HomeಮುಖಪುಟMNREGA ಮೊತ್ತ ಮೂರುಪಟ್ಟು ಹೆಚ್ಚಾಗದೆ ಗ್ರಾಮ ಭಾರತ ಕೋವಿಡ್ ಬಿಕ್ಕಟ್ಟಿನಿಂದ ಪಾರಾಗದು..

MNREGA ಮೊತ್ತ ಮೂರುಪಟ್ಟು ಹೆಚ್ಚಾಗದೆ ಗ್ರಾಮ ಭಾರತ ಕೋವಿಡ್ ಬಿಕ್ಕಟ್ಟಿನಿಂದ ಪಾರಾಗದು..

- Advertisement -
- Advertisement -

20 ಲಕ್ಷ ಕೋಟಿ ಕೋವಿಡ್ ಪ್ಯಾಕೇಜಿನ ಬಡಾಯಿಯಲ್ಲಿ ಸಂತ್ರಸ್ತ ಜನರಿಗೆ ನೇರವಾಗಿ ದಕ್ಕುವುದು ಕೇವಲ 76,000 ಕೋಟಿ ಮಾತ್ರವೆಂದು ಈಗಾಗಲೇ ಹಲವಾರು ಸ್ವತಂತ್ರ ಅಧ್ಯಯನಗಳು ಸ್ಪಷ್ಟಪಡಿಸಿವೆ. ಹೀಗಾಗಿ ಈ ಕೋವಿಡ್ ಪ್ಯಾಕೇಜು ಜನರ ಬದುಕನ್ನು ಮತ್ತು ದೇಶದ ಆರ್ಥಿಕ ಪರಿಸ್ಥಿತಿಯನ್ನು ಸರಿದಾರಿಗೆ ತರಲು ಕಿಂಚಿತ್ತೂ ಸಹಾಯ ಮಾಡುವುದಿಲ್ಲವೆಂದು ಮೋದಿ ಮಿತ್ರರಾದ ಹಲವಾರು ಅಂತರರಾಷ್ಟ್ರೀಯ ರೇಟಿಂಗ್ ಸಂಸ್ಥೆಗಳೇ ಹೇಳುತ್ತಿವೆ.

ಅಷ್ಟೆಲ್ಲಾ ಹತಾಶೆಯ ನಡುವೆಯೂ MNREGA ಗೆ ಮೊದಲು ನೀಡಿದ್ದ 61,500 ಕೋಟಿ ಹಾಗು ಪ್ಯಾಕೇಜಿನ ಭಾಗವಾಗಿ ಹೆಚ್ಚುವರಿಯಾಗಿ ಒದಗಿಸಲಾದ 40,000, -ಒಟ್ಟು 1,05,000 ಕೋಟಿ- ಗ್ರಾಮ ಭಾರತವನ್ನು ಉದ್ಧಾರ ಮಾಡಲು ಸಾಕಾಗುವುದೆಂದು ಸರ್ಕಾರ ಹೇಳಿದ್ದನ್ನು ಬಹುಪಾಲು ಭಾರತ ಒಪ್ಪಿಕೊಂಡಿತ್ತು

ಆದರೆ ವಾಸ್ತವವೆಂದರೆ ಕೋವಿಡ್ ನ ಆರ್ಥಿಕ ಪರಿಣಾಮಗಳಿಂದ ಹಾಲಿ ಗ್ರಾಮೀಣ ಬಿಕ್ಕಟ್ಟು ಯಾವ ಪರಿಯಲ್ಲಿ ಉಲ್ಬಣಗೊಂಡಿದೆ ಎಂದರೆ ಭಾರತದ ಗ್ರಾಮಗಳನ್ನು ಉದ್ಧಾರವಾಗುವುದಿರಲಿ, ಇರುವಂತೆ ಉಳಿಸಿಕೊಳ್ಳಬೇಕೆಂದರೂ ಈಗ MNREGA ಒದಗಿಸಿರುವ ಸಂಪನ್ಮೂಲದ ಕನಿಷ್ಠ ಪಕ್ಷ ಮೂರೂ ಪಟ್ಟು ಸಂಪನ್ಮೂಲದ ಅತ್ಯಗತ್ಯವಿದೆಯೆಂದು CGBA ಯ ಮಂಪಿ ಬೋಸ್ ಮತ್ತು TERI ಶಂತನು ರಾಯ್ ಅವರ ಜಂಟಿ ಅಧ್ಯಯನವೊಂದು ತಿಳಿಸುತ್ತದೆ.

MNREGA ಬೇಡಿಕೆಯನ್ನಾಧರಿಸಿದ ಯೋಜನೆಯಾಗಿದ್ದು, ಗ್ರಾಮಗಳಲ್ಲಿ ಕೆಲಸ ಮಾಡಲು ನೋಂದಾಯಿಸಿಕೊಳ್ಳುವ ಪ್ರತಿಮನೆಗೆ ವರ್ಷದಲ್ಲಿ ಕನಿಷ್ಠ 100 ದಿನಗಳ ಕೆಲಸವನ್ನು ಕಡ್ಡಾಯವಾಗಿ ಒದಗಿಸಬೇಕು. ಕಳೆದ 15 ವರ್ಷಗಳಲ್ಲಿ ಈ ಯೋಜನೆಯಿಂದಾಗಿ ಹಳ್ಳಿಗಾಡಿನಲ್ಲಿ ಭೂರಹಿತ ಕೂಲಿಗಳ ಬದುಕು ಮತ್ತು ಸ್ವಾಭಿಮಾನದ ಒಂದಷ್ಟು ರಕ್ಷಣೆಯಾದರೂ ಆಗಿದೆ. ಗ್ರಾಮೀಣ ಬಡಜನರ ಅಸಹಾಯಕತೆಯನ್ನು ದುರುಪಯೋಗ ಮಾಡಿಕೊಂಡು ಗ್ರಾಮಭಾರತದಲ್ಲಿ ನಡೆಯುತ್ತಿದ್ದ ಜೀತ-ಕಡಿಮೆ ಕೂಲಿಗಳ ಶೋಷಣೆ ಸ್ವಲ್ಪಮಟ್ಟಿಗಾದರೂ ಕಡಿಮೆಯಾಗಿತ್ತು. ಹಾಗೆಯೇ ಗ್ರಾಮಕೂಲಿ ದರವನ್ನು ಸ್ವಲ್ಪ ಮಟ್ಟಿಗೆ ಹೆಚ್ಚಾಗುವಂತೆ ಮಾಡಿತ್ತು.

ಆದರೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಡೀ MNREGA ಪರಿಕಲ್ಪನೆಯನ್ನೇ ಪರೋಕ್ಷವಾಗಿ ರದ್ದುಗೊಳಿಸಲು ನಿರಂತರವಾಗಿ ಪ್ರಯತ್ನಿಸುತ್ತಾ ಬಂದಿದೆ.

ಉದಾಹರಣೆಗೆ : 2019-20ರ ಪರಿಷ್ಕೃತ ಬಜೆಟ್ಟಿನ ಪ್ರಕಾರ MNREGA ಯೋಜನೆಗೆ 71,000 ಕೋಟಿ ವೆಚ್ಚ ದಾಖಲಾಗಿದ್ದರು 2020-21 ರ ಬಜೆಟ್ಟಿನಲ್ಲಿ ಮೋದಿ ಸರ್ಕಾರ ಒದಗಿಸಿದ್ದು ಕೇವಲ 61,000 ಕೋಟಿ ಮಾತ್ರ. ಅಂದರೆ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಬೇಡಿಕೆಯು ಹೆಚ್ಚಿದೆಯೆಂದು ತಿಳಿದುಬಂದಿದ್ದರು ಕೂಡ ಉದ್ದೇಶಪೂರ್ವಕವಾಗಿ 10,000 ಕೋಟಿ ಯಷ್ಟು ಕಡಿಮೆ ಮಾಡಲಾಗಿದೆ.

– ಇದರಿಂದಾಗಿ 2019-20ರ ಸಾಲಿನಲ್ಲಿ 5.78 ಕೋಟಿ ಕುಟುಂಬಗಳು ಕೆಲಸಕ್ಕೆ ಅರ್ಜಿ ಹಾಕಿಕೊಂಡಿದ್ದರು ಕೆಲಸ ಕೊಟ್ಟಿದ್ದು ಮಾತ್ರ ಕೇವಲ 5.12 ಕೋಟಿ ಕುಟುಂಬಗಳಿಗೆ ಮಾತ್ರ.

– 2017-19ರ ಅವಧಿಯಲ್ಲಿ ಈ ಸಂಪನ್ಮೂಲ ಬೇಡಿಕೆಯಿದ್ದರೂ, ದುಡಿಯುವ ಕೈಗಳಿದ್ದರೂ ದೇಶದ ಯಾವ ರಾಜ್ಯಗಳಲ್ಲಿಯೂ 100 ದಿನಗಳ ಕೆಲಸವನ್ನು ಒದಗಿಸಲಾಗಿಲ್ಲ. 19 ಪ್ರಮುಖ ರಾಜ್ಯಗಳ ಪೈಕಿ 14 ರಾಜ್ಯಗಳಲ್ಲಿ 50 ದಿನಗಳ ಕೆಲಸವನ್ನೂ ಸಹ ಒದಗಿಸಲಾಗಿಲ್ಲ. ಇದರಲ್ಲಿ ಗುಜರಾತ್ ರಾಜ್ಯದದ್ದು ಎಲ್ಲಾ ರಾಜ್ಯಗಳಿಗಿಂತಲೂ ನಿಕೃಷ್ಟ ಪರಿಸ್ಥಿತಿ.

– ದೇಶದ ಬಹುಪಾಲು ಪ್ರಮುಖ ರಾಜ್ಯಗಳಲ್ಲಿ MNREGA ಕೂಲಿ ದರವು ಆಯಾ ರಾಜ್ಯಗಳು ನಿಗದಿ ಮಾಡಿರುವ ಕನಿಷ್ಠ ಕೂಲಿಗಿಂತ ಕಡಿಮೆ ಇದೆ.

ಉದಾಹರಣೆಗೆ ಉತ್ತರಪ್ರದೇಶದಲ್ಲಿ ರಾಜ್ಯ ಸರ್ಕಾರ ನಿಗದಿ ಮಾಡಿರುವ ಕನಿಷ್ಠ ಕೂಲಿ ದರ 318 ರು. ಗಳಾಗಿದ್ದರೂ ಆ ರಾಜ್ಯದಲ್ಲಿ ಕೊಡುತ್ತಿರುವ MNREGA ಕೂಲಿ ದರ ಮಾತ್ರ ಕೇವಲ 182 ರೂ.

ಅದೇ ರೀತಿ ಕರ್ನಾಟಕದಲ್ಲಿ ಘೋಷಿತ ಕನಿಷ್ಠ ಕೂಲಿ ರೂ. 350 ಆಗಿದ್ದರೂ MNREGA ಕೂಲಿ 246 ರೂ . ಮಾತ್ರ.

ಇದು ಕೋವಿಡ್ ಪೂರ್ವ ಪರಿಸ್ಥಿತಿ. ಈಗ..?

ಕೇಂದ್ರ ಸರ್ಕಾರವು ಮೊನ್ನೆ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಪ್ರಮಾಣಪತ್ರದ ಪ್ರಕಾರವೇ ಅಂದಾಜು 1 ಕೋಟಿ ಯಷ್ಟು ವಲಸೆ ಕಾರ್ಮಿಕರು ಹಳ್ಳಿಗಳಿಗೆ ಮರಳಿದ್ದಾರೆ. ಹಾಗು ಎಲ್ಲಾ ಬಗೆಯ ಆದಾಯ, ಉಳಿತಾಯವೂ ಕಳೆದುಕೊಂಡು ಕಂಗೆಟ್ಟಿದ್ದಾರೆ. ಹಾಗೂ ಅವರಲ್ಲಿ ಬಹುಪಾಲು ಜನ ಈ ಸದ್ಯಕ್ಕೆ ನಗರಗಳಿಗೆ ಮರಳುವ ಪರಿಸ್ಥಿತಿಯಲ್ಲೂ -ಮನಸ್ಥಿತಿಯಲ್ಲೂ ಇಲ್ಲ. ನಗರಗಳೂ ಕೂಡಾ ಈ ಸದ್ಯಕ್ಕೆ ಅವರಿಗೆ ಕೆಲಸ ಕೊಡುವ ಪರಿಸ್ಥಿತಿಯಲ್ಲಿ ಇಲ್ಲ. ಹಾಗು ನಗರಗಳಲ್ಲಾಗಲಿ ಅಥವಾ ಗ್ರಾಮಗಳಲ್ಲಾಗಲಿ ಖಾಸಗಿ ಬಂಡವಾಳವು ಈ ಹೆಚ್ಚುವರಿ ಶ್ರಮಜೀವಿಗಳಿಗೆ ಜೀವನೋಪಾಯಗಳನ್ನು ಒದಗಿಸುವ ಪರಿಸ್ಥಿತಿಯಲ್ಲಿ ಇಲ್ಲ.

ಹೀಗಾಗಿ ಇಂದು ಭಾರತದ ಗ್ರಾಮಗಳು ಈ ಹೆಚ್ಚುವರಿ ಕೋವಿಡ್ ಭಾರವನ್ನು ತಡೆದುಕೊಳ್ಳಬೇಕೆಂದರೆ ಕಡ್ಡಾಯವಾಗಿ ಸರ್ಕಾರವೇ ಉದ್ಯೋಗ ಸೃಷ್ಟಿ ಮಾಡುವ ಯೋಜನೆಗಳ ಮೇಲೆ ವೆಚ್ಚವನ್ನು ಮಾಡಬೇಕಿದೆ.

ಹೀಗಾಗಿ ಸರ್ಕಾರವು ಕೋವಿಡ್ ಸಂದರ್ಭದಲ್ಲಿ ಹೆಚ್ಚುವರಿ ಜನರಿಗಾಗಿ ಮತ್ತು ಹೆಚ್ಚುವರಿ ದಿನಗಳಿಗಾಗಿ ಅಂದರೆ ಕನಿಷ್ಠ ಮುಂದಿನ 200 ದಿನಗಳಿಗಾಗಿ ಘನತೆಯಿಂದ ಬದುಕಲು ಕನಿಷ್ಠ ಕೊಲಿ ಯನ್ನು ಒದಗಿಸುವಂತೆ MNREGA ವನ್ನು ಸಜ್ಜುಗೊಳಿಸಬೇಕಿದೆ.

ಈ ನಿಟ್ಟಿನಲ್ಲಿ CGBA ಯ ಮಂಪಿ ಬೋಸ್ ಮತ್ತು TERI ಶಂತನು ರಾಯ್ ಅವರು ಇಂದಿನ ಪರಿಸ್ಥಿತಿಯಲ್ಲಿ MNREGA ಯೋಜನೆಯ ಮೂಲಕ ಗ್ರಾಮಭಾರತವನ್ನು ಉಳಿಸಲು ಮತ್ತು ಬೆಳೆಸಲು ಎಷ್ಟು ಹಣ ಬೇಕಾಗಬಹುದೆಂದು ಅಂದಾಜು ಮಾಡಿದ್ದಾರೆ.

ಆ ಅಧ್ಯಯನದ ಪ್ರಕಾರ:

– ಈಗ ಕೊಡಲಾಗುತ್ತಿರುವ ಕೂಲಿ ದರದಲ್ಲೇ ಕನಿಷ್ಠ 100 ದಿನಗಳ ಕೆಲಸವನ್ನು ಒದಗಿಸಬೇಕೆಂದರೂ 1,05, 242 ಕೋಟಿ ರೂ . ಬೇಕಾಗುತ್ತದೆ. ಎಂದರೆ ಈಗ MNREGA ಗೆ ಕೋವಿಡ್ ಪ್ಯಾಕೇಜನ್ನು ಒಳಗೊಂಡು ಒದಗಿಸಲಾಗಿರುವ ಮೊತ್ತಕ್ಕಿಂತ 4000 ಕೋಟಿ ಹೆಚ್ಚು ಹಣ ಬೇಕಾಗುತ್ತದೆ.

– ಅಥವಾ ಇಂದಿನ ಬಿಕ್ಕಟ್ಟನ್ನು ಗಮನದಲ್ಲಿರಿಸಿಕೊಂಡು ಕೆಲಸ ಕೇಳುವ ಎಲ್ಲಾ ಕುಟುಂಬಗಳಿಗೂ ಆಯಾ ರಾಜ್ಯಗಳು ನಿಗದಿ ಮಾಡಿರುವ ಕನಿಷ್ಠ ಕೂಲಿ ದರವನ್ನು ನೀಡುವುದಾದರೆ ಈ ವರ್ಷ MNREGA ಯೋಜನೆಗೆ 1,56, 871 ಕೋಟಿ ಯನ್ನು ಒದಗಿಸಬೇಕಾಗುತ್ತದೆ. ಅಂದರೆ ಈಗ ಒದಗಿಸಿರುವುದಕ್ಕಿಂತ 55,371 ಕೋಟಿ ಹಣ ಹೆಚ್ಚಿಗೆ ಬೇಕಾಗುತ್ತದೆ.

– ಒಂದು ವೇಳೆ ಕೋವಿಡ್ ಬಿಕ್ಕಟ್ಟಿನ ದೀರ್ಘಾವಧಿ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು MNREGA ಯೋಜನೆಯನ್ನು 200 ದಿನಗಳಿಗೆ ವಿಸ್ತರಿಸಿ ಈಗ ಕೊಡುತ್ತಿರುವ ಸರಾಸರಿ MNREGA ಕೂಲಿಯನ್ನೇ ಕೊಡುವುದಾದರೆ ಈ ವರ್ಷ 2,10,483 ಕೋಟಿ ಅಗತ್ಯ ಬೀಳುತ್ತದೆ.

– MNREGA ಯೋಜನೆಯನ್ನು 200 ವಿಸ್ತರಿಸಿ ಆಯಾ ರಾಜ್ಯಗಳಲ್ಲಿ ನಿಗದಿ ಪಡಿಸಿರುವ ಹೆಚ್ಚುವರಿ ಕನಿಷ್ಠ ಕೂಲಿಯನ್ನು ಕೊಡುವುದಾದರೆ 3,13,741 ಕೋಟಿ ಬೇಕಾಗುತ್ತದೆ.

ಅಂದರೆ ಈಗ ಒಟ್ಟಾರೆಯಾಗಿ ಒದಗಿಸಿರುವುದಕ್ಕಿಂತ 2,08,741 ಕೋಟಿ ರೂ.ಗಳು ಮಾತ್ರ.

ಈ ಮೊತ್ತವು ನಮ್ಮ ಜಿಡಿಪಿಯ ಕೇವಲ ಶೇ. 1.41 ಭಾಗ ಮಾತ್ರ ಆಗುತ್ತದೆ. ಆದರೆ ಮೋದಿ ಸರ್ಕಾರ ಹೆಚ್ಚುವರಿಯಾಗಿ ಕೊಟ್ಟಿರುವುದು ಜಿಡಿಪಿಯ ಕೇವಲ ಶೇ. 0.26 ಮಾತ್ರ. ಆದರೂ ಪ್ರಚಾರ ಮಾತ್ರ ಜಿಡಿಪಿಯ ಶೇ. 10 ರಷ್ಟು..

ಈ ದೇಶದ 5000 ದೊಡ್ಡ ಉದ್ದಿಮೆಪತಿಗಳು ತಮ್ಮ ಲಾಭದ ದರ ಕಡಿಮೆಯಾಗುತ್ತಿದೆ ಎಂದು ಗೊಣಗಾಡಿದ್ದಕ್ಕೆ ಕಳೆದ ಸೆಪ್ಟೆಂಬರ್ ನಲ್ಲಿ ಕಾರ್ಪೊರೇಟ್ ತೆರಿಗೆಯನ್ನು ಶೇ. 10 ರಷ್ಟು ಇಳಿಸಿ 1.46,000 ಕೋಟಿ ವರ್ಗಾವಣೆ ಮಾಡಿದ್ದು ಇದೆ ಮೋದಿ ಸರ್ಕಾರ…

ಅದು ಸಾಧ್ಯವಾಗಬಹುದಾದಲ್ಲಿ ಈ ದೇಶದ 80 ಕೋಟಿ ಯಷ್ಟಿರುವ ರೈತಾಪಿ ಮತ್ತು ಗ್ರಾಮೀಣ ಬಡಜನ ಕೋವಿಡ್ ಆಘಾತದಿಂದ ಬದುಕುಳಿಯಲು ಬೇಕಾಗಿರುವ 2,08,741 ಕೋಟಿ ರೂ ಅನ್ನು ಭಾರತ ಸರ್ಕಾರ ಕೊಡಲಾಗದೆ?

ಖಂಡಿತಾ ಸಾಧ್ಯ..

ಕೋವಿಡ್ ಅವಧಿಯಲ್ಲಿ ಅನಗತ್ಯವಾಗಿ ಹೆಚ್ಚಿಸಿರುವ ಪೆಟ್ರೋಲಿಯಂ ಉತ್ಪನ್ನಗಳ ಬೆಳೆಯಿಂದ ಭಾರತ ಸರ್ಕಾರ ಈ ವರ್ಷ 4 ಲಕ್ಷ ಕೋಟಿ ರೂ ಗಳನ್ನೂ ಸಂಗ್ರಹಿಸಲಿದೆ. ರೈತರ ಬದುಕಿಗೆ ಬೇಕಿರುವುದು ಅದರ ಅರ್ಧ ಭಾಗ ಅಷ್ಟೇ..

ಈ ದೇಶದ ಕೇವಲ 100 ದೊಡ್ಡ ಉದ್ದಿಮೆಪತಿಗಳ ಬಳಿ ಈ ದೇಶದ ರೈತ-ಕಾರ್ಮಿಕರ ಶ್ರಮವನ್ನು ಲೂಟಿ ಮಾಡಿ ಸಂಪಾದಿಸಿರುವ 25 ಲಕ್ಷ ಕೋಟಿ ರೂ.ಗಳಷ್ಟು ಸಂಪತ್ತಿದೆ. ಅದರ ಮೇಲೆ ಕೇವಲ ಶೇ. 1 ರಷ್ಟು ಸೆಸ್ ಹಾಕಿದರೂ ಗ್ರಾಮಭಾರತದ ಉಸಿರಿಗೆ ಬೇಕಿರುವ ಮೊತ್ತಕ್ಕಿಂತ ಹೆಚ್ಚಿಗೆ ಸಂಪನ್ಮೂಲವೇ ದೊರಕುತ್ತದೆ.

ಆದರೆ ಅದಕ್ಕೆ ಬೇಕಿರುವುದು ರಾಜಕೀಯ ಇಚ್ಛಾಶಕ್ತಿ…ಅದು ಮೋದಿಗಿದೆಯೇ?


ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ವೇತನ ಪಾವತಿಸದ ಕಂಪೆನಿಗಳ ವಿರುದ್ಧ ಯಾವುದೇ ಕ್ರಮವಿಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...