಿಗಲಿಲ್ಲ. ಈ ನಡುವೆ ನಮ್ಮ ಮಗು ಇರ್ಷದ ಮೃತಪಟ್ಟ’ ಎನ್ನುತ್ತಾರೆ.

ಇರ್ಷದ್ ಆರೋಗ್ಯವಾಗಿಯೇ ಇದ್ದ. ರೈಲು ಹತ್ತುವ ಮುನ್ನ ನಡೆಸಿದ ಮೆಡಿಕಲ್ ಚೆಕಪ್ ನಡೆಸಲಾಗಿತ್ತು. ಅಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಸಮಸ್ಯೆಯಿದ್ದರೆ ರೈಲು ಹತ್ತಲು ಸಹ ಬಿಡುವುದಿಲ್ಲ ಅಲ್ಲವೆ ಎಂದು ಅವರು ಪ್ರಶ್ನಿಸುತ್ತಾರೆ..

3 ಇಬ್ಬರ ಸಾವು

ಮೇ 27ರಂದು ರೈಲ್ವೇ ಸಚಿವಾಲಯದ ವಕ್ತಾರರ ಟ್ವೀಟ್ ಅನ್ನು ಪಿಐಬಿ ರೀಟ್ವೀಟ್ ಮಾಡಿದೆ. ಅದರಲ್ಲಿ ಮುಂಬೈನಿಂದ ವಾರಣಾಸಿಗೆ ತೆರಳುತ್ತಿದ್ದ ರೈಲಿನಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು ಅವರಿಗೆ ಪ್ಯಾರಲೈಸ್, ಕಿಡ್ನಿ ವೈಫಲ್ಯ ಮುಂತಾದ ರೋಗಗಳಿದ್ದವು ಎಂದಿದೆ.

ಫ್ಯಾಕ್ಟ್‌ಚೆಕ್:

ಮೃತ ವ್ಯಕ್ತಿಗಳಾದ ದಿವ್ಯಾಂಗ್ ದಶರಥ್(30) ಮತ್ತು ರಾಮರ್ಥನ್ ರಘುನಾಥ್ (63) ಅಧಿಕ ಉಷ್ಣಾಂಶ ಮತ್ತು ಹಸಿವಿನಿಂದ ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದರಲ್ಲಿ ರಾಮರ್ಥನ್‌ನರವರ ಮಗ ರಾಜೇಶ್ ಮಾತನಾಡಿ “ಅವರಿಗೆ ಯಾವುದೇ ಸಮಸ್ಯೆಯಿರಲಿಲ್ಲ. ಬಿಪಿ ಕೂಡ ಇರಲಿಲ್ಲ. ಅವರು ಪ್ರಯಾಣದ ಸಂದರ್ಭದಲ್ಲಿ ಫೋನ್‌ನಲ್ಲಿ ಮಾತನಾಡಿದ್ದೇ” ಎಂದಿದ್ದಾರೆ.

ಮೃತಪಟ್ಟವರೆಲ್ಲರೂ ಬಡವರಾಗಿದ್ದು ಅಪೌಷ್ಠಿಕತೆ, ಲಾಕ್‌ಡೌನ್‌ನಿಂದಾದ ಆರ್ಥಿಕ ಸಂಕಷ್ಟ, ದಣಿವು, ಹಸಿವು ಎಲ್ಲಾ ಸೇರಿ ಸಾವಿಗೆ ಕಾರಣವಾಗಿದೆ. ಆದರೆ ಪಿಐಬಿ ಮಾತ್ರ ಮೊದಲೇ ಧೀರ್ಘಕಾಲದ ರೋಗ ಇತ್ತು, ಈಗ ರೈಲಿನಲ್ಲಿ ಸತ್ತಿದ್ದಾರೆ ಎಂಬ ಕಾಟಾಚಾರದ ಫ್ಯಾಕ್ಟ್‌ಚೆಕ್ ಮಾಡಿ ಕೈತೊಳೆದುಕೊಂಡಿದೆ. ಒಟ್ಟಿನಲ್ಲಿ ಪಿಐಬಿ ಬೇಜವಾಬ್ದಾರಿಯಿಂದ ವರ್ತಿಸಿದ್ದು ಬಡಜನರ ಪ್ರಾಣದ ವಿಚಾರದಲ್ಲಿಯೂ ಅಮಾನವೀಯತೆಯಿಂದ ವರ್ತಿಸಿದೆ.


ಇದನ್ನೂ ಓದಿ: ನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...