Homeಮುಖಪುಟಯುದ್ಧ ನೌಕೆ 'INS ವಿಕ್ರಾಂತ್’‌ ಉಪಕರಣಗಳ ಕಳ್ಳತನ; ಪ್ರಕರಣ ಭೇದಿಸಿದ NIA

ಯುದ್ಧ ನೌಕೆ ‘INS ವಿಕ್ರಾಂತ್’‌ ಉಪಕರಣಗಳ ಕಳ್ಳತನ; ಪ್ರಕರಣ ಭೇದಿಸಿದ NIA

- Advertisement -
- Advertisement -

ಭಾರತ ನಿರ್ಮಿತ ಮೊದಲ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ನಿಂದ ಹಾರ್ಡ್ ಡಿಸ್ಕ್, ರಾಮ್‌ಗಳು ಹಾಗೂ ಪ್ರೊಸೆಸರ್‌ಗಳ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣವನ್ನು ಭೇದಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಹೇಳಿಕೊಂಡಿದೆ.

2019 ರ ಸೆಪ್ಟೆಂಬರ್‌ನಲ್ಲಿ ಕೇರಳದ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಹಡಗು ನಿರ್ಮಾಣದ ಸಂದರ್ಭದಲ್ಲಿ  ಕಳ್ಳತನ ವರದಿಯಾಗಿತ್ತು.

ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ಇಬ್ಬರು ವಲಸೆ ಕಾರ್ಮಿಕರನ್ನು ಬಂಧಿಸಿದ್ದು, ಬಂಧಿತರಲ್ಲಿ ಒಬ್ಬ ವ್ಯಕ್ತಿ ಬಿಹಾರ ಮೂಲದವನು ಇನ್ನೊಬ್ಬ ವ್ಯಕ್ತಿ ರಾಜಸ್ಥಾನದ ನಿವಾಸಿಯಾಗಿದ್ದಾರೆ. ಇಬ್ಬರೂ ಹಡಗಿನಲ್ಲಿ ಪೈಂಟಿಂಗ್‌ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಗುತ್ತಿಗೆದಾರನೊಂದಿಗೆ ವಾಗ್ವಾದವಾಗಿದ್ದರಂದ ಅವರನ್ನು ಕೆಲಸದಿಂದ ಅವರನ್ನು ವಜಾಗೊಳಿಸಲಾಗಿತ್ತು. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಅವರು ಈ ಉಪಕರಣಗಳನ್ನು ಕದ್ದಿದ್ದಾರೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಹಡಗಿನಿಂದ ಕಳ್ಳತನವಾದ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ ಕೇರಳ ಪೊಲೀಸರ ನೆರವಿನೊಂದಿಗೆ 5,000 ಕ್ಕೂ ಹೆಚ್ಚು ಜನರ ಬೆರಳಚ್ಚುಗಳನ್ನು ಪರೀಕ್ಷಿಸಿತ್ತು.

naanu gauri,ನಾನು ಗೌರಿ,
ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಐಎನ್ಎಸ್ ವಿಕ್ರಾಂತ್ .

ಘಟನೆಯ ನಂತರ ಹೆಚ್ಚುವರಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಯನ್ನು ನಿಯೋಜಿಸುವುದರೊಂದಿಗೆ ಹಡಗುಕಟ್ಟೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಬಯೋಮೆಟ್ರಿಕ್ ಸ್ಕ್ಯಾನಿಂಗ್ ಮತ್ತು ಬಾಡಿ ಸ್ಕ್ಯಾನಿಂಗ್ ಅನ್ನು ಸಹ ಗೇಟ್‌ಗಳಲ್ಲಿ ಕಡ್ಡಾಯಗೊಳಿಸಲಾಗಿದೆ.

ಕೊಚ್ಚಿನ್ ಶಿಪ್‌ಯಾರ್ಡ್ ಭಾರತದ ಅತಿದೊಡ್ಡ ಹಡಗು ನಿರ್ಮಾಣ ಮತ್ತು ನಿರ್ವಹಣಾ ಕೇಂದ್ರವಾಗಿದೆ.

ಐಎನ್ಎಸ್ ವಿಕ್ರಾಂತ್ ನೌಕೆಯ ವಿನ್ಯಾಸದ ಕೆಲಸವು 1999 ರಲ್ಲಿ ಪ್ರಾರಂಭವಾಗಿ, ನೌಕೆಯನ್ನು ಕಟ್ಟಲು ಫೆಬ್ರವರಿ 2009 ರಲ್ಲಿ ಪ್ರಾರಂಭಿಸಲಾಗಿದೆ. ಈ ಬೃಹತ್ ನೌಕೆಯು ಫೆಬ್ರವರಿ 2021 ರಲ್ಲಿ ಸಮುದ್ರ ಪ್ರಯೋಗಗಳನ್ನು ಪ್ರಾರಂಭಿಸಿ 2023 ರಲ್ಲಿ ಸೇವೆಗೆ ಪ್ರವೇಶಿಸುವ ನಿರೀಕ್ಷೆಯಿದೆ. ಈ ಯೋಜನೆಯ ವೆಚ್ಚವು 20,000 ಕೋಟಿ ರೂ. ಆಗಿದೆ.

ಐಎನ್‌ಎಸ್ ವಿಕ್ರಾಂತ್ ಪೂರ್ಣಗೊಳ್ಳುವುದರೊಂದಿಗೆ, ವಿಮಾನವಾಹಕ ನೌಕೆಗಳ ನಿರ್ಮಾಣದಲ್ಲಿ ಭಾರತವು ಅಮೇರಿಕಾ, ಇಂಗ್ಲೆಂಡ್, ರಷ್ಯಾ, ಫ್ರಾನ್ಸ್ ಮತ್ತು ಚೀನಾ ಶ್ರೇಣಿಯನ್ನು ಸೇರಲಿದೆ.


ಓದಿ: ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...