Homeಅಂಕಣಗಳುಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ...

ಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ…

- Advertisement -
- Advertisement -

ನಮ್ಮ ಆಫೀಸಿನ ಹತ್ತಿರವೇ ಇರುವ ಮಹಿಳಾ ಕಾಲೇಜಿಗೆ ಬರುವ ಹುಡುಗಿಯರನ್ನು ಪ್ರತಿ ದಿನ ನೋಡುತ್ತಿರುತ್ತೇನೆ. ಬಣ್ಣಬಣ್ಣದ ಚೂಡಿದಾರಗಳು, ಜೀನ್ಸ್ ಮತ್ತು ಟೀ ಶರ್ಟ್ಗಳು, ಹಲವೊಮ್ಮೆ ಮೈ ತುಂಬ ದೊಗಲಾದ ಬಟ್ಟೆ ಧರಿಸಿ ತಲೆ ಕೂದಲನ್ನು ಮಾತ್ರ ಮುಚ್ಚಿರುವ ಉಡುಪುಗಳು, ಅಪರೂಪಕ್ಕೊಮ್ಮೆ ನವಿರಾದ ಸೀರೆ…. ಹೀಗೆ ವಿವಿಧ ಉಡುಪುಗಳನ್ನು ತೊಟ್ಟು ಗೆಳತಿಯರೊಂದಿಗೆ ಚರ್ಚಿಸುತ್ತಾ, ತಮ್ಮ ಸ್ಕೂಟಿಗಳನ್ನು ವೇಗವಾಗಿ ಓಡಿಸುತ್ತಾ, ಬದುಕಿನ ಬಗ್ಗೆ ಕನಸುಗಳನ್ನೂ, ಆಸೆಗಳನ್ನೂ ಹೊತ್ತಿರುವ ಆ ಹುಡುಗಿಯರ ಮುಖಗಳು ಅದೆಷ್ಟು ಲವಲವಿಕೆಯಿಂದ ಕೂಡಿರುತ್ತದೆ ಎಂದರೆ ಅವರನ್ನು ನೋಡುವುದೇ ನೂರಾರು ಬಣ್ಣಬಣ್ಣದ ಚಿಟ್ಟೆಗಳನ್ನು ಒಮ್ಮೆಗೆ ನೋಡಿದಷ್ಟು ಸಂತೋಷ ಕೊಡುತ್ತದೆ. ಆದರೆ ಈ ಸಂತೋಷದ ನಡುವೆಯೇ ಇತ್ತೀಚೆಗೆ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ವರದಿಯೊಂದನ್ನು ಓದಿದೆ.

ಅದರಲ್ಲಿ ಭಾರತೀಯ ಮಹಿಳೆಯರು ಹೇಗಿರಬೇಕು ಎಂದು ವಿವರಿಸಲಾಗಿತ್ತು. “ಭಾರತೀಯ ಹುಡುಗಿಯರು ಪ್ರತ್ಯೇಕ ಶಾಲೆ ಮತ್ತು ಕಾಲೇಜುಗಳಿಗೆ ಹೋಗಬೇಕು. ಇಲ್ಲಿ ಕೋ-ಎಜುಕೇಷನ್ ಪದ್ಧತಿ ಇರಕೂಡದು. ಹುಡುಗರು ಮತ್ತು ಹುಡುಗಿಯರು ಪರಸ್ಪರ ಭೇಟಿ ಯಾಗುವಂತಹ ವ್ಯವಸ್ಥೆ ಇರಬಾರದು. ಮಹಿಳೆಯರಿಗೆ ನೀಡುವ ವಿದ್ಯೆ ಕೂಡ ಅವರು ಮುಂದೆ ಹೆಂಡತಿಯರಾಗಿ, ಗೃಹಸ್ಥೆಯರಾಗಿ ಬಾಳು ನಡೆಸುವುದಕ್ಕೆ ಅನುಗುಣವಾಗಿರಬೇಕು. ಮನೆಯ ನಾಲ್ಕು ಗೋಡೆಗಳೊಳಗೇ ಅವರು ತಮ್ಮ ಬದುಕಿನ ಸಾರ್ಥಕತೆಯನ್ನು ಕಾಣಬೇಕಿರುವುದರಿಂದ ಅವರಿಗೆ ಇತರ ರೀತಿಯ ವಿದ್ಯೆ ಅನಗತ್ಯ’ ಇದಿಷ್ಟು ಆ ವರದಿಯ ಸಾರಾಂಶ. ಇದನ್ನು ಹೇಳಿದ್ದು ರಾಷ್ಟ್ರೀಯ ಸ್ವಯಂ ಸೇವಕರ ಸರಸಂಚಾಲಕ ಕೆ.ಎಸ್. ಸುದರ್ಶನ್.

ನಿಜ, ಇವತ್ತು ಭಾರತದ ಎಲ್ಲಾ ಮಹಿಳೆಯರಿಗೆ ಎಲ್ಲಾ ಹಕ್ಕುಗಳೂ ಸಿಕ್ಕಿಲ್ಲ. ಇವತ್ತಿಗೂ ಸಮಾನತೆಗಾಗಿ, ಸಮಾನ ವೇತನಕ್ಕಾಗಿ, ಸ್ವಾಭಿಮಾನಕ್ಕಾಗಿ, ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮುಂದುವರೆಯುತ್ತಿದೆ. ಆದರೆ, ಅದೇ ಸಮಯದಲ್ಲಿ ಸತಿ ಪದ್ಧತಿಗೆ ಬಲಿಯಾದ ರೂಪಾ ಕನ್ವರ್‌ಳ ಸಹಗಮನವನ್ನು ವೈಭವೀಕರಿಸುವವರನ್ನು ಅಧಿಕಾರಕ್ಕೆ ತರಲಾಗಿದೆ. ಅಷ್ಟೇ ಅಲ್ಲ, ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷದವರೂ ಬಹಳ ವರ್ಷದಿಂದ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರೂ ಇಲ್ಲಿಯವರೆಗೂ ಯಾವ ಮಸೂದೆಯೂ ಪಾಸಾಗಿಲ್ಲ. ಇದೆಲ್ಲದರ ಮಧ್ಯೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಲೇ ಇವೆ. ಹೊರಗೆ ಬಂದರೆ ಆಸಿಡ್ ದಾಳಿಯ ಹೆದರಿಕೆ, ಮನೆಯೊಳಗಿದ್ದರೆ ಕೌಟುಂಬಿಕ ಹಿಂಸೆ …….ಇವೆರಡೂ ಅದೆಷ್ಟೋ ಮಹಿಳೆಯರ ದಿನನಿತ್ಯದ ಬದುಕಿನ ಅಂಗಗಳಾಗಿ ಹೋಗಿವೆ. ಇವುಗಳೊಂದಿಗೆ ಈಗ ಧರ್ಮದ ನೆಪದಲ್ಲಿ ಸುದರ್ಶನ್‌ರಂತವರು ಮಹಿಳೆಯನ್ನು ಮತ್ತೊಮ್ಮೆ ಮೌಢ್ಯ, ಫ್ಯೂಡಲ್ ಪದ್ಧತಿ, ಅಸಮಾನತೆಗಳಿಗೆ ಗುರಿಪಡಿಸಲು ಹವಣಿಸುತ್ತಿದ್ದಾರೆ.

ಇಪ್ಪತ್ತೊಂದನೆ ಶತಮಾನದಲ್ಲಿ ನಿಂತಿರುವ ಭಾರತದ ಮಹಿಳೆ ಈಗ ಒಂದು ರೀತಿಯ ಕ್ರಾಸ್ ರೋಡ್ಸ್ನಲ್ಲಿ ಸಾಗುತ್ತಿದ್ದಾಳೆ. ನಮ್ಮ ಸಮಾಜದ ಮಾನಸಿಕ ಸ್ಥಿತಿ ಇನ್ನೂ ಮಧ್ಯ ಯುಗದಲ್ಲಿದ್ದರೆ, ಅದರ ಆರ್ಥಿಕ ಸ್ಥಿತಿ ಆಧುನಿಕ ಯುಗದಲ್ಲಿದೆ. ಆದ್ದರಿಂದಲೇ ಇವತ್ತು ಆಧುನಿಕತೆ ಎಂದರೇನೇ ಸರಕು, ಸುಖ, ತಂತ್ರಜ್ಞಾನ, ಉಪಭೋಗ ವೆಚ್ಚ ಎಂದು ಪರಿಗಣಿಸಲಾಗುತ್ತಿದೆ. ಆದರೆ ಮಹಿಳೆಯರ ಪಾಲಿಗೆ ಆಧುನಿಕತೆ ಎಂಬುದೇ ವೈಯಕ್ತಿಕ ಘನತೆ, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ವಾತಂತ್ರ‍್ಯಗಳು…..

– ಗೌರಿ ಲಂಕೇಶ್,
ಏಪ್ರಿಲ್ 6, 2005 (`ಕಂಡಹಾಗೆ; ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...