Homeಸಿನಿಮಾಕ್ರೀಡೆಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

ಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

- Advertisement -
- Advertisement -

ಭಾರತ ಕ್ರಿಕೇಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್, ಒಬ್ಬರ ಧರ್ಮದ ಕಾರಣಕ್ಕೆ ತಾರತಮ್ಯ ಮಾಡುವುದು ಕೂಡಾ ಜನಾಂಗೀಯ ನಿಂದನೆಯೇ ಆಗಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಜನಾಂಗೀಯತೆಯ ಕುರಿತು ನಡೆಯುತ್ತಿರುವ ಚರ್ಚೆಯಲ್ಲಿ ಮಾತನಾಡುತ್ತಾ, “ಇದು ಕೇವಲ ಚರ್ಮದ ಬಣ್ಣಕ್ಕೆ ಸೀಮಿತವಾಗಿಲ್ಲ, ಒಬ್ಬ ವ್ಯಕ್ತಿಯು ಅವನ / ಅವಳ ಧರ್ಮದ ಆಧಾರದ ಮೇಲೆ ಕೂಡಾ ಜನಾಂಗೀಯ ನಿಂದನೆಗೆ ಒಳಗಾಗಬಹುದು” ಎಂದು ಇರ್ಫಾನ್ ಪಠಾನ್ ಹೇಳಿದ್ದಾರೆ.

“ವರ್ಣಭೇದ ನೀತಿ ಕೇವಲ ಚರ್ಮದ ಬಣ್ಣಕ್ಕೆ ಸೀಮಿತವಾಗಿಲ್ಲ. ಬೇರೆ ನಂಬಿಕೆ ಹೊಂದಿರುವ ಕಾರಣಕ್ಕಾಗಿ ನಿಮಗೆ ಮನೆಯನ್ನು ಖರೀದಿಸಿಲು ಸಮಾಜ ಅವಕಾಶ ನೀಡುವುದಿಲ್ಲ ಎಂದಾದರೆ ಅದು ಕೂಡಾ ಜನಾಂಗೀಯತೆಯೆ ಆಗಿದೆ” ಎಂದು ಪಠಾಣ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.

“ಇದು ಒಂದು ಅವಲೋಕನವಾಗಿದ್ದು ಇದನ್ನು ಯಾರಾದರು ನಿರಾಕರಿಸಬಹುದೆಂದು ನಾನು ಭಾವಿಸುವುದಿಲ್ಲ” ಎಂದು ಪಠಾಣ್ ತನ್ನ ಟ್ವೀಟ್ ಅನ್ನು ವಿವರಿಸುತ್ತಾ ಪಿಟಿಐಗೆ ತಿಳಿಸಿದ್ದಾರೆ.

ಅಮೆರಿಕಾದ ಜಾರ್ಜ್‌ ಫ್ಲಾಯ್ಡ್ ಹತ್ಯೆಯ ಹಿನ್ನೆಲೆಯಲ್ಲಿ, ಹಲವಾರು ಅಂತರರಾಷ್ಟ್ರೀಯ ಕ್ರಿಕೆಟಿಗರು ಆಟದಲ್ಲಿ ತಮಗಾದ ವರ್ಣಭೇದ ನೀತಿಯ ಕುರಿತು ಮಾತನಾಡಿದ್ದಾರೆ.

2014 ರ ಐಪಿಎಲ್ ಸಂದರ್ಭದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಜನಾಂಗೀಯವಾಗಿ ನಿಂದಿಸಿದ್ದಾರೆ ಎಂದು ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಡ್ಯಾರೆನ್ ಸ್ಯಾಮಿ ಆರೋಪಿಸಿದ್ದಾರೆ.

2014 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಪಠಾಣ್ ಅವರು ಇಂತಹ ಘಟನೆಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

“ಅಂತಹದ್ದೇನಾದರೂ ಸಂಭವಿಸಿದ್ದರೆ ಅದು ಗಮನಕ್ಕೆ ಬರುತ್ತಿತ್ತು ಅಥವಾ ಈ ವಿಷಯದ ಬಗ್ಗೆ ತಂಡದ ಚರ್ಚೆ ನಡೆಯುತ್ತಿತ್ತು. ಅಂತಹ ಯಾವುದೇ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ. ಸ್ಯಾಮಿ ಅವರ ಅಭಿಪ್ರಾಯಗಳಿಗೆ ಅವರೆ ಜವಾಬ್ದಾರರಾಗಿದ್ದಾರೆ”ಎಂದು ಪಠಾಣ್ ಹೇಳಿದರು.

“ಆದರೆ ದೇಶೀಯ ಕ್ರಿಕೆಟ್‌ನಲ್ಲಿ ನಾನು ಕೆಲವು ಸಮಸ್ಯೆಗಳನ್ನು ನೋಡಿದ್ದೇನೆ. ದಕ್ಷಿಣ ಭಾರತದ ನಮ್ಮ ಸಹೋದರರು ಉತ್ತರ ಭಾರತಕ್ಕೆ ಪ್ರಯಾಣಿಸುವಾಗ ಅವರು ಸಮಸ್ಯೆಗಳು ಎದುರಿಸಬೇಕಾಗಿರುತ್ತಿತ್ತು. ಇಲ್ಲಿ ನಿಜವಾದ ಸಮಸ್ಯೆ ಶಿಕ್ಷಣ ಹಾಗೂ ಸಮಾಜವು ಇನ್ನೂ ಕಲಿಯಬೇಕಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

“ಭಾರತದಲ್ಲಿ ಜನಾಂಗೀಯತೆಯ ಬಗ್ಗೆ ಇನ್ನೂ ಹೆಚ್ಚು ಚರ್ಚೆಗಳಾಗುತ್ತಿಲ್ಲ. ಕೆಲವೊಮ್ಮೆ ನಾವು ಈಶಾನ್ಯದ ನಮ್ಮ ಸಹೋದರ ಸಹೋದರಿಯರಿಗೆ ಹೆಸರುಗಳನ್ನು ಸಹ ಕರೆಯುತ್ತೇವೆ. ಈ ಸಮಸ್ಯೆ ಆಳವಾಗಿ ಬೇರೂರಿದೆ, ನಾವು ನಮ್ಮ ಮಕ್ಕಳಿಗೆ ಇದರ ಬಗ್ಗೆ ಶಿಕ್ಷಣ ನೀಡಲು ಪ್ರಾರಂಭಿಸಿದಾಗ ಮಾತ್ರ ಇದು ಹೋಗುತ್ತದೆ. ಅದು ಸರಿಯಾದ ಶಾಲಾ ಶಿಕ್ಷಣ ಹಾಗೂ ಪೋಷಕರೊಂದಿಗೆ ಪ್ರಾರಂಭವಾಗಬೇಕು. ” ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.


ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ 50 ಲಕ್ಷ ದೇಣಿಗೆ ಕೊಟ್ಟ ಸಚಿನ್ ತೆಂಡೂಲ್ಕರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...