Homeಕರ್ನಾಟಕಒಂದು ಲೋಟ ನೀರು ಕೇಳಿದ್ದಕ್ಕೆ ಹಲ್ಲೆ: ದಲಿತ ಮುಖಂಡನ ಸಾವು

ಒಂದು ಲೋಟ ನೀರು ಕೇಳಿದ್ದಕ್ಕೆ ಹಲ್ಲೆ: ದಲಿತ ಮುಖಂಡನ ಸಾವು

- Advertisement -
- Advertisement -

ಹೋಟೆಲ್‍ನಲ್ಲಿ ಕುಡಿಯುವ ನೀರು ಕೇಳಿದ ಸಣ್ಣ ಕಾರಣಕ್ಕೆ ಸವರ್ಣೀಯರ ದೌರ್ಜನ್ಯದಿಂದ ಗಂಭೀರವಾಗಿ ಗಾಯಗೊಂಡಿದ್ದ ಅರಕಲಗೂಡು ತಾಲೂಕು ದಲಿತ ಮುಖಂಡ ವೆಂಕಟೇಶ್(42) ಸಾವನಪ್ಪಿದ್ದು, ಇದರ ವಿರುದ್ಧ ತೀವ್ರ ಪ್ರತಿಭಟನೆ ದಾಖಲಾಗಿದೆ.

ಅರಕಲಗೂಡು ತಾಲ್ಲೂಕಿನ ಕಬ್ಬಡಿ ಗ್ರಾಮದ ವೆಂಕಟೇಶ್ ದಲಿತಪರ ಹೋರಾಟಗಾರರಾಗಿದ್ದು, ಜೂನ್ 4 ರಂದು ಮಲ್ಲಿಪಟ್ಟಣದ ಮಲ್ನಾಡ್ ಹಿಂದೂ ಮಿಲ್ಟ್ರಿ ಹೋಟೆಲ್ ಹೋಗಿ ಕುಡಿಯಲು ನೀರು ಕೊಡಿ ಎಂದು ಕೇಳಿದ್ದಾರೆ.  ಇಷ್ಟಕ್ಕೇ ಕೆರಳಿದ ಹೋಟೆಲ್ ಮಾಲೀಕ ಜಗದೀಶ್ ಗೌಡ ಮತ್ತವರ ಮಕ್ಕಳಾದ ಕಿರಣ್, ಲತೇಶ್ ಮತ್ತು ಸ್ಥಳೀಯ ಮಲ್ಲೇಶ್ ಎಂಬುವರು ಸೇರಿ ವೆಂಕಟೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಕಾಲಿನಿಂದ ಒದ್ದು, ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಮನಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಗಂಭೀರ ಗಾಯಗೊಂಡ ವೆಂಕಟೇಶ್‍ಗೆ ಅರಕಲಗೂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹಾಸನ ಜಿಲ್ಲಾಸ್ಪತ್ರೆ ಹಾಗೂ ಬೆಂಗಳೂರಿನಲ್ಲೂ ಹೆಚ್ಚಿನ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಕಿಡ್ನಿ, ಲಿವರ್ ಹಾಗೂ ಹೃದಯದ ಭಾಗಕ್ಕೆ ಪೆಟ್ಟಾಗಿರುವುದು ಪತ್ತೆಯಾಗಿದೆ. ಜೊತೆಗೆ ರಕ್ತಸ್ರಾವ ಕೂಡ ಆಗಿತ್ತು. ನಂತರ ಅವರನ್ನು ಹಾಸನ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದಾಗ ಜೂನ್‌ 10 ರಂದು ಪ್ರಾಣಬಿಟ್ಟಿದ್ದಾರೆ.

ಈ ವಿಚಾರದಲ್ಲಿ ಅರಕಲಗೂಡು ಪೊಲೀಸರು ಎಫ್‍ಐಆರ್ ದಾಖಲು ಮಾಡಲು ವಿಳಂಬ ತೋರಿದ್ದಾರೆ ಎಂದು ಆರೋಪಿಸಿ ದಸಸಂ ಮತ್ತು ಬಿಎಸ್‌ಪಿ ಕಾರ್ಯಕರ್ತರು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.

ವೆಂಕಟೇಶ್ ಸಾವಿಗೆ ಕಾರಣರಾದವರನ್ನು ಬಂಧಿಸಬೇಕು. ಘಟನೆ ನಡೆದು ವಾರ ಕಳೆದಿದ್ದರೂ, ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ ಅರಕಲಗೂಡು ಪೊಲೀಸರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ವೆಂಕಟೇಶ್ ಸಂಬಂಧಿಕರು, ಗ್ರಾಮಸ್ಥರು ಹಾಗೂ ದಲಿತ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿ, ಬೀದಿಗೆ ಬಂದಿರುವ ಮೃತನ ಬಡ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‍ಗೌಡ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿ “ಈಗಾಗಲೇ ಮೂವರನ್ನು ಬಂಧಿಸಲಾಗಿದೆ, ಮತ್ತೋರ್ವನನ್ನು ಶೀಘ್ರ ಬಂಧಿಸಲಾಗುವುದು. ಮೃತನ ಕುಟುಂಬಕ್ಕೆ ಈಗಾಗಲೇ 8.25 ಲಕ್ಷರೂ ಪರಿಹಾರ ಧನ ಬಿಡುಗಡೆಯಾಗಿದ್ದು, ಮೊದಲ ಕಂತಿನಲ್ಲಿ 4.12 ಲಕ್ಷ ನೀಡಲಾಗಿದೆ. ಉಳಿದ ಹಣ ಶೀಘ್ರ ಕುಟುಂಬಕ್ಕೆ ತಲುಪಲಿದೆ. ಮೃತನ ಪತ್ನಿಗೆ ಮಾಸಿಕ ಪಿಂಚಣಿ ಮತ್ತು ಸರ್ಕಾರಿ ಕೆಲಸ ಕೊಡಿಸಲು ಪ್ರಯತ್ನಿಸಲಾಗುವುದು ಎಂದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಬಂ ನಂತರ ಸಾವಿಗೆ ಕಾರಣಗಳನ್ನು ತಿಳಿಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವೆಂಕಟೇಶ್ ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಉತ್ತರ ಪ್ರದೇಶ: ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ್ದಕ್ಕೆ ದಲಿತ ಬಾಲಕನನ್ನು ಗುಂಡಿಕ್ಕೆ ಹತ್ಯೆ

ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ : ಚಂದ್ರಶೇಖರ್‌ ರಾವಣ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...