Homeಅಂಕಣಗಳುಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ...

ಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ…

- Advertisement -
- Advertisement -

ನಮ್ಮ ಆಫೀಸಿನ ಹತ್ತಿರವೇ ಇರುವ ಮಹಿಳಾ ಕಾಲೇಜಿಗೆ ಬರುವ ಹುಡುಗಿಯರನ್ನು ಪ್ರತಿ ದಿನ ನೋಡುತ್ತಿರುತ್ತೇನೆ. ಬಣ್ಣಬಣ್ಣದ ಚೂಡಿದಾರಗಳು, ಜೀನ್ಸ್ ಮತ್ತು ಟೀ ಶರ್ಟ್ಗಳು, ಹಲವೊಮ್ಮೆ ಮೈ ತುಂಬ ದೊಗಲಾದ ಬಟ್ಟೆ ಧರಿಸಿ ತಲೆ ಕೂದಲನ್ನು ಮಾತ್ರ ಮುಚ್ಚಿರುವ ಉಡುಪುಗಳು, ಅಪರೂಪಕ್ಕೊಮ್ಮೆ ನವಿರಾದ ಸೀರೆ…. ಹೀಗೆ ವಿವಿಧ ಉಡುಪುಗಳನ್ನು ತೊಟ್ಟು ಗೆಳತಿಯರೊಂದಿಗೆ ಚರ್ಚಿಸುತ್ತಾ, ತಮ್ಮ ಸ್ಕೂಟಿಗಳನ್ನು ವೇಗವಾಗಿ ಓಡಿಸುತ್ತಾ, ಬದುಕಿನ ಬಗ್ಗೆ ಕನಸುಗಳನ್ನೂ, ಆಸೆಗಳನ್ನೂ ಹೊತ್ತಿರುವ ಆ ಹುಡುಗಿಯರ ಮುಖಗಳು ಅದೆಷ್ಟು ಲವಲವಿಕೆಯಿಂದ ಕೂಡಿರುತ್ತದೆ ಎಂದರೆ ಅವರನ್ನು ನೋಡುವುದೇ ನೂರಾರು ಬಣ್ಣಬಣ್ಣದ ಚಿಟ್ಟೆಗಳನ್ನು ಒಮ್ಮೆಗೆ ನೋಡಿದಷ್ಟು ಸಂತೋಷ ಕೊಡುತ್ತದೆ. ಆದರೆ ಈ ಸಂತೋಷದ ನಡುವೆಯೇ ಇತ್ತೀಚೆಗೆ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ವರದಿಯೊಂದನ್ನು ಓದಿದೆ.

ಅದರಲ್ಲಿ ಭಾರತೀಯ ಮಹಿಳೆಯರು ಹೇಗಿರಬೇಕು ಎಂದು ವಿವರಿಸಲಾಗಿತ್ತು. “ಭಾರತೀಯ ಹುಡುಗಿಯರು ಪ್ರತ್ಯೇಕ ಶಾಲೆ ಮತ್ತು ಕಾಲೇಜುಗಳಿಗೆ ಹೋಗಬೇಕು. ಇಲ್ಲಿ ಕೋ-ಎಜುಕೇಷನ್ ಪದ್ಧತಿ ಇರಕೂಡದು. ಹುಡುಗರು ಮತ್ತು ಹುಡುಗಿಯರು ಪರಸ್ಪರ ಭೇಟಿ ಯಾಗುವಂತಹ ವ್ಯವಸ್ಥೆ ಇರಬಾರದು. ಮಹಿಳೆಯರಿಗೆ ನೀಡುವ ವಿದ್ಯೆ ಕೂಡ ಅವರು ಮುಂದೆ ಹೆಂಡತಿಯರಾಗಿ, ಗೃಹಸ್ಥೆಯರಾಗಿ ಬಾಳು ನಡೆಸುವುದಕ್ಕೆ ಅನುಗುಣವಾಗಿರಬೇಕು. ಮನೆಯ ನಾಲ್ಕು ಗೋಡೆಗಳೊಳಗೇ ಅವರು ತಮ್ಮ ಬದುಕಿನ ಸಾರ್ಥಕತೆಯನ್ನು ಕಾಣಬೇಕಿರುವುದರಿಂದ ಅವರಿಗೆ ಇತರ ರೀತಿಯ ವಿದ್ಯೆ ಅನಗತ್ಯ’ ಇದಿಷ್ಟು ಆ ವರದಿಯ ಸಾರಾಂಶ. ಇದನ್ನು ಹೇಳಿದ್ದು ರಾಷ್ಟ್ರೀಯ ಸ್ವಯಂ ಸೇವಕರ ಸರಸಂಚಾಲಕ ಕೆ.ಎಸ್. ಸುದರ್ಶನ್.

ನಿಜ, ಇವತ್ತು ಭಾರತದ ಎಲ್ಲಾ ಮಹಿಳೆಯರಿಗೆ ಎಲ್ಲಾ ಹಕ್ಕುಗಳೂ ಸಿಕ್ಕಿಲ್ಲ. ಇವತ್ತಿಗೂ ಸಮಾನತೆಗಾಗಿ, ಸಮಾನ ವೇತನಕ್ಕಾಗಿ, ಸ್ವಾಭಿಮಾನಕ್ಕಾಗಿ, ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮುಂದುವರೆಯುತ್ತಿದೆ. ಆದರೆ, ಅದೇ ಸಮಯದಲ್ಲಿ ಸತಿ ಪದ್ಧತಿಗೆ ಬಲಿಯಾದ ರೂಪಾ ಕನ್ವರ್‌ಳ ಸಹಗಮನವನ್ನು ವೈಭವೀಕರಿಸುವವರನ್ನು ಅಧಿಕಾರಕ್ಕೆ ತರಲಾಗಿದೆ. ಅಷ್ಟೇ ಅಲ್ಲ, ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷದವರೂ ಬಹಳ ವರ್ಷದಿಂದ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರೂ ಇಲ್ಲಿಯವರೆಗೂ ಯಾವ ಮಸೂದೆಯೂ ಪಾಸಾಗಿಲ್ಲ. ಇದೆಲ್ಲದರ ಮಧ್ಯೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಲೇ ಇವೆ. ಹೊರಗೆ ಬಂದರೆ ಆಸಿಡ್ ದಾಳಿಯ ಹೆದರಿಕೆ, ಮನೆಯೊಳಗಿದ್ದರೆ ಕೌಟುಂಬಿಕ ಹಿಂಸೆ …….ಇವೆರಡೂ ಅದೆಷ್ಟೋ ಮಹಿಳೆಯರ ದಿನನಿತ್ಯದ ಬದುಕಿನ ಅಂಗಗಳಾಗಿ ಹೋಗಿವೆ. ಇವುಗಳೊಂದಿಗೆ ಈಗ ಧರ್ಮದ ನೆಪದಲ್ಲಿ ಸುದರ್ಶನ್‌ರಂತವರು ಮಹಿಳೆಯನ್ನು ಮತ್ತೊಮ್ಮೆ ಮೌಢ್ಯ, ಫ್ಯೂಡಲ್ ಪದ್ಧತಿ, ಅಸಮಾನತೆಗಳಿಗೆ ಗುರಿಪಡಿಸಲು ಹವಣಿಸುತ್ತಿದ್ದಾರೆ.

ಇಪ್ಪತ್ತೊಂದನೆ ಶತಮಾನದಲ್ಲಿ ನಿಂತಿರುವ ಭಾರತದ ಮಹಿಳೆ ಈಗ ಒಂದು ರೀತಿಯ ಕ್ರಾಸ್ ರೋಡ್ಸ್ನಲ್ಲಿ ಸಾಗುತ್ತಿದ್ದಾಳೆ. ನಮ್ಮ ಸಮಾಜದ ಮಾನಸಿಕ ಸ್ಥಿತಿ ಇನ್ನೂ ಮಧ್ಯ ಯುಗದಲ್ಲಿದ್ದರೆ, ಅದರ ಆರ್ಥಿಕ ಸ್ಥಿತಿ ಆಧುನಿಕ ಯುಗದಲ್ಲಿದೆ. ಆದ್ದರಿಂದಲೇ ಇವತ್ತು ಆಧುನಿಕತೆ ಎಂದರೇನೇ ಸರಕು, ಸುಖ, ತಂತ್ರಜ್ಞಾನ, ಉಪಭೋಗ ವೆಚ್ಚ ಎಂದು ಪರಿಗಣಿಸಲಾಗುತ್ತಿದೆ. ಆದರೆ ಮಹಿಳೆಯರ ಪಾಲಿಗೆ ಆಧುನಿಕತೆ ಎಂಬುದೇ ವೈಯಕ್ತಿಕ ಘನತೆ, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ವಾತಂತ್ರ‍್ಯಗಳು…..

– ಗೌರಿ ಲಂಕೇಶ್,
ಏಪ್ರಿಲ್ 6, 2005 (`ಕಂಡಹಾಗೆ; ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...