Homeಮುಖಪುಟಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ; ಕೊರೊನಾದಿಂದ ಮೃತಪಟ್ಟ ಪತ್ರಕರ್ತನ ಕೊನೆಯ ಸಂದೇಶ

- Advertisement -
- Advertisement -

“ಇಲ್ಲಿ ಐಸಿಯು ಉತ್ತಮವಾಗಿಲ್ಲ. ದಯವಿಟ್ಟು, ನಾವು ಖಾಸಗಿ ಆಸ್ಪತ್ರೆಗೆ ಹೋಗೋಣ. ಇಲ್ಲಿ ಯಾರೂ ಕಾಳಜಿ ವಹಿಸುತ್ತಿಲ್ಲ.”

ಇದು ಕಳೆದ ವಾರ ಕೊರೊನಾ ವೈರಸ್‌ಗೆ ಬಲಿಯಾದ ಹೈದರಾಬಾದ್‌ನ ಪತ್ರಕರ್ತ ಮನೋಜ್ ಕುಮಾರ್(33) ಕಳುಹಿಸಿದ ಕೊನೆಯ ಸಂದೇಶಗಳಲ್ಲಿ ಒಂದು. ಅವರು ಸರ್ಕಾರಿ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಜೂನ್ 6 ರಂದು ಮಧ್ಯಾಹ್ನ 3.46 ಕ್ಕೆ ಈ ಸಂದೇಶವನ್ನು ಅವರ ಸಹೋದರ ಸಾಯಿನಾಥ್ ಅವರಿಗೆ ಕಳುಹಿಸಿದ 24 ಗಂಟೆಯ ಒಳಗಾಗಿ ಅವರು ಮೃತಪಟ್ಟಿದ್ದಾರೆ.

ಈ ಒಂದು ಸಂದೇಶ, ಮನೋಜ್ ಅನುಭವಿಸುತ್ತಿದ್ದ ಹತಾಶೆಯನ್ನು ತೋರಿಸುತ್ತದೆ. ಅವರು ಆಮ್ಲಜನಕ ಬೇಕೆಂದು ಕೇಳಿದಾಗ ಆಸ್ಪತ್ರೆಯ ಕಡೆಯಿಂದ ಸರಿಯಾದ ಪ್ರತಿಕ್ರಿಯೆ ಬರದೇ ಇರುವ ಕಾರಣ, ತನ್ನ ಸಹೋದರನಿಗೆ “ದಯವಿಟ್ಟು, ನಾವು ಇಲ್ಲಿಂದ ಹೋಗೋಣ” ಎಂದು ಸಂದೇಶ ಕಳುಹಿಸಿದ್ದರು.

ಕೊರೊನಾ ವೈರಸ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನೋಡಲ್ ಕೇಂದ್ರವಾಗಿರುವ ಗಾಂಧಿ ಆಸ್ಪತ್ರೆಯ ಕೊರೊನಾ ವಾರ್ಡ್‌ನ ಅವ್ಯವಸ್ಥೆಯನ್ನು ಎತ್ತಿ ತೋರಿಸುವ ವೀಡಿಯೊವನ್ನು ಸಾಯಿನಾಥ್ ಬಿಡುಗಡೆ ಮಾಡಿದಂತೆಯೇ ಈ ಚಾಟ್‌ಗಳನ್ನೂ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ಸಾಯಿನಾಥ್ ಕೂಡಾ ಮನೋಜ್ ಜೊತೆ ಕೊರೊನಾ ವೈರಸ್‌ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಪ್ರಸ್ತುತ ಹೋಂ ಕ್ವಾರಂಟೈನ್‌ನಲ್ಲಿರುವ ಸಾಯಿನಾಥ್ ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಸಾಯಿನಾಥ್ ವೀಡಿಯೊಗಳಲ್ಲಿ ದಾಖಲಾಗಿರುವಂತೆ ಘಟನೆಗಳ ಅನುಕ್ರಮವನ್ನು ಎತ್ತಿ ತೋರಿಸುತ್ತಾ, “ಜೂನ್ 3 ರಂದು ಬೆಳಿಗ್ಗೆ 11 ಗಂಟೆಗೆ ಮನೋಜ್‌ನಲ್ಲಿ ಸೋಂಕಿನ ಲಕ್ಷಣ ಗೋಚರಿಸಿದರಿಂದ ನಾವು ಜ್ವರ ಆಸ್ಪತ್ರೆಗೆ ಹೋದೆವು. ಮಧ್ಯಾಹ್ನ 3 ಗಂಟೆ ಸುಮಾರಿಗೆ ನಮ್ಮಿಬ್ಬರನ್ನು ಪರೀಕ್ಷೆ ನಡೆಸಲಾಯಿತು. ನಂತರ ನಾವು ಮನೆಗೆ ಹೋದೆವು. ಅದೇ ದಿನ ರಾತ್ರಿ 10 ಗಂಟೆಯ ನಂತರ ನಾವಿಬ್ಬರೂ ಕೊರೊನಾ ಪಾಸಿಟಿವ್ ಎಂದು ಕರೆ ಬಂದು, ನಾವು ತಕ್ಷಣ ಜ್ವರ ಆಸ್ಪತ್ರೆಗೆ ಹೋದೆವು. ಮುಂಜಾನೆ 1 ರ ಹೊತ್ತಿಗೆ ನಮ್ಮನ್ನು ಏಳನೇ ಮಹಡಿಯಲ್ಲಿರುವ ವಾರ್ಡ್‌ಗೆ ಸ್ಥಳಾಂತರಿಸಲಾಯಿತು.” ಎಂದು ಹೇಳಿದ್ದಾರೆ.


ಓದಿ: ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು


ಪ್ರವೇಶ ಪಡೆದ ನಂತರ ಅವರಿಗೆ ಬೆಡ್‌ಶೀಟ್, ಸೋಪ್ ಬಾರ್ ಮತ್ತು ಮಲ್ಟಿ-ವಿಟಮಿನ್ ಟ್ಯಾಬ್ಲೆಟ್‌ಗಳ ಜೊತೆಗೆ ಕೆಲವು ಟೂತ್‌ಪೇಸ್ಟ್ ನೀಡಲಾಗಿದೆ ಎಂದು ಹೇಳಿದ ಸಾಯಿನಾಥ್, “ನಾವು ವಾರ್ಡ್‌ಗೆ ಕಾಲಿಟ್ಟ ಸಮಯದಿಂದ ಸರಿಯಾದ ಸೌಲಭ್ಯಗಳಿಲ್ಲ. ರೋಗಿಗಳಿಗೆ ಮಾಹಿತಿ ನೀಡುವ ಜವಾಬ್ದಾರಿಯನ್ನು ಯಾರೂ ತೆಗೆದುಕೊಳ್ಳಲಿಲ್ಲ” ಎಂದು ಆರೋಪಿಸಿದ್ದಾರೆ.

“ಅದೇ ರಾತ್ರಿ ಮನೋಜ್‌ಗೆ ಉಸಿರಾಟದ ತೊಂದರೆಯಾಗಿ, ಅಲ್ಲಿ ಯಾರಿಗಾದರೂ ತಿಳಿಸುತ್ತೇನೆ ಎಂದರೂ ವಾರ್ಡ್‌ನಲ್ಲಿ ಅಥವಾ ಲಾಬಿಯಲ್ಲಿ ಯಾರೂ ಇರಲಿಲ್ಲ. ನಾನು ಹೊರಗೆ ಹೋಗಿ ನೋಡಿದಾಗ ಕೂಡ ಸ್ವಚ್ಚತಾ ಸಿಬ್ಬಂದಿ ಮಾತ್ರ ಇದ್ದರು. ನಾವು ಹೊರಗೆ ಹೋಗುವಂತಿಲ್ಲ ಮತ್ತು ವೈದ್ಯರು ಮರುದಿನ ಬರುತ್ತಾರೆ ಎಂದು ಅವರು ಹೇಳಿದರು” ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 4 ರ ಮುಂಜಾನೆ ತನ್ನ ಸಹೋದರನ ಪರಿಸ್ಥಿತಿ ಹದಗೆಟ್ಟಿದ್ದನ್ನು ನೋಡಿ ಸಹಿಸಿಕೊಳ್ಳಲಾರದೆ ವೈದ್ಯರಿಗೆ ತಿಳಿಸಲು ಪ್ರಯತ್ನಿಸಿದೆ. ನನ್ನ ಸಹೋದರ ಪತ್ರಕರ್ತನಾಗಿರುವುದರಿಂದ ಅವರ ಕೆಲವು ಸಹೋದ್ಯೋಗಿಗಳನ್ನು ಸಂಪರ್ಕಿಸಿ, ಆಸ್ಪತ್ರೆಯ ಅಧೀಕ್ಷಕರ ಮೇಲೆ ಒತ್ತಡ ಹೇರಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಯು ಅವರನ್ನು ಐಸಿಯುಗೆ ಸ್ಥಳಾಂತರಿಸುವುದಾಗಿ ತಿಳಿಸಿದರು. ಆದರೆ ಸುಮಾರು 4 ಗಂಟೆಗಳು ಕಳೆದರೂ ಅದು ನಡೆಯದಿದ್ದಾಗ ಕಾರಣ ಕೇಳಿದೆ. ಆಸ್ಪತ್ರೆಯ ಐಸಿಯುವಿನಲ್ಲಿ ಸಾಕಷ್ಟು ಹಾಸಿಗೆಗಳಿಲ್ಲ ಎಂದು ಅವರು ಹೇಳಿದರು. ಆಮ್ಲಜನಕದ ಸಿಲಿಂಡರ್ ಅನ್ನು ವಾರ್ಡ್‌ನಲ್ಲಿಯೇ ಇಡಬಹುದೇ ಎಂದು ಕೇಳಿದರೆ ಅಲ್ಲಿ ಅದು ಕೂಡ ಲಭ್ಯವಿಲ್ಲ ಎಂದು ಹೇಳಿದರು. ಇದು ಇಲ್ಲಿಯ ಪರಿಸ್ಥಿತಿ, ” ಎಂದು ಸಾಯಿನಾಥ್ ಹೇಳಿದ್ದಾರೆ.

“ಜೂನ್ 4 ರಂದು ಸಂಜೆ 4 ಗಂಟೆ ಸುಮಾರಿಗೆ ಅವರು ಅವನನ್ನು ವಾರ್ಡ್‌ನಿಂದ ಹೊರಗೆ ಕರೆದೊಯ್ದು ಸುಮಾರು 1.5 ಗಂಟೆಗಳ ಕಾಲ, ಗಾಲಿಕುರ್ಚಿಯಲ್ಲಿ ಕೂರಿಸಿದ್ದಾರೆ ಹಾಗೂ ಅವನಿಗೆ ಚಿಕಿತ್ಸೆ ನೀಡಲಿಲ್ಲ” ಎಂದು ಸಾಯಿನಾಥ್  ಆರೋಪಿಸಿದ್ದಾರೆ.

ಈ ಸಮಯದಲ್ಲಿಯೇ ಮನೋಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದು ತನ್ನ ಸಹೋದರನಿಗೆ ಸಂದೇಶ ಕಳುಹಿಸಿದ್ದಾನೆಂದು ಹೇಳಲಾಗಿದೆ. ಮಾಧ್ಯಮಗಳಲ್ಲಿ ಮನೋಜ್ ಅವರ ಸ್ನೇಹಿತರು ಆರೋಗ್ಯ ಸಚಿವರಿಗೆ ಕರೆ ಮಾಡಿದ ನಂತರವೇ ಅವರು ಮನೋಜ್ ನನ್ನು ಸರಿಯಾಗಿ ನೋಡಿಕೊಳ್ಳಲು ಪ್ರಾರಂಭಿಸಿದರು ಹಾಗೂ ಅವರನ್ನು ಪ್ರತ್ಯೇಕ ವಾರ್ಡ್‌ಗೆ ಸ್ಥಳಾಂತರಿಸಿದರು ಎಂದು ಸಾಯಿನಾಥ್ ಹೇಳಿದ್ದಾರೆ.

ಜೂನ್ 7 ರ ಬೆಳಿಗ್ಗೆ 9.30 ರ ಸುಮಾರಿಗೆ ನಿಮ್ಮ ಸೋದರ ವೆಂಟಿಲೇಟರ್‌ಗೆ ಸ್ಥಳಾಂತರವಾಗಿದ್ದಾರೆ ಎಂದು ಆಸ್ಪತ್ರೆಯಿಂದ ಸಾಯಿನಾಥ್‌‌ಗೆ ಕರೆ ಬಂದಿದ್ದು, ಅದಾಗಿ ಸ್ವಲ್ಪ ಹೊತ್ತಿಗೆ ಸಹೋದರ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಇಲಾಖೆ ಕರೆ ಮಾಡಿದೆ. ಆದರೆ ಯಾವುದೇ ವೈದ್ಯರು ತನಗೆ ಮಾಹಿತಿ ನೀಡಿರಲಿಲ್ಲ ಎಂದು ಸಾಯಿನಾಥ್ ಹೇಳುತ್ತಾರೆ. “ಆಸ್ಪತ್ರೆಯ ಪರಿಸ್ಥಿತಿ ಹೀಗಿದೆ. ನಮ್ಮಂತವರೇ ಚಿಕಿತ್ಸೆಗೆ ಒತ್ತಡ ಹೇರಬೇಕಾಗುವ ಪರಿಸ್ಥಿತಿ ಇದೆ. ಇನ್ನು ಸಾಮಾನ್ಯ ಜನರಿಗೆ ಇದು ತುಂಬಾ ಕಷ್ಟ” ಎಂದು ಅವರು ಹೇಳಿದ್ದಾರೆ.

 

ಇಷ್ಟೇ ಅಲ್ಲದೆ ಸ್ಥಳೀಯ ಮಾಧ್ಯಮಗಳ ಮತ್ತೊಂದು ವೀಡಿಯೊದಲ್ಲಿ ಗಾಂಧಿ ಆಸ್ಪತ್ರೆಯ ವಾರ್ಡ್‌ನ ಒಂದು ಮೂಲೆಯಲ್ಲಿ ಸಿರಿಂಜಿನ ಪಕ್ಕದಲ್ಲೇ ನೀರಿನ ಬಾಟಲಿಗಳು ಇರುವುದನ್ನು ತೋರಿಸಲಾಗಿದೆ. ಹಲವಾರು ವಸ್ತುಗಳು ನೆಲದ ಮೇಲೆ ಹರಡಿಕೊಂಡಿವೆ.

ಆದರೆ ಇದನ್ನು ತೆಲಗಾಂಣ ಸರ್ಕಾರ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.

ರಾಜ್ಯ ಸರ್ಕಾರ ಯಾರನ್ನೂ ನೇರವಾಗಿ ಹೆಸರಿಸದೆ ಸೋಮವಾರ ಮುಖ್ಯಮಂತ್ರಿ ಕಚೇರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು “ಗಾಂಧಿ ಆಸ್ಪತ್ರೆ ಕೊರೊನಾ ವೈರಸ್ ರೋಗಿಗಳಿಂದ ತುಂಬಿಹೋಗಿದೆ ಎಂದು ಕೆಲವರು ಸುಳ್ಳು ಹರಡುತ್ತಿದ್ದಾರೆ. ಕೆಲವು ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಈ ನಕಲಿ ಸುದ್ದಿಯನ್ನು ವರದಿ ಮಾಡುತ್ತಿವೆ. ಆದರೆ ಇದೊಂದು ಸುಳ್ಳು ಸುದ್ದಿಯಾಗಿದೆ. ಗಾಂಧಿ ಆಸ್ಪತ್ರೆಯಲ್ಲಿ, 2,150 ರೋಗಿಗಳಿಗೆ ಚಿಕಿತ್ಸೆ ನೀಡಲು ಸೌಲಭ್ಯವಿದ್ದು, ಆಮ್ಲಜನಕ ಪೂರೈಕೆ ಸೌಲಭ್ಯದೊಂದಿಗೆ 1,000 ಹಾಸಿಗೆಗಳನ್ನು ಹೊಂದಿದೆ. ಅದಲ್ಲದೆ ಆಸ್ಪತ್ರೆಯಲ್ಲಿ ಕೇವಲ 247 ಕೊರೊನ ರೋಗಿಗಳಿದ್ದಾರೆ” ಎಂದಿದೆ.

ಇದಕ್ಕೂ ಮುಂಚೆ ಹೇಳಿಕೆ ಕೊಟ್ಟಿದ್ದ ಗಾಂಧಿ ಆಸ್ಪತ್ರೆಯ ಅಧೀಕ್ಷಕ ರಾಜ ರಾವ್, “ಮನೋಜ್ ಅವರಿಗೆ ವೈದ್ಯರು, ಅರಿವಳಿಕೆ ತಜ್ಞರು ಮತ್ತು ಶ್ವಾಸಕೋಶ ತಜ್ಞರು ಸೇರಿದಂತೆ ವೈದ್ಯರ ತಂಡವು ಚಿಕಿತ್ಸೆ ನೀಡಿದೆ. ಆದರೆ ಅವರಿಗೆ ಜೂನ್ 7 ರಂದು ಹೃದಯಾಘಾತವಾಗಿ ಮೃತಪಟ್ಟರು” ಎಂದಿದ್ದರು.


ಓದಿ: ಮುಂಬೈಯಲ್ಲಿ ಕೊರೊನಾ ಸೋಂಕಿತ ಶವ ಆಸ್ಪತ್ರೆಯಿಂದ ನಾಪತ್ತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...