Homeಮುಖಪುಟಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

- Advertisement -
- Advertisement -

ಮಾರ್ಚ್‌ನಲ್ಲಿ ಕೊರೊನಾ ಲಾಕ್‌ಡೌನ್ ವಿಧಿಸಿದಾಗಿನಿಂದ ವಲಸೆ ಕಾರ್ಮಿಕರ ಕುರಿತು ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವಾಲಯ ಸಂಗ್ರಹಿಸಿದ ಪ್ರಾಥಮಿಕ ಮಾಹಿತಿಯಂತೆ, ದೇಶದ ನಗರ ಕೇಂದ್ರಗಳಿಂದ ಆರು ರಾಜ್ಯಗಳ 116 ಜಿಲ್ಲೆಗಳಿಗೆ 67 ಲಕ್ಷ ವಲಸಿಗರು ವಾಪಾಸು ತಮ್ಮ ಮನೆಗಳಿಗೆ ಮರಳಿದ್ದಾರೆ.

ಈ ಪೈಕಿ ಸುಮಾರು 44 ಲಕ್ಷ ಅಥವಾ ಸುಮಾರು ಮೂರನೇ ಎರಡರಷ್ಟು ಜನರು 53 ಜಿಲ್ಲೆಗಳಿಗೆ ಮರಳಿದ್ದಾರೆ.

ಅತೀ ಹೆಚ್ಚು 23.6 ಲಕ್ಷ ವಲಸೆ ಕಾರ್ಮಿಕರು ಬಿಹಾರದ 32 ಜಿಲ್ಲೆಗಳಿಗೆ ಮರಳಿದ್ದು ಅದು ಅಗ್ರಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ 17.48 ಲಕ್ಷ ವಲಸೆ ಕಾರ್ಮಿಕರು 31 ಜಿಲ್ಲೆಗಳಿಗೆ ಹಿಂತಿರುಗಿದ್ದಾರೆ, ಇದು ಎರಡನೆ ಸ್ಥಾನದಲ್ಲಿದೆ.

ಈ ದತ್ತಾಂಶದಲ್ಲಿ ಪಶ್ಚಿಮ ಬಂಗಾಳ ಮತ್ತು ಚತ್ತಿಸ್ ಗಡ ಒಳಗೊಂಡಿಲ್ಲವಾದ್ದರಿಂದ, ಅಂತಿಮ ವರದಿಯ ಸಂಖ್ಯೆಗಳು ಇನ್ನೂ ಹೆಚ್ಚಾಗುವ ಸಾದ್ಯತೆಗಳಿವೆ. ಅಲ್ಲದೆ ಮುಂದಿನ 15 ದಿನಗಳಲ್ಲಿ ವಲಸಿಗರನ್ನು ತಮ್ಮ ರಾಜ್ಯಗಳಿಗೆ ಮರಳಲು ಅನುಕೂಲ ಮಾಡಿಕೊಡುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

 

53 ಜಿಲ್ಲೆಗಳಿಗೆ ತಲಾ ಒಂದು ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು ಹಿಂತಿರುಗಿರುವುದು ದಾಖಲಾಗಿದೆ. 38 ಜಿಲ್ಲೆಗಳಲ್ಲಿ 50 ಸಾವಿರದಿಂದ 1 ಒಂದು ಲಕ್ಷದವರೆಗೆ ವಲಸಿಗರು ಹಿಂದಿರುಗಿದ್ದಯ ವರದಿಯಾಗಿದೆ.

ಅತೀ ಹೆಚ್ಚು ವಲಸಿಗರು ಹಿಂತಿರುಗಿದ 15 ಜಿಲ್ಲೆಗಳಲ್ಲಿ ಉತ್ತರ ಪ್ರದೇಶದ ಸಿದ್ದಾರ್ಥನಗರ ಜಿಲ್ಲೆ ಮೊದಲನೆ ಸ್ಥಾನದಲ್ಲಿದೆ. ಇಲ್ಲಿ 1.6 ಲಕ್ಷ ವಲಸೆ ಕಾರ್ಮಿಕರು ಹಿಂತಿರುಗಿದ್ದಾರೆ.

ಉಳಿದ ಜಿಲ್ಲೆಗಳೆಂದರೆ ಬಿಹಾರ್ ರಾಜ್ಯದ ಪೂರ್ವ ಚಂಪಾರನ್ (1.5 ಲಕ್ಷ), ಕತಿಹಾರ್ (1.4 ಲಕ್ಷ), ಮಧುಬಾನಿ (1.25 ಲಕ್ಷ), ಗಯಾ (1.2 ಲಕ್ಷ), ಪಶ್ಚಿಮ ಚಂಪಾರನ್ (1.2 ಲಕ್ಷ), ದರ್ಭಂಗಾ (1.03 ಲಕ್ಷ), ಅರಿಯಾ (1.01 ಲಕ್ಷ) ಮತ್ತು ಮುಜಾಫರ್ಪುರ ( 1.01 ಲಕ್ಷ).

ರಾಜಸ್ಥಾನ್ ರಾಜ್ಯದ ಪಾಲಿ (1.4 ಲಕ್ಷ), ಉದಯಪುರ (1.3 ಲಕ್ಷ) ಮತ್ತು ಜಲೋರ್ (1.1 ಲಕ್ಷ). ಒಡಿಸ್ಸಾದ ಗಂಜಾಂ (1.25 ಲಕ್ಷ); ಉತ್ತರ ಪ್ರದೇಶದ ಪ್ರಯಾಗರಾಜ್ (1.05 ಲಕ್ಷ); ಮತ್ತು ಮಧ್ಯ ಪ್ರದೇಶದ ಬಾಲಘಾಟ್ (1.03 ಲಕ್ಷ).


ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲಿ ಹಿಂದಿರುಗುವಾಗ ಆಯಾಸ ಮತ್ತು ಹಸಿವೆಯಿಂದ ಮೃತರಾದವರ ಸಂಖ್ಯಾಮಾಹಿತಿ ಇದ್ದರೆ ತಿಳಿಸಿ.?

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...