Homeಮುಖಪುಟಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ಮೂರು ಬಿಜೆಪಿ ಆಡಳಿತದ ರಾಜ್ಯಗಳು ಮತ್ತು ಎರಡು ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು ದಿನಕ್ಕೆ ಎಂಟು ಗಂಟೆಗಳಿಂದ 12 ಗಂಟೆಗಳಿಗೆ ಏರಿಸುವ ನಿರ್ಧಾರವು ಇತಿಹಾಸದ ಶೂನ್ಯ ಜ್ಞಾನವಿರುವ ಪೆದ್ದರಿಂದ ಬಂದಿದೆ.

- Advertisement -
- Advertisement -

ಪತ್ರಕರ್ತರು ಮತ್ತು ಪತ್ರಿಕೋದ್ಯಮದ ಬಗ್ಗೆ ಇರುವ ಪೋಡ್‌ಕಾಸ್ಟ್ ಆಗಿರುವ “ಜೆ-ಪೋಡ್”ನಲ್ಲಿ ಮಾತಾಡುತ್ತಾ ಮ್ಯಾಗ್ಸೇಸೆ ಪ್ರಶಸ್ತಿ ವಿಜೇತ, “ಎವ್ರಿಬಡಿ ಲವ್ಸ್ ಎ ಗುಡ್ ಡ್ರೌಟ್” ಎಂಬ ಪ್ರಸಿದ್ಧ ಕೃತಿಯ ಲೇಖಕ ಪತ್ರಕರ್ತ ಪಿ. ಸಾಯಿನಾಥ್ ಅವರು ಭಾರತ ಮತ್ತು ಕೋವಿಡ್ ನಂತರದ ಭಾರತೀಯ ಮಾಧ್ಯಮ ಮತ್ತು ವಲಸೆ ಕಾರ್ಮಿಕರ ಬಗ್ಗೆ ವಿವರಿಸಿದ್ದಾರೆ. ಶೂನ್ಯ ಜ್ಞಾನದ ಪೆದ್ದರು ನಮ್ಮ ಕಾರ್ಮಿಕ ಕಾನೂನುಗಳನ್ನು ಮರುರೂಪಿಸುತ್ತಿದ್ದಾರೆ ಎಂದೂ ಅವರು ಟೀಕಿಸಿದ್ದಾರೆ. ಸಾರಾಂಶ ಇಲ್ಲಿದೆ.

ಅನುವಾದ: ನಿಖಿಲ್ ಕೋಲ್ಪೆ

ಅಭಿವೃದ್ಧಿಯ ಮರಣೋತ್ತರ ಪರೀಕ್ಷೆ

ಕೋವಿಡ್ ನಮಗೆ ಕಳೆದ ಮೂವತ್ತು ವರ್ಷಗಳ ನಮ್ಮ ಅಭಿವೃದ್ಧಿಯ ಸಂಪೂರ್ಣ, ಸಮಗ್ರ ಮತ್ತು ಎಗ್ಗಿಲ್ಲದ ಮರಣೋತ್ತರ ಪರೀಕ್ಷೆ ನಡೆಸುವ ಅವಕಾಶವನ್ನು ಒದಗಿಸಿಕೊಟ್ಟಿದೆ. ನೋಟು ಅಮಾನ್ಯೀಕರಣವನ್ನು ನಾವು ಕಡೆಗಣಿಸಬಹುದಾಗಿತ್ತು. ಆದರೆ ಈಗ ಬೆಂಕಿ ನಮ್ಮ ಮನೆ ಹೊಸ್ತಿಲಲ್ಲಿದೆ.

ನಾವು ನಮ್ಮ ಇತಿಹಾಸದಲ್ಲಿ ಸಂಸದೀಯ ಪ್ರಜಾಪ್ರಭುತ್ವವು ಅತ್ಯಂತ ವೇಗವಾಗಿ ಶಿಥಿಲಗೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ. ಇದಕ್ಕೆ ಹೋಲಿಸಿದರೆ ತುರ್ತುಪರಿಸ್ಥಿತಿ ಏನೇನೂ ಅಲ್ಲ. ಇಲ್ಲೀಗ ಸಂಸತ್ತಾಗಲಿ, ಇ- ಸಂಸತ್ತಾಗಲಿ, ವರ್ಚುವಲ್ ಸಂಸತ್ತಾಗಲೀ, ಒಂದೂ ಇಲ್ಲ.

ನಮ್ಮಲ್ಲೀಗ ಕೆಲಸ ಮಾಡುತ್ತಿರುವ ವಿಧಾನಸಭೆಗಳಿಲ್ಲ. ಮುಖ್ಯಮಂತ್ರಿಗಳು ಈಗ ಕೇಂದ್ರ ಸರಕಾರದ ಕೃಪೆಯಲ್ಲಿದ್ದಾರೆ. ಕೇಂದ್ರವು ರಾಜ್ಯಗಳಿಗೆ ಬರಬೇಕಾದ ಜಿಎಸ್‌ಟಿ ನಿಧಿಯನ್ನು ತಡೆಹಿಡಿಯುತ್ತಿದೆ ಮತ್ತು ಖಾಸಗಿಯಾಗಿ ನೋಂದಾಯಿತವಾದ ‘ಪಿಎಂ ಕೇರ್ಸ್’ ಟ್ರಸ್ಟ್ ಮುಖಾಂತರ ರಾಜ್ಯಗಳಿಗೆ ಬರಬೇಕಾದ ಹಣವನ್ನು ಕೊಳ್ಳೆಹೊಡೆಯುತ್ತಿದೆ.

ಮೂರು ಬಿಜೆಪಿ ಆಡಳಿತದ ರಾಜ್ಯಗಳು ಮತ್ತು ಎರಡು ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು ದಿನಕ್ಕೆ ಎಂಟು ಗಂಟೆಗಳಿಂದ 12 ಗಂಟೆಗಳಿಗೆ ಏರಿಸುವ ನಿರ್ಧಾರವು ಇತಿಹಾಸದ ಶೂನ್ಯ ಜ್ಞಾನವಿರುವ ಪೆದ್ದರಿಂದ ಬಂದಿದೆ.

ಯುಎಸ್‌ಎಯಲ್ಲಿ ಬಂಡವಾಳಶಾಹಿ ಗುಂಪುಗಳು ದಿನಕ್ಕೆ ಎಂಟು ಗಂಟೆಗಳ ಕೆಲಸದ ಅವಧಿಯನ್ನು ಒಪ್ಪಿಕೊಂಡಿವೆ ಏಕೆಂದರೆ, ಎಂಟು ಗಂಟೆಗಳ ಬಳಿಕ ಉತ್ಪಾದಕತೆ ಕಡಿಮೆಯಾಗುತ್ತಾ ಹೋಗುತ್ತದೆ ಎಂದು ಅಧ್ಯಯನಗಳು ತೋರಿಸಿಕೊಟ್ಟಿವೆ.

ಭಾರತವು ಸಮಾಜೋ-ಧಾರ್ಮಿಕ ಮೂಲಭೂತವಾದಿಗಳು ಮತ್ತು ಆರ್ಥಿಕ-ಮಾರುಕಟ್ಟೆ ಮೂಲಭೂತವಾದಿಗಳ ಮೈತ್ರಿಕೂಟದ ಕಪಿಮುಷ್ಟಿಯಲ್ಲಿದೆ. ಅವರು ಜೊತೆಸೇರುವ, ಹಂಚಿಕೊಳ್ಳುವ ಹಾಸಿಗೆಯೆಂದರೆ, ಕಾರ್ಪೊರೇಟ್ ಮಾಧ್ಯಮ ಅಥವಾ ಮುಖ್ಯವಾಹಿನಿಯ ಮಾಧ್ಯಮ.

ಮಾಧ್ಯಮ ಮನಸ್ಥಿತಿಯ ಬ್ರೈನ್ ಸ್ಕ್ಯಾನಿಂಗ್

ಕೋವಿಡ್ ನಮಗೆ ಭಾರತೀಯ ಸಮಾಜದ ಮರಣೋತ್ತರ ಪರೀಕ್ಷೆಯ ವರದಿಯನ್ನು ಒದಗಿಸಿದಂತೆಯೇ, ಅದು ಮೇಲ್ವರ್ಗದ ಚಿಂತನೆಯ, ಮಾಧ್ಯಮಗಳ ಚಿಂತನೆಯ ಮೆದುಳಿನ ಪರೀಕ್ಷೆಯ ವರದಿಯನ್ನೂ ಒದಗಿಸಿದೆ.

ಪ್ರಮುಖ ಪತ್ರಕರ್ತನೊಬ್ಬ ತನ್ನದೇ ಆನ್‌ಲೈನ್‌ ಟಿವಿಯಲ್ಲಿ ಎನು ಹೇಳುತ್ತಾನೆ ಎಂದರೆ, “ಒಳ್ಳೆಯ ಬಿಕ್ಕಟ್ಟನ್ನು ಯಾವಾಗಲೂ ವ್ಯರ್ಥಮಾಡಬೇಡಿ” ಎಂದು! ಇದು ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ಮುನ್ನುಗ್ಗಿಸಲು ಸರಿಯಾದ ಸಮಯವೆಂದು ಆತ ಹೇಳುತ್ತಾನೆ. ಇದು ಭಾರತದ ಮೇಲ್ವರ್ಗದ ಚಿಂತನೆಯ ಬಗ್ಗೆ ಅದರ ಕ್ರೌರ್ಯದ ಬಗ್ಗೆ, ಸಮಾಜದ ದುರ್ಬಲ ವರ್ಗಗಳ ಕುರಿತು ಸಂಪೂರ್ಣ ದಯಾಹೀನತೆಯ ಬಗ್ಗೆ ಏನು ಹೇಳುತ್ತದೆ?

ಏನು ಬದಲಾಗಿದೆಯೋ, ಯಾವುದು ರಾಜಕೀಯವನ್ನು ಬದಲಾಯಿಸಿದೆಯೋ, ಯಾವುದು ಎಲ್ಲಾ ರೀತಿಯಲ್ಲಿ ಪತ್ರಿಕೋದ್ಯಮದ ಮೇಲೆ ಪರಿಣಾಮ ಬೀರಿದೆಯೋ, ಅದು ನಮ್ಮನ್ನು ಬಾಧಿಸದೇ ಇರಬಹುದು. ಆದರೆ ಅದು ಇತರನ್ನು ಬಾಧಿಸಿದೆ ಎಂಬುದು ಬಹಳ ಮುಖ್ಯ. ನ್ಯಾಯ ಎಂಬುದು ಎಲ್ಲರಿಗೂ ಸೇರಿದ್ದು, ಅದನ್ನು ನಿರಾಕರಿಸುವವರಿಗೆ ಮಾತ್ರವಲ್ಲ.

ಇಡೀ ಒಂದು ಯುವಜನರ ಪೀಳಿಗೆಯೇ ಪತ್ರಿಕೆಗಳ ಪುರವಣಿಗಳಲ್ಲಿ ಬರುವುದಕ್ಕಿಂತ ಬೇರೆ ಪತ್ರಿಕೋದ್ಯಮವೇ ಇಲ್ಲ; ನವ ಉದಾರವಾದಕ್ಕಿಂತ ಬೇರೆಯಾದ ಆರ್ಥಿಕತೆಯೇ ಇಲ್ಲ ಎಂದು ನಂಬಿಕೊಂಡು ಬೆಳೆದುಬಿಟ್ಟಿದೆ. ವಲಸೆ ಕಾರ್ಮಿಕರ ಬಿಕ್ಕಟ್ಟು ಪತ್ರಕರ್ತರ ಮೇಲೆ, ಅದರಲ್ಲೂ ಎಳೆಯ ಪತ್ರಕರ್ತರ ಮೇಲೆ ಆಳವಾದ ಪರಿಣಾಮ ಬೀರಿದೆ.

ಕೋಣೆಯೊಳಗೊಂದು ವಾನರ!

ಸರಾಸರಿಯಾಗಿ ರಾಷ್ಟ್ರೀಯ ದಿನಪತ್ರಿಕೆಗಳು 69 ಶೇಕಡಾ ಜನರು ವಾಸಿಸುವ ಗ್ರಾಮೀಣ ಪ್ರದೇಶಗಳ ಸುದ್ದಿಗೆ ತಮ್ಮ ಮುಖಪುಟದಲ್ಲಿ ಕೇವಲ 0.67 ಶೇಕಡಾ ಜಾಗವನ್ನು ಮಾತ್ರ ನೀಡುತ್ತವೆ ಎಂದು ಐದು ವರ್ಷಗಳ ಅಧ್ಯಯನ ತೋರಿಸುತ್ತದೆ. ನೀವು ಚುನಾವಣಾ ವರ್ಷವನ್ನು ಪರಿಗಣನೆಗೆ ಹೊರತುಪಡಿಸಿದರೆ ಇದು 0.18ರಿಂದ 0.24ಶೇಕಡಾದಷ್ಟಿದೆ. ಅಂದರೆ, 75 ಶೇಕಡಾ ಜನರು ಚುನಾವಣೆಯಲ್ಲದ ಕಾಲದಲ್ಲಿ ಯಾವುದೇ ಸುದ್ದಿಗಳನ್ನು ಮಾಡುವುದಿಲ್ಲ ಎಂದು ಮಾಧ್ಯಮಗಳು ನಿರ್ಧರಿಸಿದಂತಿದೆ.

ಮಾರ್ಚ್ 25ರಿಂದ 1,000ದಷ್ಟು ಪತ್ರಕರ್ತರು ಕೆಲಸ ಕಳೆದುಕೊಂಡಿದ್ದಾರೆ. ಜನರಿಗೆ ಅವರ ಅತ್ಯಂತ ಜರೂರಿ ಇರುವ ಹೊತ್ತಿನಲ್ಲಿಯೇ ಸೆನ್ಸೆಕ್ಸ್‌ನ 30 ಅತ್ಯನ್ನತ ಸ್ಥಾನಗಳಲ್ಲಿ ಇರುವ ಕಂಪನಿಗಳು ಅಸೂಯೆಪಡುವಷ್ಟು ಆದಾಯವಿರುವ ಮಾಧ್ಯಮ ಸಂಸ್ಥೆಗಳು ಪತ್ರಕರ್ತರನ್ನು ಹೊರಗೆಸೆಯುತ್ತಿವೆ.

ನಿಮ್ಮಲ್ಲಿ ಇಷ್ಟು ಹಣವಿದೆ. ನಿಮ್ಮ ಕಾಲಂಗಳಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಮಿಡಿಯುತ್ತಾ ನಿಮ್ಮ ಹೃದಯವು ರಕ್ತ ಸುರಿಸುತ್ತದೆ. ಆದರೂ ನೀವು 24 ಗಂಟೆಗಳ ನೋಟಿಸ್ ನೀಡಿ ಪತ್ರಕರ್ತರು ರಾಜೀನಾಮೆ ನೀಡುವಂತೆ ಮಾಡುತ್ತೀರಿ. ಏಕೆಂದರೆ, ನೀವು ಜನರ ಕಣ್ಣಲ್ಲಿ ವಾನರರಂತೆ ಕಾಣಬಾರದಲ್ಲ!

ಕೊರೋನಕ್ಕೆ ಮಿಡಿಯುತ್ತಿರುವ ಪತ್ರಿಕೆಗಳೇ ಜನರನ್ನು ಕಸದಂತೆ ಹೊರಗೆಸೆಯುತ್ತಿವೆ. ಭಾರತದ ಅತ್ಯಂತ ದೊಡ್ಡ ಮಾಧ್ಯಮದ ಮಾಲೀಕ ಪ್ರಪಂಚದಲ್ಲಿಯೇ ಅತ್ಯಂತ ಶ್ರೀಮಂತ ಭಾರತೀಯ. ತಮ್ಮದೇ ದೇಶದ ಬಗ್ಗೆ ಸುದ್ದಿ ಪ್ರಸಾರ ಮಾಡುವುದಕ್ಕಿಂತಲೂ ಹೆಚ್ಚಾಗಿ ನೆರೆಯ ರಾಷ್ಟ್ರದ ಬಗ್ಗೆ ಸುದ್ದಿ ಪ್ರಸಾರ ಮಾಡುವ ಟಿ.ವಿ. ಚಾನೆಲ್‌ಗಳಿರುವ ಏಕೈಕ ದೇಶ ಭಾರತ! ನಮ್ಮ ಸಾಲಿಸಿಟರ್ ಜನರಲ್ ಮಾಧ್ಯಮಗಳನ್ನು ದೂರುತ್ತಿದ್ದಾಗ, ಅವರು ಯಾವ ಮಾಧ್ಯಮಗಳನ್ನು ದೂರುತ್ತಿದ್ದಾರೆ ಎಂದು ಆಶ್ಚರ್ಯಪಟ್ಟಿದ್ದೆ! ಏಕೆಂದರೆ, 90 ಶೇಕಡಾ ಮಾಧ್ಯಮಗಳು ಅವರ ಜೊತೆಗೇ ಇವೆ!

ಪಿ. ಸಾಯಿನಾಥ್ ರವರ ಪೂರ್ಣ ಪಾಡ್‌ಕಾಸ್ಟ್‌ಕೇಳಲು ಇಲ್ಲಿ ಕ್ಲಿಕ್‌ ಮಾಡಿ.


ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...