Homeಮುಖಪುಟಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ : ಚಂದ್ರಶೇಖರ್‌ ರಾವಣ್‌

ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ : ಚಂದ್ರಶೇಖರ್‌ ರಾವಣ್‌

- Advertisement -
- Advertisement -

ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ ಎಂದು ಭೀಮ್‌ ಆರ್ಮಿ ಸಂಸ್ಥಾಪಕ ಚಂದ್ರಶೇಖರ್‌ ಅಜಾದ್‌ ರಾವಣ್‌ ಆರೋಪಿಸಿದ್ದಾರೆ. ಈ ಕುರಿತು ಟ್ವಿಟ್ಟರ್‌ನಲ್ಲಿ ದಲಿತ ಯುವಕರಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡುತ್ತಿರುವ ಅಮಾನವೀಯ ವಿಡಿಯೋವನ್ನು ಹಾಕಿ ಕಿಡಿಕಾರಿರುವ ಅವರು, ಉತ್ತರ ಪ್ರದೇಶದ ಲಖನೌದ ಪಿಜಿಐ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಉನಾ ಘಟನೆಯನ್ನು ಬ್ರಾಹ್ಮಣರು ಪುನರಾವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತ ಯುವಕರ ಮೆರವಣಗೆ ಘಟನೆಯು ಲಖನೌದಲ್ಲಿ ನಡೆದಿದೆ ಎನ್ನಲಾಗಿದ್ದು ಈ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿದೆ.

21 ನೇ ಶತಮಾನದಲ್ಲಿಯೂ ಸಹ, ಮನುಸ್ಮೃತಿಯ ಬಗ್ಗೆ ಹೆಮ್ಮೆಪಡುವ ಈ ಜನರು ಅಧಿಕಾರದಲ್ಲಿ ಕೂತಿದ್ದಾರೆ. ಭೀಮ್ ಆರ್ಮಿ ತಂಡ ಘಟನೆ ನಡೆದ ಸ್ಥಳವನ್ನು ತಲುಪಿದೆ, ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲಿದೆ. ನೆನಪಿಡಿ .. ಒಂದು ದಿನ ಈ ಸರ್ಕಾರವೂ ಬದಲಾಗುತ್ತದೆ ಎಂದು ಚಂದ್ರಶೇಖರ್‌ರವರು ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ.

ಈ ವಿಡಿಯೋಗೆ ಪೊಲೀಸ್‌ ಕಮಿಷನರೇಟ್‌ ಲಕ್ನೋ ಎಂಬ ಟ್ವಿಟ್ಟರ್‌ ಖಾತೆಯಿಂದ ಪ್ರತಿಕ್ರಿಯೆ ನೀಡಲಾಗಿದ್ದು, “ಈ ಪ್ರಕರಣದಲ್ಲಿ ಪೊಲೀಸ್ ಠಾಣೆ ವಿರುದ್ಧ ದೋಷಾರೋಪಣೆ ದಾಖಲಿಸಲಾಗಿದೆ ಮತ್ತು ಸಂಬಂಧಿತ ಸಂಗತಿಗಳ ಆಧಾರದ ಮೇಲೆ ಅಗತ್ಯ ಶಾಸನಬದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಿಜಿಐ ಮಾಹಿತಿ ನೀಡಿದೆ.” ಎಂದು ಬರೆದಿದೆ.

ಈ ವಿಷಯದ ಬಗ್ಗೆ ಆದಷ್ಟು ಬೇಗ ಕ್ರಮಕೈಗೊಳ್ಳಿ ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ. ಪ್ರಕರಣದಲ್ಲಿ ಬಂಧಿತರಾಗಿರುವ ನಿರಪರಾಧಿಗಳನ್ನು ಬಿಡುಗಡೆ ಮಾಡಬೇಕು. ಇದು ಜವಾಬ್ದಾರಿಯುತ ಆಡಳಿತದ ಕರ್ತವ್ಯ. ಇಲ್ಲದಿದ್ದರೆ ಭೀಮಾ ಆರ್ಮಿ ಲಕ್ನೋ ಶೀಘ್ರದಲ್ಲೇ ಆಂದೋಲನ ನಡೆಸುತ್ತದೆ ಎಂದು ಭೀಮ್‌ ಆರ್ಮಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ್ದಕ್ಕೆ ದಲಿತ ಬಾಲಕನನ್ನು ಗುಂಡಿಕ್ಕೆ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...