Homeಅಂತರಾಷ್ಟ್ರೀಯಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಅಮೆರಿಕ ಸರ್ಕಾರದ ವರದಿ ತಿರಸ್ಕರಿಸಿದ ಭಾರತ

ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಅಮೆರಿಕ ಸರ್ಕಾರದ ವರದಿ ತಿರಸ್ಕರಿಸಿದ ಭಾರತ

- Advertisement -
- Advertisement -

ಭಾರತದಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ವಿರುದ್ಧದ ದಾಳಿ ಮತ್ತು ತಾರತಮ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅಮೆರಿಕ ಸರ್ಕಾರದ ಧಾರ್ಮಿಕ ಸ್ವಾತಂತ್ರ್ಯದ ಬಗೆಗಿನ ವರದಿಯನ್ನು ಭಾರತ ತಿರಸ್ಕರಿಸಿದೆ.

“ನಮ್ಮ ನಾಗರಿಕರ ಸಾಂವಿಧಾನಿಕವಾಗಿ ಸಂರಕ್ಷಿತ ಹಕ್ಕುಗಳ ಬಗ್ಗೆ ಮಾತನಾಡಲು ವಿದೇಶಿ ಘಟಕಕ್ಕೆ ಯಾವುದೇ ಸ್ಥಳಾವಕಾಶವಿಲ್ಲ ಎಂಬುದು ನಮ್ಮ ತತ್ವಬದ್ಧ ನಿಲುವಾಗಿದೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

“ಭಾರತದ ರೋಮಾಂಚಕ ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ಆಚರಣೆಗಳು ಜಗತ್ತಿಗೆ ಸ್ಪಷ್ಟವಾಗಿವೆ. ಭಾರತದ ಜನರು ಮತ್ತು ಸರ್ಕಾರವು ನಮ್ಮ ದೇಶದ ಪ್ರಜಾಪ್ರಭುತ್ವ ಸಂಪ್ರದಾಯಗಳ ಬಗ್ಗೆ ಹೆಮ್ಮೆಪಡುತ್ತದೆ” ಎಂದು ಅವರು ಹೇಳಿದ್ದಾರೆ.

“ಯುಎಸ್ ಕಾಂಗ್ರೆಸ್ ಆದೇಶದಂತೆ, ವಿಶ್ವದಾದ್ಯಂತ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯ ಪ್ರಮುಖ ನಿದರ್ಶನಗಳನ್ನು ದಾಖಲಿಸುವ ‘2019 ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ವರದಿ’ ಯನ್ನು ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಬುಧವಾರ ಬಿಡುಗಡೆ ಮಾಡಿದ್ದರು.

ಭಾರತದಲ್ಲಿ ಕೊರೊನಾ ಸೋಂಕು ಹರಡಲು ಅಲ್ಪಸಂಖ್ಯಾತರನ್ನು ಜವಾಬ್ದಾರರನ್ನಾಗಿ ಮಾಡಲಾಗುತ್ತಿದೆ. ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಯದ ವಾತಾವರಣ ಇದೆ ಎಂದು ಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗದ ರಾಯಭಾರಿಯಾಗಿರುವ ಸ್ಯಾಮುಯೆಲ್ ಬ್ರೌನ್​ಬ್ಯಾಕ್ ಹೇಳಿದ್ದರು.

ಅಮೆರಿಕಾ ಸರ್ಕಾರದ ಕಾರ್ಯದರ್ಶಿ ಮೈಕ್ ಪೊಂಪಿಯೊ ಬುಧವಾರ ಬಿಡುಗಡೆ ಮಾಡಿದ್ದ ‘2019 ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ವರದಿ’ಯಲ್ಲಿ ಭಾರತದಲ್ಲಿ ನಡೆಯುತ್ತಿರುವ ಧಾರ್ಮಿಕ ಪ್ರೇರಣೆಯ ಗುಂಪು ಹಿಂಸಾಚಾರ, ಲಿಂಚಿಂಗ್, ಕೋಮು ಹಿಂಸೆ ಹಾಗೂ ಬಿಜೆಪಿಯನ್ನೂ ಸೇರಿದಂತೆ ಹಿಂದೂ ಬಹುಸಂಖ್ಯಾತ ಪಕ್ಷಗಳ ಕೆಲವು ಅಧಿಕಾರಿಗಳು ಸಾರ್ವಜನಿಕವಾಗಿ ಪ್ರಚೋದನಕಾರಿ ಹೇಳಿಕೆಯನ್ನು ನೀಡಿರುವ, ಅಲ್ಪಸಂಖ್ಯಾತ ಸಮುದಾಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಬರೆದಿರುವ ಬಗ್ಗೆ ಚರ್ಚಿಸಲಾಗಿತ್ತು.

ಕಳೆದ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವುದು ಮತ್ತು ಡಿಸೆಂಬರ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಸಂಸತ್ತು ಅಂಗೀಕರಿಸುವುದು ಭಾರತದಲ್ಲಿನ ಧಾರ್ಮಿಕ ಸ್ವಾತಂತ್ರ್ಯದ ಕಳವಳಕ್ಕೆ  ಪ್ರಮುಖ ಕಾರಣಗಳೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಭಾರತ “ನಾವು ಭಾರತದಲ್ಲಿ ದೃಢವಾದ ಸಾರ್ವಜನಿಕ ಪ್ರವಚನವನ್ನು ಹೊಂದಿದ್ದೇವೆ ಮತ್ತು ಧಾರ್ಮಿಕ ಸ್ವಾತಂತ್ರ್ಯ ಮತ್ತು ಕಾನೂನಿನ ನಿಯಮಗಳ ರಕ್ಷಣೆಯನ್ನು ಖಾತರಿಪಡಿಸುವ ಸಾಂವಿಧಾನಿಕವಾಗಿ ಕಡ್ಡಾಯವಾದ ಸಂಸ್ಥೆಗಳನ್ನು ಹೊಂದಿದ್ದೇವೆ” ಎಂದು ಹೇಳಿದೆ.

“ಯುಎಸ್ ಕಾಂಗ್ರೆಸ್‌ಗೆ ಅದರ ಕಾನೂನು ಅವಶ್ಯಕತೆಯ ಭಾಗವಾಗಿ ವರದಿಯನ್ನು ವಾರ್ಷಿಕವಾಗಿ ರಾಜ್ಯ ಇಲಾಖೆಯು ಪ್ರಕಟಿಸುತ್ತದೆ ಮತ್ತು ಇದು ಯುಎಸ್ ಸರ್ಕಾರದ ಆಂತರಿಕ ದಾಖಲೆಯಾಗಿದೆ” ಎಂದು ಶ್ರೀವಾಸ್ತವ ಹೇಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಪ್ರತಿಭಟನೆಗೆ ಕರೆ ನೀಡಿದ ಪತ್ರಕರ್ತ ಆಕಾರ್ ಪಟೇಲ್ ಟ್ವಿಟ್ಟರ್ ಖಾತೆ ಭಾರತದಲ್ಲಿ ನಿರ್ಬಂಧ!

ಮೀಸಲಾತಿ ಮೂಲಭೂತ ಹಕ್ಕಲ್ಲ: ಸುಪ್ರೀಂ ಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪನ್ನೂನ್‌ ಹತ್ಯೆಗೆ ಸಂಚು: ವಾಷಿಂಗ್‌ ಟನ್‌ ಪೋಸ್ಟ್‌ ವರದಿ ತಿರಸ್ಕರಿಸಿದ ಭಾರತ

0
ಭಾರತದ ಮಾಜಿ ಗುಪ್ತಚರ ಅಧಿಕಾರಿಯೊಬ್ಬರು ಅಮೆರಿಕದ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನೂನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ಇಂದು ಬಲವಾಗಿ ತಿರಸ್ಕರಿಸಿದೆ. ಭಾರತದ ರಿಸರ್ಚ್...