Homeಮುಖಪುಟದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

- Advertisement -
- Advertisement -

ಕೇಂದ್ರದ ಮಾರ್ಗಸೂಚಿಯನ್ನು ಅನುಸರಿಸಿ ಕೇರಳದಲ್ಲಿ ದೇವಾಲಯಗಳನ್ನು ಪುನಃ ತೆರೆಯುತ್ತಿದ್ದಂತೆ ಕೇರಳ ಬಿಜೆಪಿ ಇದನ್ನು ’ತುರಾತುರಿ ಕ್ರಮ’ ಎಂದು ಬಣ್ಣಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದೆ. ಆದರೆ ಈ ಹಿಂದೆ ಅದೇ ಬಿಜೆಪಿ ರಾಜ್ಯದಲ್ಲಿ ದೇವಾಲಯವನ್ನು ತೆರೆಯಬೇಕು ಎಂದು ಆಗ್ರಹಿಸಿತ್ತು. ಒಟ್ಟಿನಲ್ಲಿ ದೇವಾಲಯದ ವಿಷಯದಲ್ಲಿ ಬಿಜೆಪಿಯು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ದೇವಾಲಯಗಳನ್ನು ತೆರೆಯುತ್ತಿದ್ದಂತೆ ಕೇರಳದ ಬಿಜೆಪಿ ಮುಖಂಡ ಹಾಗೂ ಕೇಂದ್ರ ಸಚಿವ ವಿ ಮುರಳೀಧರನ್ ಈ ಕ್ರಮಕ್ಕೆ ವಿರುದ್ಧವಾಗಿ ಟ್ವೀಟ್ ಮಾಡಿದ್ದಾರೆ: “ಭಕ್ತರ ವಿರೋಧದ ನಡುವೆಯೂ ದೇವಾಲಯಗಳನ್ನು ಪುನಃ ತೆರೆಯುವುದರ ಹಿಂದೆ ಕೇರಳ ಸರ್ಕಾರವು ಬೇರೇನೋ ಕೆಟ್ಟ ಉದ್ದೇಶವನ್ನು ಹೊಂದಿದೆ. ದೇವಾಲಯವನ್ನು ತೆರೆಯಲು ಭಕ್ತರು ಅಥವಾ ದೇವಾಲಯ ಸಮಿತಿಗಳು ಒತ್ತಾಯಿಸಿಲ್ಲ” ಎಂದಿದ್ದಾರೆ.

“ಇಷ್ಟು ಆತುರ ಯಾಕೆ?  ಇದು ನಾಸ್ತಿಕ ‌ಪಿಣರಾಯಿ ವಿಜಯನ್ ಸರ್ಕಾರವು ಭಕ್ತರನ್ನು ನಿರಾಕರಿಸುವ ಉದ್ದೇಶಪೂರ್ವಕ ಪ್ರಯತ್ನವೇ? ಸರ್ಕಾರ ಭಕ್ತರ ಧ್ವನಿಗೆ ಕಿವಿಗೊಡಬೇಕು ಹಾಗೂ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು, ”ಎಂದು ಅವರು ಜೂನ್‌ 8 ರಂದು ಹೇಳಿದ್ದಾರೆ.

ಆದರೆ ಇದೇ ವಿ. ಮುರುಳೀಧರನ್ ದೇವಾಲಯವನ್ನು ತೆರೆಯದ ಕಾರಣಕ್ಕಾಗಿ ಈ ಹಿಂದೆ ಕೇರಳದ ಕಮ್ಯುನಿಷ್ಟ್ ಎಡ ಪಂಥೀಯ ಸರ್ಕಾರವನ್ನು ಟೀಕಿಸುತ್ತಿದ್ದರು.


ಓದಿ: ಕೇರಳದ ಗರ್ಭಿಣಿ ಆನೆ ಸಾವಿನ ಬಗ್ಗೆ ಬಲ ಪಂಥೀಯರು ಹರಡಿದ ಎರಡು ಸುಳ್ಳುಗಳು


ಮೇ 28 ರಂದು ಮುರಲೀಧರನ್ ಅವರು ರಾಜ್ಯಗಳಾದ್ಯಂತ ಮದ್ಯದ ಮಳಿಗೆಗಳು ತೆರೆದಿದೆ, ದೇವಾಲಯಗಳನ್ನೂ ತೆರೆಯಬಹುದು ಎಂದು ಹೇಳಿದ್ದರು. ದೇವಾಲಯಗಳನ್ನು ತೆರೆಯುವ ಮೂಲಕ ಭಕ್ತರ ಮೇಲೆ “ಕರುಣೆ ತೋರಿಸಿ” ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ವಿಡಿಯೋ ನೋಡಿ

കള്ള് കുടിയന്മാരോടുള്ള താല്‍പര്യം ദൈവവിശ്വാസിയോടും കാണണം-കെ.മുരളീധരന്‍

കള്ള് കുടിയന്മാരോടുള്ള സര്‍ക്കാരിനുള്ള താല്‍പര്യം ദൈവവിശ്വാസിയോടും കാണിക്കണമെന്ന് കെ.മുരളീധരന്‍ എം.പി. ആരാധനാലയങ്ങള്‍ തുറക്കാനുള്ള സൗകര്യമൊരുക്കണം. മദ്യ ഷാപ്പ് തുറുന്നാല്‍ സാമൂഹിക അകലം പാലിക്കപ്പെടുന്നതും ആരാധനാലയങ്ങള്‍ തുറന്നാല്‍ സാമൂഹിക അകല ലംഘനം നടക്കുന്നതും എങ്ങനെയാണെന്ന് കെ.മുരളീധരന്‍ ചോദിച്ചു. വേണ്ടത്ര സുരക്ഷയൊരുക്കാനും മാനദണ്ഡങ്ങള്‍ പാലിക്കാനുമൊക്കെ ആരാധനാലയ ഭാരവാഹികളും ബന്ധപ്പെട്ടവരുമൊക്കെ തയ്യാറാണ്. വേണമെങ്കില്‍ വെര്‍ച്വല്‍ ക്യൂ സംവിധാനമൊക്കെ ഇവിടെയും നടപ്പാക്കാമെന്നും മുരളീധരന്‍ പറഞ്ഞു.ആരാധനാലയങ്ങള്‍ തുറക്കുന്നത് കൊണ്ട് ഒരു വ്യാപനവും ഉണ്ടാവില്ല. സംസ്ഥാനത്ത് ഇപ്പോള്‍ കൊറോണയുടെ സമൂഹ വ്യാപനമല്ല മദ്യത്തിന്റെ സമൂഹ വ്യാപനമാന്ന് ഉണ്ടായികൊണ്ടിരിക്കുന്നത്. ആപ്പ് സര്‍ക്കാരിനെ ആപ്പാക്കും. മന്ത്രി ടി.പി രാമകൃഷ്ണന്‍ ഭാവിയില്‍ ഒരു പാട് കാര്യങ്ങള്‍ക്ക് വിശദീകരണം നല്‍കേണ്ടി വരുമെന്നും മുരളീധരന്‍ പറഞ്ഞു.#Covid19 #Lockdown #Muraleedharan

Posted by Mathrubhumi on Thursday, May 28, 2020

ಕೊರೊನಾ ಲಾಕ್‌ಡೌನ್ ಅನ್ನು ಕ್ರಮೇಣ ತೆರವುಗೊಳಿಸುವ ಭಾಗವಾಗಿ ಲಾಕ್‌ಡೌನ್‌ 5.0 ಮಾರ್ಗಸೂಚಿಗಳಲ್ಲಿ ರೆಸ್ಟೋರೆಂಟ್‌ಗಳು, ಮಾಲ್‌ಗಳು ಹಾಗೂ ಪೂಜಾ ಸ್ಥಳಗಳನ್ನು ತೆರೆಯುವ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನ್ನು ಜೂನ್ 4 ರಂದು ಕೇಂದ್ರ ಸರ್ಕಾರವೂ ಹೊರಡಿಸಿದೆ.

ಮುಖ್ಯಮಂತ್ರಿ ವಿಜಯನ್ ಈ ವಿಷಯದಲ್ಲಿ ಕೇಂದ್ರವು ಹೊರಡಿಸಿದ ಮಾರ್ಗಸೂಚಿಗಳನ್ನು ಕೇರಳ ಅನುಸರಿಸಲಿದೆ ಅಷ್ಟೇ ಎಂದು ಅವರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.

ಆದರೆ, ಈಗ ಕೇರಳ ರಾಜ್ಯ ಬಿಜೆಪಿ ಹಾಗೂ ಹಿಂದೂ ಐಕ್ಯ ವೇದಿಕೆ, ರಾಜ್ಯ ಸರ್ಕಾರವು ದೇವಾಲಯದ ಆದಾಯದ ಮೇಲೆ ಕಣ್ಣಿಟ್ಟಿದೆ ಎಂದು ಎಂದು ಆರೋಪಿಸುತ್ತಿದೆ. ದೇವಾಲಯಗಳನ್ನು ತೆರೆಯುವ ಬದಲು ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ದೇವಾಲಯಗಳಿಗೆ ಮತ್ತು ಅದರ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ಆರ್ಥಿಕ ಸಹಾಯವನ್ನು ನೀಡಬೇಕು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳದ ಎಡಪಕ್ಷ ಸರ್ಕಾರದ ರಾಜ್ಯ ಸಚಿವ ಕಡಕಂಪಲ್ಲಿ ಸುರೇಂದ್ರನ್ “ಈ ಕ್ರಮವನ್ನು ವಿರೋಧಿಸುತ್ತಿರುವವರು ಈ ಹಿಂದೆ ದೇವಾಲಯಗಳನ್ನು ಪುನಃ ತೆರೆಯಲು ಯಾಕೆ ಒತ್ತಾಯಿಸುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ಅಸಾಧ್ಯವಾಗಿದೆ. ಕೇಂದ್ರದ ನಿರ್ದೇಶನದಂತೆ ಧಾರ್ಮಿಕ ಸ್ಥಳಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಇಬ್ಬಂದಿತನವನ್ನು ಬಹಿರಂಗಪಡಿಸಿದ ಅವರು, ಈಗ ದೇವಾಲಯಗಳನ್ನು ತೆರೆಯುವುದನ್ನು ವಿರೋಧಿಸುವವರು ಈ ಹಿಂದೆ ಭಕ್ತರಿಗೆ ಅವಕಾಶ ನೀಡಬೇಕೆಂದು ಬೊಬ್ಬೆಹಾಕಿದ್ದರು ಎಂದು ಅವರು ಹೇಳಿದ್ದಾರೆ.

ದೇವಾಲಯಗಳನ್ನು ಪುನಃ ತೆರೆಯುವ ಹಿಂದಿನ ಉದ್ದೇಶವೇ ಆದಾಯ ಎಂಬ ಆರೋಪವನ್ನು ತಳ್ಳಿಹಾಕಿದ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ ಎನ್ ವಾಸು ಭಕ್ತರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು  ಹೇಳಿದ್ದಾರೆ.

ಕೇಂದ್ರದ ಎಸ್‌ಒಪಿಗಳ ಪ್ರಕಾರ, ಎಲ್ಲಾ ಪೂಜಾ ಸ್ಥಳಗಳಲ್ಲಿ ಸಾಮಾಜಿಕ ದೂರವನ್ನು ಅನುಸರಿಸಬೇಕು ಮತ್ತು ಭಕ್ತರು ಮಾಸ್ಕ್‌ಗಳನ್ನು ಧರಿಸಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೂಜಾ ಸ್ಥಳಗಳಲ್ಲಿ ಅವಕಾಶವಿಲ್ಲ. ಆಹಾರ ವಿತರಣೆ, ಪ್ರಸಾದಗಳು ನೀಡುವಂತಿಲ್ಲ ಎಂದು ಸೂಚಿಸಿದೆ.


ಓದಿ: ಆನೆಯ ಹೆಸರಲ್ಲಿ ದ್ವೇಷ ಅಭಿಯಾನ ಮಾಡುವವರ ವಿರುದ್ದ ವಿಭಿನ್ನವಾಗಿ ಪ್ರತಿಕ್ರಿಯಿಸಿದ ಕೇರಳ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...