Homeಅಂತರಾಷ್ಟ್ರೀಯ"ನಿಮ್ಮ ಬಂಕರ್‌ಗೆ ಹಿಂತಿರುಗಿ": ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

“ನಿಮ್ಮ ಬಂಕರ್‌ಗೆ ಹಿಂತಿರುಗಿ”: ಟ್ರಂಪ್‌ಗೆ ಸಿಯಾಟಲ್ ಮೇಯರ್ ಖಡಕ್‌ ನುಡಿ

- Advertisement -
- Advertisement -

ಪಶ್ಚಿಮ ಅಮೆರಿಕದ ಸಿಯಾಟಿಲ್‌‌ನ ಪೊಲೀಸ್ ಮುಕ್ತ ಸ್ವಾಯತ್ತ ವಲಯವನ್ನು ಪ್ರತಿಭಟನೆಯ ವಿಷಯದಲ್ಲಿ ಮಧ್ಯಪ್ರವೇಶಿಸುವುದಾಗಿ ಹೇಳಿದ ಟ್ರಂಪ್‌‌ಗೆ “ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಸಿಯಾಟಲ್‌ನ ಮೇಯರ್ ಜೆನ್ನಿ ಡರ್ಕನ್ ಎಚ್ಚರಿಕೆ ನೀಡಿದ್ದಾರೆ.

ಜಾರ್ಜ್ ಫ್ಲಾಯ್ಡ್ ಅವರ ಸಾವಿನಿಂದ ಉಂಟಾದ ವರ್ಣಭೇದ ನೀತಿ ಮತ್ತು ಪೋಲಿಸ್ ಕ್ರೌರ್ಯದ ವಿರುದ್ಧದ ಬೃಹತ್‌ ಪ್ರತಿಭಟನಾ ಪ್ರದರ್ಶನಗಳು ಅಧ್ಯಕ್ಷರ ನಿವಾಸವನ್ನು ತಲುಪಿದ್ದಾಗ ಟ್ರಂಪ್ ಅವರು ಶ್ವೇತಭವನದ ಸುರಕ್ಷಿತ ಪ್ರದೇಶ “ಬಂಕರ್‌”ನಲ್ಲಿ ಅಡಗಿ ಕೂತಿದ್ದರು ಎಂದು ಕಳೆದ ವಾರ ಮಾಧ್ಯಮಗಳು ವರದಿ ಮಾಡಿದ್ದವು.


ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್


ಸಿಯಾಟಲ್‌ನಲ್ಲಿ “ಕ್ಯಾಪಿಟಲ್ ಹಿಲ್ ಸ್ವಾಯತ್ತ ವಲಯ” ಅಥವಾ CHAZ ಎಂದು ಕರೆಯಲ್ಪಡುವ ನೆರೆಹೊರೆಯಲ್ಲಿ ಪ್ರತಿಭಟನೆಗಳನ್ನು ನಡೆಸಲು ಪ್ರತಿಭಟನಾಕಾರರು ಮತ್ತು ನಗರದ ಪೊಲೀಸ್ ಇಲಾಖೆ ಒಪ್ಪಿಕೊಂಡಿದೆ. ಇಂತಹ ಪ್ರದೇಶಕ್ಕೆ ಮಧ್ಯಪ್ರವೇಶಿಸುವುದಾಗಿ ಟ್ರಂಪ್‌ ಹೇಳಿದಾಗಿನಿಂದ ವಿವಾದ ಭುಗಿಲೆದ್ದಿದೆ.

ಕ್ರಾಂತಿಕಾರಿ ಎಡಪಂಥೀಯರು ಗವರ್ನರ್ ಜೇಇನ್ಸ್ಲೀ ಮತ್ತು ಸಿಯಾಟಲ್ ಮೇಯರ್ ಅವರನ್ನು ನಮ್ಮ ಮಹಾನ್ ದೇಶ ಹಿಂದೆಂದೂ ನೋಡಿರದ ಮಟ್ಟದಲ್ಲಿ ನಿಂದಿಸುತ್ತಿದ್ದಾರೆ. ಇದೀಗ ನಿಮ್ಮ ನಗರವನ್ನು ಹಿಂತಿಗೆದುಕೊಳ್ಳಿ. ನೀವು ಅದನ್ನು ಮಾಡದಿದ್ದರೆ, ನಾನು ಮಾಡುತ್ತೇನೆ. ಇದು ಆಟವಲ್ಲ. ಈ ಕೊಳಕು ಅರಾಜಕತಾವಾದಿಗಳನ್ನು ತಕ್ಷಣವೇ ನಿಲ್ಲಿಸಬೇಕು. ವೇಗವಾಗಿ ಸರಿಸಿ! ಎಂದು ಡೋನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಇದಕ್ಕೆ ಮೇಯರ್ ಜೆನ್ನಿ ಡರ್ಕನ್ ಉತ್ತರಿಸುತ್ತಾ, “ನಮ್ಮೆಲ್ಲರನ್ನೂ ಸುರಕ್ಷಿತರನ್ನಾಗಿ ಮಾಡಿ, ನಿಮ್ಮ ಬಂಕರ್‌ಗೆ ಹಿಂತಿರುಗಿ” ಎಂದು ಅಪಹಾಸ್ಯ ಮಾಡಿದ್ದಾರೆ. ಇನ್ನು ಸಿಯಾಟಲ್‌ ಗವರ್ನರ್‌ ಜೇಇನ್ಸ್ಲೀ ಸಹ ಟ್ರಂಪ್‌ಗೆ ತಿರುಗೇಟು ನೀಡಿದ್ದು, “ಆಡಳಿತದಲ್ಲಿ ಸಂಪೂರ್ಣವಾಗಿ ಅಸಮರ್ಥನಾದ ವ್ಯಕ್ತಿ ವಾಷಿಂಗ್ಟನ್‌ನಿಂದ ಹೊರತಾದ ರಾಜ್ಯದ ವ್ಯವಹಾರದಿಂದ ಹೊರಗುಳಿಯಬೇಕು. ಟ್ವೀಟ್‌ ಮಾಡುವುದನ್ನು ನಿಲ್ಲಿಸಿ” ಎಂದು ಇನ್ಸ್ಲೀ ಬರೆದಿದ್ದಾರೆ.

ಮೇ 25 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ನಿರಾಯುಧ ಕಪ್ಪು ವ್ಯಕ್ತಿಯಾದ ಫ್ಲಾಯ್ಡ್ ಸಾವಿನ ನಂತರ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ.

ಸಿಯಾಟಲ್‌ನ ಸ್ವಾಯತ್ತ ವಲಯ ಸ್ಥಾಪನೆಯ ಹಿಂದೆ ಎಡಪಂಥೀಯ ಕಾರ್ಯಕರ್ತರು ಇದ್ದಾರೆ ಎಂಬ ವರದಿಗಳನ್ನು ಸಿಯಾಟಲ್‌ನ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನಗರವನ್ನು ಹಿಂದಕ್ಕೆ ತೆಗೆದುಕೊಳ್ಳಿ’ ಎಂದು ಟ್ವೀಟ್ ಮಾಡುವ ಟ್ರಂಪ್ ಮಾತಿನ ಅರ್ಥವೇನು ಎಂದು ಪ್ರತಿಭಟನಾಕಾರರೊಬ್ಬರು ಪ್ರಶ್ನಿಸಿದ್ದಾರೆ. “ಇದು ನಮ್ಮ ನಗರ. ನಾನು ಹುಟ್ಟಿ ಬೆಳೆದದ್ದು ಈ ಡ್ಯಾಮ್ ಸಿಟಿಯಲ್ಲಿ. ಇದನ್ನು ಜನರಿಗೆ, ಸಿಯಾಟಲ್‌ನಲ್ಲಿ ವಾಸಿಸುವ ಮತ್ತು ಇಲ್ಲಿ ಅಭಿವೃದ್ಧಿ ಹೊಂದುತ್ತಿರುವ ಜನರಿಗೆ ನೀಡೋಣ” ಎಂದು ಅವರು ತಿಳಿಸಿದ್ದಾರೆ.

ಆಫ್ರಿಕನ್-ಅಮೇರಿಕನ್ ಪ್ರತಿಭಟನಾಕಾರ ರಿಚ್ ಬ್ರೌನ್ “ಭಾನುವಾರ ಈ ಪ್ರದೇಶವನ್ನು ತೆರವುಗೊಳಿಸುವ ಪ್ರಯತ್ನದಲ್ಲಿ ಪೊಲೀಸರು ಅಶ್ರುವಾಯು ಮತ್ತು ಫ್ಲ್ಯಾಷ್ ಬ್ಯಾಂಗ್ ಗ್ರೆನೇಡ್‌ಗಳನ್ನು ಬಳಸಿದಾಗ ನಾನು ಬಹಳ ಹೆದರಿದ್ದೆ ಎಂದಿದ್ದಾನೆ. ಆದರೆ ಇಂದು ನನಗೆ ಬೆಂಬಲ ಮತ್ತು ಸ್ವಾಗತ ಸಿಕ್ಕಿದೆ. ಈಗ ನಾವು ಬೆದರಿಕೆ ಇಲ್ಲದೆ, ಭಯವಿಲ್ಲದೆ ಮಾತನಾಡಲು ಸಮರ್ಥರಾಗಿದ್ದೇವೆ. ಈ ಸಮಯವನ್ನಲ್ಲವೇ ನಾವು ಬಯಸುತ್ತಿದ್ದುದು?” ಎಂದಿದ್ದಾರೆ.

ಈ ಹಿಂದೆ ಇದೇ ರೀತಿ ಪ್ರತಿಭಟನೆಯ ವಿಷಯವಾಗಿ ಟ್ರಂಪ್‌ ಹೇಳಿಕೆ ನೀಡಿದ್ದಾಗ ಅಮೆರಿಕಾ ಪೊಲೀಸ್‌ ಅಧಿಕಾರಿಯೊಬ್ಬ ಅಧ್ಯಕ್ಷ ಟ್ರಂಪ್‌ಗೆ “ಬಾಯಿಮುಚ್ಚಿಕೊಂಡಿರಿ” ಎಂದು ತಾಕೀತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.


ಮತ್ತಷ್ಟು ಸುದ್ದಿಗಳು

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...