Homeಸಿನಿಮಾಕ್ರೀಡೆಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

ಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

- Advertisement -
- Advertisement -

ಭಾರತ ಕ್ರಿಕೇಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್, ಒಬ್ಬರ ಧರ್ಮದ ಕಾರಣಕ್ಕೆ ತಾರತಮ್ಯ ಮಾಡುವುದು ಕೂಡಾ ಜನಾಂಗೀಯ ನಿಂದನೆಯೇ ಆಗಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಜನಾಂಗೀಯತೆಯ ಕುರಿತು ನಡೆಯುತ್ತಿರುವ ಚರ್ಚೆಯಲ್ಲಿ ಮಾತನಾಡುತ್ತಾ, “ಇದು ಕೇವಲ ಚರ್ಮದ ಬಣ್ಣಕ್ಕೆ ಸೀಮಿತವಾಗಿಲ್ಲ, ಒಬ್ಬ ವ್ಯಕ್ತಿಯು ಅವನ / ಅವಳ ಧರ್ಮದ ಆಧಾರದ ಮೇಲೆ ಕೂಡಾ ಜನಾಂಗೀಯ ನಿಂದನೆಗೆ ಒಳಗಾಗಬಹುದು” ಎಂದು ಇರ್ಫಾನ್ ಪಠಾನ್ ಹೇಳಿದ್ದಾರೆ.

“ವರ್ಣಭೇದ ನೀತಿ ಕೇವಲ ಚರ್ಮದ ಬಣ್ಣಕ್ಕೆ ಸೀಮಿತವಾಗಿಲ್ಲ. ಬೇರೆ ನಂಬಿಕೆ ಹೊಂದಿರುವ ಕಾರಣಕ್ಕಾಗಿ ನಿಮಗೆ ಮನೆಯನ್ನು ಖರೀದಿಸಿಲು ಸಮಾಜ ಅವಕಾಶ ನೀಡುವುದಿಲ್ಲ ಎಂದಾದರೆ ಅದು ಕೂಡಾ ಜನಾಂಗೀಯತೆಯೆ ಆಗಿದೆ” ಎಂದು ಪಠಾಣ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.

“ಇದು ಒಂದು ಅವಲೋಕನವಾಗಿದ್ದು ಇದನ್ನು ಯಾರಾದರು ನಿರಾಕರಿಸಬಹುದೆಂದು ನಾನು ಭಾವಿಸುವುದಿಲ್ಲ” ಎಂದು ಪಠಾಣ್ ತನ್ನ ಟ್ವೀಟ್ ಅನ್ನು ವಿವರಿಸುತ್ತಾ ಪಿಟಿಐಗೆ ತಿಳಿಸಿದ್ದಾರೆ.

ಅಮೆರಿಕಾದ ಜಾರ್ಜ್‌ ಫ್ಲಾಯ್ಡ್ ಹತ್ಯೆಯ ಹಿನ್ನೆಲೆಯಲ್ಲಿ, ಹಲವಾರು ಅಂತರರಾಷ್ಟ್ರೀಯ ಕ್ರಿಕೆಟಿಗರು ಆಟದಲ್ಲಿ ತಮಗಾದ ವರ್ಣಭೇದ ನೀತಿಯ ಕುರಿತು ಮಾತನಾಡಿದ್ದಾರೆ.

2014 ರ ಐಪಿಎಲ್ ಸಂದರ್ಭದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಜನಾಂಗೀಯವಾಗಿ ನಿಂದಿಸಿದ್ದಾರೆ ಎಂದು ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಡ್ಯಾರೆನ್ ಸ್ಯಾಮಿ ಆರೋಪಿಸಿದ್ದಾರೆ.

2014 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಪಠಾಣ್ ಅವರು ಇಂತಹ ಘಟನೆಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

“ಅಂತಹದ್ದೇನಾದರೂ ಸಂಭವಿಸಿದ್ದರೆ ಅದು ಗಮನಕ್ಕೆ ಬರುತ್ತಿತ್ತು ಅಥವಾ ಈ ವಿಷಯದ ಬಗ್ಗೆ ತಂಡದ ಚರ್ಚೆ ನಡೆಯುತ್ತಿತ್ತು. ಅಂತಹ ಯಾವುದೇ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ. ಸ್ಯಾಮಿ ಅವರ ಅಭಿಪ್ರಾಯಗಳಿಗೆ ಅವರೆ ಜವಾಬ್ದಾರರಾಗಿದ್ದಾರೆ”ಎಂದು ಪಠಾಣ್ ಹೇಳಿದರು.

“ಆದರೆ ದೇಶೀಯ ಕ್ರಿಕೆಟ್‌ನಲ್ಲಿ ನಾನು ಕೆಲವು ಸಮಸ್ಯೆಗಳನ್ನು ನೋಡಿದ್ದೇನೆ. ದಕ್ಷಿಣ ಭಾರತದ ನಮ್ಮ ಸಹೋದರರು ಉತ್ತರ ಭಾರತಕ್ಕೆ ಪ್ರಯಾಣಿಸುವಾಗ ಅವರು ಸಮಸ್ಯೆಗಳು ಎದುರಿಸಬೇಕಾಗಿರುತ್ತಿತ್ತು. ಇಲ್ಲಿ ನಿಜವಾದ ಸಮಸ್ಯೆ ಶಿಕ್ಷಣ ಹಾಗೂ ಸಮಾಜವು ಇನ್ನೂ ಕಲಿಯಬೇಕಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

“ಭಾರತದಲ್ಲಿ ಜನಾಂಗೀಯತೆಯ ಬಗ್ಗೆ ಇನ್ನೂ ಹೆಚ್ಚು ಚರ್ಚೆಗಳಾಗುತ್ತಿಲ್ಲ. ಕೆಲವೊಮ್ಮೆ ನಾವು ಈಶಾನ್ಯದ ನಮ್ಮ ಸಹೋದರ ಸಹೋದರಿಯರಿಗೆ ಹೆಸರುಗಳನ್ನು ಸಹ ಕರೆಯುತ್ತೇವೆ. ಈ ಸಮಸ್ಯೆ ಆಳವಾಗಿ ಬೇರೂರಿದೆ, ನಾವು ನಮ್ಮ ಮಕ್ಕಳಿಗೆ ಇದರ ಬಗ್ಗೆ ಶಿಕ್ಷಣ ನೀಡಲು ಪ್ರಾರಂಭಿಸಿದಾಗ ಮಾತ್ರ ಇದು ಹೋಗುತ್ತದೆ. ಅದು ಸರಿಯಾದ ಶಾಲಾ ಶಿಕ್ಷಣ ಹಾಗೂ ಪೋಷಕರೊಂದಿಗೆ ಪ್ರಾರಂಭವಾಗಬೇಕು. ” ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.


ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ 50 ಲಕ್ಷ ದೇಣಿಗೆ ಕೊಟ್ಟ ಸಚಿನ್ ತೆಂಡೂಲ್ಕರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...