Homeಮುಖಪುಟತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

- Advertisement -
- Advertisement -

ರಾಯಚೂರು ಜಿಲ್ಲೆಗೆ ಇತ್ತೀಚೆಗೆ ನೀರಾವರಿ ವ್ಯವಸ್ಥೆ ಆಗಿ ನಿಟ್ಟುಸಿರು ಬಿಡುತ್ತಿದ್ದಾರೆ. ಆದರೂ ಕುಡಿಯವ ನೀರಿಗೆ ತಾಪತ್ರಯ ಇದ್ದುದ್ದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತುಸು ಹೆಚ್ಚೇ ಇರುತ್ತದೆ. ಇಂತಹ ಸಂದರ್ಭದಲ್ಲಿ ನಾಲೆಗೆ ನೀರುಬಿಡಿ, ಕೆರೆ ಕಟ್ಟೆಗಳನ್ನು ತುಂಬಿಸಿ ಎಂಬ ಪ್ರತಿಭಟನೆ ಮನವಿಗಳಿಗೇನು ಕಮ್ಮಿ ಇಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತುಂಬಿದ ಕುಡಿಯುವ ನೀರಿನ ಕೆರೆಯೊಂದನ್ನು ಖಾಲಿ ಮಾಡಿಸಿ ಪರಿತಪಿಸುವಂತಹ ವಿಲಕ್ಷಣ ಘಟನೆಯೊಂದಕ್ಕೆ ಜಿಲ್ಲೆಯ ಶಾಖಾಪುರ ಗ್ರಾಮ ಸಾಕ್ಷಿಯಾಗಿದೆ.

ನಡೆದುದ್ದೇನು?

ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಅತ್ತನೂರು, ಶಾಖಾಪುರ ಮತ್ತು ಗಣದಿನ್ನಿ ಒಂದಕ್ಕೊಂದು ಅಂಟಿಕೊಂಡಿರುವ ಗ್ರಾಮಗಳು. ಈ ಮೂರು ಗ್ರಾಮಗಳಿಗೆ ಸೇರಿ ಅತ್ತನೂರು ಕೆರೆ ಮತ್ತು ಶಾಖಾಪುರ ಕೆರೆಯೇ ಕುಡಿಯುವ ನೀರು ಒದಗಿಸುತ್ತದೆ. ಇಂತಹ ಸಂದರ್ಭದಲ್ಲಿ ಅತ್ತನೂರು ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುವ ಮಹಮ್ಮದ್‌ ಎಂಬುವವರು ಶಾಖಾಪುರ ಕೆರೆಯಲ್ಲಿ ನೀರು ಕುಡಿದ ನಂತರ ತಮಾಷೆಗಾಗಿ ಕಲ್ಲೊಂದನ್ನು ಎಸೆದು ಅಲ್ಲಿಂದ ಹೊರಟಿದ್ದಾರೆ.

ಇದನ್ನು ಗಮನಿಸಿದ ಕೆಲ ಗ್ರಾಮಸ್ಥರು ಆತ ನೀರಿಗೆ ವಿಷದ ಕಲ್ಲು ಎಸೆದಿದ್ದಾನೆ, ಆ ನೀರು ಕುಡಿಯಬೇಡಿ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಒಬ್ಬರಿಂದ ಒಬ್ಬರಿಗೆ ಈ ವಿಷಯ ಹರಡಿ ಗ್ರಾಮದಲ್ಲಿ ದೊಡ್ಡ ಕೋಲಾಹಲವೇ ಉಂಟಾಗಿದೆ. ಕಲ್ಲು ಎಸೆದ ಘಟನೆ ಕುಡಿಯುವ ನೀರಿಗೆ ವಿಷ ಬೆರೆಸಿದ್ದಾರೆ ಎಂಬಲ್ಲಿಗೆ ಹೋಗಿ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಕೊನೆಗೆ ಗ್ರಾಮಸ್ಥರೆಲ್ಲರೂ ಸೇರಿ ಇಡೀ ಕೆರೆ ನೀರನ್ನು ಖಾಲಿ ಮಾಡುವ ನಿರ್ಧಾರಕ್ಕೆ ಬಂದಿದ್ದೆ ತಡ ಮೋಟರ್‌ ತರಿಸಿ ನೀರು ಖಾಲಿ ಮಾಡಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ನೀರು ತುಂಬಿಸಲು ಹೋರಾಟ ಮಾಡಿದ್ದರು!

ಆಶ್ಚರ್‍ಯ ಎಂದರೆ ಶಾಖಾಪುರ ಕೆರೆಗೆ ಕುಡಿಯುವ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಇದೇ ಗ್ರಾಮಸ್ಥರು ಹಲವು ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ಹಿಂದೆ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು “ಕುಡಿಯುವ ನೀರು ಕಲುಷಿತಗೊಂಡು ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದರು. ಹಾಗಾಗಿ ಕೆರೆಗೆ ಶುದ್ದನೀರು ತುಂಬಿಸಬೇಕು, ಇಲ್ಲ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಆನಂತರ ಪ್ರತಿ ವರ್ಷ ನೀರು ತುಂಬಿಸಲಾಗುತ್ತಿದೆ. ಅಂತೆಯೇ ಈ ವರ್ಷವೂ ಸಹ ತಿಂಗಳ ಹಿಂದೆಯಷ್ಟೇ ತುಂಗಭದ್ರಾ ಎಡದಂಡೆ ನಾಲೆಯಿಂದ ನೀರು ತುಂಬಿಸಲಾಗಿತ್ತು.

 ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಈಗ ಕೆರೆಗೆ ಕಲ್ಲೆಸೆದ ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದ ನಂತರ ಪೊಲೀಸರು ಗ್ರಾಮಸ್ಥರು ಮತ್ತು ಕಲ್ಲು ಎಸೆದ ಮಹಮ್ಮದ್‌ ಎಂಬುವವರನ್ನು ಕರೆಸಿ ಸಭೆ ನಡೆಸಿದ್ದಾರೆ. ಆಗ ಮಹಮ್ಮದ್‌ ನಾನು ತಮಾಷೆಗಾಗಿ ಕಲ್ಲು ಎಸೆದಿದ್ದೇನೆಯೇ ಹೊರತು ಮತ್ತೇನಿಲ್ಲ ಎಂದು ಪದೇ ಪದೇ ಸ್ಪಷ್ಟಪಡಿಸಿದ್ದಾನೆ. ಗ್ರಾಮಸ್ಥರು ಅದೇ ಕೆರೆಯ ನೀರನ್ನು ತಂದು ಕುಡಿ ಎಂದಾಗ ಆತ ನೀರು ಕುಡಿದು, ಅದೇ ನೀರಿನಲ್ಲಿ ಸ್ನಾನ ಮಾಡಿ ತಾನು ವಿಷ ಬೆರೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಕೊನೆಗೆ ಪೊಲೀಸರು ಅವನು ಎಸೆದಿರುವುದು ಕೇವಲ ಕಲ್ಲು ಮಾತ್ರ, ವಿಷ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟರೂ ಸಹ ಅದನ್ನು ನಂಬಲು ಗ್ರಾಮಸ್ಥರು ಸಿದ್ಧರಿಲ್ಲ.

ಮತ್ತೆ ನೀರು ಕುಡಿಯುತ್ತಿರುವ ಮಹಮ್ಮದ್

ಅನುಮಾನಕ್ಕೆ ಕಾರಣಗಳು

ಕೇವಲ ಕಲ್ಲು ಎಸೆದುದ್ದಕ್ಕೆ ಜನ ಇಷ್ಟೊಂದು ಅನುಮಾನಪಡಲು ಕೊರೊನಾ ಸೋಂಕು ಸಹ ಒಂದು ಕಾರಣವಾಗಿದೆ. ಮಾಧ್ಯಮಗಳಲ್ಲಿ ಅದರಲ್ಲಿಯೂ ಮುಖ್ಯವಾಗಿ ಟಿವಿ ಚಾನೆಲ್‌ಗಳು ಪ್ರತಿದಿನ, ಪ್ರತಿಕ್ಷಣ ಕೊರೊನಾ ಕುರಿತು ಭೀತಿ ಸೃಷ್ಟಿಸುತ್ತಿವೆ. ಇದರ ಪರಿಣಾಮವಾಗಿ ಶಾಖಾಪುರದ ಜನರೂ ಸಹ ಆತಂಕಗೊಂಡಿದ್ದಾರೆ ಎನ್ನಲಾಗಿದೆ. ಅದರಲ್ಲೂ ಕಲ್ಲು ಎಸೆದ ವ್ಯಕ್ತಿ ಮುಸ್ಲಿಂ ಆಗಿದ್ದುದು ಮತ್ತಷ್ಟು ಅನುಮಾನಿಸಲು ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಯರು. ಇನ್ನು ಕೆರೆಯ ನೀರು ಕಲುಷಿತಗೊಳ್ಳುತ್ತಿದ್ದು, ಕುಡಿಯಲು ಅಷ್ಟು ಯೋಗ್ಯವಲ್ಲ ಎಂದು ಕೆಲವರು ಆರೋಪಿಸಿದ್ದಾರೆ. ಅದಕ್ಕಾಗಿಯೇ ಕೆರೆ ಪಕ್ಕದಲ್ಲಿ ನೀರು ಶುದ್ದೀಕರಣ ಯಂತ್ರ ಸಹ ಅಳವಡಿಸಲಾಗಿದೆ. ಜೊತೆಗೆ ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತನೂರು ಮತ್ತು ಶಾಖಾಪುರ ಜನರ ನಡುವೆ ಸಣ್ಣ ಜಗಳವಾಗಿತ್ತು. ಅದೇ ಕಾರಣಕ್ಕೇನಾದರೂ ಅತ್ತನೂರಿನ ವ್ಯಕ್ತಿ ವಿಷ ಬೆರೆಸಿರಬಹುದು ಎಂದು ಶಾಖಾಪುರದ ಜನ ಅನುಮಾನಿಸಿದ್ದಾರೆ.

ಮತ್ತೆ ನೀರಿಗಾಗಿ ಪರದಾಟ

ಅನುಮಾನದ ಉಮೇದಿನಲ್ಲಿ ಕೆರೆಯ ನೀರನ್ನು ಖಾಲಿ ಮಾಡಿಸುತ್ತಿರುವ ಜನ ಈಗ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. 450 ಮನೆಗಳಿದ್ದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಶಾಖಾಪುರಕ್ಕೆ ಕುಡಿಯುವ ನೀರಿಗಾಗಿ ಇದ್ದಿದ್ದು ಇದೊಂದೆ ನೀರಿನಮೂಲವಾಗಿತ್ತು. ಈಗ ಅಲ್ಲಿ ನೀರನ್ನು ಕುಡಿಯಲು ಆಗದೇ, ಬೇರೆ ನೀರು ಸಿಗದೇ ಗ್ರಾಮಪಂಚಾಯ್ತಿಯಿಂದ ಬೇಗ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಈ ಗ್ರಾಮಗಳ ಒಡನಾಡವಿರುವ ಮಾರಪ್ಪ ಹರವಿರವರನ್ನು ಮಾತನಾಡಿಸಿತು. ಅವರು “ಕಳೆದ ತಿಂಗಳು ನಡೆದಿದ್ದ ಸಣ್ಣ ಜಗಳ, ಕೊರೊನಾ ಭೀತಿ ಮತ್ತು ಮುಸ್ಲಿಂ ಎಂಬ ಭಯಕ್ಕೆ ಶಾಖಾನೂರಿನ ಜನ ಅನುಮಾನಗೊಂಡು ಕೆರೆ ನೀರು ಖಾಲಿ ಮಾಡಿಸಿ ಈಗ ಪಶ್ಚಾತಾಪ ಪಡುತ್ತಿದ್ದಾರೆ. ಜನಗಳಲ್ಲಿ ಜಾಗೃತಿ ಇಲ್ಲದಿರುವುದೇ ಈ ಘಟನೆ ನಡೆಯಲು ಕಾರಣವಾಗಿದೆ. ಈಗ ನೀರು ಖಾಲಿಮಾಡಿಕೊಂಡು ಕೆಲವರು ನಾವು ದುಡುಕಬಾರದಿತ್ತು ಎಂದು ಅಭಿಪ್ರಾಯಪಟ್ಟರೆ ಇನ್ನು ಕೆಲವರು ನಾವು ಮಾಡಿದ್ದೆ ಸರಿ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಘಟನೆಗೆ ನಾವು ಯಾರನ್ನು ದೂರುವುದು? ಮಾಧ್ಯಮಗಳನ್ನೋ ಅಥವಾ ಜನರ ಅಜ್ಞಾನವನ್ನೋ? ಒಟ್ಟಿನಲ್ಲಿ ಅನುಮಾನ ಮತ್ತು ದುಡುಕುತನ ದೊಡ್ಡ ಸಮಸ್ಯೆಗೆ ದಾರಿಮಾಡಿಕೊಡುತ್ತದೆ ಎಂಬುದನ್ನು ಈ ಪ್ರಕರಣ ಸಾಬೀತು ಮಾಡಿದೆ.


ಇದನ್ನೂ ಓದಿ: ಹೆಬ್ಬಾವಿಗೆ ಬಡಿದು ಜಿಂಕೆ ಉಳಿಸಿದ ಘಟನೆಯ ಸುತ್ತ; ನೀತಿಶಾಸ್ತ್ರ ಮತ್ತು ಪ್ರಕೃತಿ ನಿಯಮಗಳು ಒಂದಕ್ಕೊಂದು ಪೂರಕವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...