Homeಅಂಕಣಗಳುಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ...

ಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ…

- Advertisement -
- Advertisement -

ನಮ್ಮ ಆಫೀಸಿನ ಹತ್ತಿರವೇ ಇರುವ ಮಹಿಳಾ ಕಾಲೇಜಿಗೆ ಬರುವ ಹುಡುಗಿಯರನ್ನು ಪ್ರತಿ ದಿನ ನೋಡುತ್ತಿರುತ್ತೇನೆ. ಬಣ್ಣಬಣ್ಣದ ಚೂಡಿದಾರಗಳು, ಜೀನ್ಸ್ ಮತ್ತು ಟೀ ಶರ್ಟ್ಗಳು, ಹಲವೊಮ್ಮೆ ಮೈ ತುಂಬ ದೊಗಲಾದ ಬಟ್ಟೆ ಧರಿಸಿ ತಲೆ ಕೂದಲನ್ನು ಮಾತ್ರ ಮುಚ್ಚಿರುವ ಉಡುಪುಗಳು, ಅಪರೂಪಕ್ಕೊಮ್ಮೆ ನವಿರಾದ ಸೀರೆ…. ಹೀಗೆ ವಿವಿಧ ಉಡುಪುಗಳನ್ನು ತೊಟ್ಟು ಗೆಳತಿಯರೊಂದಿಗೆ ಚರ್ಚಿಸುತ್ತಾ, ತಮ್ಮ ಸ್ಕೂಟಿಗಳನ್ನು ವೇಗವಾಗಿ ಓಡಿಸುತ್ತಾ, ಬದುಕಿನ ಬಗ್ಗೆ ಕನಸುಗಳನ್ನೂ, ಆಸೆಗಳನ್ನೂ ಹೊತ್ತಿರುವ ಆ ಹುಡುಗಿಯರ ಮುಖಗಳು ಅದೆಷ್ಟು ಲವಲವಿಕೆಯಿಂದ ಕೂಡಿರುತ್ತದೆ ಎಂದರೆ ಅವರನ್ನು ನೋಡುವುದೇ ನೂರಾರು ಬಣ್ಣಬಣ್ಣದ ಚಿಟ್ಟೆಗಳನ್ನು ಒಮ್ಮೆಗೆ ನೋಡಿದಷ್ಟು ಸಂತೋಷ ಕೊಡುತ್ತದೆ. ಆದರೆ ಈ ಸಂತೋಷದ ನಡುವೆಯೇ ಇತ್ತೀಚೆಗೆ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ವರದಿಯೊಂದನ್ನು ಓದಿದೆ.

ಅದರಲ್ಲಿ ಭಾರತೀಯ ಮಹಿಳೆಯರು ಹೇಗಿರಬೇಕು ಎಂದು ವಿವರಿಸಲಾಗಿತ್ತು. “ಭಾರತೀಯ ಹುಡುಗಿಯರು ಪ್ರತ್ಯೇಕ ಶಾಲೆ ಮತ್ತು ಕಾಲೇಜುಗಳಿಗೆ ಹೋಗಬೇಕು. ಇಲ್ಲಿ ಕೋ-ಎಜುಕೇಷನ್ ಪದ್ಧತಿ ಇರಕೂಡದು. ಹುಡುಗರು ಮತ್ತು ಹುಡುಗಿಯರು ಪರಸ್ಪರ ಭೇಟಿ ಯಾಗುವಂತಹ ವ್ಯವಸ್ಥೆ ಇರಬಾರದು. ಮಹಿಳೆಯರಿಗೆ ನೀಡುವ ವಿದ್ಯೆ ಕೂಡ ಅವರು ಮುಂದೆ ಹೆಂಡತಿಯರಾಗಿ, ಗೃಹಸ್ಥೆಯರಾಗಿ ಬಾಳು ನಡೆಸುವುದಕ್ಕೆ ಅನುಗುಣವಾಗಿರಬೇಕು. ಮನೆಯ ನಾಲ್ಕು ಗೋಡೆಗಳೊಳಗೇ ಅವರು ತಮ್ಮ ಬದುಕಿನ ಸಾರ್ಥಕತೆಯನ್ನು ಕಾಣಬೇಕಿರುವುದರಿಂದ ಅವರಿಗೆ ಇತರ ರೀತಿಯ ವಿದ್ಯೆ ಅನಗತ್ಯ’ ಇದಿಷ್ಟು ಆ ವರದಿಯ ಸಾರಾಂಶ. ಇದನ್ನು ಹೇಳಿದ್ದು ರಾಷ್ಟ್ರೀಯ ಸ್ವಯಂ ಸೇವಕರ ಸರಸಂಚಾಲಕ ಕೆ.ಎಸ್. ಸುದರ್ಶನ್.

ನಿಜ, ಇವತ್ತು ಭಾರತದ ಎಲ್ಲಾ ಮಹಿಳೆಯರಿಗೆ ಎಲ್ಲಾ ಹಕ್ಕುಗಳೂ ಸಿಕ್ಕಿಲ್ಲ. ಇವತ್ತಿಗೂ ಸಮಾನತೆಗಾಗಿ, ಸಮಾನ ವೇತನಕ್ಕಾಗಿ, ಸ್ವಾಭಿಮಾನಕ್ಕಾಗಿ, ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮುಂದುವರೆಯುತ್ತಿದೆ. ಆದರೆ, ಅದೇ ಸಮಯದಲ್ಲಿ ಸತಿ ಪದ್ಧತಿಗೆ ಬಲಿಯಾದ ರೂಪಾ ಕನ್ವರ್‌ಳ ಸಹಗಮನವನ್ನು ವೈಭವೀಕರಿಸುವವರನ್ನು ಅಧಿಕಾರಕ್ಕೆ ತರಲಾಗಿದೆ. ಅಷ್ಟೇ ಅಲ್ಲ, ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷದವರೂ ಬಹಳ ವರ್ಷದಿಂದ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರೂ ಇಲ್ಲಿಯವರೆಗೂ ಯಾವ ಮಸೂದೆಯೂ ಪಾಸಾಗಿಲ್ಲ. ಇದೆಲ್ಲದರ ಮಧ್ಯೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಲೇ ಇವೆ. ಹೊರಗೆ ಬಂದರೆ ಆಸಿಡ್ ದಾಳಿಯ ಹೆದರಿಕೆ, ಮನೆಯೊಳಗಿದ್ದರೆ ಕೌಟುಂಬಿಕ ಹಿಂಸೆ …….ಇವೆರಡೂ ಅದೆಷ್ಟೋ ಮಹಿಳೆಯರ ದಿನನಿತ್ಯದ ಬದುಕಿನ ಅಂಗಗಳಾಗಿ ಹೋಗಿವೆ. ಇವುಗಳೊಂದಿಗೆ ಈಗ ಧರ್ಮದ ನೆಪದಲ್ಲಿ ಸುದರ್ಶನ್‌ರಂತವರು ಮಹಿಳೆಯನ್ನು ಮತ್ತೊಮ್ಮೆ ಮೌಢ್ಯ, ಫ್ಯೂಡಲ್ ಪದ್ಧತಿ, ಅಸಮಾನತೆಗಳಿಗೆ ಗುರಿಪಡಿಸಲು ಹವಣಿಸುತ್ತಿದ್ದಾರೆ.

ಇಪ್ಪತ್ತೊಂದನೆ ಶತಮಾನದಲ್ಲಿ ನಿಂತಿರುವ ಭಾರತದ ಮಹಿಳೆ ಈಗ ಒಂದು ರೀತಿಯ ಕ್ರಾಸ್ ರೋಡ್ಸ್ನಲ್ಲಿ ಸಾಗುತ್ತಿದ್ದಾಳೆ. ನಮ್ಮ ಸಮಾಜದ ಮಾನಸಿಕ ಸ್ಥಿತಿ ಇನ್ನೂ ಮಧ್ಯ ಯುಗದಲ್ಲಿದ್ದರೆ, ಅದರ ಆರ್ಥಿಕ ಸ್ಥಿತಿ ಆಧುನಿಕ ಯುಗದಲ್ಲಿದೆ. ಆದ್ದರಿಂದಲೇ ಇವತ್ತು ಆಧುನಿಕತೆ ಎಂದರೇನೇ ಸರಕು, ಸುಖ, ತಂತ್ರಜ್ಞಾನ, ಉಪಭೋಗ ವೆಚ್ಚ ಎಂದು ಪರಿಗಣಿಸಲಾಗುತ್ತಿದೆ. ಆದರೆ ಮಹಿಳೆಯರ ಪಾಲಿಗೆ ಆಧುನಿಕತೆ ಎಂಬುದೇ ವೈಯಕ್ತಿಕ ಘನತೆ, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ವಾತಂತ್ರ‍್ಯಗಳು…..

– ಗೌರಿ ಲಂಕೇಶ್,
ಏಪ್ರಿಲ್ 6, 2005 (`ಕಂಡಹಾಗೆ; ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....