Homeಮುಖಪುಟಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ವಲಸೆ ಕಾರ್ಮಿಕನೊಬ್ಬ ಆಹಾರ ಮತ್ತು ಔಷಧಕ್ಕಾಗಿ ತನ್ನ ತಾಯಿ ಹಾಗೂ ಹೆಂಡತಿಯ ಮಾಂಗಲ್ಯ ಮಾರಿದ ಘಟನೆ ಉತ್ತರ ಪ್ರದೇಶದ ಖನೌ‌ಜ್‌ನಲ್ಲಿ ನಡೆದಿದೆ.

ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಖನೌಜ್‌ನ ಫತೇಪುರ್ ಜಶೋಧ ಎಂಬ ಗ್ರಾಮದ ಶ್ರೀ ರಾಮ್ ತಮಿಳುನಾಡಿಗೆ ವಲಸೆ ಹೋಗಿ ಕಡಲೂರು ಎಂಬ ಜಿಲ್ಲೆಯಲ್ಲಿ ಕೃಷಿಯ ಜೊತೆಗೆ ಕುಲ್ಪೀ ಐಸ್ ಮಾರಾಟ ಮಾಡಿ ಬದುಕುತ್ತಿದ್ದರು.

ಕುಟುಂಬದ ಸದಸ್ಯರು ತಮಿಳುನಾಡಿನ ಓರ್ವ ಜಮೀನುದಾರನ ಬಳಿ ಕೃಷಿ ಕೂಲಿಗಾರರಾಗಿ ಕೆಲಸ ಮಾಡುತ್ತಿದ್ದರು. ಆದರೆ, ಕೊರೋನಾ ಲಾಕ್‌ಡೌನ್‌ ಕಾರಣದಿಂದಾಗಿ ಕುಟುಂಬ ಸಮೇತರಾಗಿ ಉತ್ತರಪ್ರದೇಶಕ್ಕೆ ಮರಳಿದ್ದ ಈ ಕುಟುಂಬ ತುತ್ತು ಅನ್ನಕ್ಕೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಶ್ರೀ ರಾಮ್ ಕನೌಜಿನ ಸ್ಥಳೀಯ ಮಾರುಕಟ್ಟೆಯಲ್ಲಿ ತನ್ನ ಹೆಂಡತಿ ಮತ್ತು ತಾಯಿಯ ಮಾಂಗಲ್ಯವನ್ನು ಕೇವಲ 1,500 ರೂ ಗೆ ಮಾರಾಟ ಮಾಡಿ ಮನೆಗೆ ಆಹಾರ ಧಾನ್ಯ ಮತ್ತು ಔಷಧಿಯನ್ನು ಖರೀದಿಸಿದ್ದಾರೆ.

ತಮಿಳುನಾಡಿನಿಂದ ಊರಿಗೆ ಮರಳಿರುವ ಅವರ ಕುಟುಂಬದ ಬಳಿ ಪಡಿತರ ಚೀಟಿ, ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಕೆಲಸ ಮಾಡಲು ಜಾಬ್ ಕಾರ್ಡ್ ಸಹ ಇರಲಿಲ್ಲ ಎನ್ನಲಾಗಿದ್ದು, ಹೀಗಾಗಿ ಶ್ರೀರಾಮ್ ಆಹಾರಕ್ಕಾಗಿ ತನ್ನ ತಾಯಿ ಮತ್ತು ಹೆಂಡತಿಯ ಮಾಂಗಲ್ಯ ಮಾರಾಟ ಮಾಡಲು ಮುಂದಾಗಿದ್ದಾರೆ.

ತನ್ನ ಅಸಹಾಯಕತೆಯ ಕುರಿತು ಸ್ಥಳೀಯ ಮಾಧ್ಯಮಗಳಲ್ಲಿ ಅಳಲು ತೋಡಿಕೊಂಡ ಶ್ರೀ ರಾಮ್, “ನಾವು ತಮಿಳುನಾಡಿನಿಂದ ಹಿಂದಿರುಗಿದಾಗ ಸರ್ಕಾರದಿಂದ ತಲಾ 10 ಕೆಜಿ ಅಕ್ಕಿ ಮತ್ತು ಧಾನ್ಯವನ್ನು ಪಡೆದುಕೊಂಡಿದ್ದೇವೆ. ಆದರೆ ನಾವು ಒಂದು ದೊಡ್ಡ ಕುಟುಂಬವಾದ್ದರಿಂದ ಈ ಧಾನ್ಯ ನಮಗೆ ಸಾಕಾಗಿರಲಿಲ್ಲ. ಅಲ್ಲದೆ, ಪಡಿತರ ಚೀಟಿಯೂ ಇಲ್ಲದ ಕಾರಣ ನಾವು ಪಡಿತರ ವ್ಯವಸ್ಥೆಯಿಂದಲೇ ಹೊರಗುಳಿದಿದ್ದೇವೆ” ಎಂದು ಹೇಳುತ್ತಾರೆ.

ಈ ನಡುವೆ ನನ್ನ ತಾಯಿ ಮತ್ತು ಇಬ್ಬರು ಒಡಹುಟ್ಟಿದವರು ಅನಾರೋಗ್ಯಕ್ಕೆ ಒಳಗಾದರು. ನನ್ನ ತಂದೆ ಕೆಲಸ ಪಡೆಯಲು ಪ್ರಯತ್ನಿಸಿದರು ಆದರೆ ಎಲ್ಲೂ ಉದ್ಯೋಗವಿಲ್ಲ. ಅಂತಿಮವಾಗಿ, ನನ್ನ ತಾಯಿ ಮತ್ತು ಹೆಂಡತಿ ಧರಿಸುತ್ತಿದ್ದ ಆಭರಣಗಳನ್ನು ಮಾರಾಟ ಮಾಡುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ. ಈ ಹಣ ಸಹ ಕೆಲವು ದಿನಗಳ ಆಹಾರ ಮತ್ತು ಔಷಧಕ್ಕೆ ಮಾತ್ರ ಸಾಲುತ್ತದೆ. ಹೊಸ ಪಡಿತರ ಚೀಟಿಗೆ ನಾವು ಮನವಿ ಸಲ್ಲಿಸಿದರೆ, ಈಗ ಪಡಿತರ ಚೀಟಿ ನೀಡಲಾಗುವುದಿಲ್ಲ ಎನ್ನುತ್ತಾರೆ” ಎಂದು ಅವರು ಹೇಳಿಕೊಂಡಿದ್ದಾರೆ.

ಈ ಸುದ್ದಿ ಸ್ಥಳೀಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಎಚ್ಚೆತ್ತಿರುವ ಜಿಲ್ಲಾಡಳಿತ ಈ ಕುಟುಂಬಕ್ಕೆ ಪಡಿತರ ಚೀಟಿ ಮತ್ತು ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌ ಅನ್ನು ನೀಡಿದೆ.

ಆದರೆ ಜಾಲತಾಣಿಗರು, ಇದು ಕೇವಲ ಶ್ರೀರಾಮ್‌ ಎಂಬ ಓರ್ವ ವಲಸೆ ಕಾರ್ಮಿಕನ ಕಥೆಯಲ್ಲ. ಬದಲಾಗಿ ಭಾರತದಾದ್ಯಂತ ಇರುವ ಇಂತಹ ಲಕ್ಷಾಂತರ ಶ್ರೀರಾಮ್‌ಗಳು ಲಾಕ್‌ಡೌನ್ ಕಾರಣದಿಂದಾಗಿ ತುತ್ತು ಅನ್ನಕ್ಕಾಗಿ ಪರದಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳುತ್ತಿದ್ದಾರೆ.


ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್‌ ಕಟೀಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...