Homeಮುಖಪುಟಫ್ಯಾಕ್ಟ್ ಚೆಕಿಂಗ್‌ ಮಾಡಲು ಏಜೆನ್ಸಿಗಳಿಗೆ ಟೆಂಡರ್‌ ಕರೆದ ಕೇಂದ್ರ ಸರ್ಕಾರ

ಫ್ಯಾಕ್ಟ್ ಚೆಕಿಂಗ್‌ ಮಾಡಲು ಏಜೆನ್ಸಿಗಳಿಗೆ ಟೆಂಡರ್‌ ಕರೆದ ಕೇಂದ್ರ ಸರ್ಕಾರ

- Advertisement -
- Advertisement -

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಉದ್ಯಮ (CPSI) ಮತ್ತು ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ಗಳು ಸಾಮಾಜಿಕ ಜಾಲತಾಣದಲ್ಲಿ “ಫ್ಯಾಕ್ಟ್ ಚೆಕ್‌ ಮತ್ತು ಸುಳ್ಳು ಮಾಹಿತಿ ಪತ್ತೆ” ಗೆ ಸಂಬಂಧಿಸಿದ “ಪರಿಹಾರ ಮತ್ತು ಸೇವೆಗಳನ್ನು” ಒದಗಿಸಲು ಸಂಶೋಧನಾ ಏಜೆನ್ಸಿಗಳಿಗೆ ಟೆಂಡರ್ ಆಹ್ವಾನಿಸಿವೆ.

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿಯ ಹರಡುವಿಕೆಯನ್ನು ತಡೆಗಟ್ಟಲು ಟೆಂಡರ್‌ ಕರೆದಿದ್ದು, ಬಿಡ್ಡಿಂಗ್‌ ಸಂಸ್ಥೆಗಳು “ಸುಳ್ಳು ಸುದ್ದಿಗಳ ಹಿಂದಿರಿರುವ ಪ್ರಮುಖ ಪ್ರಭಾವಿಗಳನ್ನು ಪತ್ತೆಹಚ್ಚಿ, ಅವರ ಲೊಕೇಷನ್‌ ಅನ್ನು ಹುಡಕಲು ಸಮರ್ಥವಾಗಿರಬೇಕು.” ಎಂದು BECIL ಹೇಳಿದೆ.

ಸರ್ಕಾರವು ಅಕ್ರಮ ಕಣ್ಗಾವಲಿಗಾಗಿ ಮಾರ್ಗಗಳನ್ನು ಹುಡುಕುತ್ತಿದೆ. ಇದು ‘ಮಾಟಗಾತಿ ಬೇಟೆ’ ಇದ್ದಂತೆ ಎಂದು ಸೈಬರ್ ಕಾನೂನು ಮತ್ತು ಇತರ ಸುಳ್ಳು ಸುದ್ದಿಗಳನ್ನು ಬರ್ಸ್ಟ್ ಮಾಡುವ ತಜ್ಞರು ಹೇಳಿದ್ಧಾರೆ.

“ಯಾವುದು ಸುಳ್ಳು ಸುದ್ದಿ ಎಂದು ನಮಗೆ ತಿಳಿಯದಿದ್ದಲ್ಲಿ, ಟೆಂಡರ್‌ ಪಡೆದವನು ಸುಳ್ಳು ಯಾವುದು, ಸತ್ಯ ಏನು? ಎಂಬುದನ್ನು ಹೇಗೆ ಗುರುತಿಸುತ್ತಾರೆ. ನಿಖರವಾಗಿ ಏನು ಗುರುತಿಸಬೇಕು ಮತ್ತು ಯಾವುದನ್ನು ಪರಿಶೀಲಿಸಬೇಕು? ಎಂಬುದನ್ನು ಹೇಗೆ ಕಂಡುಕೊಳ್ಳುತ್ತಾರೆ. ಇದು ಕಾನೂನು ಬಾಹಿತವಾಗಿ ಮತ್ತು ಅನೈತಿಕ ಕಣ್ಗಾವಲಿಗೆ ಸರ್ಕಾರ ಸುಲಭವಾದ ಮಾರ್ಗವನ್ನು ಹುಡುಕಿಕೊಂಡಿದೆ” ಎಂದು ವಕೀಲರಾದ ಸಲ್ಮಾನ್ ವಾರಿಸ್ ಹೇಳಿದ್ದಾರೆ.

ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿಯ ಬಗ್ಗೆ ಯಾವುದಾದರೂ ವ್ಯಾಖ್ಯಾನಕ್ಕೆ ಬಂದಿದ್ದೀರಾ? ಮೇ. 13 ರಂದು ಕರೆದಿರುವ ಟೆಂಡರ್‌ಗಾಗಿ ಯಾರಾದರೂ ಬಿಡ್‌ ಮಾಡಿದ್ದಾರಾ? ಎಂದು ಕೇಳಲಾಗಿರುವ ಪ್ರಶ್ನೆಗೆ ಬಿಇಸಿಎಲ್‌ ಪ್ರತಿಕ್ರಿಯಿಸಿಲ್ಲ.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಸಾಮಾಜಿಕ ಮಾಧ್ಯಮ ನಿಯಮಗಳು 2020 ರ ಮಾರ್ಗಸೂಚಿಗಳ ಕರಡನ್ನು ಏಪ್ರಿಲ್‌ ವೇಳೆಗೆ ಬಿಡುಗಡೆಗೊಳಿಲಾಗುವುದು ಎಂದು ಹೇಳಿತ್ತು. ಆದರೆ, ನಿಯಮಗಳ ಅಂತಿಮ ಕರಡು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ವಾಟ್ಸಾಪ್‌ ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪಹರಣ ಮತ್ತು ಕಳ್ಳಸಾಗಾಣಿಕೆಗಳ ಬಗ್ಗೆ ಪೋಷಕರಿಗೆ ಎಚ್ಚರಿಕೆ ನೀಡುವ ಪೋಸ್ಟ್‌ಗಳು ಹರಿದಾಡಿದ್ದವು. ಅಲ್ಲದೆ, ಈ ವರ್ಷದ ಫೆಬ್ರವರಿಯಲ್ಲಿ ಹಿಂಸಾಚಾರವನ್ನು ಹರಡಲು ವಾಟ್ಸಾಪ್‌ ದುರ್ಬಳಕೆಯಾಗಿದೆ. ಎರಡು ಸಮುದಾಯಗಳ ನಡುವೆ ಗಲಬೆ, ಹಿಂಸಾಚಾರ, ದ್ವೇಷವನ್ನು ಹರಡುವಂತಹ ಪಠ್ಯಗಳು, ಆಡಿಯೋಗಳು ಮತ್ತು ವಿಡಿಯೋಗಳು ವಾಟ್ಸಾಪ್‌ನಲ್ಲಿ ಹರಿದಾಡಿವೆ. ಇವುಗಳಲ್ಲಿ ಕೆಲವು ಹಳೆಯವು ಹಾಗೂ ಅಂದಿನ ಘಟನೆಗೆ ಸಂಬಂಧವೇ ಇಲ್ಲದಂತವುಗಳಾಗಿದೆ.

ಭಾರತದಲ್ಲಿ ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳ ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವು ಫೇಕ್‌ ನ್ಯೂಸ್‌ಗಳನ್ನು ತಡೆಗಟ್ಟುವಲ್ಲಿ ವಿಫಲವಾಗಿವೆ ಎಂದು ಟೀಕೆಗೆ ಒಳಗಾಗಿವೆ. ಟ್ವಿಟರ್‌ ಇತ್ತೀಚೆಗೆ ಸುಳ್ಳು ಸುದ್ದಿಗಳ ವಿರುದ್ಧ ಲೇಬಲ್‌ ಹಾಕಲು ಆರಂಭಿಸಿದೆ. ಆದರೆ, ಹೆಚ್ಚಿನ ಬಳಕೆದಾರರಿರುವದರಿಂದ ಎಲ್ಲಾ ರೀತಿಯ ಫೇಕ್‌ನ್ಯೂಸ್‌ಗಳನ್ನು ತಡೆಗಟ್ಟಲು ಸಾಧ್ಯವಾಗದಿರಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಇದಲ್ಲದೆ, ವೈರಲ್‌ ಅದ ಫೇಕ್‌ ಪೋಸ್ಟ್‌ಗಳ ಹಿಂದಿರುವ ಪ್ರಭಾವಶಾಲಿಗಳನ್ನು ಗುರುತಿಸುವುದು ಸಹ ಸುಲಭವಲ್ಲ. ಪ್ರಭಾವಿಯನ್ನು ಗುರುತಿಸುವುದರ ಜೊತೆಗೆ ಸುಳ್ಳು ಮಾಹಿತಿ ಭೌಗೋಳಿಕ ಸ್ಥಳದ ವಿಶ್ಲೇಷಣೆ ಮಾಡಬೇಕು. ಬಿತ್ತರಿಸಿದ ಪೇಜ್‌ಗಳು ಹಾಗೂ ವಿಡಿಯೋಗಳ ಡೇಟಾವನ್ನು ವರ್ಗೀಕರಿಸಲು ಸಮರ್ಥವಾಗಿರಬೇಕು ಎಂದು ಟೆಂಡರ್‌ನಲ್ಲಿ ಆದೇಶಿಸಲಾಗಿದೆ. ಇಂತಹ “ಡೇಟಾ ವರ್ಗೀಕರಣ ಮತ್ತು ಕ್ಲಸ್ಟರಿಂಗ್”ಗಾಗಿ ಕೃತಕ ಬುದ್ಧಿಮತ್ತೆಯ ಬಳಕೆಯನ್ನು ಟೆಂಡರ್ ಪ್ರಸ್ತಾಪಿಸುತ್ತದೆ. ಆದರೆ, ಅದು ಅಷ್ಟು ಸುಲಭವೂ ಸಾಧ್ಯವೂ ಅಲ್ಲ ಎಂದು ಫ್ಯಾಕ್ಟ್-ಚೆಕಿಂಗ್ ಪ್ಲಾಟ್‌ಫಾರ್ಮ್‌ನ ಸಹ-ಸಂಸ್ಥಾಪಕ ಸಿಹ್ನಾ ಹೇಳುತ್ತಾರೆ.

“ಜಾಗೃತಿ ಅಭಿಯಾನದ ಮೂಲಕ, ಜನರಿಗೆ ಹೇಗೆ ಸತ್ಯವನ್ನು ಪರಿಶೀಲಿಸಬೇಕೆಂದು ಕಲಿಸುವುದು ಫೇಕ್‌ ನ್ಯೂಸ್‌ಗಳನ್ನು ತಡೆಯುವ ಒಂದು ಉತ್ತಮ ಮಾರ್ಗವಾಗಿದೆ. ಟ್ವಿಟರ್ ಮತ್ತು ಫೇಸ್‌ಬುಕ್‌ನಂತಹ ಪ್ಲ್ಯಾಟ್‌ಫಾರ್ಮ್‌ಗಳು ಹಳೆಯ ವೀಡಿಯೊಗಳು ಮತ್ತು ಫೋಟೋಗಳನ್ನು ಮರುಬಳಕೆ ಮಾಡುವ ಹಕ್ಕು ನಿರಾಕರಣೆಗಳನ್ನು ಒದಗಿಸಬಲ್ಲವು” ಎಂದು ಸಿನ್ಹಾ ಹೇಳುತ್ತಾರೆ.

“ಭಾರತದಲ್ಲಿ ಅತೀ ಹೆಚ್ಚು ಫೇಕ್‌ ನ್ಯೂಸ್‌ಗಳನ್ನು ಬಿಜೆಪಿ ಮತ್ತು ಆರೆಸ್ಸೆಸ್‌ನ ಐಟಿ ಸೆಲ್‌ಗಳೇ ಹರಡುತ್ತಿವೆ. ಅದರಲ್ಲೂ 2014 ರಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಮುಸ್ಲಿಂ ವಿರೋಧಿ, ದಲಿತ ವಿರೋಧಿ ಪೇಕ್‌ನ್ಯೂಸ್‌ಗಳನ್ನು ಹೆಚ್ಚಾಗಿ ಬಿಜೆಪಿಯ ನಾನಾ ಬ್ರಾಂಚ್‌ಗಳು ಹರಡುತ್ತಿವೆ. ಕರ್ನಾಟಕದಲ್ಲಿಯೂ ವಿಕ್ರಮ್ ಹೆಗಡೆ ಸಂಪಾದಕನಾಗಿರುವ ಪೋಸ್ಟ್‌ಕಾರ್ಡ್‌ ಫೇಕ್‌ನ್ಯೂಸ್‌ ತಯಾರಿಸಲೇ ಇರುವ ಕರ್ನಾಟಕದ ಕಾರ್ಖಾನೆಯಾಗಿದೆ.” ಎಂದು ಸಾಮಾಜಿಕ ಜಾಲತಾಣ ಪರಿಣಿತರಾದ ಅನಿಲ್ ಕುಮಾರ್‌ ಅಭಿಪ್ರಾಯ ಪಡುತ್ತಾರೆ.

ಸಾಮಾಜಿಕ ಜಾಲತಾಣದ ಮೇಲೆ ಹಿಡಿತ ಸಾಧಿಸುವ ಹಾಗೂ ಬಳಕೆದಾರರನ್ನು ಕಂಟ್ರೋಲ್‌ ಮಾಡುವ ಉದ್ದೇಶದಿಂದ ಇಂತಹ ಹೊಸ ಗೇಮ್‌ಪ್ಲಾನ್‌ ಮಾಡಲು ಸರ್ಕಾರ ಮುಂದಾಗಿದೆ, ಹಾಗಾಗಿ ಇದು ಒಂದು ದೊಡ್ಡ ವ್ಯಂಗ್ಯವಾಗಿದೆ, ಎಂದು ಅನಿಲ್ ಅವರು ಹೇಳುತ್ತಾರೆ.


ಓದಿ: ಸತತ ವೈಫಲ್ಯಗಳ ನಡುವೆಯೂ ಮೋದಿ ಭಾರೀ ಜನ ಬೆಂಬಲ ಹೊಂದಿರುವುದು ಹೀಗೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...