Homeಅಂಕಣಗಳುಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ...

ಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ…

- Advertisement -
- Advertisement -

ನಮ್ಮ ಆಫೀಸಿನ ಹತ್ತಿರವೇ ಇರುವ ಮಹಿಳಾ ಕಾಲೇಜಿಗೆ ಬರುವ ಹುಡುಗಿಯರನ್ನು ಪ್ರತಿ ದಿನ ನೋಡುತ್ತಿರುತ್ತೇನೆ. ಬಣ್ಣಬಣ್ಣದ ಚೂಡಿದಾರಗಳು, ಜೀನ್ಸ್ ಮತ್ತು ಟೀ ಶರ್ಟ್ಗಳು, ಹಲವೊಮ್ಮೆ ಮೈ ತುಂಬ ದೊಗಲಾದ ಬಟ್ಟೆ ಧರಿಸಿ ತಲೆ ಕೂದಲನ್ನು ಮಾತ್ರ ಮುಚ್ಚಿರುವ ಉಡುಪುಗಳು, ಅಪರೂಪಕ್ಕೊಮ್ಮೆ ನವಿರಾದ ಸೀರೆ…. ಹೀಗೆ ವಿವಿಧ ಉಡುಪುಗಳನ್ನು ತೊಟ್ಟು ಗೆಳತಿಯರೊಂದಿಗೆ ಚರ್ಚಿಸುತ್ತಾ, ತಮ್ಮ ಸ್ಕೂಟಿಗಳನ್ನು ವೇಗವಾಗಿ ಓಡಿಸುತ್ತಾ, ಬದುಕಿನ ಬಗ್ಗೆ ಕನಸುಗಳನ್ನೂ, ಆಸೆಗಳನ್ನೂ ಹೊತ್ತಿರುವ ಆ ಹುಡುಗಿಯರ ಮುಖಗಳು ಅದೆಷ್ಟು ಲವಲವಿಕೆಯಿಂದ ಕೂಡಿರುತ್ತದೆ ಎಂದರೆ ಅವರನ್ನು ನೋಡುವುದೇ ನೂರಾರು ಬಣ್ಣಬಣ್ಣದ ಚಿಟ್ಟೆಗಳನ್ನು ಒಮ್ಮೆಗೆ ನೋಡಿದಷ್ಟು ಸಂತೋಷ ಕೊಡುತ್ತದೆ. ಆದರೆ ಈ ಸಂತೋಷದ ನಡುವೆಯೇ ಇತ್ತೀಚೆಗೆ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ವರದಿಯೊಂದನ್ನು ಓದಿದೆ.

ಅದರಲ್ಲಿ ಭಾರತೀಯ ಮಹಿಳೆಯರು ಹೇಗಿರಬೇಕು ಎಂದು ವಿವರಿಸಲಾಗಿತ್ತು. “ಭಾರತೀಯ ಹುಡುಗಿಯರು ಪ್ರತ್ಯೇಕ ಶಾಲೆ ಮತ್ತು ಕಾಲೇಜುಗಳಿಗೆ ಹೋಗಬೇಕು. ಇಲ್ಲಿ ಕೋ-ಎಜುಕೇಷನ್ ಪದ್ಧತಿ ಇರಕೂಡದು. ಹುಡುಗರು ಮತ್ತು ಹುಡುಗಿಯರು ಪರಸ್ಪರ ಭೇಟಿ ಯಾಗುವಂತಹ ವ್ಯವಸ್ಥೆ ಇರಬಾರದು. ಮಹಿಳೆಯರಿಗೆ ನೀಡುವ ವಿದ್ಯೆ ಕೂಡ ಅವರು ಮುಂದೆ ಹೆಂಡತಿಯರಾಗಿ, ಗೃಹಸ್ಥೆಯರಾಗಿ ಬಾಳು ನಡೆಸುವುದಕ್ಕೆ ಅನುಗುಣವಾಗಿರಬೇಕು. ಮನೆಯ ನಾಲ್ಕು ಗೋಡೆಗಳೊಳಗೇ ಅವರು ತಮ್ಮ ಬದುಕಿನ ಸಾರ್ಥಕತೆಯನ್ನು ಕಾಣಬೇಕಿರುವುದರಿಂದ ಅವರಿಗೆ ಇತರ ರೀತಿಯ ವಿದ್ಯೆ ಅನಗತ್ಯ’ ಇದಿಷ್ಟು ಆ ವರದಿಯ ಸಾರಾಂಶ. ಇದನ್ನು ಹೇಳಿದ್ದು ರಾಷ್ಟ್ರೀಯ ಸ್ವಯಂ ಸೇವಕರ ಸರಸಂಚಾಲಕ ಕೆ.ಎಸ್. ಸುದರ್ಶನ್.

ನಿಜ, ಇವತ್ತು ಭಾರತದ ಎಲ್ಲಾ ಮಹಿಳೆಯರಿಗೆ ಎಲ್ಲಾ ಹಕ್ಕುಗಳೂ ಸಿಕ್ಕಿಲ್ಲ. ಇವತ್ತಿಗೂ ಸಮಾನತೆಗಾಗಿ, ಸಮಾನ ವೇತನಕ್ಕಾಗಿ, ಸ್ವಾಭಿಮಾನಕ್ಕಾಗಿ, ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮುಂದುವರೆಯುತ್ತಿದೆ. ಆದರೆ, ಅದೇ ಸಮಯದಲ್ಲಿ ಸತಿ ಪದ್ಧತಿಗೆ ಬಲಿಯಾದ ರೂಪಾ ಕನ್ವರ್‌ಳ ಸಹಗಮನವನ್ನು ವೈಭವೀಕರಿಸುವವರನ್ನು ಅಧಿಕಾರಕ್ಕೆ ತರಲಾಗಿದೆ. ಅಷ್ಟೇ ಅಲ್ಲ, ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷದವರೂ ಬಹಳ ವರ್ಷದಿಂದ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರೂ ಇಲ್ಲಿಯವರೆಗೂ ಯಾವ ಮಸೂದೆಯೂ ಪಾಸಾಗಿಲ್ಲ. ಇದೆಲ್ಲದರ ಮಧ್ಯೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಲೇ ಇವೆ. ಹೊರಗೆ ಬಂದರೆ ಆಸಿಡ್ ದಾಳಿಯ ಹೆದರಿಕೆ, ಮನೆಯೊಳಗಿದ್ದರೆ ಕೌಟುಂಬಿಕ ಹಿಂಸೆ …….ಇವೆರಡೂ ಅದೆಷ್ಟೋ ಮಹಿಳೆಯರ ದಿನನಿತ್ಯದ ಬದುಕಿನ ಅಂಗಗಳಾಗಿ ಹೋಗಿವೆ. ಇವುಗಳೊಂದಿಗೆ ಈಗ ಧರ್ಮದ ನೆಪದಲ್ಲಿ ಸುದರ್ಶನ್‌ರಂತವರು ಮಹಿಳೆಯನ್ನು ಮತ್ತೊಮ್ಮೆ ಮೌಢ್ಯ, ಫ್ಯೂಡಲ್ ಪದ್ಧತಿ, ಅಸಮಾನತೆಗಳಿಗೆ ಗುರಿಪಡಿಸಲು ಹವಣಿಸುತ್ತಿದ್ದಾರೆ.

ಇಪ್ಪತ್ತೊಂದನೆ ಶತಮಾನದಲ್ಲಿ ನಿಂತಿರುವ ಭಾರತದ ಮಹಿಳೆ ಈಗ ಒಂದು ರೀತಿಯ ಕ್ರಾಸ್ ರೋಡ್ಸ್ನಲ್ಲಿ ಸಾಗುತ್ತಿದ್ದಾಳೆ. ನಮ್ಮ ಸಮಾಜದ ಮಾನಸಿಕ ಸ್ಥಿತಿ ಇನ್ನೂ ಮಧ್ಯ ಯುಗದಲ್ಲಿದ್ದರೆ, ಅದರ ಆರ್ಥಿಕ ಸ್ಥಿತಿ ಆಧುನಿಕ ಯುಗದಲ್ಲಿದೆ. ಆದ್ದರಿಂದಲೇ ಇವತ್ತು ಆಧುನಿಕತೆ ಎಂದರೇನೇ ಸರಕು, ಸುಖ, ತಂತ್ರಜ್ಞಾನ, ಉಪಭೋಗ ವೆಚ್ಚ ಎಂದು ಪರಿಗಣಿಸಲಾಗುತ್ತಿದೆ. ಆದರೆ ಮಹಿಳೆಯರ ಪಾಲಿಗೆ ಆಧುನಿಕತೆ ಎಂಬುದೇ ವೈಯಕ್ತಿಕ ಘನತೆ, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ವಾತಂತ್ರ‍್ಯಗಳು…..

– ಗೌರಿ ಲಂಕೇಶ್,
ಏಪ್ರಿಲ್ 6, 2005 (`ಕಂಡಹಾಗೆ; ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...