Homeಮುಖಪುಟಭಾರತ-ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ: ರಾಹುಲ್ ಗಾಂಧಿ

ಭಾರತ-ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ: ರಾಹುಲ್ ಗಾಂಧಿ

- Advertisement -
- Advertisement -

ಭಾರತ ಮತ್ತು ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕದ ಮಾಜಿ ರಾಜತಾಂತ್ರಿಕ ನಿಕೋಲಸ್ ಬರ್ನ್ಸ್ ಅವರೊಂದಿಗಿನ ಸಂಭಾಷಣೆಯಲ್ಲಿ ಹೇಳಿದ್ದಾರೆ.

ಚಿಂತಕರ ಜೊತೆಗಿನ ವಿಡಿಯೋ ಮಾತುಕತೆ ಸರಣಿಯ ಭಾಗವಾಗಿ ರಾಹುಲ್‌ ಗಾಂಧಿ ಅವರು ಕೊರೊನಾ ವೈರಸ್ ಬಿಕ್ಕಟ್ಟು ವಿಶ್ವವನ್ನು ಹೇಗೆ ಮರುರೂಪಿಸುತ್ತಿದೆ ಎಂಬುದರ ಕುರಿತು ನಿಕೋಲಸ್ ಬರ್ನ್ಸ್ ಅವರೊಂದಿಗೆ ಮಾತನಾಡುತ್ತಿದ್ದರು.

ಬಹಳ ವಿಶಾಲವಾಗಿದ್ದ ಭಾರತ-ಅಮೆರಿಕಾದ ಸಂಬಂಧವು ಈಗ ಮುಖ್ಯವಾಗಿ ರಕ್ಷಣೆಯ ವಿಷಯದ ಮೇಲಷ್ಟೇ ಕೇಂದ್ರೀಕರಿಸಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

“ಭಾರತ ಮತ್ತು ಅಮೆರಿಕಾದ ಪಾಲುದಾರಿಕೆ ಏಕೆ ಕೆಲಸ ಮಾಡುತ್ತದೆ ಎಂದರೆ ನಾವು ಸಹಿಷ್ಣುತೆ ವ್ಯವಸ್ಥೆಗಳನ್ನು ಹೊಂದಿದ್ದೆವು. ನೀವು ಪ್ರಸ್ತಾಪಿಸಿದಂತೆ ಅಮೆರಿಕಾ ವಲಸಿಗರ ರಾಷ್ಟ್ರ. ನಾವು ತುಂಬಾ ಸಹಿಷ್ಣು ರಾಷ್ಟ್ರವಾಗಿದ್ದೇವೆ. ಆದರೆ ಎರಡೂ ರಾಷ್ಟ್ರಗಳಲ್ಲಿನ ಬಲಪಂಥೀಯವಾದದಿಂದಾಗಿ ಪರಿಸ್ಥಿತಿ ದಿನೇ ದಿನೇ ಬದಲಾಗುತ್ತಿದೆ” ಎಂದು ಇಬ್ಬರೂ ವಿಷಾಧ ವ್ಯಕ್ತಪಡಿಸಿದ್ದಾರೆ.

ಧಾಮಿಕ ಸಹಿಷ್ಣುತೆ ಮತ್ತು ಜನಾಂಗೀಯ ಸಹೋದರತ್ವ ನಮ್ಮ ವಂಶವಾಹಿ ಆಗಿದ್ದವು. “ಆದರೆ ಆಶ್ಚರ್ಯಕರ ಸಂಗತಿಯೆಂದರೆ, ಈ ಸಹಿಷ್ಣುತೆಯ ವಂಶವಾಹಿಯೂ ಈಗ ಕಣ್ಮರೆಯಾಗಿದೆ. ಈಗ ನೋಡುವಾಗ ಭಾರತ ಹಾಗೂ ಅಮೆರಿಕಾದಲ್ಲಿ ಹಿಂದಿನ ಸಹಿಷ್ಣುತೆಯ ಮಟ್ಟ ನಾನು ಕಾಣುತ್ತಿಲ್ಲ” ಎಂದು ಅವರು ಅಮೆರಿಕದ ಮಾಜಿ ರಾಜತಾಂತ್ರಿಕರಿಗೆ ತಿಳಿಸಿದ್ದಾರೆ.

ಈ ಅಸಹಿಷ್ಣುತೆಯನ್ನು ಆಳುವ ಸರ್ಕಾರಗಳೇ ಪ್ರೋತ್ಸಾಹಿಸುತ್ತಿರುವುದು ದುರಂತವಾಗಿದೆ. ಸದ್ಯದ ಕೋವಿಡ್‌ ಬಿಕ್ಕಟ್ಟನ್ನು ಎರಡೂ ರಾಷ್ಟ್ರಗಳುಸೇರಿ ಒಟ್ಟಿಗೆ ಎದುರಿಸಲಿಲ್ಲ, ಬದಲಿಗೆ ಎರಡೂ ರಾಷ್ಟ್ರಗಳು ಅದನ್ನು ಎದುರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂಬು ಅಂಶಗಳು ಚರ್ಚೆಯಲ್ಲಿ ಕೇಳಿಬಂದಿವೆ.

ಕೊರೊನಾ ವೈರಸ್ ಬಿಕ್ಕಟ್ಟಿನ ನಂತರ ವಿಶ್ವವನ್ನು ಮರುರೂಪಿಸುವುದು, ಇಂಡೋ-ಅಮೆರಿಕಾ ಸಂಬಂಧಗಳ ಭವಿಷ್ಯ ಮತ್ತು ಅದನ್ನು ನಿರ್ಮಿಸುವಲ್ಲಿ ಅಮೆರಿಕಾದಲ್ಲಿ ಭಾರತೀಯ ವಲಸಿಗರು ವಹಿಸಿದ ಪ್ರಮುಖ ಪಾತ್ರದ ಮೇಲೆ ರಾಹುಲ್ ಗಾಂಧಿಯ ಸಂವಾದವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ನಿಕೋಲಸ್ ಬರ್ನ್ಸ್ ಪ್ರಸ್ತುತ ಹಾರ್ವರ್ಡ್‌ನ ಜಾನ್ ಎಫ್ ಕೆನಡಿ ಸ್ಕೂಲ್ ಆಫ್ ಗವರ್ನಮೆಂಟ್‌ನಲ್ಲಿ ಪ್ರಾಕ್ಟೀಸ್ ಆಫ್ ಡಿಪ್ಲೊಮಸಿ ಮತ್ತು ಇಂಟರ್ನ್ಯಾಷನಲ್ ಪಾಲಿಟಿಕ್ಸ್ ಪ್ರಾಧ್ಯಾಪಕರಾಗಿದ್ದಾರೆ.

ಬರ್ನ್ಸ್ ಅಮೆರಿಕಾದ ರಾಜಕೀಯ ವ್ಯವಹಾರಗಳ ರಾಜ್ಯ ಕಾರ್ಯದರ್ಶಿ ಆಗಿದ್ದರು ಹಾಗೂ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭಾರತ-ಅಮೆರಿಕಾ ಪರಮಾಣು ಒಪ್ಪಂದದ ಮುಖ್ಯ ಸಮಾಲೋಚಕರಾಗಿದ್ದರು.

ವೈರಸ್ ಬಿಕ್ಕಟ್ಟು ಪ್ರಾರಂಭವಾದಾಗಿನಿಂದ ರಾಹುಲ್ ಗಾಂಧಿ ಪ್ರಮುಖ ತಜ್ಞರೊಂದಿಗಿನ ಸರಣಿ ಸಂಭಾಷಣೆಯಲ್ಲಿ, ರಘುರಾಮ್ ರಾಜನ್, ಅಭಿಜಿತ್ ಬ್ಯಾನರ್ಜಿ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಜೋಹಾನ್ ಗೀಸೆಕೆ ಮತ್ತು ಕೈಗಾರಿಕೋದ್ಯಮಿ ರಾಜೀವ್ ಬಜಾಜ್ ಮುಂತಾದವರೊಂದಿಗೆ ಮಾತನಾಡಿದ್ದಾರೆ.


ಓದಿ: ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...