Homeಕರ್ನಾಟಕದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

ದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

- Advertisement -
- Advertisement -

‘ನನಿಗನ್ನುಸ್ತಾ ಅದೆ’ ಎಂದು ಗಡ್ಡ ಕೆರೆದ ವಾಟಿಸ್ಸೆ.
‘ಅದೇನನ್ನಸ್ತು ಹೇಳ್ಳ’ ಎಂದಳು ಜುಮ್ಮಿ.
‘ಈ ಕರೋನ ಅಷ್ಟು ಸುಲಬಾಗಿ ಹೋಗದಿಲ್ಲ ಕಣಕ್ಕ’.
‘ಯಾಕ್ಲ’.
‘ಯಾಕೆ ಅಂದ್ರೆ ಅದು ಅವರಿಸಿಗಳದ್ಕೂ ಮದ್ಲು ಇಡೀ ಇಂಡಿಯಾ ಲಾಕ್‍ಡವುನ್ ಅಂದ್ರು. ಅವುರೇಳಿದಂಗೆ ಕೇಳಿದೊ ಈಗ ಅದು ಜಾಸ್ತಿಯಾದ ಮ್ಯಾಲೆ ಲಾಕ್‍ಡವುನ್ ತಗದವುರೆ ಹಿಂಗಾದ್ರೆ ಯಂಗೋಯ್ತದೇ?’.
‘ಹೋಗದಿಲ್ಲ ಅಂತಿಯಾ’.
‘ಚಾನ್ಸೆಯಿಲ್ಲ ದಿನೇ ದಿನೇ ಜಾಸ್ತಿಯಾಯ್ತದೆ’.
‘ಸದ್ಯ ನಮ್ಮೂರಿಗೆ ಬರಲಿಲವಲ್ಲ ಹೇಳು’.
‘ಅಂಗೇಳಂಗೇಯಿಲ್ಲ ಕಣೆ. ಬೊಂಬಾಯಿಲಿರೋರು ಬಂದ್ರೇ ಅದು ಬತ್ತದೆ’.
‘ಮದ್ಲು ಬಂಬಾಯಿಲಿರೋರು ಬಂದಾಗ ಯೇಡಸ ತಂದ್ರು, ಈಗಿವುರು ಬಂದು ಕರೋನ ತತ್ತರಲ್ಲ ಹೇಳು’.
‘ಹೆದರುಬ್ಯಾಡ ಕಣಕ್ಕ ಕರೋನ ಕ್ಯೂರಬಲ್ಲು ಅದೇ ಏಡಸು ನಾನ್ ಕ್ಯೂರಬಲ್’.
‘ಅಂಗದ್ರೆ ಕರೋನ ಬಂದೋರು ಉಸಾರಾಗಿ ಮನಿಗೆದ್ದೊಯ್ತರೆ. ಅದೇ ಏಡಸಾದ್ರೆ ಚಟ್ಟಕಟ್ಟದೆಯ’.
‘ಮತ್ಯಾಕೆ ಹೆದ್ರಿಕಳದು ಬುಡ್ಳ’
‘ನಾನಂತೂ ಯಾವತ್ತು ಹೆದರಿಲ್ಲ ಕಣಕ್ಕ ಈ ಉಗ್ರಿನೆ ಹೆದರಿ ನಡಗ್ತನಂಗೆಯ’.
‘ಅದ್ಯಾಕ್ಲ ಹೆದರತಿ ಉಗ್ರಿ’.
‘ಕ್ವಾರಂಟೈನು ಮಾಡಿ ನಾಯಿ ನೋಡಿದಂಗೆ ನೋಡಿಕತ್ತರಂತೆ. ದೂರ ನಿಂತಗಂಡು ಬಿಸ್ಕತ್ತ ಯಸಿತರಂತೆ. ಅದ್ಕೆ ಕಣೆ’.
‘ಇನ್ನೆನು ನಿನಗೆ ತ್ವಡೆಮ್ಯಾಲೆ ಕುಂಡ್ರಿಸಿಗಂಡು ಉಣ್ಣುಸ್ತರ್ಲ. ಕಾಯಿಲೆ ಬಂದಾಗ ಯಲ್ಲಾನು ಅನುಬವುಸಬೇಕು’.
‘ಯಾವ ಕಾಯಿಲೆ ಬಂದ್ರು ಹೆದರಸೋ ಧೈರ್ಯ ಬರಬೇಕಾದ್ರೆ ವಳ್ಳೆ ಸರಕಾರ ಇರಬೇಕು ಕಣೆ. ಈ ಹಾಳು ಸರಕಾರ ಯಂಗದೆ ಅಂತೀ. ಇದಿಲ್ದೆಯಿದ್ರೆ ಯಂಗೋ ಚನ್ನಾಗಿರತಿದ್ದೊ’.
‘ಮಿಸ್ಟರ್ ಉಗ್ರಿ ಬಿಜೆಪಿ ಸರಕಾರ ಇರದೇ ಹಿಂಗಲವೇನೋ ಅದು ಗೊತ್ತಿಲವೆ ನಿನಗೆ’.
‘ಇರದೆ ಹಿಂಗೆ ಅಂದ್ರೆ’.
‘ಅಂದ್ರೆ ಈ ಸರಕಾರ ನಡೆಸೋರು ಪರಂಪರೆ ಜನ. ಪರಕೀಯರು ದಾಳಿ ಮಾಡಿ ಇಂಡಿಯಾ ದೇಸವ ಆಳತಾಯಿದ್ರೆ ಅವುರು ದೇವಸ್ಥಾನದಲ್ಲಿ ಭಜನೆ ಮಾಡಿಕೊಂಡು ಪ್ರಸಾದ ತಿಂತಾಯಿದ್ರಂತೆ. ಈಗ್ಲು ಅಂಗೇ ಅವುರೆ. ಕೊರೋನಾ ಬಂದ್ರೇನು, ಜನ ಸತ್ತರೆ ಅವುರಿಗೇನೂ. ಯಾವುದ್ಕು ಕೇರ್ ಮಾಡದಂಗೆ ತಾವು ಒಂದು ವರುಸದಲ್ಲಿ ಏನೇನು ಮಾಡಿದೊ ಅಂತ ಪುಸ್ತಕ ಬರದು ಹಂಚತಾಕುಂತವುರೆ ಇದಕೇನೇಳ್ತೀ’.
‘ಹೇಳದಿನ್ನೇನು ನೀನು ಮದ್ಲೆ ಹೇಳಿದಲ್ಲ ಅಂಗೆ ಆಗ್ಯಾದೆ’.
‘ಈಗ್ಯಾವುದೊ ಯಲಕ್ಸನ್ನ ಬಂದು ದ್ಯಾವೇಗೌಡ್ರು ನಿಂತವುರಂತಲ್ಲಾ ಯಾವುದ್ಲ’ ಎಂದಳು ಜುಮ್ಮಿ.
‘ಅದು ಧಾರುಣವಾದ ಯಲಕ್ಸನ್ನು ಕಣಕ್ಕ’.
‘ಅದ್ಯಾಕ್ಲ’.
‘ಪಾಪ ಆ ಉಮೇಸ್ ಕತ್ತಿ ಬಂಡಾಯದ ನಾಟಕ ಎಬ್ಬಿಸಿ ತನ್ನ ತಮ್ಮನಿಗೇ ಟಿಕೇಟು ಗ್ಯಾರಂಟಿ ಅಂತ ಕಾಯ್ತಾಯಿದ್ದ. ಇನ್ನು ಎಜುಕೇಷನ್ ಮಾರ್ವಾಡಿಯಂತಿರೊ ಕೋರೆ, ಈಗಾಗ್ಲೇ ಎಲ್ಡು ಸಲ ಆಗಿದ್ದು ಸಾಲ್ದು ಅಂತ ಮೂರ್ನೇ ಸಲಕ್ಕೂ ಯಡ್ಯೂರಪ್ಪನ ಜಪ ಮಾಡಿಕ್ಯಂಡು ಕುಂತಿದ್ದ. ಅಂತೋರಿಗೆಲ್ಲ ರಾಜ್ಯಸಭೆ ಸಿಗಲಿಲ್ಲ. ಅಂಗಾಗಿ ಅವುರ ಪಾಲಿಗೆ ಇದು ಧಾರುಣವಾದ ವಿಷಯ’.
‘ಮತ್ಯಾರಿಗೆ ಕೊಟ್ರು’.
‘ಬಿಜೆಪೀಲಿ ಯಾವುದೇ ಬೆನಿಫಿಟ್ ಕೊಡಬೇಕಾದ್ರು ಸಣ್ಣುಡಗರಿಂದ ಲಾಟಿ ಬೀಸಿರಬೇಕು. ಅಂಗಾಗಿ ಬೆಳಗಾವಿ ಈರಣ್ಣ, ರಾಯಚೂರು ಅಶೋಕ ಅನ್ನೊರ್ನ ಕ್ಯಾಂಡಿಡೇಟ್ ಮಾಡಿದ್ರು ಕಣಕ್ಕ. ಅವುರು ಹುಟ್ಟಿದಾಗಿಂದ ಲಾಟಿ ಬೀಸಿದ್ರಂತೆ’.
‘ಕಾಂಗ್ರೆಸ್ಸಿಂದ ಯಾರ್ಲ’.
‘ಕಾಂಗ್ರೆಸ್ಸಿಂದ ಖರಗೆ, ದ್ಯಾವೇಗೌಡ್ರು ಕಣಕ್ಕ. ಕಾಂಗ್ರೆಸ್ಸಲ್ಲಿ ಜಾಸ್ತಿ ಓಟಿದ್ದವಂತೆ ಅದ ದ್ಯಾವೇಗೌಡ್ರಿಗೆ ಕೊಡ್ತರೆ ಅಂಗಾಗಿ ದ್ಯಾವೇಗೌಡ್ರು ಅರ್ಧ ಕಾಂಗ್ರೆಸ್ಸು, ಅರ್ಧ ದಳದ ಕ್ಯಾಂಡೇಟು’.
‘ಈ ಯಂಬತ್ತೇಳನೇ ವಯಸಲ್ಲಿ ಅವುರಿಗೆ ಬೇಕಿತ್ತೆ’ ಎಂದ ಉಗ್ರಿ.
‘ಯಂಬತ್ತೇಳು ಅವರ ಶರೀರಕ್ಕಾಗ್ಯದೆ ಮನಸಿಗಲ್ಲ ಕಣೊ, ನೋಡಿವಿರು ಗೆದ್ದು ಪಾರ್ಲಿಮೆಂಟಿಗೆ ಯಂಗೆ ಇಬ್ಬರು ಭುಜ ಹಿಡಕಂಡೋಯ್ತರೆ ಅದ ನೋಡಕ್ಕೆ ಚಂದ’.


ಇದನ್ನು ಓದಿ: ನಮ್ಮೂರ ಡಾ.ಎಚ್ಚೆನ್‍ಗೆ ನೂರು: ವೈಯಕ್ತಿಕ ನೆನಪುಗಳ ಹಿನ್ನೆಲೆಯಲ್ಲೊಂದು ಸಾಮಾಜಿಕ ನೋಟ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...