Homeಮುಖಪುಟಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ವಲಸೆ ಕಾರ್ಮಿಕನೊಬ್ಬ ಆಹಾರ ಮತ್ತು ಔಷಧಕ್ಕಾಗಿ ತನ್ನ ತಾಯಿ ಹಾಗೂ ಹೆಂಡತಿಯ ಮಾಂಗಲ್ಯ ಮಾರಿದ ಘಟನೆ ಉತ್ತರ ಪ್ರದೇಶದ ಖನೌ‌ಜ್‌ನಲ್ಲಿ ನಡೆದಿದೆ.

ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಖನೌಜ್‌ನ ಫತೇಪುರ್ ಜಶೋಧ ಎಂಬ ಗ್ರಾಮದ ಶ್ರೀ ರಾಮ್ ತಮಿಳುನಾಡಿಗೆ ವಲಸೆ ಹೋಗಿ ಕಡಲೂರು ಎಂಬ ಜಿಲ್ಲೆಯಲ್ಲಿ ಕೃಷಿಯ ಜೊತೆಗೆ ಕುಲ್ಪೀ ಐಸ್ ಮಾರಾಟ ಮಾಡಿ ಬದುಕುತ್ತಿದ್ದರು.

ಕುಟುಂಬದ ಸದಸ್ಯರು ತಮಿಳುನಾಡಿನ ಓರ್ವ ಜಮೀನುದಾರನ ಬಳಿ ಕೃಷಿ ಕೂಲಿಗಾರರಾಗಿ ಕೆಲಸ ಮಾಡುತ್ತಿದ್ದರು. ಆದರೆ, ಕೊರೋನಾ ಲಾಕ್‌ಡೌನ್‌ ಕಾರಣದಿಂದಾಗಿ ಕುಟುಂಬ ಸಮೇತರಾಗಿ ಉತ್ತರಪ್ರದೇಶಕ್ಕೆ ಮರಳಿದ್ದ ಈ ಕುಟುಂಬ ತುತ್ತು ಅನ್ನಕ್ಕೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಶ್ರೀ ರಾಮ್ ಕನೌಜಿನ ಸ್ಥಳೀಯ ಮಾರುಕಟ್ಟೆಯಲ್ಲಿ ತನ್ನ ಹೆಂಡತಿ ಮತ್ತು ತಾಯಿಯ ಮಾಂಗಲ್ಯವನ್ನು ಕೇವಲ 1,500 ರೂ ಗೆ ಮಾರಾಟ ಮಾಡಿ ಮನೆಗೆ ಆಹಾರ ಧಾನ್ಯ ಮತ್ತು ಔಷಧಿಯನ್ನು ಖರೀದಿಸಿದ್ದಾರೆ.

ತಮಿಳುನಾಡಿನಿಂದ ಊರಿಗೆ ಮರಳಿರುವ ಅವರ ಕುಟುಂಬದ ಬಳಿ ಪಡಿತರ ಚೀಟಿ, ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಕೆಲಸ ಮಾಡಲು ಜಾಬ್ ಕಾರ್ಡ್ ಸಹ ಇರಲಿಲ್ಲ ಎನ್ನಲಾಗಿದ್ದು, ಹೀಗಾಗಿ ಶ್ರೀರಾಮ್ ಆಹಾರಕ್ಕಾಗಿ ತನ್ನ ತಾಯಿ ಮತ್ತು ಹೆಂಡತಿಯ ಮಾಂಗಲ್ಯ ಮಾರಾಟ ಮಾಡಲು ಮುಂದಾಗಿದ್ದಾರೆ.

ತನ್ನ ಅಸಹಾಯಕತೆಯ ಕುರಿತು ಸ್ಥಳೀಯ ಮಾಧ್ಯಮಗಳಲ್ಲಿ ಅಳಲು ತೋಡಿಕೊಂಡ ಶ್ರೀ ರಾಮ್, “ನಾವು ತಮಿಳುನಾಡಿನಿಂದ ಹಿಂದಿರುಗಿದಾಗ ಸರ್ಕಾರದಿಂದ ತಲಾ 10 ಕೆಜಿ ಅಕ್ಕಿ ಮತ್ತು ಧಾನ್ಯವನ್ನು ಪಡೆದುಕೊಂಡಿದ್ದೇವೆ. ಆದರೆ ನಾವು ಒಂದು ದೊಡ್ಡ ಕುಟುಂಬವಾದ್ದರಿಂದ ಈ ಧಾನ್ಯ ನಮಗೆ ಸಾಕಾಗಿರಲಿಲ್ಲ. ಅಲ್ಲದೆ, ಪಡಿತರ ಚೀಟಿಯೂ ಇಲ್ಲದ ಕಾರಣ ನಾವು ಪಡಿತರ ವ್ಯವಸ್ಥೆಯಿಂದಲೇ ಹೊರಗುಳಿದಿದ್ದೇವೆ” ಎಂದು ಹೇಳುತ್ತಾರೆ.

ಈ ನಡುವೆ ನನ್ನ ತಾಯಿ ಮತ್ತು ಇಬ್ಬರು ಒಡಹುಟ್ಟಿದವರು ಅನಾರೋಗ್ಯಕ್ಕೆ ಒಳಗಾದರು. ನನ್ನ ತಂದೆ ಕೆಲಸ ಪಡೆಯಲು ಪ್ರಯತ್ನಿಸಿದರು ಆದರೆ ಎಲ್ಲೂ ಉದ್ಯೋಗವಿಲ್ಲ. ಅಂತಿಮವಾಗಿ, ನನ್ನ ತಾಯಿ ಮತ್ತು ಹೆಂಡತಿ ಧರಿಸುತ್ತಿದ್ದ ಆಭರಣಗಳನ್ನು ಮಾರಾಟ ಮಾಡುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ. ಈ ಹಣ ಸಹ ಕೆಲವು ದಿನಗಳ ಆಹಾರ ಮತ್ತು ಔಷಧಕ್ಕೆ ಮಾತ್ರ ಸಾಲುತ್ತದೆ. ಹೊಸ ಪಡಿತರ ಚೀಟಿಗೆ ನಾವು ಮನವಿ ಸಲ್ಲಿಸಿದರೆ, ಈಗ ಪಡಿತರ ಚೀಟಿ ನೀಡಲಾಗುವುದಿಲ್ಲ ಎನ್ನುತ್ತಾರೆ” ಎಂದು ಅವರು ಹೇಳಿಕೊಂಡಿದ್ದಾರೆ.

ಈ ಸುದ್ದಿ ಸ್ಥಳೀಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಎಚ್ಚೆತ್ತಿರುವ ಜಿಲ್ಲಾಡಳಿತ ಈ ಕುಟುಂಬಕ್ಕೆ ಪಡಿತರ ಚೀಟಿ ಮತ್ತು ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌ ಅನ್ನು ನೀಡಿದೆ.

ಆದರೆ ಜಾಲತಾಣಿಗರು, ಇದು ಕೇವಲ ಶ್ರೀರಾಮ್‌ ಎಂಬ ಓರ್ವ ವಲಸೆ ಕಾರ್ಮಿಕನ ಕಥೆಯಲ್ಲ. ಬದಲಾಗಿ ಭಾರತದಾದ್ಯಂತ ಇರುವ ಇಂತಹ ಲಕ್ಷಾಂತರ ಶ್ರೀರಾಮ್‌ಗಳು ಲಾಕ್‌ಡೌನ್ ಕಾರಣದಿಂದಾಗಿ ತುತ್ತು ಅನ್ನಕ್ಕಾಗಿ ಪರದಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳುತ್ತಿದ್ದಾರೆ.


ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್‌ ಕಟೀಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...