Homeಮುಖಪುಟದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

- Advertisement -
- Advertisement -

ಕೇಂದ್ರದ ಮಾರ್ಗಸೂಚಿಯನ್ನು ಅನುಸರಿಸಿ ಕೇರಳದಲ್ಲಿ ದೇವಾಲಯಗಳನ್ನು ಪುನಃ ತೆರೆಯುತ್ತಿದ್ದಂತೆ ಕೇರಳ ಬಿಜೆಪಿ ಇದನ್ನು ’ತುರಾತುರಿ ಕ್ರಮ’ ಎಂದು ಬಣ್ಣಿಸಿ ರಾಜ್ಯ ಸರ್ಕಾರವನ್ನು ಟೀಕಿಸಿದೆ. ಆದರೆ ಈ ಹಿಂದೆ ಅದೇ ಬಿಜೆಪಿ ರಾಜ್ಯದಲ್ಲಿ ದೇವಾಲಯವನ್ನು ತೆರೆಯಬೇಕು ಎಂದು ಆಗ್ರಹಿಸಿತ್ತು. ಒಟ್ಟಿನಲ್ಲಿ ದೇವಾಲಯದ ವಿಷಯದಲ್ಲಿ ಬಿಜೆಪಿಯು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ದೇವಾಲಯಗಳನ್ನು ತೆರೆಯುತ್ತಿದ್ದಂತೆ ಕೇರಳದ ಬಿಜೆಪಿ ಮುಖಂಡ ಹಾಗೂ ಕೇಂದ್ರ ಸಚಿವ ವಿ ಮುರಳೀಧರನ್ ಈ ಕ್ರಮಕ್ಕೆ ವಿರುದ್ಧವಾಗಿ ಟ್ವೀಟ್ ಮಾಡಿದ್ದಾರೆ: “ಭಕ್ತರ ವಿರೋಧದ ನಡುವೆಯೂ ದೇವಾಲಯಗಳನ್ನು ಪುನಃ ತೆರೆಯುವುದರ ಹಿಂದೆ ಕೇರಳ ಸರ್ಕಾರವು ಬೇರೇನೋ ಕೆಟ್ಟ ಉದ್ದೇಶವನ್ನು ಹೊಂದಿದೆ. ದೇವಾಲಯವನ್ನು ತೆರೆಯಲು ಭಕ್ತರು ಅಥವಾ ದೇವಾಲಯ ಸಮಿತಿಗಳು ಒತ್ತಾಯಿಸಿಲ್ಲ” ಎಂದಿದ್ದಾರೆ.

“ಇಷ್ಟು ಆತುರ ಯಾಕೆ?  ಇದು ನಾಸ್ತಿಕ ‌ಪಿಣರಾಯಿ ವಿಜಯನ್ ಸರ್ಕಾರವು ಭಕ್ತರನ್ನು ನಿರಾಕರಿಸುವ ಉದ್ದೇಶಪೂರ್ವಕ ಪ್ರಯತ್ನವೇ? ಸರ್ಕಾರ ಭಕ್ತರ ಧ್ವನಿಗೆ ಕಿವಿಗೊಡಬೇಕು ಹಾಗೂ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು, ”ಎಂದು ಅವರು ಜೂನ್‌ 8 ರಂದು ಹೇಳಿದ್ದಾರೆ.

ಆದರೆ ಇದೇ ವಿ. ಮುರುಳೀಧರನ್ ದೇವಾಲಯವನ್ನು ತೆರೆಯದ ಕಾರಣಕ್ಕಾಗಿ ಈ ಹಿಂದೆ ಕೇರಳದ ಕಮ್ಯುನಿಷ್ಟ್ ಎಡ ಪಂಥೀಯ ಸರ್ಕಾರವನ್ನು ಟೀಕಿಸುತ್ತಿದ್ದರು.


ಓದಿ: ಕೇರಳದ ಗರ್ಭಿಣಿ ಆನೆ ಸಾವಿನ ಬಗ್ಗೆ ಬಲ ಪಂಥೀಯರು ಹರಡಿದ ಎರಡು ಸುಳ್ಳುಗಳು


ಮೇ 28 ರಂದು ಮುರಲೀಧರನ್ ಅವರು ರಾಜ್ಯಗಳಾದ್ಯಂತ ಮದ್ಯದ ಮಳಿಗೆಗಳು ತೆರೆದಿದೆ, ದೇವಾಲಯಗಳನ್ನೂ ತೆರೆಯಬಹುದು ಎಂದು ಹೇಳಿದ್ದರು. ದೇವಾಲಯಗಳನ್ನು ತೆರೆಯುವ ಮೂಲಕ ಭಕ್ತರ ಮೇಲೆ “ಕರುಣೆ ತೋರಿಸಿ” ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ವಿಡಿಯೋ ನೋಡಿ

കള്ള് കുടിയന്മാരോടുള്ള താല്‍പര്യം ദൈവവിശ്വാസിയോടും കാണണം-കെ.മുരളീധരന്‍

കള്ള് കുടിയന്മാരോടുള്ള സര്‍ക്കാരിനുള്ള താല്‍പര്യം ദൈവവിശ്വാസിയോടും കാണിക്കണമെന്ന് കെ.മുരളീധരന്‍ എം.പി. ആരാധനാലയങ്ങള്‍ തുറക്കാനുള്ള സൗകര്യമൊരുക്കണം. മദ്യ ഷാപ്പ് തുറുന്നാല്‍ സാമൂഹിക അകലം പാലിക്കപ്പെടുന്നതും ആരാധനാലയങ്ങള്‍ തുറന്നാല്‍ സാമൂഹിക അകല ലംഘനം നടക്കുന്നതും എങ്ങനെയാണെന്ന് കെ.മുരളീധരന്‍ ചോദിച്ചു. വേണ്ടത്ര സുരക്ഷയൊരുക്കാനും മാനദണ്ഡങ്ങള്‍ പാലിക്കാനുമൊക്കെ ആരാധനാലയ ഭാരവാഹികളും ബന്ധപ്പെട്ടവരുമൊക്കെ തയ്യാറാണ്. വേണമെങ്കില്‍ വെര്‍ച്വല്‍ ക്യൂ സംവിധാനമൊക്കെ ഇവിടെയും നടപ്പാക്കാമെന്നും മുരളീധരന്‍ പറഞ്ഞു.ആരാധനാലയങ്ങള്‍ തുറക്കുന്നത് കൊണ്ട് ഒരു വ്യാപനവും ഉണ്ടാവില്ല. സംസ്ഥാനത്ത് ഇപ്പോള്‍ കൊറോണയുടെ സമൂഹ വ്യാപനമല്ല മദ്യത്തിന്റെ സമൂഹ വ്യാപനമാന്ന് ഉണ്ടായികൊണ്ടിരിക്കുന്നത്. ആപ്പ് സര്‍ക്കാരിനെ ആപ്പാക്കും. മന്ത്രി ടി.പി രാമകൃഷ്ണന്‍ ഭാവിയില്‍ ഒരു പാട് കാര്യങ്ങള്‍ക്ക് വിശദീകരണം നല്‍കേണ്ടി വരുമെന്നും മുരളീധരന്‍ പറഞ്ഞു.#Covid19 #Lockdown #Muraleedharan

Posted by Mathrubhumi on Thursday, May 28, 2020

ಕೊರೊನಾ ಲಾಕ್‌ಡೌನ್ ಅನ್ನು ಕ್ರಮೇಣ ತೆರವುಗೊಳಿಸುವ ಭಾಗವಾಗಿ ಲಾಕ್‌ಡೌನ್‌ 5.0 ಮಾರ್ಗಸೂಚಿಗಳಲ್ಲಿ ರೆಸ್ಟೋರೆಂಟ್‌ಗಳು, ಮಾಲ್‌ಗಳು ಹಾಗೂ ಪೂಜಾ ಸ್ಥಳಗಳನ್ನು ತೆರೆಯುವ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನ್ನು ಜೂನ್ 4 ರಂದು ಕೇಂದ್ರ ಸರ್ಕಾರವೂ ಹೊರಡಿಸಿದೆ.

ಮುಖ್ಯಮಂತ್ರಿ ವಿಜಯನ್ ಈ ವಿಷಯದಲ್ಲಿ ಕೇಂದ್ರವು ಹೊರಡಿಸಿದ ಮಾರ್ಗಸೂಚಿಗಳನ್ನು ಕೇರಳ ಅನುಸರಿಸಲಿದೆ ಅಷ್ಟೇ ಎಂದು ಅವರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.

ಆದರೆ, ಈಗ ಕೇರಳ ರಾಜ್ಯ ಬಿಜೆಪಿ ಹಾಗೂ ಹಿಂದೂ ಐಕ್ಯ ವೇದಿಕೆ, ರಾಜ್ಯ ಸರ್ಕಾರವು ದೇವಾಲಯದ ಆದಾಯದ ಮೇಲೆ ಕಣ್ಣಿಟ್ಟಿದೆ ಎಂದು ಎಂದು ಆರೋಪಿಸುತ್ತಿದೆ. ದೇವಾಲಯಗಳನ್ನು ತೆರೆಯುವ ಬದಲು ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ದೇವಾಲಯಗಳಿಗೆ ಮತ್ತು ಅದರ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ಆರ್ಥಿಕ ಸಹಾಯವನ್ನು ನೀಡಬೇಕು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳದ ಎಡಪಕ್ಷ ಸರ್ಕಾರದ ರಾಜ್ಯ ಸಚಿವ ಕಡಕಂಪಲ್ಲಿ ಸುರೇಂದ್ರನ್ “ಈ ಕ್ರಮವನ್ನು ವಿರೋಧಿಸುತ್ತಿರುವವರು ಈ ಹಿಂದೆ ದೇವಾಲಯಗಳನ್ನು ಪುನಃ ತೆರೆಯಲು ಯಾಕೆ ಒತ್ತಾಯಿಸುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ಅಸಾಧ್ಯವಾಗಿದೆ. ಕೇಂದ್ರದ ನಿರ್ದೇಶನದಂತೆ ಧಾರ್ಮಿಕ ಸ್ಥಳಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಇಬ್ಬಂದಿತನವನ್ನು ಬಹಿರಂಗಪಡಿಸಿದ ಅವರು, ಈಗ ದೇವಾಲಯಗಳನ್ನು ತೆರೆಯುವುದನ್ನು ವಿರೋಧಿಸುವವರು ಈ ಹಿಂದೆ ಭಕ್ತರಿಗೆ ಅವಕಾಶ ನೀಡಬೇಕೆಂದು ಬೊಬ್ಬೆಹಾಕಿದ್ದರು ಎಂದು ಅವರು ಹೇಳಿದ್ದಾರೆ.

ದೇವಾಲಯಗಳನ್ನು ಪುನಃ ತೆರೆಯುವ ಹಿಂದಿನ ಉದ್ದೇಶವೇ ಆದಾಯ ಎಂಬ ಆರೋಪವನ್ನು ತಳ್ಳಿಹಾಕಿದ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ ಎನ್ ವಾಸು ಭಕ್ತರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು  ಹೇಳಿದ್ದಾರೆ.

ಕೇಂದ್ರದ ಎಸ್‌ಒಪಿಗಳ ಪ್ರಕಾರ, ಎಲ್ಲಾ ಪೂಜಾ ಸ್ಥಳಗಳಲ್ಲಿ ಸಾಮಾಜಿಕ ದೂರವನ್ನು ಅನುಸರಿಸಬೇಕು ಮತ್ತು ಭಕ್ತರು ಮಾಸ್ಕ್‌ಗಳನ್ನು ಧರಿಸಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೂಜಾ ಸ್ಥಳಗಳಲ್ಲಿ ಅವಕಾಶವಿಲ್ಲ. ಆಹಾರ ವಿತರಣೆ, ಪ್ರಸಾದಗಳು ನೀಡುವಂತಿಲ್ಲ ಎಂದು ಸೂಚಿಸಿದೆ.


ಓದಿ: ಆನೆಯ ಹೆಸರಲ್ಲಿ ದ್ವೇಷ ಅಭಿಯಾನ ಮಾಡುವವರ ವಿರುದ್ದ ವಿಭಿನ್ನವಾಗಿ ಪ್ರತಿಕ್ರಿಯಿಸಿದ ಕೇರಳ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...